AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಂದರ್ಯಾ ಜೊತೆ ವಿಮಾನದಲ್ಲಿ ಕನ್ನಡದ ಈ ನಟಿಯೂ ಇರಬೇಕಿತ್ತು; ಆ ಒಂದು ನಿರ್ಧಾರ ಪ್ರಾಣ ಉಳಿಸಿತು

ಸೌಂದರ್ಯಾ ಅವರ ವಿಮಾನ ಅಪಘಾತದ ಬಗ್ಗೆ ನಟಿ ಮೀನಾ ಅವರು ತಮ್ಮ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಸೌಂದರ್ಯಾ ಅವರ ಆಪ್ತ ಗೆಳತಿಯಾಗಿದ್ದ ಮೀನಾ, ಅಂದು ಅವರ ಜೊತೆ ವಿಮಾನದಲ್ಲಿ ಇರಬೇಕಿತ್ತು. ಆದರೆ ಅವರು ಹೋಗಿರಲಿಲ್ಲ. ಈ ಘಟನೆಯ ನೆನಪು ಇಂದಿಗೂ ಅವರನ್ನು ಕಾಡುತ್ತಿದೆ.

ಸೌಂದರ್ಯಾ ಜೊತೆ ವಿಮಾನದಲ್ಲಿ ಕನ್ನಡದ ಈ ನಟಿಯೂ ಇರಬೇಕಿತ್ತು; ಆ ಒಂದು ನಿರ್ಧಾರ ಪ್ರಾಣ ಉಳಿಸಿತು
ಸೌಂದರ್ಯಾ
ರಾಜೇಶ್ ದುಗ್ಗುಮನೆ
|

Updated on:Sep 19, 2025 | 10:21 AM

Share

ನಟಿ ಸೌಂದರ್ಯಾ (Soundarya) ಅವರು ವಿಮಾನ ಅಪಘಾತದಲ್ಲಿ ನಿಧನ ಹೊಂದಿ ಅದೆಷ್ಟೋ ವರ್ಷಗಳು ಕಳೆದಿವೆ. ಆದರೆ, ಈ ಕಹಿಘಟನೆಯನ್ನು ಮರೆಯಲು ಯಾರಿಂದಲೂ ಸಾಧ್ಯವಿಲ್ಲ. 2004ರಲ್ಲಿ ಸೌಂದರ್ಯಾ ಅವರು ಆಂಧ್ರ ಪ್ರದೇಶಕ್ಕೆ ಚುನಾವಣಾ ಪ್ರಚಾರಕ್ಕೆ ಖಾಸಗಿ ವಿಮಾನದಲ್ಲಿ ಹೊರಟಿದ್ದರು. ವಿಮಾನ ಟೇಕ್​ ಆಫ್ ಆದ ಕೆಲವೇ ಗಂಟೆಗಳಲ್ಲಿ ಹೊತ್ತಿ ಉರಿಯಿತು. ಕನ್ನಡದಲ್ಲಿ ನಟಿಸಿದ್ದ ಮೀನಾ ಕೂಡ ಸೌಂದರ್ಯಾ ಜೊತೆ ಇರಬೇಕಿತ್ತು. ಆದರೆ, ಅವರು ವಿಮಾನದಲ್ಲಿ ತೆರಳಿರಲಿಲ್ಲ. ಅವರ ನಿರ್ಧಾರವೇ ಅವರ ಪ್ರಾಣ ಉಳಿಸಿತು.

ಮೀನಾ ಅವರು ಸೌಂದರ್ಯಾ ಅವರ ಆಪ್ತ ಸ್ನೇಹಿತೆ. ಕನ್ನಡದಲ್ಲಿ ‘ಪುಟ್ನಂಜ’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದರು. ಅವರು ಸೌಂದರ್ಯಾ ವಿಚಾರದಲ್ಲಿ ಮೌನ ವಹಿಸಿದ್ದೇ ಹೆಚ್ಚು. ಈಗ ಅವರು ಘಟನೆ ಬಗ್ಗೆ ನೆನಪಿಸಿಕೊಂಡಿದ್ದಾರೆ. ‘ಸೌಂದರ್ಯಾ ಸಾವಿನ ವಿಚಾರ ನನಗೆ ಶಾಕ್ ತಂದಿದೆ. ಆ ಘಟನೆ ನಡೆದು ಇಷ್ಟ ವರ್ಷಗಳಾದರೂ ನಾನು ಇನ್ನೂ ಸಂಪೂರ್ಣವಾಗಿ ಚೇತರಿಕೆ ಕಂಡಿಲ್ಲ’ ಎನ್ನುತ್ತಾರೆ ಮೀನಾ.

‘ನಾನು ಕೂಡ ಅಂದು ಸೌಂದರ್ಯಾ ಜೊತೆ ಇರಬೇಕಿತ್ತು. ಆದರೆ, ನನಗೆ ಶೂಟ್ ಇದೆ ಎಂದು ಹೇಳಿದೆ. ನನಗೆ ರಾಜಕೀಯದ ಬಗ್ಗೆ ಆಸಕ್ತಿಯೇ ಇರಲಿಲ್ಲ. ಹೀಗಾಗಿ, ನಾನು ಅವರ ಜೊತೆ ತೆರಳಿಲ್ಲ. ಏನಾಯಿತು ಎಂಬ ವಿಚಾರ ತಿಳಿದಾಗ ನನನಗೆ ಸಾಕಷ್ಟು ಬೇಸರ ಆಯಿತು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
‘ಏನಾಗಿದೆ ಅದನ್ನು ಬದಲಿಸಲು ಸಾಧ್ಯವಿಲ್ಲ’; ದೀಪಿಕಾ ಬಗ್ಗೆ ನಾಗ್ ಬೇಸರ
Image
ವಿಷ್ಣು ನಟನೆಯ ‘ಬಂಧನ’ ಸಿನಿಮಾ ತಡೆಯಲು ನಡೆದ ಪ್ರಯತ್ನಗಳು ಒಂದೆರಡಲ್ಲ
Image
ಇನ್ನೂ ಕಡಿಮೆ ಆಗಿಲ್ಲ ಮಾಲಾಶ್ರೀ ಖದರ್; ಈ ವಿಡಿಯೋನೇ ಸಾಕ್ಷಿ
Image
ವಿಷ್ಣುವರ್ಧನ್-ರಜನಿಕಾಂತ್  ಒಟ್ಟಾಗಿ ನಟಿಸಿದ್ದ ಸಿನಿಮಾದ ದೃಶ್ಯ ನೆನಪಿದೆಯೇ?

ಇದನ್ನೂ ಓದಿ: ಸೌಂದರ್ಯಾ ಜಾತಕದಲ್ಲಿ ಏನಿತ್ತು? ಸಾವಿನ ವಿಚಾರ ತಂದೆಗೆ ಮೊದಲೇ ತಿಳಿದಿತ್ತು

‘ನಾವಿಬ್ಬರೂ ತುಂಬಾನೇ ಆಪ್ತರಾಗಿದ್ದೆವು. ಅವಳು ತುಂಬಾನೇ ಟ್ಯಾಲೆಂಟೆಡ್ ವ್ಯಕ್ತಿ. ನಮ್ಮಿಬ್ಬರ ಮಧ್ಯೆ ಯಾವಾಗಲೂ ಆರೋಗ್ಯಕರ ಸ್ಪರ್ಧೆ ಇರುತ್ತಿತ್ತು’ ಎಂದು ಅವರು ಆ ಘಟನೆಯನ್ನು ನೆನಪಿಸಿಕೊಂಡರು. ಮೀನಾ ಅವರು ಹುಟ್ಟಿದ್ದು ತಮಿಳುನಾಡಿನಲ್ಲಿ. ಅವರು 1982ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರನ್ನು ಕನ್ನಡಕ್ಕೆ ಪರಿಚಯಿಸಿದ್ದು ರವಿಚಂದ್ರನ್. ‘ಪುಟ್ನಂಜ’ ಬಳಿಕ ಅವರು ‘ಚೆಲುವ’, ‘ಮೊಮ್ಮಗ’, ‘ಶ್ರೀ ಮಂಜುನಾಥ’, ‘ಗ್ರಾಮ ದೇವತೆ’, ‘ಸಿಂಹಾದ್ರಿಯ ಸಿಂಹ’ ರೀತಿಯ ಸಿನಿಮಾಗಳಲ್ಲಿ ನಟಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:40 am, Fri, 19 September 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು