AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sai Pallavi: ಸೀತೆ ಪಾತ್ರದಲ್ಲಿ ನಟಿಸುತ್ತಾರಾ ಸಾಯಿ ಪಲ್ಲವಿ? ಇದು ಬೆಸ್ಟ್ ಆಯ್ಕೆ ಅಂತಾರೆ ಅಭಿಮಾನಿಗಳು

Ramayana | Ranbir Kapoor: ಸಾಯಿ ಪಲ್ಲವಿ ಅವರು ಪ್ರತಿಭಾವಂತ ನಟಿ ಎಂಬುದು ಈಗಾಗಲೇ ಸಾಬೀತಾಗಿದೆ. ಜನರು ಅವರ ನಟನೆಯನ್ನು ಮೆಚ್ಚಿಕೊಂಡಿದ್ದಾರೆ.

Sai Pallavi: ಸೀತೆ ಪಾತ್ರದಲ್ಲಿ ನಟಿಸುತ್ತಾರಾ ಸಾಯಿ ಪಲ್ಲವಿ? ಇದು ಬೆಸ್ಟ್ ಆಯ್ಕೆ ಅಂತಾರೆ ಅಭಿಮಾನಿಗಳು
ಸಾಯಿ ಪಲ್ಲವಿ
ಮದನ್​ ಕುಮಾರ್​
|

Updated on: Mar 08, 2023 | 8:00 AM

Share

ಬಹುಭಾಷಾ ನಟಿ ಸಾಯಿ ಪಲ್ಲವಿ (Sai Pallavi) ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅತಿಯಾಗಿ ಗ್ಲಾಮರ್​ ಇರುವಂತಹ ಪಾತ್ರವನ್ನು ಅವರು ಮಾಡುವುದಿಲ್ಲ. ಹಾಗಾಗಿ ಅಭಿಮಾನಿಗಳ ಮನದಲ್ಲಿ ಅವರ ಬಗ್ಗೆ ಒಂದು ರೀತಿಯ ಗೌರವ ಇದೆ. ಪಾತ್ರಗಳ ಆಯ್ಕೆಯಲ್ಲಿಯೂ ಅವರು ಸಖತ್​ ಕಾಳಜಿ ವಹಿಸುತ್ತಾರೆ. ಈವರೆಗೂ ಸಾಯಿ ಪಲ್ಲವಿ ಮಾಡಿದ ಸಿನಿಮಾಗಳೆಲ್ಲವೂ (Sai Pallavi Movies) ಒಂದಿಲ್ಲೊಂದು ಕಾರಣಕ್ಕೆ ವಿಶೇಷ ಎನಿಸಿಕೊಂಡಿವೆ. ಈಗ ಅವರು ಸೀತೆ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಯಾರೂ ಕೂಡ ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಹಾಗಿದ್ದರೂ ಕೂಡ ಬಿ-ಟೌನ್​ ಅಂಗಳದಿಂದ ಗಾಸಿಪ್​ ಕೇಳಿಬಂದಿದೆ. ರಾಮನ ಪಾತ್ರದಲ್ಲಿ ರಣಬೀರ್​ ಕಪೂರ್​ (Ranbir Kapoor) ನಟಿಸುತ್ತಾರೆ ಎಂದು ಕೂಡ ಹೇಳಲಾಗುತ್ತಿದೆ.

ಸರ್ವಕಾಲಕ್ಕೂ ಸಲ್ಲುವಂತಹ ಕಥೆ ರಾಮಾಯಣ. ಈ ಮಹಾಗ್ರಂಥವನ್ನು ಆಧಾರವಾಗಿ ಇಟ್ಟುಕೊಂಡು ಹಲವು ಭಾಷೆಯಲ್ಲಿ ಈಗಾಗಲೇ ಅನೇಕ ಸಿನಿಮಾಗಳು ಬಂದಿವೆ. ಇನ್ನೂ ಅನೇಕ ಪ್ರಯತ್ನಗಳು ಆಗುತ್ತಿವೆ. ಬಾಲಿವುಡ್​ ಮಂದಿ ಕೂಡ ರಾಮಾಯಣದ ಕಥೆಯ ಬೆನ್ನು ಹತ್ತಿದ್ದಾರೆ. ಈ ಸಿನಿಮಾಗೆ ಮಧು ಮಂತೆನ ಅವರು ಬಂಡವಾಳ ಹೂಡಲಿದ್ದಾರೆ. ಈಗಾಗಲೇ ಪಾತ್ರವರ್ಗದ ಆಯ್ಕೆ ನಡೆಯುತ್ತಿದೆ ಎಂದು ಗಾಸಿಪ್​ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. ರಾಮನಾಗಿ ರಣಬೀರ್​ ಕಪೂರ್​ ಕಾಣಿಸಿಕೊಂಡರೆ, ಅವರ ಜೊತೆ ಸೀತೆ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸುವ ಸಾಧ್ಯತೆ ಇದೆಯಂತೆ. ಆದರೆ ಇದೆಲ್ಲವೂ ಇನ್ನೂ ಅಂತೆ-ಕಂತೆ ಹಂತದಲ್ಲಿದೆ.

ಇದನ್ನೂ ಓದಿ: Sai Pallavi: ‘ಪುಷ್ಪ 2’ ಚಿತ್ರದಲ್ಲಿ ಸಾಯಿ ಪಲ್ಲವಿ ಇರ್ತಾರಾ? ಸ್ಪಷ್ಟನೆ ನೀಡಿದ ನಿರ್ಮಾಪಕ

ಇದನ್ನೂ ಓದಿ
Image
Virata Parvam OTT Release: ಥಿಯೇಟರ್​ನಲ್ಲಿ ಸೋತ ಸಾಯಿ ಪಲ್ಲವಿಯ ‘ವಿರಾಟ ಪರ್ವಂ’ ಚಿತ್ರಕ್ಕೀಗ ಒಟಿಟಿಯೇ ಗತಿ; ಪ್ರಸಾರ​ ಯಾವಾಗ?
Image
Sai Pallavi: ಥಿಯೇಟರ್​ಗೆ ಜನರನ್ನು ಕರೆಸುವಲ್ಲಿ ಸೋತ ಸಾಯಿ ಪಲ್ಲವಿ; ‘ಲೇಡಿ ಪವರ್​ ಸ್ಟಾರ್​’ ಬಿರುದು ಈಗೇನಾಯ್ತು?
Image
Sai Pallavi: ಸಾಯಿ ಪಲ್ಲವಿ ಬೆಂಬಲಕ್ಕೆ ನಿಂತ ಸಾವಿರಾರು ಮಂದಿ; ಸ್ಪಷ್ಟನೆ ವಿಡಿಯೋ ಕಂಡು ಜನರು ಹೇಳ್ತಿರೋದೇನು?
Image
Sai Pallavi: ಸಾಯಿ ಪಲ್ಲವಿ ವಿವಾದದ ಬಳಿಕ ‘ವಿರಾಟ ಪರ್ವಂ’ ಚಿತ್ರಕ್ಕೆ ಜನರು ನೀಡಿದ ರೇಟಿಂಗ್​ ಎಷ್ಟು?

ಸೋಶಿಯಲ್​ ಮೀಡಿಯಾದಲ್ಲಿ ಈ ಸುದ್ದಿ ಹರಿದಾಡುತ್ತಿದೆ. ಒಂದು ವೇಳೆ ಸೀತೆಯ ಪಾತ್ರವನ್ನು ಸಾಯಿ ಪಲ್ಲವಿ ನಿಭಾಯಿಸುವುದೇ ಹೌದಾದರೆ ಇದು ಸರಿಯಾದ ಆಯ್ಕೆ ಎಂದು ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ. ಸಾಯಿ ಪಲ್ಲವಿ ಅವರು ಪ್ರತಿಭಾವಂತ ನಟಿ ಎಂಬುದು ಈಗಾಗಲೇ ಸಾಬೀತಾಗಿದೆ. ಜನರು ಅವರ ನಟನೆಯನ್ನು ಮೆಚ್ಚಿಕೊಂಡಿದ್ದಾರೆ. ಸೀತೆ ಪಾತ್ರಕ್ಕೆ ಅವರು ನ್ಯಾಯ ಸಲ್ಲಿಸುತ್ತಾರೆ ಎಂಬ ನಂಬಿಕೆ ಅವರ ಅಭಿಮಾನಿಗಳಿಗೆ ಇದೆ. ಬೇರೆ ನಟಿಯರ ಹೆಸರು ಕೂಡ ಈ ಹಿಂದೆ ಕೇಳಿಬಂದಿತ್ತು. ಆದರೆ ಯಾವುದೂ ಅಂತಿಮವಾದ ಬಗ್ಗೆ ಸುದ್ದಿ ಹೊರಬಿದ್ದಿಲ್ಲ.

ಇದನ್ನೂ ಓದಿ: Sai Pallavi: ಚಿತ್ರಮಂದಿರದಲ್ಲಿ ಸೋತ ಸಾಯಿ ಪಲ್ಲವಿ ನಟನೆಯ ‘ಗಾರ್ಗಿ’ ಚಿತ್ರಕ್ಕೆ ಈಗ ಅಂತಾರಾಷ್ಟ್ರೀಯ ಮನ್ನಣೆ

ಆಫರ್​ ಬಂದಿಲ್ಲ ಅಂತಿದ್ದಾರೆ ರಣಬೀರ್​ ಕಪೂರ್​:

ಒಂದುಕಡೆ ಗಾಸಿಪ್​ ಮಂದಿ ಒಂದಷ್ಟು ಸುದ್ದಿ ಹಬ್ಬಿಸುತ್ತಿದ್ದಾರೆ. ಆದರೆ ರಾಮಾಯಣ ಕಥೆ ಆಧಾರಿತ ಸಿನಿಮಾದಿಂದ ತಮಗೆ ಯಾವುದೇ ಆಫರ್​ ಬಂದಿಲ್ಲ ಎಂದು ರಣಬೀರ್​ ಕಪೂರ್​ ಹೇಳುತ್ತಿದ್ದಾರೆ. ಅತ್ತ ಬಾಲಿವುಡ್​ನ ಕೆಲವು ನಿರ್ಮಾಣ ಸಂಸ್ಥೆಗಳು ಕೂಡ ರಾಮಾಯಣವನ್ನು ಇಟ್ಟುಕೊಂಡು ಸಿನಿಮಾ ಮಾಡಲು ಪ್ಲ್ಯಾನ್​ ರೂಪಿಸಿಕೊಂಡಿವೆ. ಆದರೆ ಯಾರಿಂದಲೂ ಸ್ಪಷ್ಟ ಚಿತ್ರಣ ಲಭ್ಯವಾಗಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ