Sai Pallavi: ಸೀತೆ ಪಾತ್ರದಲ್ಲಿ ನಟಿಸುತ್ತಾರಾ ಸಾಯಿ ಪಲ್ಲವಿ? ಇದು ಬೆಸ್ಟ್ ಆಯ್ಕೆ ಅಂತಾರೆ ಅಭಿಮಾನಿಗಳು

Ramayana | Ranbir Kapoor: ಸಾಯಿ ಪಲ್ಲವಿ ಅವರು ಪ್ರತಿಭಾವಂತ ನಟಿ ಎಂಬುದು ಈಗಾಗಲೇ ಸಾಬೀತಾಗಿದೆ. ಜನರು ಅವರ ನಟನೆಯನ್ನು ಮೆಚ್ಚಿಕೊಂಡಿದ್ದಾರೆ.

Sai Pallavi: ಸೀತೆ ಪಾತ್ರದಲ್ಲಿ ನಟಿಸುತ್ತಾರಾ ಸಾಯಿ ಪಲ್ಲವಿ? ಇದು ಬೆಸ್ಟ್ ಆಯ್ಕೆ ಅಂತಾರೆ ಅಭಿಮಾನಿಗಳು
ಸಾಯಿ ಪಲ್ಲವಿ
Follow us
|

Updated on: Mar 08, 2023 | 8:00 AM

ಬಹುಭಾಷಾ ನಟಿ ಸಾಯಿ ಪಲ್ಲವಿ (Sai Pallavi) ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅತಿಯಾಗಿ ಗ್ಲಾಮರ್​ ಇರುವಂತಹ ಪಾತ್ರವನ್ನು ಅವರು ಮಾಡುವುದಿಲ್ಲ. ಹಾಗಾಗಿ ಅಭಿಮಾನಿಗಳ ಮನದಲ್ಲಿ ಅವರ ಬಗ್ಗೆ ಒಂದು ರೀತಿಯ ಗೌರವ ಇದೆ. ಪಾತ್ರಗಳ ಆಯ್ಕೆಯಲ್ಲಿಯೂ ಅವರು ಸಖತ್​ ಕಾಳಜಿ ವಹಿಸುತ್ತಾರೆ. ಈವರೆಗೂ ಸಾಯಿ ಪಲ್ಲವಿ ಮಾಡಿದ ಸಿನಿಮಾಗಳೆಲ್ಲವೂ (Sai Pallavi Movies) ಒಂದಿಲ್ಲೊಂದು ಕಾರಣಕ್ಕೆ ವಿಶೇಷ ಎನಿಸಿಕೊಂಡಿವೆ. ಈಗ ಅವರು ಸೀತೆ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಯಾರೂ ಕೂಡ ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಹಾಗಿದ್ದರೂ ಕೂಡ ಬಿ-ಟೌನ್​ ಅಂಗಳದಿಂದ ಗಾಸಿಪ್​ ಕೇಳಿಬಂದಿದೆ. ರಾಮನ ಪಾತ್ರದಲ್ಲಿ ರಣಬೀರ್​ ಕಪೂರ್​ (Ranbir Kapoor) ನಟಿಸುತ್ತಾರೆ ಎಂದು ಕೂಡ ಹೇಳಲಾಗುತ್ತಿದೆ.

ಸರ್ವಕಾಲಕ್ಕೂ ಸಲ್ಲುವಂತಹ ಕಥೆ ರಾಮಾಯಣ. ಈ ಮಹಾಗ್ರಂಥವನ್ನು ಆಧಾರವಾಗಿ ಇಟ್ಟುಕೊಂಡು ಹಲವು ಭಾಷೆಯಲ್ಲಿ ಈಗಾಗಲೇ ಅನೇಕ ಸಿನಿಮಾಗಳು ಬಂದಿವೆ. ಇನ್ನೂ ಅನೇಕ ಪ್ರಯತ್ನಗಳು ಆಗುತ್ತಿವೆ. ಬಾಲಿವುಡ್​ ಮಂದಿ ಕೂಡ ರಾಮಾಯಣದ ಕಥೆಯ ಬೆನ್ನು ಹತ್ತಿದ್ದಾರೆ. ಈ ಸಿನಿಮಾಗೆ ಮಧು ಮಂತೆನ ಅವರು ಬಂಡವಾಳ ಹೂಡಲಿದ್ದಾರೆ. ಈಗಾಗಲೇ ಪಾತ್ರವರ್ಗದ ಆಯ್ಕೆ ನಡೆಯುತ್ತಿದೆ ಎಂದು ಗಾಸಿಪ್​ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. ರಾಮನಾಗಿ ರಣಬೀರ್​ ಕಪೂರ್​ ಕಾಣಿಸಿಕೊಂಡರೆ, ಅವರ ಜೊತೆ ಸೀತೆ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸುವ ಸಾಧ್ಯತೆ ಇದೆಯಂತೆ. ಆದರೆ ಇದೆಲ್ಲವೂ ಇನ್ನೂ ಅಂತೆ-ಕಂತೆ ಹಂತದಲ್ಲಿದೆ.

ಇದನ್ನೂ ಓದಿ: Sai Pallavi: ‘ಪುಷ್ಪ 2’ ಚಿತ್ರದಲ್ಲಿ ಸಾಯಿ ಪಲ್ಲವಿ ಇರ್ತಾರಾ? ಸ್ಪಷ್ಟನೆ ನೀಡಿದ ನಿರ್ಮಾಪಕ

ಇದನ್ನೂ ಓದಿ
Image
Virata Parvam OTT Release: ಥಿಯೇಟರ್​ನಲ್ಲಿ ಸೋತ ಸಾಯಿ ಪಲ್ಲವಿಯ ‘ವಿರಾಟ ಪರ್ವಂ’ ಚಿತ್ರಕ್ಕೀಗ ಒಟಿಟಿಯೇ ಗತಿ; ಪ್ರಸಾರ​ ಯಾವಾಗ?
Image
Sai Pallavi: ಥಿಯೇಟರ್​ಗೆ ಜನರನ್ನು ಕರೆಸುವಲ್ಲಿ ಸೋತ ಸಾಯಿ ಪಲ್ಲವಿ; ‘ಲೇಡಿ ಪವರ್​ ಸ್ಟಾರ್​’ ಬಿರುದು ಈಗೇನಾಯ್ತು?
Image
Sai Pallavi: ಸಾಯಿ ಪಲ್ಲವಿ ಬೆಂಬಲಕ್ಕೆ ನಿಂತ ಸಾವಿರಾರು ಮಂದಿ; ಸ್ಪಷ್ಟನೆ ವಿಡಿಯೋ ಕಂಡು ಜನರು ಹೇಳ್ತಿರೋದೇನು?
Image
Sai Pallavi: ಸಾಯಿ ಪಲ್ಲವಿ ವಿವಾದದ ಬಳಿಕ ‘ವಿರಾಟ ಪರ್ವಂ’ ಚಿತ್ರಕ್ಕೆ ಜನರು ನೀಡಿದ ರೇಟಿಂಗ್​ ಎಷ್ಟು?

ಸೋಶಿಯಲ್​ ಮೀಡಿಯಾದಲ್ಲಿ ಈ ಸುದ್ದಿ ಹರಿದಾಡುತ್ತಿದೆ. ಒಂದು ವೇಳೆ ಸೀತೆಯ ಪಾತ್ರವನ್ನು ಸಾಯಿ ಪಲ್ಲವಿ ನಿಭಾಯಿಸುವುದೇ ಹೌದಾದರೆ ಇದು ಸರಿಯಾದ ಆಯ್ಕೆ ಎಂದು ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ. ಸಾಯಿ ಪಲ್ಲವಿ ಅವರು ಪ್ರತಿಭಾವಂತ ನಟಿ ಎಂಬುದು ಈಗಾಗಲೇ ಸಾಬೀತಾಗಿದೆ. ಜನರು ಅವರ ನಟನೆಯನ್ನು ಮೆಚ್ಚಿಕೊಂಡಿದ್ದಾರೆ. ಸೀತೆ ಪಾತ್ರಕ್ಕೆ ಅವರು ನ್ಯಾಯ ಸಲ್ಲಿಸುತ್ತಾರೆ ಎಂಬ ನಂಬಿಕೆ ಅವರ ಅಭಿಮಾನಿಗಳಿಗೆ ಇದೆ. ಬೇರೆ ನಟಿಯರ ಹೆಸರು ಕೂಡ ಈ ಹಿಂದೆ ಕೇಳಿಬಂದಿತ್ತು. ಆದರೆ ಯಾವುದೂ ಅಂತಿಮವಾದ ಬಗ್ಗೆ ಸುದ್ದಿ ಹೊರಬಿದ್ದಿಲ್ಲ.

ಇದನ್ನೂ ಓದಿ: Sai Pallavi: ಚಿತ್ರಮಂದಿರದಲ್ಲಿ ಸೋತ ಸಾಯಿ ಪಲ್ಲವಿ ನಟನೆಯ ‘ಗಾರ್ಗಿ’ ಚಿತ್ರಕ್ಕೆ ಈಗ ಅಂತಾರಾಷ್ಟ್ರೀಯ ಮನ್ನಣೆ

ಆಫರ್​ ಬಂದಿಲ್ಲ ಅಂತಿದ್ದಾರೆ ರಣಬೀರ್​ ಕಪೂರ್​:

ಒಂದುಕಡೆ ಗಾಸಿಪ್​ ಮಂದಿ ಒಂದಷ್ಟು ಸುದ್ದಿ ಹಬ್ಬಿಸುತ್ತಿದ್ದಾರೆ. ಆದರೆ ರಾಮಾಯಣ ಕಥೆ ಆಧಾರಿತ ಸಿನಿಮಾದಿಂದ ತಮಗೆ ಯಾವುದೇ ಆಫರ್​ ಬಂದಿಲ್ಲ ಎಂದು ರಣಬೀರ್​ ಕಪೂರ್​ ಹೇಳುತ್ತಿದ್ದಾರೆ. ಅತ್ತ ಬಾಲಿವುಡ್​ನ ಕೆಲವು ನಿರ್ಮಾಣ ಸಂಸ್ಥೆಗಳು ಕೂಡ ರಾಮಾಯಣವನ್ನು ಇಟ್ಟುಕೊಂಡು ಸಿನಿಮಾ ಮಾಡಲು ಪ್ಲ್ಯಾನ್​ ರೂಪಿಸಿಕೊಂಡಿವೆ. ಆದರೆ ಯಾರಿಂದಲೂ ಸ್ಪಷ್ಟ ಚಿತ್ರಣ ಲಭ್ಯವಾಗಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ