AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾ ಚುನಾವಣೆಯಲ್ಲಿ ಪ್ರಕಾಶ್ ರಾಜ್​ಗೆ ಕಾಂಪಿಟೇಷನ್​ ಕೊಡೋಕೆ ಬಂದ ಸ್ಟಾರ್​ ನಟ?; ಸ್ಪರ್ಧೆ ಮತ್ತಷ್ಟು ಕಠಿಣ

ಮಾ ಚುನಾವಣಾ ಕಣದಲ್ಲಿ ಪ್ರಕಾಶ್​ ರಾಜ್​, ಮಂಚು ವಿಷ್ಣು, ಹೇಮಾ ಹಾಗೂ ಜೀವಿತಾ ಇದ್ದಾರೆ. ಈಗ ಬಹುಭಾಷಾ​ ಸ್ಟಾರ್​ ನಟ ಸೋನು ಸೂದ್​ ಕೂಡ ಈ ಚುನಾವಣೆಗೆ ಸ್ಪರ್ಧಿಸೋಕೆ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಮಾ ಚುನಾವಣೆಯಲ್ಲಿ ಪ್ರಕಾಶ್ ರಾಜ್​ಗೆ ಕಾಂಪಿಟೇಷನ್​ ಕೊಡೋಕೆ ಬಂದ ಸ್ಟಾರ್​ ನಟ?; ಸ್ಪರ್ಧೆ ಮತ್ತಷ್ಟು ಕಠಿಣ
ಪ್ರಕಾಶ್​ ರೈ
TV9 Web
| Edited By: |

Updated on: Jul 08, 2021 | 5:59 PM

Share

ಟಾಲಿವುಡ್​ನ ಮೂವೀ ಆರ್ಟಿಸ್ಟ್​ ಅಸೋಸಿಯೇಷನ್​ (MAA) ಅಧ್ಯಕ್ಷ ಸ್ಥಾನಕ್ಕೆ ಭಾರೀ ಸ್ಪರ್ಧೆ ಏರ್ಪಟ್ಟಿದೆ. ಹಿರಿಯ ನಟ ಪ್ರಕಾಶ್​ ರಾಜ್​ (ಪ್ರಕಾಶ್ ರೈ) ಸೇರಿ ಅನೇಕರು ಚುನಾವಣಾ ಕಣದಲ್ಲಿದ್ದಾರೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ಮಾ ಎಲೆಕ್ಷನ್​ಗೆ ಮತ್ತೋರ್ವ ಸ್ಟಾರ್ ನಟ ಸ್ಪರ್ಧಿಸಲಿದ್ದಾರೆ ಎನ್ನುವ ವದಂತಿ ಹರಿದಾಡಿದೆ.

ಮಾ ಚುನಾವಣಾ ಕಣದಲ್ಲಿ ಪ್ರಕಾಶ್​ ರಾಜ್​, ಮಂಚು ವಿಷ್ಣು, ಹೇಮಾ ಹಾಗೂ ಜೀವಿತಾ ಇದ್ದಾರೆ. ಈಗ ಬಹುಭಾಷಾ​ ಸ್ಟಾರ್​ ನಟ ಸೋನು ಸೂದ್​ ಕೂಡ ಈ ಚುನಾವಣೆಗೆ ಸ್ಪರ್ಧಿಸೋಕೆ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಹೀಗೊಂದು ಸುದ್ದಿ ಟಾಲಿವುಡ್​ ಅಂಗಳದಲ್ಲಿ ಜೋರಾಗಿದೆ. ಈ ವದಂತಿ ಹಬ್ಬೋಕು ಒಂದು ಕಾರಣ ಇದೆ. ಸೋನು ಸೂದ್​ ಅವರು ತೆಲಂಗಾಣ ಸಚಿವ ಕೆಟಿಆರ್​ ಅವರನ್ನು ಭೇಟಿ ಮಾಡಿದ್ದಾರೆ. ಇದರಿಂದ ಈ ವದಂತಿ ಹುಟ್ಟಿಕೊಂಡಿದೆ ಎನ್ನಲಾಗುತ್ತಿದೆ.

ನಟ ಸೋನು ಸೂದ್​ ಕೊವಿಡ್​ ಮೊದಲನೇ ಅಲೆ ಕಾಣಿಸಿಕೊಂಡ ನಂತರದಲ್ಲಿ ಲಕ್ಷಾಂತರ ಜನರಿಗೆ ಸಹಾಯ ಮಾಡಿದ್ದಾರೆ. ಇಂದಿಗೂ ಅವರು ತಮ್ಮ ಸಹಾಯವನ್ನು ಮುಂದುವರಿಸಿದ್ದಾರೆ. ಸಂಕಷ್ಟದಲ್ಲಿದ್ದವರು ಟ್ವೀಟ್​ ಮಾಡಿದ ಕೆಲವೇ ಗಂಟೆಗಳಲ್ಲಿ ಸಹಾಯ ನೀಡುತ್ತಿದ್ದಾರೆ. ಇಷ್ಟೆಲ್ಲಾ ಜನಪರ ಕಾರ್ಯ ಮಾಡಿರುವ ಸೋನು ಸೂದ್​ ಈಗ ಮಾ ಚುನಾವಣೆಗೆ ಸ್ಪರ್ಧಿಸುತ್ತಾರೆ ಎನ್ನುವ ಸುದ್ದಿ ಇದೆ.

ಟಾಲಿವುಡ್​ನ ಮೂವೀ ಆರ್ಟಿಸ್ಟ್​ ಅಸೋಸಿಯೇಷನ್​ (MAA) ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಪ್ರಕಾಶ್​ ರಾಜ್​ ತೀರ್ಮಾನಿಸಿದ್ದಾರೆ. ಆದರೆ ಅವರು ಈ ಚುನಾವಣೆಯಲ್ಲಿ ನಿಲ್ಲಬಾರದು ಎಂದು ಕೆಲವರು ಆಕ್ಷೇಪ ಎತ್ತಿದ್ದಾರೆ. ಪ್ರಕಾಶ್​ ರಾಜ್​ ಮೂಲತಃ ಕನ್ನಡದವರು. ಅವರ ಮಾತೃಭಾಷೆ ಕನ್ನಡ. ಹಾಗಾಗಿ ಅವರು ಎಂಎಎ ಎಲೆಕ್ಷನ್​ನಲ್ಲಿ ಸ್ಪರ್ಧಿಸುವುದು ಸರಿಯಲ್ಲ ಎಂದು ಕೆಲವರು ತಕರಾರು ತೆಗೆದಿದ್ದಾರೆ. ಈಗ ಸೋನು ಕೂಡ ಸ್ಪರ್ಧೆ ಮಾಡಿದರೆ, ಕಾಂಪಿಟೇಷನ್​ ಮತ್ತಷ್ಟು ಹೆಚ್ಚಲಿದೆ.

ಇದನ್ನೂ ಓದಿ: ಕನ್ನಡಿಗ ಎಂದು ಪ್ರಕಾಶ್​ ರಾಜ್​ರನ್ನು ಹೊರಗೆ ಇಡುತ್ತಿರುವ ಟಾಲಿವುಡ್​; ‘ನಮ್ಮವನಲ್ಲ’ ಎಂದವರಿಗೆ ನಟನ ಉತ್ತರ ಏನು?

ಸೈಕಲ್​ ಹತ್ತಿ ಬ್ರೆಡ್​-ಮೊಟ್ಟೆ​ಗಳನ್ನು ಮಾರಾಟ ಮಾಡಲು ಹೊರಟಿದ್ದಾರೆ ಸೋನು ಸೂದ್​! ವಿಡಿಯೋ ನೋಡಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ