AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜಾತಶತ್ರು ಎಸ್​​ಪಿ ಬಾಲಸುಬ್ರಹ್ಮಣ್ಯಂ ಪ್ರತಿಮೆಗೆ ವಿರೋಧ: ಕಾರಣವೇನು?

SP Balasubrahmanyam: ಬಾಲಸುಬ್ರಹ್ಮಣ್ಯಂ ಅವರನ್ನು ಎಲ್ಲ ಭಾಷಿಕರೂ ಗೌರವಿಸುತ್ತಿದ್ದರು. ರಾಜ್ಯ, ಭಾಷೆಯ ಗಡಿಗಳನ್ನು ದಾಟಿ ಬಾಲಸುಬ್ರಹ್ಮಣ್ಯಂ ಅವರು ಪ್ರೀತಿ ಪಾತ್ರರಾಗಿದ್ದರು. ಅಜಾತ ಶತ್ರು ಎನಿಸಿಕೊಂಡಿದ್ದರು ಬಾಲಸುಬ್ರಹ್ಮಣ್ಯಂ ಆದರೆ, ಕೋವಿಡ್​ ಅವರನ್ನು ಅಕಾಲಿಕವಾಗಿ ಬಲಿ ಪಡೆಯಿತು. ಅಭಿಮಾನಿಗಳು ಸೂಕ್ತ ವಿದಾಯವನ್ನು ಸಹ ಬಾಲಸುಬ್ರಹ್ಮಣ್ಯಂ ಅವರಿಗೆ ನೀಡಲಾಗಿರಲಿಲ್ಲ. ಅದೇ ಕಾರಣಕ್ಕೆ ಇತ್ತೀಚೆಗೆ ತೆಲಂಗಾಣ ಸರ್ಕಾರ ಬಾಲಸುಬ್ರಹ್ಮಣ್ಯಂ ಅವರ ಪ್ರತಿಮೆಯೊಂದನ್ನು ಸ್ಥಾಪಿಸಿ ಗೌರವಿಸಿತು. ಆದರೆ ಅದಕ್ಕೂ ಕೆಲವರು ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಿದ್ದಾರೆ.

ಅಜಾತಶತ್ರು ಎಸ್​​ಪಿ ಬಾಲಸುಬ್ರಹ್ಮಣ್ಯಂ ಪ್ರತಿಮೆಗೆ ವಿರೋಧ: ಕಾರಣವೇನು?
Sp Balasubrahmanyam
ಮಂಜುನಾಥ ಸಿ.
|

Updated on: Dec 04, 2025 | 12:28 PM

Share

ಎಸ್​​ಪಿ ಬಾಲಸುಬ್ರಹ್ಮಣ್ಯಂ (SP Balasubrahmanyam), ಭಾರತ ಕಂಡ ಅತ್ಯುತ್ತಮ ಗಾಯಕರಲ್ಲಿ ಒಬ್ಬರು. ಸಾವಿರಾರು ಹಾಡುಗಳನ್ನು ಹಲವಾರು ಭಾಷೆಗಳಲ್ಲಿ ಹಾಡಿದ್ದ ಬಾಲಸುಬ್ರಹ್ಮಣ್ಯಂ ಅವರನ್ನು ಎಲ್ಲ ಭಾಷಿಕರೂ ಗೌರವಿಸುತ್ತಿದ್ದರು. ರಾಜ್ಯ, ಭಾಷೆಯ ಗಡಿಗಳನ್ನು ದಾಟಿ ಬಾಲಸುಬ್ರಹ್ಮಣ್ಯಂ ಅವರು ಪ್ರೀತಿ ಪಾತ್ರರಾಗಿದ್ದರು. ಅಜಾತ ಶತ್ರು ಎನಿಸಿಕೊಂಡಿದ್ದರು ಬಾಲಸುಬ್ರಹ್ಮಣ್ಯಂ ಆದರೆ, ಕೋವಿಡ್​ ಅವರನ್ನು ಅಕಾಲಿಕವಾಗಿ ಬಲಿ ಪಡೆಯಿತು. ಅಭಿಮಾನಿಗಳು ಸೂಕ್ತ ವಿದಾಯವನ್ನು ಸಹ ಬಾಲಸುಬ್ರಹ್ಮಣ್ಯಂ ಅವರಿಗೆ ನೀಡಲಾಗಿರಲಿಲ್ಲ. ಅದೇ ಕಾರಣಕ್ಕೆ ಇತ್ತೀಚೆಗೆ ತೆಲಂಗಾಣ ಸರ್ಕಾರ ಬಾಲಸುಬ್ರಹ್ಮಣ್ಯಂ ಅವರ ಪ್ರತಿಮೆಯೊಂದನ್ನು ಸ್ಥಾಪಿಸಿ ಗೌರವಿಸಿತು. ಆದರೆ ಅದಕ್ಕೂ ಕೆಲವರು ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಿದ್ದಾರೆ.

ತೆಲಂಗಾಣ ಸರ್ಕಾರವು ಹೈದರಾಬಾದ್​​ನ ಜನಪ್ರಿಯ ಸಾಂಸ್ಕೃತಿಕ ಕೇಂದ್ರವಾಗಿರುವ ರವೀಂದ್ರ ಭಾರತಿ ಎದುರು ಎಸ್​​ಪಿ ಬಾಲಸುಬ್ರಹ್ಮಣ್ಯಂ ಅವರ ಪ್ರತಿಮೆ ಸ್ಥಾಪಿಸಲು ಮುಂದಾಗಿದೆ. ಆದರೆ ಇದನ್ನು ಕೆಲವರು ವಿರೋಧಿಸಿದ್ದು, ಅದೇ ಪ್ರತಿಮೆಯ ಎದುರು ಪ್ರತಿಭಟನೆ ಮಾಡಿದ್ದಾರೆ. ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದ ಎಸ್​​ಪಿಬಿ ಅವರ ಹತ್​ತಿರದ ಸಂಬಂಧಿ ಮೇಲೆ ಸಹ ಪ್ರತಿಭಟನಾಕಾರರು ಏರು ಧ್ವನಿಯಲ್ಲಿ ಜಗಳ ಮಾಡಿದ್ದಾರೆ. ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ:ಎಸ್​ಪಿ ಬಾಲಸುಬ್ರಹ್ಮಣ್ಯಂ ನಾಲ್ಕನೇ ಪುಣ್ಯತಿಥಿ; ಮುಖ್ಯ ರಸ್ತೆಯೊಂದಕ್ಕೆ ಗಾಯಕನ ಹೆಸರಿಟ್ಟ ಸಿಎಂ

ತಮ್ಮನ್ನು ತಾವು ಸಾಮಾಜಿಕ ಕಾರ್ಯಕರ್ತ ಎಂದು ಹೇಳಿಕೊಂಡಿರುವ ಪೃಥ್ವಿರಾಜ್ ಯಾದವ್ ಎಂಬುವರು, ರವೀಂದ್ರ ಭಾರತಿ ಎದುರು ಎಸ್​ಪಿ ಬಾಲಸುಬ್ರಹ್ಮಣ್ಯಂ ಪ್ರತಿಮೆ ಸ್ಥಾಪಿಸಲು ವಿರೋಧಿಸಿದ್ದಾರೆ. ಬಾಲಸುಬ್ರಹ್ಮಣ್ಯಂ ಅವರು ಆಂಧ್ರ ಪ್ರದೇಶ ರಾಜ್ಯಕ್ಕೆ ಸೇರಿದ ಕಲಾವಿದ ಅವರ ಪ್ರತಿಮೆಯನ್ನು ಹೈದರಾಬಾದ್​​ನ ಪ್ರಮುಖ ಕಲಾ ಕೇಂದ್ರದ ಮುಂದೆ ಸ್ಥಾಪಿಸುವುದು ಅನವಶ್ಯಕ. ತೆಲಂಗಾಣದ ಕಲಾವಿದರಾದ ಗದರ್, ಅಂದೆ ಶ್ರೀ ಅವರುಗಳ ಪ್ರತಿಮೆಗಳನ್ನು ಸ್ಥಾಪಿಸಿ ಎಂದು ಅವರು ಒತ್ತಾಯಿಸಿದ್ದಾರೆ.

ಬಾಲಸುಬ್ರಹ್ಮಣ್ಯಂ ಅವರ ಹತ್ತಿರದ ಸಂಬಂಧಿ, ಖ್ಯಾತ ನಟ ಶುಭಲೇಖ ಸುಧಾಕರ್ ಅವರು ಈ ವೇಳೆ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಮಾಡಿದರು. ಬಾಲಸುಬ್ರಹ್ಮಣ್ಯಂ ಅವರು ತೆಲುಗು ಭಾಷೆಗೆ, ಕಲೆಗೆ ನೀಡುವ ಕೊಡುಗೆಯನ್ನು ವಿವರಿಸುವ ಯತ್ನ ಮಾಡಿದರು. ಆಗ ಪೃಥ್ವಿರಾಜ್ ಯಾದವ್, ತನಗೆ ಬಾಲಸುಬ್ರಹ್ಮಣ್ಯಂ ಯಾರೆಂಬುದು ಗೊತ್ತಿಲ್ಲ ಎಂದು ವಿತಂಡ ವಾದ ಮಾಡಿದರು. ಕೊನೆಗೆ ಸುಧಾಕರ್ ಅವರು ಅಲ್ಲಿಂದ ಬೇಸರದಿಂದ ತೆರಳಿದರು.

ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಹುತೇಕರು ಸಾಮಾಜಿಕ ಕಾರ್ಯಕರ್ತ ಪೃಥ್ವಿರಾಜ್ ಅವರ ವರ್ತನೆಯನ್ನು ವಿರೋಧಿಸಿದ್ದಾರೆ. ಬಾಲಸುಬ್ರಹ್ಮಣ್ಯಂ ಅವರು ತೆಲುಗು ರಾಜ್ಯಗಳ ಹೆಮ್ಮೆಯ ಪುತ್ರ. ಅವರು ಭಾಷೆಗೆ, ತೆಲುಗು ಕಲಾ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅಪಾರ ಎಂದು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ