AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonu Sood: ಸೋನು ಸೂದ್​ ಹೆಸರಲ್ಲಿ ಮಹಾಮೋಸ; ಕೊರೊನಾ ಕಾಲದಲ್ಲೂ ದುಡ್ಡು ಕಬಳಿಸಿದ ಕಿಡಿಗೇಡಿಗಳು

Sonu Sood Foundation: ಸೋನು ಸೂದ್​ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರಿಂದ ಹಣ ಕಬಳಿಸಲು ಕೆಲವರು ಸ್ಕೆಚ್​ ಹಾಕಿದ್ದಾರೆ. ಈ ಮೋಸದ ಜಾಲದ ಬಗ್ಗೆ ಸ್ವತಃ ಸೋನು ಸೂದ್​ಗೆ ಈಗ ಮಾಹಿತಿ ಸಿಕ್ಕಿದೆ. ಅದನ್ನು ಅವರು ಬಯಲಿಗೆ ಎಳೆದಿದ್ದಾರೆ.

Sonu Sood: ಸೋನು ಸೂದ್​ ಹೆಸರಲ್ಲಿ ಮಹಾಮೋಸ; ಕೊರೊನಾ ಕಾಲದಲ್ಲೂ ದುಡ್ಡು ಕಬಳಿಸಿದ ಕಿಡಿಗೇಡಿಗಳು
ಸೋನು ಸೂದ್
ಮದನ್​ ಕುಮಾರ್​
|

Updated on:May 18, 2021 | 8:19 AM

Share

ಬಹುಭಾಷಾ ನಟ ಸೋನು ಸೂದ್​ ಮಾಡುತ್ತಿರುವ ಸಮಾಜಮುಖಿ ಕೆಲಸಗಳ ಬಗ್ಗೆ ಹೊಸದಾಗಿ ಹೇಳಬೇಕಾದ್ದಿಲ್ಲ. ಅಷ್ಟರಮಟ್ಟಿಗೆ ಅವರು ತಮ್ಮ ಕೆಲಸಗಳ ಮೂಲಕವೇ ಫೇಮಸ್​ ಆಗಿದ್ದಾರೆ. ಸಿನಿಮಾಗಳಿಂದ ಎಷ್ಟು ಅಭಿಮಾನಿಗಳನ್ನು ಅವರು ಸಂಪಾದಿಸಿಕೊಂಡಿದ್ದರೋ ಅದಕ್ಕಿಂತಲೂ 10 ಪಟ್ಟು ಹೆಚ್ಚು ಅಭಿಮಾನಿಗಳನ್ನು ಅವರು ತಮ್ಮ ಹೃದಯಶ್ರೀಮಂತಿಕೆಯ ಕಾರಣದಿಂದ ಗಳಿಸಿಕೊಂಡಿದ್ದಾರೆ. ಸೋನು ಸೂದ್​ ಎಂದರೆ ಒಂದು ಭರವಸೆ ಎನ್ನುವ ನಂಬಿಕೆ ಜನರಲ್ಲಿ ಮೂಡಿದೆ. ಆದರೆ ಆ ನಂಬಿಕೆಯನ್ನೇ ದುರ್ಬಳಕೆ ಮಾಡಿಕೊಳ್ಳುವ ಜಾಲಗಳು ಹುಟ್ಟಿಕೊಂಡಿವೆ. ಈ ಬಗ್ಗೆ ಜನರು ಎಚ್ಚರಿಕೆ ವಹಿಸಬೇಕಿರುವುದು ಅನಿವಾರ್ಯ ಆಗಿದೆ.

ದೇಶಾದ್ಯಂತ ಕೊರೊನಾ ವೈರಸ್​ ಎರಡನೇ ಅಲೇ ಜೋರಾಗಿ ಹಬ್ಬಿರುವ ಈ ಸಂದರ್ಭದಲ್ಲಿ ಅನೇಕರಿಗೆ ಸೋನು ಸೂದ್​ ನೆರವು ನೀಡುತ್ತಿದ್ದಾರೆ. ಆಕ್ಸಿಜನ್​, ಔಷಧಿ, ಬೆಡ್​ ವ್ಯವಸ್ಥೆ ಸೇರಿದಂತೆ ಅನೇಕ ಸಹಾಯಗಳನ್ನು ಅವರು ಮಾಡುತ್ತಿದ್ದಾರೆ. ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರಿಂದ ಹಣ ಕಬಳಿಸಲು ಕೆಲವರು ಸ್ಕೆಚ್​ ಹಾಕಿದ್ದಾರೆ. ಈ ಮೋಸದ ಜಾಲದ ಬಗ್ಗೆ ಸ್ವತಃ ಸೋನು ಸೂದ್​ಗೆ ಈಗ ಮಾಹಿತಿ ಸಿಕ್ಕಿದೆ. ಅದನ್ನು ಅವರು ಬಯಲಿಗೆ ಎಳೆದಿದ್ದಾರೆ.

‘ಸೋನು ಸೂದ್​ ಅವರ ತಂಡಕ್ಕೆ ನೀವು ದೇಣಿಗೆ ನೀಡಬಹುದು. ಒಂದು ರೂಪಾಯಿಯಿಂದ ನಿಮಗೆ ಎಷ್ಟು ಸಾಧ್ಯವೋ ಅಷ್ಟು ಹಣವನ್ನು ನೀಡಬಹುದು. ಈ ಕೆಳಗಿನ ನಂಬರ್​ಗೆ ಫೋನ್​ಪೇ ಮಾಡಿ’ ಎಂದು ಬರೆದಿರುವ ಫೋಸ್ಟರ್​ ಇಂಟರ್​ನೆಟ್​ನಲ್ಲಿ ಹರಿದಾಡುತ್ತಿದೆ. ಅದರಲ್ಲಿ ಸೋನು ಸೂದ್​ ಅವರ ಫೋಟೋ ಕೂಡ ಇದೆ. ಸೋಶಿಯಲ್​ ಮೀಡಿಯಾದಲ್ಲಿ ಅದರ ಸ್ಕ್ರೀನ್ ಶಾಟ್​ ಹಂಚಿಕೊಂಡಿರುವ ಸೋನು ಸೂದ್​ ಅವರು ‘ಫೇಕ್​’ ಎಂದು ಹೇಳಿದ್ದಾರೆ. ಇಂಥ ಜಾಲದ ಬಗ್ಗೆ ಎಚ್ಚರಿಕೆಯಿಂದಿರಿ ಎಂದು ಜನರಿಗೆ ಅವರು ವಾರ್ನಿಂಗ್​ ನೀಡಿದ್ದಾರೆ.

ಇನ್ನು, ಸೋನು ಸೂದ್​ ಎಷ್ಟೇ ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದರೂ ಒಂದು ವರ್ಗದ ಜನರು ಅವರನ್ನು ಅನುಮಾನದ ಕಣ್ಣುಗಳಿಂದಲೇ ನೋಡುತ್ತಿದ್ದಾರೆ. ಒಡಿಶಾದಲ್ಲಿ ಒಬ್ಬ ವ್ಯಕ್ತಿಗೆ ಇತ್ತೀಚೆಗೆ ಸೂನು ಸೂದ್​ ಬೆಡ್​ ವ್ಯವಸ್ಥೆ ಮಾಡಿಸಿದ್ದರು. ಅದರ ಬಗ್ಗೆ ಅಲ್ಲಿನ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದರು. ತಾವು ಮಾಡದೇ ಇರುವ ಕೆಲಸಕ್ಕೆ ಸೋನು ಸೂದ್​ ಕ್ರೆಡಿಟ್​ ಪಡೆದುಕೊಳ್ಳುತ್ತಿದ್ದಾರೆ ಎಂಬ ಆರೋಪ ಮಾಡಲಾಗಿತ್ತು. ಆದರೆ ಅದಕ್ಕೆ ಸಾಕ್ಷಿ ಸಮೇತ ಸೋನು ಸೂದ್​ ಉತ್ತರ ನೀಡಿದ್ದಾರೆ.

ಇದನ್ನೂ ಓದಿ:

ಬೆಂಗಳೂರಿಗರ ಸಹಾಯಕ್ಕೆ ನಿಂತ ಸೋನು ಸೂದ್​; ಈ ಸಂಖ್ಯೆಗೆ ಸಂಪರ್ಕಿಸಿದರೆ ಮನೆಬಾಗಿಲಿಗೆ ಬರುತ್ತೆ ಆಕ್ಸಿಜನ್​ ಸಿಲಿಂಡರ್

Sonu Sood: ಕೊರೊನಾ ಸೋಂಕಿತರ ನೆರವಿಗಾಗಿ ಮತ್ತೊಂದು ಸಾಹಸಕ್ಕೆ ಮುಂದಾದ ರಿಯಲ್​ ಹೀರೋ ಸೋನು ಸೂದ್​

Published On - 8:13 am, Tue, 18 May 21

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!