AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೀಡ ಕೋಲ’ ಚಿತ್ರತಂಡಕ್ಕೆ ನೋಟೀಸ್ ನೀಡಿದ ಎಸ್​ಪಿ ಬಾಲಸುಬ್ರಹ್ಮಣ್ಯಂ ಕುಟುಂಬ

Keedaa Cola: ದಿವಂಗತ ಎಸ್​ಪಿ ಬಾಲಸುಬ್ರಹ್ಮಣ್ಯಂ ಅವರ ಧ್ವನಿಯನ್ನು ಸೂಕ್ತ ಅನುಮತಿ ಪಡೆಯದೆ, ಕುಟುಂಬದ ಗಮನಕ್ಕೆ ತರದೆ ಬಳಸಿಕೊಂಡಿರುವ ಬಗ್ಗೆ ಅವರ ಕುಟುಂಬದವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಕೀಡ ಕೋಲ’ ಚಿತ್ರತಂಡಕ್ಕೆ ನೋಟೀಸ್ ನೀಡಿದ ಎಸ್​ಪಿ ಬಾಲಸುಬ್ರಹ್ಮಣ್ಯಂ ಕುಟುಂಬ
ಮಂಜುನಾಥ ಸಿ.
|

Updated on: Feb 17, 2024 | 5:13 PM

Share

ಗಾಯಕ ಎಸ್​ಪಿ ಬಾಲಸುಬ್ರಹ್ಮಣ್ಯಂ (SP Balasubrahmanyam) ಅವರ ಕುಟುಂಬವು ಇತ್ತೀಚೆಗೆ ಬಿಡುಗಡೆ ಆದ ತೆಲುಗಿನ ಹಿಟ್ ಸಿನಿಮಾ ನಿರ್ಮಾಪಕ ಹಾಗೂ ನಿರ್ದೇಶಕರಿಗೆ ನೊಟೀಸ್ ನೀಡಿದೆ. ಕುಟುಂಬದ ಅನುಮತಿ ಇಲ್ಲದೆ ಎಸ್​ಬಿ ಬಾಲಸುಬ್ರಹ್ಮಣ್ಯಂ ಅವರ ಧ್ವನಿ ಬಳಸಿಕೊಂಡಿದ್ದಕ್ಕೆ ಚಿತ್ರತಂಡಕ್ಕೆ ನೊಟೀಸ್ ನೀಡಲಾಗಿದೆ. ಎಸ್​ಪಿ ಬಾಲಸುಬ್ರಹ್ಮಣ್ಯಂ ಅವರ ಪುತ್ರ ಕಲ್ಯಾಣ್ ಚರಣ್ ಅವರು ನೊಟೀಸ್ ನೀಡಿದ್ದು, ಕುಟುಂಬದ ಅನುಮತಿ ಪಡೆಯದೇ ತಂದೆಯವರ ಧ್ವನಿಯನ್ನು ಕಮರ್ಶಿಯಲ್ ಕಾರಣಕ್ಕೆ ಬಳಸಿರುವುದು ಸರಿಯಲ್ಲವೆಂದು ಹೇಳಿದ್ದಾರೆ.

‘ಕೀಡ ಕೋಲ’ ಸಿನಿಮಾದಲ್ಲಿ ಎಸ್​ಪಿ ಬಾಲಸುಬ್ರಹ್ಮಣ್ಯಂ ಅವರ ಧ್ವನಿಯನ್ನು ಕೃತಕ ಬುದ್ಧಿಮತ್ತೆ ಹಾಗೂ ಡೀಪ್ ಫೇಕ್ ತಂತ್ರಜ್ಞಾನ ಬಳಸಿ ಮರುಸೃಷ್ಟಿಸಲಾಗಿದೆ. ಸಿನಿಮಾದಲ್ಲಿ ಅಲ್ಲಲ್ಲಿ ಎಸ್​ಪಿ ಬಾಲಸುಬ್ರಹ್ಮಣ್ಯಂ ಅವರ ಧ್ವನಿಯನ್ನು ಬಳಸಿಕೊಳ್ಳಲಾಗಿದೆ. ಆದರೆ ಹೀಗೆ ಎಸ್​ಪಿಬಿ ಅವರ ಧ್ವನಿ ಬಳಸಿಕೊಳ್ಳುವ ಬಗ್ಗೆ ಅವರ ಕುಟುಂಬದವರ ಅನುಮತಿಯನ್ನು ಪಡೆದಿರಲಿಲ್ಲ. ಅವರಿಗೆ ಈ ಬಗ್ಗೆ ಮಾಹಿತಿಯನ್ನೂ ನೀಡಿರಲಿಲ್ಲ ಎನ್ನಲಾಗಿದೆ.

ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಬಗ್ಗೆ ನನ್ನ ಸಹಮತವಿದೆ. ತಂತ್ರಜ್ಞಾನವು ಮಾನವನ ಜೀವನವನ್ನು ಸರಳಗೊಳಿಸಬೇಕು. ಮನುಷ್ಯನ ಜೀವನವನ್ನು ಕಸಿದುಕೊಳ್ಳಬಾರದು. ಈ ಪ್ರಕರಣದಲ್ಲಿ ಎಸ್​ಪಿಬಿ ಅವರ ಧ್ವನಿಯನ್ನು ಮರುಸೃಷ್ಟಿಸಿರುವುದು ಅತ್ಯುತ್ತಮ ಪ್ರಯತ್ನ ಆದರೆ ಅವರ ಕುಟುಂಬಕ್ಕೆ ಈ ಬಗ್ಗೆ ಮಾಹಿತಿ ನೀಡಿ ಅವರನ್ನೂ ಸಹ ಪಾಲ್ಗೊಳ್ಳುವಂತೆ ಮಾಡಿದ್ದರೆ ಒಳ್ಳೆಯದಿತ್ತು’ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಗಾಯಕಿ, ನಟಿ ಮಲ್ಲಿಕಾ ರಜಪೂತ್ ಅನುಮಾನಸ್ಪದ ಸಾವು

ಸೂಕ್ತ ಅನುಮತಿಯಿಲ್ಲದೆ ಎಸ್‌ಪಿಬಿ ಧ್ವನಿಯನ್ನು ಬಳಸಿರುವುದು ಕುಟುಂಬವನ್ನು ಆಘಾತಕ್ಕೀಡು ಮಾಡಿದೆ ಎಂದು ಪುತ್ರ ಚರಣ್ ಹೇಳಿದ್ದು, ಮನೊರಂಜನಾ ಉದ್ಯಮದಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸುವ ಈ ಪ್ರವೃತ್ತಿ ಸೂಕ್ತ ಒಪ್ಪಿಗೆ ಅಥವಾ ಅನುಮತಿಯಿಲ್ಲದೆ ಮುಂದುವರಿದರೆ ಗಾಯಕರ ಮೇಲೆ ಅದು ದೊಡ್ಡ ಮಟ್ಟಿಗಿನ ಪರಿಣಾಮ ಬೀರುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

‘ಕೀಡ ಕೋಲ’ ಸಿನಿಮಾ ಹಾಸ್ಯಪ್ರಧಾನ ಸಿನಿಮಾ ಆಗಿದ್ದು, ಸಿನಿಮಾವನ್ನು ತರುಣ್ ಭಾಸ್ಕರ್ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ಬ್ರಹ್ಮಾನಂದಂ, ಚೈತನ್ಯ ರಾವ್, ರಘು ರಾಮ್ ಇನ್ನೂ ಕೆಲವರು ನಟಿಸಿದ್ದಾರೆ. ನವೆಂಬರ್ 3 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆದ ಈ ಸಿನಿಮಾ ಇದೀಗ ಒಟಿಟಿಯಲ್ಲಿ ಬಿಡುಗಡೆ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್