AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾ ಚುನಾವಣೆಯಲ್ಲಿ ಪ್ರಕಾಶ್ ರಾಜ್​ಗೆ ಕಾಂಪಿಟೇಷನ್​ ಕೊಡೋಕೆ ಬಂದ ಸ್ಟಾರ್​ ನಟ?; ಸ್ಪರ್ಧೆ ಮತ್ತಷ್ಟು ಕಠಿಣ

ಮಾ ಚುನಾವಣಾ ಕಣದಲ್ಲಿ ಪ್ರಕಾಶ್​ ರಾಜ್​, ಮಂಚು ವಿಷ್ಣು, ಹೇಮಾ ಹಾಗೂ ಜೀವಿತಾ ಇದ್ದಾರೆ. ಈಗ ಬಹುಭಾಷಾ​ ಸ್ಟಾರ್​ ನಟ ಸೋನು ಸೂದ್​ ಕೂಡ ಈ ಚುನಾವಣೆಗೆ ಸ್ಪರ್ಧಿಸೋಕೆ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಮಾ ಚುನಾವಣೆಯಲ್ಲಿ ಪ್ರಕಾಶ್ ರಾಜ್​ಗೆ ಕಾಂಪಿಟೇಷನ್​ ಕೊಡೋಕೆ ಬಂದ ಸ್ಟಾರ್​ ನಟ?; ಸ್ಪರ್ಧೆ ಮತ್ತಷ್ಟು ಕಠಿಣ
ಪ್ರಕಾಶ್​ ರೈ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jul 08, 2021 | 5:59 PM

Share

ಟಾಲಿವುಡ್​ನ ಮೂವೀ ಆರ್ಟಿಸ್ಟ್​ ಅಸೋಸಿಯೇಷನ್​ (MAA) ಅಧ್ಯಕ್ಷ ಸ್ಥಾನಕ್ಕೆ ಭಾರೀ ಸ್ಪರ್ಧೆ ಏರ್ಪಟ್ಟಿದೆ. ಹಿರಿಯ ನಟ ಪ್ರಕಾಶ್​ ರಾಜ್​ (ಪ್ರಕಾಶ್ ರೈ) ಸೇರಿ ಅನೇಕರು ಚುನಾವಣಾ ಕಣದಲ್ಲಿದ್ದಾರೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ಮಾ ಎಲೆಕ್ಷನ್​ಗೆ ಮತ್ತೋರ್ವ ಸ್ಟಾರ್ ನಟ ಸ್ಪರ್ಧಿಸಲಿದ್ದಾರೆ ಎನ್ನುವ ವದಂತಿ ಹರಿದಾಡಿದೆ.

ಮಾ ಚುನಾವಣಾ ಕಣದಲ್ಲಿ ಪ್ರಕಾಶ್​ ರಾಜ್​, ಮಂಚು ವಿಷ್ಣು, ಹೇಮಾ ಹಾಗೂ ಜೀವಿತಾ ಇದ್ದಾರೆ. ಈಗ ಬಹುಭಾಷಾ​ ಸ್ಟಾರ್​ ನಟ ಸೋನು ಸೂದ್​ ಕೂಡ ಈ ಚುನಾವಣೆಗೆ ಸ್ಪರ್ಧಿಸೋಕೆ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಹೀಗೊಂದು ಸುದ್ದಿ ಟಾಲಿವುಡ್​ ಅಂಗಳದಲ್ಲಿ ಜೋರಾಗಿದೆ. ಈ ವದಂತಿ ಹಬ್ಬೋಕು ಒಂದು ಕಾರಣ ಇದೆ. ಸೋನು ಸೂದ್​ ಅವರು ತೆಲಂಗಾಣ ಸಚಿವ ಕೆಟಿಆರ್​ ಅವರನ್ನು ಭೇಟಿ ಮಾಡಿದ್ದಾರೆ. ಇದರಿಂದ ಈ ವದಂತಿ ಹುಟ್ಟಿಕೊಂಡಿದೆ ಎನ್ನಲಾಗುತ್ತಿದೆ.

ನಟ ಸೋನು ಸೂದ್​ ಕೊವಿಡ್​ ಮೊದಲನೇ ಅಲೆ ಕಾಣಿಸಿಕೊಂಡ ನಂತರದಲ್ಲಿ ಲಕ್ಷಾಂತರ ಜನರಿಗೆ ಸಹಾಯ ಮಾಡಿದ್ದಾರೆ. ಇಂದಿಗೂ ಅವರು ತಮ್ಮ ಸಹಾಯವನ್ನು ಮುಂದುವರಿಸಿದ್ದಾರೆ. ಸಂಕಷ್ಟದಲ್ಲಿದ್ದವರು ಟ್ವೀಟ್​ ಮಾಡಿದ ಕೆಲವೇ ಗಂಟೆಗಳಲ್ಲಿ ಸಹಾಯ ನೀಡುತ್ತಿದ್ದಾರೆ. ಇಷ್ಟೆಲ್ಲಾ ಜನಪರ ಕಾರ್ಯ ಮಾಡಿರುವ ಸೋನು ಸೂದ್​ ಈಗ ಮಾ ಚುನಾವಣೆಗೆ ಸ್ಪರ್ಧಿಸುತ್ತಾರೆ ಎನ್ನುವ ಸುದ್ದಿ ಇದೆ.

ಟಾಲಿವುಡ್​ನ ಮೂವೀ ಆರ್ಟಿಸ್ಟ್​ ಅಸೋಸಿಯೇಷನ್​ (MAA) ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಪ್ರಕಾಶ್​ ರಾಜ್​ ತೀರ್ಮಾನಿಸಿದ್ದಾರೆ. ಆದರೆ ಅವರು ಈ ಚುನಾವಣೆಯಲ್ಲಿ ನಿಲ್ಲಬಾರದು ಎಂದು ಕೆಲವರು ಆಕ್ಷೇಪ ಎತ್ತಿದ್ದಾರೆ. ಪ್ರಕಾಶ್​ ರಾಜ್​ ಮೂಲತಃ ಕನ್ನಡದವರು. ಅವರ ಮಾತೃಭಾಷೆ ಕನ್ನಡ. ಹಾಗಾಗಿ ಅವರು ಎಂಎಎ ಎಲೆಕ್ಷನ್​ನಲ್ಲಿ ಸ್ಪರ್ಧಿಸುವುದು ಸರಿಯಲ್ಲ ಎಂದು ಕೆಲವರು ತಕರಾರು ತೆಗೆದಿದ್ದಾರೆ. ಈಗ ಸೋನು ಕೂಡ ಸ್ಪರ್ಧೆ ಮಾಡಿದರೆ, ಕಾಂಪಿಟೇಷನ್​ ಮತ್ತಷ್ಟು ಹೆಚ್ಚಲಿದೆ.

ಇದನ್ನೂ ಓದಿ: ಕನ್ನಡಿಗ ಎಂದು ಪ್ರಕಾಶ್​ ರಾಜ್​ರನ್ನು ಹೊರಗೆ ಇಡುತ್ತಿರುವ ಟಾಲಿವುಡ್​; ‘ನಮ್ಮವನಲ್ಲ’ ಎಂದವರಿಗೆ ನಟನ ಉತ್ತರ ಏನು?

ಸೈಕಲ್​ ಹತ್ತಿ ಬ್ರೆಡ್​-ಮೊಟ್ಟೆ​ಗಳನ್ನು ಮಾರಾಟ ಮಾಡಲು ಹೊರಟಿದ್ದಾರೆ ಸೋನು ಸೂದ್​! ವಿಡಿಯೋ ನೋಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!