AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಪಿಬಿ​ ಜನ್ಮದಿನದ ವಿಶೇಷ; ಸ್ಟಾರ್​ ಸಿಂಗರ್​ಗಳಿಂದ 12 ಗಂಟೆ ನಾನ್​ ಸ್ಟಾಪ್​ ಹಾಡು, ನೀವು ಕೇಳಬಹುದು

ಎಸ್​ಪಿ ಬಾಲಸುಬ್ರಹ್ಮಣ್ಯಮ್ ಅವರ ಜನ್ಮದಿನದ ಪ್ರಯುಕ್ತ ನಡೆಯಲಿರುವ ಈ ವಿಶೇಷ ಕಾರ್ಯಕ್ರಮದಲ್ಲಿ ಹಲವು ನಿರ್ದೇಶಕರು, ನಟರು, ನಿರ್ಮಾಪಕರು, ಸಂಗೀತ ನಿರ್ದೇಶಕರು, ಬರಹಗಾರರು ಪಾಲ್ಗೊಳ್ಳುತ್ತಿದ್ದಾರೆ.

ಎಸ್​ಪಿಬಿ​ ಜನ್ಮದಿನದ ವಿಶೇಷ; ಸ್ಟಾರ್​ ಸಿಂಗರ್​ಗಳಿಂದ 12 ಗಂಟೆ ನಾನ್​ ಸ್ಟಾಪ್​ ಹಾಡು, ನೀವು ಕೇಳಬಹುದು
ಎಸ್​ಪಿ ಬಾಲಸುಬ್ರಹ್ಮಣ್ಯಮ್
ರಾಜೇಶ್ ದುಗ್ಗುಮನೆ
| Edited By: |

Updated on: Jun 01, 2021 | 7:24 AM

Share

ಜೂನ್​ 4 ಅಪ್ರತಿಮ ಹಾಡುಗಾರ ಎಸ್​ಪಿ ಬಾಲಸುಬ್ರಹ್ಮಣ್ಯಮ್ ಅವರ ಜನ್ಮದಿನ. ಸುಮಧುರ ಕಂಠದ ಮೂಲಕ ಕನ್ನಡ ಸೇರಿದಂತೆ ನಾನಾ ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡಿದ ​ಎಸ್​ಪಿಬಿ ಇಲ್ಲದೆ ಅಭಿಮಾನಿಗಳು ಇದೇ ಮೊದಲ ಬಾರಿ ಅವರ ಜನ್ಮದಿನವನ್ನು ಆಚರಣೆ ಮಾಡುತ್ತಿದ್ದಾರೆ. ಈ ವಿಶೇಷ ದಿನದಂದು ನಾನಾ ಗಾಯಕರು ಸತತ 12 ಗಂಟೆಗಳ ಕಾಲ ಎಸ್​ಪಿಬಿ ಹಾಡನ್ನು ಹಾಡಲಿದ್ದಾರೆ.

ಕೊವಿಡ್​ 19 ಎರಡನೇ ಅಲೆ ಜೋರಾಗಿಲ್ಲದೆ ಹೋಗಿದ್ದರೆ ಬಹುಶಃ ಅಭಿಮಾನಿಗಳು ಅಥವಾ ಬಾಲಸುಬ್ರಹ್ಮಣ್ಯಮ್​ ಶಿಶ್ಯಂದಿರು ಕಾರ್ಯಕ್ರಮ ಆಯೋಜನೆ ಮಾಡಿ, ನಾನಾ ಗಾಯಕರ ಮೂಲಕ ಹಾಡುಗಳನ್ನು ಹಾಡಿಸುತ್ತಿದ್ದರೇನೋ. ಆದರೆ, ಈಗ ಅದು ಸಾಧ್ಯವಾಗುತ್ತಿಲ್ಲ. ಕೊವಿಡ್​ 19 ಇರುವ ಕಾರಣಕ್ಕೆ ಯಾವುದೇ ಕಾರ್ಯಕ್ರಮ ನಡೆಸುವಂತಿಲ್ಲ. ಹೀಗಾಗಿ, ಜನರು ಆನ್​ಲೈನ್ ಮೊರೆ ಹೋಗಿದ್ದಾರೆ.

ತೆಲುಗಿನ ಖ್ಯಾತ ಸಂಗೀತ ಸಂಯೋಜಕ ಆರ್​ಪಿ ಪಟ್ನಾಯಕ್​ ಅವರು ಈಗ 12 ಗಂಟೆಗಳ ಕಾರ್ಯಕ್ರಮ ಒಂದನ್ನು ಆಯೋಜನೆ ಮಾಡಿದ್ದಾರೆ. ಜೂನ್​ ನಾಲ್ಕರಂದು ಮುಂಜಾನೆ 10 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಎಸ್​ಪಿಬಿ ಹಾಡುಗಳನ್ನು ಹಾಡಲಾಗುತ್ತಿದೆ. ಫಿಲ್ಮ್​ ಇಂಡಸ್ಟ್ರಿಯ ಅನೇಕರು ಇವರಿಗೆ ಸಹಕಾರ ನೀಡುತ್ತಿದ್ದಾರೆ.

ಈ ವಿಶೇಷ ಕಾರ್ಯಕ್ರಮದಲ್ಲಿ ಹಲವು ನಿರ್ದೇಶಕರು, ನಟರು, ನಿರ್ಮಾಪಕರು, ಸಂಗೀತ ನಿರ್ದೇಶಕರು, ಬರಹಗಾರರು ಇದರಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಂದಹಾಗೆ, ಶೀಘ್ರದಲ್ಲೇ ಅವರು ಯೂಟ್ಯೂಬ್​ ಲಿಂಕ್​ ಅನ್ನು ತಮ್ಮ ಸಾಮಾಜಿಕ ಖಾತೆಯಲ್ಲಿ ಶೇರ್​ ಮಾಡಲಿದ್ದಾರೆ.

ಎಸ್​ಪಿಬಿ ಅವರಿಗೆ ಕಳೆದ ಆಗಸ್ಟ್​ನಲ್ಲಿ ಕೊವಿಡ್​ ಕಾಣಿಸಿಕೊಂಡಿತ್ತು. ಹೀಗಾಗಿ, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರು ಒಂದು ತಿಂಗಳಿಗೂ ಹೆಚ್ಚು ಕಾಲ ಆಸ್ಪತ್ರೆಯಲ್ಲೇ ಇದ್ದರು. ಅವರಿಗೆ ಚಿಕಿತ್ಸೆ ನೀಡಿದರೂ ಯಶಸ್ಸಿಯಾಗಿರಲಿಲ್ಲ. ಸೆಪ್ಟೆಂಬರ್ 25ರಂದು ಅವರು ನಿಧನರಾದರು.

ಇದನ್ನೂ ಓದಿ: National Film Awards 2019: ‘ಅಕ್ಷಿ’ ಸಿನಿಮಾದಲ್ಲಿ ಎಸ್​ಪಿಬಿ ಹಾಡಿದ ಕೊನೇ ಹಾಡು; ಇದು ಅಂತಿಂಥ ಸಾಂಗ್​ ಅಲ್ಲವೇ ಅಲ್ಲ!

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್