AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ನಿಂದ ತಂದೆ-ತಾಯಿ ಕಳೆದುಕೊಂಡ ಮಕ್ಕಳ ಸಹಾಯಕ್ಕೆ ಮುಂದಾದ ಸೋನು ಸೂದ್

ಸೋನು ಸೂದ್​ ಆಂಗ್ಲ ಮಾಧ್ಯಮವೊಂದರ ಜತೆ ಮಾತನಾಡಿದ್ದು, ಈ ವಿಚಾರ ಹಂಚಿಕೊಂಡಿದ್ದಾರೆ. ಈಗ ಉಂಟಾಗಿರುವ ಪರಿಸ್ಥಿತಿ ತುಂಬಾನೇ ಗಂಭೀರವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೊವಿಡ್​ನಿಂದ ತಂದೆ-ತಾಯಿ ಕಳೆದುಕೊಂಡ ಮಕ್ಕಳ ಸಹಾಯಕ್ಕೆ ಮುಂದಾದ ಸೋನು ಸೂದ್
ನಟ ಸೋನು ಸೂದ್
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: May 31, 2021 | 4:32 PM

Share

ಕೊರೊನಾ ಎರಡನೇ ಅಲೆ ಜೋರಾಗಿದೆ. ದೇಶದಲ್ಲಿ ಸಾವಿರಾರು ಜನರು ಕೊವಿಡ್​ನಿಂದ ಮೃತಪಡುತ್ತಿದ್ದಾರೆ. ಇನ್ನು, ಕೊವಿಡ್​ಗೆ ತುತ್ತಾಗಿ ಅಪ್ಪ-ಅಮ್ಮ ಇಬ್ಬರೂ ಮೃತಪಟ್ಟು ಅನೇಕ ಮಕ್ಕಳು ಅನಾಥರಾಗಿದ್ದಾರೆ. ಇವರಿಗ ಸಹಾಯ ಮಡೋಕೆ ಸೋನು ಸೂದ್​ ಮುಂದಾಗಿದ್ದಾರೆ. ಅಲ್ಲದೆ, ಸರ್ಕಾರಕ್ಕೆ ಈ ಬಗ್ಗೆ ಅವರು ಮನವಿ ಕೂಡ ಮಾಡಿದ್ದಾರೆ.

ಸೋನು ಸೂದ್​ ಆಂಗ್ಲ ಮಾಧ್ಯಮವೊಂದರ ಜತೆ ಮಾತನಾಡಿದ್ದು, ಈ ವಿಚಾರ ಹಂಚಿಕೊಂಡಿದ್ದಾರೆ. ಈಗ ಉಂಟಾಗಿರುವ ಪರಿಸ್ಥಿತಿ ತುಂಬಾನೇ ಗಂಭೀರವಾಗಿದೆ. ಕೊವಿಡ್​ನಿಂದ ಯಾರು ತಂದೆ-ತಾಯಿಯನ್ನು ಕಳೆದುಕೊಂಡಿದ್ದಾರೋ ಅವರ ಜತೆ ನಾನು ಸಂಪರ್ಕದಲ್ಲಿದ್ದೇನೆ. ಮಹಾರಾಷ್ಟ್ರ ಸರ್ಕಾರದ ಜತೆ ಇವರಿಗೆ ಉಚಿತ ಶಿಕ್ಷಣ ನೀಡುವಂತೆ ಒತ್ತಾಯಿಸಿದ್ದೇನೆ. ಇನ್ನು, ಮನೆಯನ್ನು ಮುನ್ನಡೆಸುವವನು ಮೃತಪಟ್ಟರೆ ಅಂಥ ಕುಟುಂಬಕ್ಕೆ ಪೆನ್ಶನ್​ ನೀಡುವ ಬಗ್ಗೆಯೂ ಚರ್ಚೆ ನಡೆದಿದೆ ಎಂದಿದ್ದಾರೆ.

ಇದಕ್ಕೆ ಸರ್ಕಾರ ಶೀಘವೇ ಉತ್ತರಿಸಿದೆ. ಈಗಾಗಲೇ 11-12 ರಾಜ್ಯ ಸರ್ಕಾರಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡಿವೆ. ಇದಕ್ಕೆ ನಾವು ಶಾಶ್ವತ ಆರ್ಥಿಕ ಪರಿಹಾರ ಹುಡುಕಿಕೊಳ್ಳುವ ಅಗತ್ಯವಿದೆ ಎಂದು ಸೋನು ಸೂದ್​ ಹೇಳಿದ್ದಾರೆ. ಅಲ್ಲದೆ, ಮಹಾರಾಷ್ಟ್ರ ಸರ್ಕಾರ ಈ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳಲಿದೆ ಎನ್ನುವ ಭರವಸೆ ಮೂಡಿಸಿದ್ದಾರೆ.

ಕೊರೊನಾ ಮೊದಲನೇ ಅಲೆ ಕಾಣಿಸಿಕೊಂಡಾಗ ಸೋನು ಸೂದ್ ಸಹಾಯಕ್ಕೆ ಮುಂದಾಗಿದ್ದರು. ಅದನ್ನು ಈಗಲೂ ಮುಂದುವರಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಅವರು ಕಷ್ಟ ಎಂದವರಿಗೆ ಸಹಾಯ ಮಾಡುತ್ತಿದ್ದಾರೆ. ಸೋನು ಸೂದ್ ಕೆಲವರಿಗೆ ಆಮ್ಲಜನಕ ಸಿಲಿಂಡರ್​ ನೀಡಿದರೆ, ಇನ್ನೂ ಕೆಲವರಿಗೆ ಬೆಡ್​ ವ್ಯವಸ್ಥೆ ಮಾಡಿದ್ದಾರೆ. ಸಾಕಷ್ಟು ಜನರ ಆಸ್ಪತ್ರೆ ಖರ್ಚನ್ನು ಸ್ವತಃ ಸೋನು ಸೂದ್​ ಅವರೇ ನೋಡಿಕೊಂಡಿದ್ದಾರೆ. ಹೀಗಾಗಿ, ಜನರಿಗೆ ಸೋನು ಸೂದ್​ ಮೇಲೆ ಭಕ್ತಿ ಭಾವನೆ ಮೂಡಿದೆ. ಕೆಲವರು ಅವರನ್ನು ಪೂಜಿಸುತ್ತಿದ್ದಾರೆ. ಅವರು​ ಮಾಡುತ್ತಿರುವ ಕೆಲಸಕ್ಕೆ ಸಾಕಷ್ಟು ಕಡೆಗಳಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಲ್ಲದೆ, ಸಾಕಷ್ಟು ಮ್ಯಾಗಜಿನ್​ಗಳು ಈ ಬಗ್ಗೆ ಆರ್ಟಿಕಲ್​ ಪಬ್ಲಿಶ್​ ಮಾಡುತ್ತಿವೆ.

ಇದನ್ನೂ ಓದಿ:

ಮಟನ್​ ಶಾಪ್​ಗೆ ಸೋನು ಸೂದ್​ ಹೆಸರು; ‘ನಾನು ಸಸ್ಯಾಹಾರಿ, ಹೀಗಾಗಿ ನಿಮಗೆ ತರಕಾರಿ ಅಂಗಡಿ ಇಟ್ಟುಕೊಡ್ತೀನಿ’ ಎಂದ ನಟ

ಅಂದು ರಿಜೆಕ್ಟ್​ ಆಗಿದ್ದ ಮ್ಯಾಗಜಿನ್​ನಲ್ಲೇ ಸೋನು ಸೂದ್ ಫೋಟೋ; ಇದಲ್ಲವೇ ಯಶಸ್ಸು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ