AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತು ಮಗು ಕೇಸ್​: ಸೋನು ಶ್ರೀನಿವಾಸ್​ ಗೌಡ 4 ದಿನಗಳ ಕಾಲ ​ಪೊಲೀಸ್​ ಕಸ್ಟಡಿಗೆ

ಸೋನು ಶ್ರೀನಿವಾಸ್​ ಗೌಡ ಅವರನ್ನು ರಾಯಚೂರಿಗೆ ಕರೆದೊಯ್ದು ಪೊಲೀಸರು ತನಿಖೆ ನಡೆಸಲಿದ್ದಾರೆ. ಹಾಗಾಗಿ ನ್ಯಾಯಾಲಯವು ಅವರನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಬಾಲಕಿ ಪರಿಚಯವಾಗಿದ್ದ ಸ್ಥಳ ಮತ್ತು ಬಾಲಕಿಯ ನಿವಾಸ ಸೇರಿ ಹಲವು ಕಡೆಗಳಿಗೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ.

ದತ್ತು ಮಗು ಕೇಸ್​: ಸೋನು ಶ್ರೀನಿವಾಸ್​ ಗೌಡ 4 ದಿನಗಳ ಕಾಲ ​ಪೊಲೀಸ್​ ಕಸ್ಟಡಿಗೆ
ಸೋನು ಶ್ರೀನಿವಾಸ್​ ಗೌಡ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Mar 22, 2024 | 5:42 PM

Share

ಸೋಶಿಯಲ್​ ಮೀಡಿಯಾ ಹಾಗೂ ಬಿಗ್​ ಬಾಸ್​ ರಿಯಾಲಿಟಿ ಶೋ ಮೂಲಕ ಜನಪ್ರಿಯತೆ ಗಳಿಸಿದ್ದ ಸೋನು ಶ್ರೀನಿವಾಸ್​ ಗೌಡ (Sonu Srinivas Gowda) ಅವರಿಗೆ ಈಗ ಕಾನೂನಿನ ಸಂಕಷ್ಟ ಹೆಚ್ಚಾಗಿದೆ. ಕಾನೂನು ಬಾಹಿರವಾಗಿ ಹೆಣ್ಣು ಮಗುವನ್ನು ದತ್ತು ಪಡೆದ ಆರೋಪ ಅವರ ಮೇಲಿದೆ. ಈ ಪ್ರಕರಣದಲ್ಲಿ ಅವರನ್ನು ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದು, (Sonu Gowda Arrest) ಹೆಚ್ಚಿನ ವಿಚಾರಣೆಗಾಗಿ 4 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ಒಪ್ಪಿಸಿ ಸಿಜೆಎಂ ಕೋರ್ಟ್ ಆದೇಶ ನೀಡಿದೆ. ಮಾರ್ಚ್ 25ರವರೆಗೆ ಸೋನು ಗೌಡ ಅವರು ಪೊಲೀಸ್ ಕಸ್ಟಡಿಯಲ್ಲಿ (Police Custody) ಇರಲಿದ್ದಾರೆ.

ಸೋಮವಾರ (ಮಾರ್ಚ್​ 25) ಸೋನು ಶ್ರೀನಿವಾಸ್​ ಗೌಡ ಅವರನ್ನು ಪೊಲೀಸರು ಕೋರ್ಟ್​ಗೆ ಹಾಜರುಪಡಿಸಬೇಕಿದೆ. ಅಲ್ಲಿಯವರೆಗೆ ಸೋನು ಗೌಡ ಅವರನ್ನು ರಾಯಚೂರಿಗೆ ಕರೆದೊಯ್ದು ಪೊಲೀಸರು ತನಿಖೆ ನಡೆಸಲಿದ್ದಾರೆ. ಆದ್ದರಿಂದ ನ್ಯಾಯಾಲಯ ಅವರನ್ನು 4 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ಬಾಲಕಿ ಪರಿಚಯವಾಗಿದ್ದ ಸ್ಥಳ ಮತ್ತು ಬಾಲಕಿಯ ನಿವಾಸ ಸೇರಿ ಹಲವು ಕಡೆಗಳಿಗೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ.

ಇದನ್ನೂ ಓದಿ: ‘ಮಗು ಅಂದ್ರೆ ದುಡ್ಡು ಮಾಡೋ ವಸ್ತು ಅಲ್ಲ’; ಸೋನು ಶ್ರೀನಿವಾಸ ಗೌಡಗೆ ತರಾಟೆ

ಬ್ಯಾಡರಹಳ್ಳಿ ಠಾಣೆ ಪೊಲೀಸರು ಸೋನು ಶ್ರೀನಿವಾಸ್​ ಗೌಡ ಅವರ ವಿಚಾರಣೆ ಮುಂದುವರಿಸಿದ್ದಾರೆ. ರಾತ್ರಿ ವೇಳೆ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಅವರನ್ನು ಇರಿಸಲಾಗುವುದು. ನಾಳೆ (ಮಾರ್ಚ್​ 23) ಬೆಳಗ್ಗೆ ಠಾಣೆಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ.

ಪ್ರಕರಣದ ಹಿನ್ನೆಲೆ:

ಕೆಲವು ತಿಂಗಳ ಹಿಂದೆ ಸೋನು ಶ್ರೀನಿವಾಸ್​ ಗೌಡ ಅವರು ಹೆಣ್ಣು ಮಗುವನ್ನು ದತ್ತು ಪಡೆದಿರುವುದಾಗಿ ಹೇಳಿಕೊಂಡಿದ್ದರು. ಆದರೆ ಅವರು ದತ್ತು ಪ್ರಕ್ರಿಯೆಯ ಕಾನೂನನ್ನು ಪಾಲಿಸಿಲ್ಲ ಎಂಬುದು ತಿಳಿದು ಬಂದ ಬಳಿಕ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ಅವರು ಪೊಲೀಸರಿಗೆ ದೂರು ನೀಡಿದ್ದರು. ಅದರ ಅನ್ವಯ ಸೋನು ಗೌಡ ಅವರನ್ನು ಪೊಲೀಸರು ಬಂಧಿಸಿದರು. 7 ವರ್ಷದ ಬಾಲಕಿಯ ಜೊತೆ ಸೋನು ಗೌಡ ಅವರು ಫೋಟೋ ತೆಗೆದುಕೊಂಡು ಅವುಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇತ್ತೀಚೆಗೆ ಬಾಲಕಿ ಜೊತೆ ಅವರು ಮಂತ್ರಾಲಯಕ್ಕೂ ಹೋಗಿ ಬಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:33 pm, Fri, 22 March 24

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು