AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾ ಚುನಾವಣೆಯಲ್ಲಿ ಪ್ರಕಾಶ್ ರಾಜ್​ಗೆ ಕಾಂಪಿಟೇಷನ್​ ಕೊಡೋಕೆ ಬಂದ ಸ್ಟಾರ್​ ನಟ?; ಸ್ಪರ್ಧೆ ಮತ್ತಷ್ಟು ಕಠಿಣ

ಮಾ ಚುನಾವಣಾ ಕಣದಲ್ಲಿ ಪ್ರಕಾಶ್​ ರಾಜ್​, ಮಂಚು ವಿಷ್ಣು, ಹೇಮಾ ಹಾಗೂ ಜೀವಿತಾ ಇದ್ದಾರೆ. ಈಗ ಬಹುಭಾಷಾ​ ಸ್ಟಾರ್​ ನಟ ಸೋನು ಸೂದ್​ ಕೂಡ ಈ ಚುನಾವಣೆಗೆ ಸ್ಪರ್ಧಿಸೋಕೆ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಮಾ ಚುನಾವಣೆಯಲ್ಲಿ ಪ್ರಕಾಶ್ ರಾಜ್​ಗೆ ಕಾಂಪಿಟೇಷನ್​ ಕೊಡೋಕೆ ಬಂದ ಸ್ಟಾರ್​ ನಟ?; ಸ್ಪರ್ಧೆ ಮತ್ತಷ್ಟು ಕಠಿಣ
ಪ್ರಕಾಶ್​ ರೈ
TV9 Web
| Edited By: |

Updated on: Jul 08, 2021 | 5:59 PM

Share

ಟಾಲಿವುಡ್​ನ ಮೂವೀ ಆರ್ಟಿಸ್ಟ್​ ಅಸೋಸಿಯೇಷನ್​ (MAA) ಅಧ್ಯಕ್ಷ ಸ್ಥಾನಕ್ಕೆ ಭಾರೀ ಸ್ಪರ್ಧೆ ಏರ್ಪಟ್ಟಿದೆ. ಹಿರಿಯ ನಟ ಪ್ರಕಾಶ್​ ರಾಜ್​ (ಪ್ರಕಾಶ್ ರೈ) ಸೇರಿ ಅನೇಕರು ಚುನಾವಣಾ ಕಣದಲ್ಲಿದ್ದಾರೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ಮಾ ಎಲೆಕ್ಷನ್​ಗೆ ಮತ್ತೋರ್ವ ಸ್ಟಾರ್ ನಟ ಸ್ಪರ್ಧಿಸಲಿದ್ದಾರೆ ಎನ್ನುವ ವದಂತಿ ಹರಿದಾಡಿದೆ.

ಮಾ ಚುನಾವಣಾ ಕಣದಲ್ಲಿ ಪ್ರಕಾಶ್​ ರಾಜ್​, ಮಂಚು ವಿಷ್ಣು, ಹೇಮಾ ಹಾಗೂ ಜೀವಿತಾ ಇದ್ದಾರೆ. ಈಗ ಬಹುಭಾಷಾ​ ಸ್ಟಾರ್​ ನಟ ಸೋನು ಸೂದ್​ ಕೂಡ ಈ ಚುನಾವಣೆಗೆ ಸ್ಪರ್ಧಿಸೋಕೆ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಹೀಗೊಂದು ಸುದ್ದಿ ಟಾಲಿವುಡ್​ ಅಂಗಳದಲ್ಲಿ ಜೋರಾಗಿದೆ. ಈ ವದಂತಿ ಹಬ್ಬೋಕು ಒಂದು ಕಾರಣ ಇದೆ. ಸೋನು ಸೂದ್​ ಅವರು ತೆಲಂಗಾಣ ಸಚಿವ ಕೆಟಿಆರ್​ ಅವರನ್ನು ಭೇಟಿ ಮಾಡಿದ್ದಾರೆ. ಇದರಿಂದ ಈ ವದಂತಿ ಹುಟ್ಟಿಕೊಂಡಿದೆ ಎನ್ನಲಾಗುತ್ತಿದೆ.

ನಟ ಸೋನು ಸೂದ್​ ಕೊವಿಡ್​ ಮೊದಲನೇ ಅಲೆ ಕಾಣಿಸಿಕೊಂಡ ನಂತರದಲ್ಲಿ ಲಕ್ಷಾಂತರ ಜನರಿಗೆ ಸಹಾಯ ಮಾಡಿದ್ದಾರೆ. ಇಂದಿಗೂ ಅವರು ತಮ್ಮ ಸಹಾಯವನ್ನು ಮುಂದುವರಿಸಿದ್ದಾರೆ. ಸಂಕಷ್ಟದಲ್ಲಿದ್ದವರು ಟ್ವೀಟ್​ ಮಾಡಿದ ಕೆಲವೇ ಗಂಟೆಗಳಲ್ಲಿ ಸಹಾಯ ನೀಡುತ್ತಿದ್ದಾರೆ. ಇಷ್ಟೆಲ್ಲಾ ಜನಪರ ಕಾರ್ಯ ಮಾಡಿರುವ ಸೋನು ಸೂದ್​ ಈಗ ಮಾ ಚುನಾವಣೆಗೆ ಸ್ಪರ್ಧಿಸುತ್ತಾರೆ ಎನ್ನುವ ಸುದ್ದಿ ಇದೆ.

ಟಾಲಿವುಡ್​ನ ಮೂವೀ ಆರ್ಟಿಸ್ಟ್​ ಅಸೋಸಿಯೇಷನ್​ (MAA) ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಪ್ರಕಾಶ್​ ರಾಜ್​ ತೀರ್ಮಾನಿಸಿದ್ದಾರೆ. ಆದರೆ ಅವರು ಈ ಚುನಾವಣೆಯಲ್ಲಿ ನಿಲ್ಲಬಾರದು ಎಂದು ಕೆಲವರು ಆಕ್ಷೇಪ ಎತ್ತಿದ್ದಾರೆ. ಪ್ರಕಾಶ್​ ರಾಜ್​ ಮೂಲತಃ ಕನ್ನಡದವರು. ಅವರ ಮಾತೃಭಾಷೆ ಕನ್ನಡ. ಹಾಗಾಗಿ ಅವರು ಎಂಎಎ ಎಲೆಕ್ಷನ್​ನಲ್ಲಿ ಸ್ಪರ್ಧಿಸುವುದು ಸರಿಯಲ್ಲ ಎಂದು ಕೆಲವರು ತಕರಾರು ತೆಗೆದಿದ್ದಾರೆ. ಈಗ ಸೋನು ಕೂಡ ಸ್ಪರ್ಧೆ ಮಾಡಿದರೆ, ಕಾಂಪಿಟೇಷನ್​ ಮತ್ತಷ್ಟು ಹೆಚ್ಚಲಿದೆ.

ಇದನ್ನೂ ಓದಿ: ಕನ್ನಡಿಗ ಎಂದು ಪ್ರಕಾಶ್​ ರಾಜ್​ರನ್ನು ಹೊರಗೆ ಇಡುತ್ತಿರುವ ಟಾಲಿವುಡ್​; ‘ನಮ್ಮವನಲ್ಲ’ ಎಂದವರಿಗೆ ನಟನ ಉತ್ತರ ಏನು?

ಸೈಕಲ್​ ಹತ್ತಿ ಬ್ರೆಡ್​-ಮೊಟ್ಟೆ​ಗಳನ್ನು ಮಾರಾಟ ಮಾಡಲು ಹೊರಟಿದ್ದಾರೆ ಸೋನು ಸೂದ್​! ವಿಡಿಯೋ ನೋಡಿ

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು