AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonu Sood: ಕೊರೊನಾ ಸೋಂಕಿತರ ನೆರವಿಗಾಗಿ ಮತ್ತೊಂದು ಸಾಹಸಕ್ಕೆ ಮುಂದಾದ ರಿಯಲ್​ ಹೀರೋ ಸೋನು ಸೂದ್​

ಮೊದಲ ಆಕ್ಸಿಜನ್ ಪ್ಲಾಂಟ್​ ಅನ್ನು ಫ್ರಾನ್ಸ್​ನಿಂದ ಆರ್ಡರ್​ ಮಾಡಲಾಗಿದ್ದು, ಇನ್ನು 10ರಿಂದ 12 ದಿನಗಳ ಒಳಗೆ ಅದು ಭಾರತಕ್ಕೆ ಬರಲಿದೆ ಎಂದು ಹೇಳಲಾಗಿದೆ. ಎಷ್ಟು ಸಾಧ್ಯವೋ ಅಷ್ಟು ಜೀವಗಳನ್ನು ಉಳಿಸಬೇಕು ಎಂದು ಸೋನು ಸೂದ್ ಪಣತೊಟ್ಟಿದ್ದಾರೆ​.

Sonu Sood: ಕೊರೊನಾ ಸೋಂಕಿತರ ನೆರವಿಗಾಗಿ ಮತ್ತೊಂದು ಸಾಹಸಕ್ಕೆ ಮುಂದಾದ ರಿಯಲ್​ ಹೀರೋ ಸೋನು ಸೂದ್​
ನಟ ಸೋನು ಸೂದ್
ಮದನ್​ ಕುಮಾರ್​
|

Updated on: May 11, 2021 | 10:15 AM

Share

ನಟ ಸೋನು ಸೂದ್​ ಅವರು ಅನೇಕರ ಪಾಲಿಗೆ ರಿಯಲ್​ ಹೀರೋ ಆಗಿದ್ದಾರೆ. ಕಷ್ಟ ಎಂದು ಹೇಳಿದ ಎಲ್ಲರಿಗೂ ಅವರು ಸಹಾಯ ಮಾಡುತ್ತಿದ್ದಾರೆ. ಸದ್ಯದ ಕೊರೊನಾ ಸಂಕಷ್ಟದಲ್ಲಿ ಹಗಲಿರುಳು ಅವರು ಶ್ರಮಿಸುತ್ತಿದ್ದಾರೆ. ಅದರಲ್ಲೂ ಆಸ್ಪತ್ರೆಯ ಬೆಡ್​ ಸಿಗದೇ ಒದ್ದಾಡುತ್ತಿರುವ, ಆಕ್ಸಿಜನ್​ ಸಿಲಿಂಡರ್​ ಕೊರತೆ ಅನುಭವಿಸುತ್ತಿರುವ ಕೊವಿಡ್​ ಸೋಂಕಿತರಿಗಾಗಿ ಸೋನು ಸೂದ್​ ಹಲವು ಬಗೆಯಲ್ಲಿ ನೆರವು ನೀಡುತ್ತಿದ್ದಾರೆ. ಈಗ ಅವರು ಆಕ್ಸಿಜನ್​ ಕೊಡಿಸುವ ಸಲುವಾಗಿ ಮತ್ತೊಂದು ಸಾಹಸಕ್ಕೆ ಮುಂದಾಗಿದ್ದಾರೆ.

ದೆಹಲಿ, ಮಹಾರಾಷ್ಟ್ರ ಸೇರಿದಂತೆ ದೇಶದಲ್ಲಿ ಅತಿ ಹೆಚ್ಚು ಕಷ್ಟ ಅನುಭವಿಸುತ್ತಿರುವ ನಾಲ್ಕು ರಾಜ್ಯಗಳಲ್ಲಿ ಆಕ್ಸಿಜನ್​ ಪ್ಲಾಂಟ್​ಗಳನ್ನು ಸ್ಥಾಪಿಸಲು ಸೋನು ಸೂದ್​ ತೀರ್ಮಾನಿಸಿದ್ದಾರೆ. ಅದಕ್ಕಾಗಿ ಅವರು ಆಕ್ಸಿಜನ್​ ಪ್ಲಾಂಟ್​ಗಳನ್ನು ಫ್ರಾನ್ಸ್​ನಿಂದ ಆಮದು ಮಾಡಿಕೊಳ್ಳುತ್ತಿದ್ದಾರೆ.

‘ದೇಶದಲ್ಲಿ ಸಾಕಷ್ಟು ಜನರು ಆಕ್ಸಿಜನ್​ ಕೊರೆತೆ ಅನುಭವಿಸುತ್ತಿರುವುದು ಗೊತ್ತಾಗಿದೆ. ಈಗ ನಾವು ಆಕ್ಸಿಜನ್​ ಪ್ಲಾಂಟ್​ ಪಡೆಯಲಿದ್ದೇವೆ. ಅದರಿಂದ ಸಿಲಿಂಡರ್​ಗಳನ್ನು ಸದಾ ಕಾಲ ತುಂಬಿಸಿ ಇಡಲು ಸಹಕಾರಿ ಆಗುತ್ತದೆ. ಕೊವಿಡ್​ನಿಂದ ಬಳಲುತ್ತಿರುವವರಿಗೆ ಇದರಿಂದ ಹೆಚ್ಚು ಅನುಕೂಲ ಆಗಲಿದೆ’ ಎಂದು ಸೋನು ಸೂದ್​ ಹೇಳಿದ್ದಾರೆ.

ಮೊದಲ ಆಕ್ಸಿಜನ್ ಪ್ಲಾಂಟ್​ ಅನ್ನು ಫ್ರಾನ್ಸ್​ನಿಂದ ಆರ್ಡರ್​ ಮಾಡಲಾಗಿದ್ದು, ಇನ್ನು 10ರಿಂದ 12 ದಿನಗಳ ಒಳಗೆ ಅದು ಭಾರತಕ್ಕೆ ಬರಲಿದೆ ಎಂದು ಹೇಳಲಾಗಿದೆ. ‘ಸಮಯ ಎಂಬುದೇ ಈಗ ನಮಗೆ ದೊಡ್ಡ ಸವಾಲಾಗಿದೆ. ಆದಷ್ಟು ಬೇಗ ಆಕ್ಸಿಜನ್​ ಪ್ಲಾಂಟ್​ ಬರಬೇಕು. ಅದರಿಂದ ಎಷ್ಟು ಸಾಧ್ಯವೋ ಅಷ್ಟು ಜೀವಗಳನ್ನು ಉಳಿಸಬೇಕು’ ಎಂದಿದ್ದಾರೆ ಸೋನು ಸೂದ್​.

ದೇಶದಲ್ಲಿ ಕೊರೊನಾ ವೈರಸ್​ ಎರಡನೇ ಅಲೆ ತಾಂಡವ ಆಡುತ್ತಿದೆ. ಸೋನು ಸೂದ್​ ಮಾತ್ರವಲ್ಲದೆ, ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಜನರ ಸಹಾಯಕ್ಕೆ ನಿಂತಿದ್ದಾರೆ. ಪ್ರಿಯಾಂಕಾ ಚೋಪ್ರಾ ಮತ್ತು ಅವರ ಪತಿ ನಿಕ್​ ಜೋನಸ್​ ನಿಧಿ ಸಂಗ್ರಹ ಮಾಡುತ್ತಿದ್ದಾರೆ. ಅನುಷ್ಕಾ ಶರ್ಮಾ-ವಿರಾಟ್​ ಕೊಯ್ಲಿ ಕೂಡ 2 ಕೋಟಿ ರೂ. ದೇಣಿಗೆ ನೀಡಿದ್ದೂ ಅಲ್ಲದೇ ಕೈಲಾದಷ್ಟು ಸಹಾಯ ಮಾಡುವಂತೆ ಜನರಿಗೆ ಕರೆ ನೀಡಿದ್ದಾರೆ. ಅರ್ಜುನ್​ ಗೌಡ, ಹರ್ಷಿಕಾ ಪೂಣಚ್ಚ, ಭುವನ್​ ಗೌಡ, ಜಗ್ಗೇಶ್​, ಉಪೇಂದ್ರ, ಶ್ರೀಮುರಳಿ ಸೇರಿದಂತೆ ಕನ್ನಡದ ಅನೇಕ ಸೆಲೆಬ್ರಿಟಿಗಳು ಈ ಸಂದರ್ಭದಲ್ಲಿ ಕಷ್ಟದಲ್ಲಿರುವವರಿಗೆ ನೆರವು ನೀಡುತ್ತಿದ್ದಾರೆ.

ಇದನ್ನೂ ಓದಿ:

ಕ್ರಿಕೆಟಿಗ ಸುರೇಶ್ ರೈನಾಗೆ 10 ನಿಮಿಷದಲ್ಲಿ ಆಕ್ಸಿಜನ್ ಕೊಡಿಸಿದ ನಟ ಸೋನು ಸೂದ್!

IPL​ ರದ್ದಾದ ಬಳಿಕ ಆಸೀಸ್​ ಆಟಗಾರರನ್ನು ಮನೆಗೆ ಕಳಿಸಲು ಸೋನು ಸೂದ್​ಗೆ ಮನವಿ; ನಟನ ಉತ್ತರ ಏನು?

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!