AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಪಿಬಿ​ ಜನ್ಮದಿನದ ವಿಶೇಷ; ಸ್ಟಾರ್​ ಸಿಂಗರ್​ಗಳಿಂದ 12 ಗಂಟೆ ನಾನ್​ ಸ್ಟಾಪ್​ ಹಾಡು, ನೀವು ಕೇಳಬಹುದು

ಎಸ್​ಪಿ ಬಾಲಸುಬ್ರಹ್ಮಣ್ಯಮ್ ಅವರ ಜನ್ಮದಿನದ ಪ್ರಯುಕ್ತ ನಡೆಯಲಿರುವ ಈ ವಿಶೇಷ ಕಾರ್ಯಕ್ರಮದಲ್ಲಿ ಹಲವು ನಿರ್ದೇಶಕರು, ನಟರು, ನಿರ್ಮಾಪಕರು, ಸಂಗೀತ ನಿರ್ದೇಶಕರು, ಬರಹಗಾರರು ಪಾಲ್ಗೊಳ್ಳುತ್ತಿದ್ದಾರೆ.

ಎಸ್​ಪಿಬಿ​ ಜನ್ಮದಿನದ ವಿಶೇಷ; ಸ್ಟಾರ್​ ಸಿಂಗರ್​ಗಳಿಂದ 12 ಗಂಟೆ ನಾನ್​ ಸ್ಟಾಪ್​ ಹಾಡು, ನೀವು ಕೇಳಬಹುದು
ಎಸ್​ಪಿ ಬಾಲಸುಬ್ರಹ್ಮಣ್ಯಮ್
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Jun 01, 2021 | 7:24 AM

ಜೂನ್​ 4 ಅಪ್ರತಿಮ ಹಾಡುಗಾರ ಎಸ್​ಪಿ ಬಾಲಸುಬ್ರಹ್ಮಣ್ಯಮ್ ಅವರ ಜನ್ಮದಿನ. ಸುಮಧುರ ಕಂಠದ ಮೂಲಕ ಕನ್ನಡ ಸೇರಿದಂತೆ ನಾನಾ ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡಿದ ​ಎಸ್​ಪಿಬಿ ಇಲ್ಲದೆ ಅಭಿಮಾನಿಗಳು ಇದೇ ಮೊದಲ ಬಾರಿ ಅವರ ಜನ್ಮದಿನವನ್ನು ಆಚರಣೆ ಮಾಡುತ್ತಿದ್ದಾರೆ. ಈ ವಿಶೇಷ ದಿನದಂದು ನಾನಾ ಗಾಯಕರು ಸತತ 12 ಗಂಟೆಗಳ ಕಾಲ ಎಸ್​ಪಿಬಿ ಹಾಡನ್ನು ಹಾಡಲಿದ್ದಾರೆ.

ಕೊವಿಡ್​ 19 ಎರಡನೇ ಅಲೆ ಜೋರಾಗಿಲ್ಲದೆ ಹೋಗಿದ್ದರೆ ಬಹುಶಃ ಅಭಿಮಾನಿಗಳು ಅಥವಾ ಬಾಲಸುಬ್ರಹ್ಮಣ್ಯಮ್​ ಶಿಶ್ಯಂದಿರು ಕಾರ್ಯಕ್ರಮ ಆಯೋಜನೆ ಮಾಡಿ, ನಾನಾ ಗಾಯಕರ ಮೂಲಕ ಹಾಡುಗಳನ್ನು ಹಾಡಿಸುತ್ತಿದ್ದರೇನೋ. ಆದರೆ, ಈಗ ಅದು ಸಾಧ್ಯವಾಗುತ್ತಿಲ್ಲ. ಕೊವಿಡ್​ 19 ಇರುವ ಕಾರಣಕ್ಕೆ ಯಾವುದೇ ಕಾರ್ಯಕ್ರಮ ನಡೆಸುವಂತಿಲ್ಲ. ಹೀಗಾಗಿ, ಜನರು ಆನ್​ಲೈನ್ ಮೊರೆ ಹೋಗಿದ್ದಾರೆ.

ತೆಲುಗಿನ ಖ್ಯಾತ ಸಂಗೀತ ಸಂಯೋಜಕ ಆರ್​ಪಿ ಪಟ್ನಾಯಕ್​ ಅವರು ಈಗ 12 ಗಂಟೆಗಳ ಕಾರ್ಯಕ್ರಮ ಒಂದನ್ನು ಆಯೋಜನೆ ಮಾಡಿದ್ದಾರೆ. ಜೂನ್​ ನಾಲ್ಕರಂದು ಮುಂಜಾನೆ 10 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಎಸ್​ಪಿಬಿ ಹಾಡುಗಳನ್ನು ಹಾಡಲಾಗುತ್ತಿದೆ. ಫಿಲ್ಮ್​ ಇಂಡಸ್ಟ್ರಿಯ ಅನೇಕರು ಇವರಿಗೆ ಸಹಕಾರ ನೀಡುತ್ತಿದ್ದಾರೆ.

ಈ ವಿಶೇಷ ಕಾರ್ಯಕ್ರಮದಲ್ಲಿ ಹಲವು ನಿರ್ದೇಶಕರು, ನಟರು, ನಿರ್ಮಾಪಕರು, ಸಂಗೀತ ನಿರ್ದೇಶಕರು, ಬರಹಗಾರರು ಇದರಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಂದಹಾಗೆ, ಶೀಘ್ರದಲ್ಲೇ ಅವರು ಯೂಟ್ಯೂಬ್​ ಲಿಂಕ್​ ಅನ್ನು ತಮ್ಮ ಸಾಮಾಜಿಕ ಖಾತೆಯಲ್ಲಿ ಶೇರ್​ ಮಾಡಲಿದ್ದಾರೆ.

ಎಸ್​ಪಿಬಿ ಅವರಿಗೆ ಕಳೆದ ಆಗಸ್ಟ್​ನಲ್ಲಿ ಕೊವಿಡ್​ ಕಾಣಿಸಿಕೊಂಡಿತ್ತು. ಹೀಗಾಗಿ, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರು ಒಂದು ತಿಂಗಳಿಗೂ ಹೆಚ್ಚು ಕಾಲ ಆಸ್ಪತ್ರೆಯಲ್ಲೇ ಇದ್ದರು. ಅವರಿಗೆ ಚಿಕಿತ್ಸೆ ನೀಡಿದರೂ ಯಶಸ್ಸಿಯಾಗಿರಲಿಲ್ಲ. ಸೆಪ್ಟೆಂಬರ್ 25ರಂದು ಅವರು ನಿಧನರಾದರು.

ಇದನ್ನೂ ಓದಿ: National Film Awards 2019: ‘ಅಕ್ಷಿ’ ಸಿನಿಮಾದಲ್ಲಿ ಎಸ್​ಪಿಬಿ ಹಾಡಿದ ಕೊನೇ ಹಾಡು; ಇದು ಅಂತಿಂಥ ಸಾಂಗ್​ ಅಲ್ಲವೇ ಅಲ್ಲ!

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ