AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಪಿಬಿ​ ಜನ್ಮದಿನದ ವಿಶೇಷ; ಸ್ಟಾರ್​ ಸಿಂಗರ್​ಗಳಿಂದ 12 ಗಂಟೆ ನಾನ್​ ಸ್ಟಾಪ್​ ಹಾಡು, ನೀವು ಕೇಳಬಹುದು

ಎಸ್​ಪಿ ಬಾಲಸುಬ್ರಹ್ಮಣ್ಯಮ್ ಅವರ ಜನ್ಮದಿನದ ಪ್ರಯುಕ್ತ ನಡೆಯಲಿರುವ ಈ ವಿಶೇಷ ಕಾರ್ಯಕ್ರಮದಲ್ಲಿ ಹಲವು ನಿರ್ದೇಶಕರು, ನಟರು, ನಿರ್ಮಾಪಕರು, ಸಂಗೀತ ನಿರ್ದೇಶಕರು, ಬರಹಗಾರರು ಪಾಲ್ಗೊಳ್ಳುತ್ತಿದ್ದಾರೆ.

ಎಸ್​ಪಿಬಿ​ ಜನ್ಮದಿನದ ವಿಶೇಷ; ಸ್ಟಾರ್​ ಸಿಂಗರ್​ಗಳಿಂದ 12 ಗಂಟೆ ನಾನ್​ ಸ್ಟಾಪ್​ ಹಾಡು, ನೀವು ಕೇಳಬಹುದು
ಎಸ್​ಪಿ ಬಾಲಸುಬ್ರಹ್ಮಣ್ಯಮ್
ರಾಜೇಶ್ ದುಗ್ಗುಮನೆ
| Edited By: |

Updated on: Jun 01, 2021 | 7:24 AM

Share

ಜೂನ್​ 4 ಅಪ್ರತಿಮ ಹಾಡುಗಾರ ಎಸ್​ಪಿ ಬಾಲಸುಬ್ರಹ್ಮಣ್ಯಮ್ ಅವರ ಜನ್ಮದಿನ. ಸುಮಧುರ ಕಂಠದ ಮೂಲಕ ಕನ್ನಡ ಸೇರಿದಂತೆ ನಾನಾ ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡಿದ ​ಎಸ್​ಪಿಬಿ ಇಲ್ಲದೆ ಅಭಿಮಾನಿಗಳು ಇದೇ ಮೊದಲ ಬಾರಿ ಅವರ ಜನ್ಮದಿನವನ್ನು ಆಚರಣೆ ಮಾಡುತ್ತಿದ್ದಾರೆ. ಈ ವಿಶೇಷ ದಿನದಂದು ನಾನಾ ಗಾಯಕರು ಸತತ 12 ಗಂಟೆಗಳ ಕಾಲ ಎಸ್​ಪಿಬಿ ಹಾಡನ್ನು ಹಾಡಲಿದ್ದಾರೆ.

ಕೊವಿಡ್​ 19 ಎರಡನೇ ಅಲೆ ಜೋರಾಗಿಲ್ಲದೆ ಹೋಗಿದ್ದರೆ ಬಹುಶಃ ಅಭಿಮಾನಿಗಳು ಅಥವಾ ಬಾಲಸುಬ್ರಹ್ಮಣ್ಯಮ್​ ಶಿಶ್ಯಂದಿರು ಕಾರ್ಯಕ್ರಮ ಆಯೋಜನೆ ಮಾಡಿ, ನಾನಾ ಗಾಯಕರ ಮೂಲಕ ಹಾಡುಗಳನ್ನು ಹಾಡಿಸುತ್ತಿದ್ದರೇನೋ. ಆದರೆ, ಈಗ ಅದು ಸಾಧ್ಯವಾಗುತ್ತಿಲ್ಲ. ಕೊವಿಡ್​ 19 ಇರುವ ಕಾರಣಕ್ಕೆ ಯಾವುದೇ ಕಾರ್ಯಕ್ರಮ ನಡೆಸುವಂತಿಲ್ಲ. ಹೀಗಾಗಿ, ಜನರು ಆನ್​ಲೈನ್ ಮೊರೆ ಹೋಗಿದ್ದಾರೆ.

ತೆಲುಗಿನ ಖ್ಯಾತ ಸಂಗೀತ ಸಂಯೋಜಕ ಆರ್​ಪಿ ಪಟ್ನಾಯಕ್​ ಅವರು ಈಗ 12 ಗಂಟೆಗಳ ಕಾರ್ಯಕ್ರಮ ಒಂದನ್ನು ಆಯೋಜನೆ ಮಾಡಿದ್ದಾರೆ. ಜೂನ್​ ನಾಲ್ಕರಂದು ಮುಂಜಾನೆ 10 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಎಸ್​ಪಿಬಿ ಹಾಡುಗಳನ್ನು ಹಾಡಲಾಗುತ್ತಿದೆ. ಫಿಲ್ಮ್​ ಇಂಡಸ್ಟ್ರಿಯ ಅನೇಕರು ಇವರಿಗೆ ಸಹಕಾರ ನೀಡುತ್ತಿದ್ದಾರೆ.

ಈ ವಿಶೇಷ ಕಾರ್ಯಕ್ರಮದಲ್ಲಿ ಹಲವು ನಿರ್ದೇಶಕರು, ನಟರು, ನಿರ್ಮಾಪಕರು, ಸಂಗೀತ ನಿರ್ದೇಶಕರು, ಬರಹಗಾರರು ಇದರಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಂದಹಾಗೆ, ಶೀಘ್ರದಲ್ಲೇ ಅವರು ಯೂಟ್ಯೂಬ್​ ಲಿಂಕ್​ ಅನ್ನು ತಮ್ಮ ಸಾಮಾಜಿಕ ಖಾತೆಯಲ್ಲಿ ಶೇರ್​ ಮಾಡಲಿದ್ದಾರೆ.

ಎಸ್​ಪಿಬಿ ಅವರಿಗೆ ಕಳೆದ ಆಗಸ್ಟ್​ನಲ್ಲಿ ಕೊವಿಡ್​ ಕಾಣಿಸಿಕೊಂಡಿತ್ತು. ಹೀಗಾಗಿ, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರು ಒಂದು ತಿಂಗಳಿಗೂ ಹೆಚ್ಚು ಕಾಲ ಆಸ್ಪತ್ರೆಯಲ್ಲೇ ಇದ್ದರು. ಅವರಿಗೆ ಚಿಕಿತ್ಸೆ ನೀಡಿದರೂ ಯಶಸ್ಸಿಯಾಗಿರಲಿಲ್ಲ. ಸೆಪ್ಟೆಂಬರ್ 25ರಂದು ಅವರು ನಿಧನರಾದರು.

ಇದನ್ನೂ ಓದಿ: National Film Awards 2019: ‘ಅಕ್ಷಿ’ ಸಿನಿಮಾದಲ್ಲಿ ಎಸ್​ಪಿಬಿ ಹಾಡಿದ ಕೊನೇ ಹಾಡು; ಇದು ಅಂತಿಂಥ ಸಾಂಗ್​ ಅಲ್ಲವೇ ಅಲ್ಲ!

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ