AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜಾತಶತ್ರು ಎಸ್​​ಪಿ ಬಾಲಸುಬ್ರಹ್ಮಣ್ಯಂ ಪ್ರತಿಮೆಗೆ ವಿರೋಧ: ಕಾರಣವೇನು?

SP Balasubrahmanyam: ಬಾಲಸುಬ್ರಹ್ಮಣ್ಯಂ ಅವರನ್ನು ಎಲ್ಲ ಭಾಷಿಕರೂ ಗೌರವಿಸುತ್ತಿದ್ದರು. ರಾಜ್ಯ, ಭಾಷೆಯ ಗಡಿಗಳನ್ನು ದಾಟಿ ಬಾಲಸುಬ್ರಹ್ಮಣ್ಯಂ ಅವರು ಪ್ರೀತಿ ಪಾತ್ರರಾಗಿದ್ದರು. ಅಜಾತ ಶತ್ರು ಎನಿಸಿಕೊಂಡಿದ್ದರು ಬಾಲಸುಬ್ರಹ್ಮಣ್ಯಂ ಆದರೆ, ಕೋವಿಡ್​ ಅವರನ್ನು ಅಕಾಲಿಕವಾಗಿ ಬಲಿ ಪಡೆಯಿತು. ಅಭಿಮಾನಿಗಳು ಸೂಕ್ತ ವಿದಾಯವನ್ನು ಸಹ ಬಾಲಸುಬ್ರಹ್ಮಣ್ಯಂ ಅವರಿಗೆ ನೀಡಲಾಗಿರಲಿಲ್ಲ. ಅದೇ ಕಾರಣಕ್ಕೆ ಇತ್ತೀಚೆಗೆ ತೆಲಂಗಾಣ ಸರ್ಕಾರ ಬಾಲಸುಬ್ರಹ್ಮಣ್ಯಂ ಅವರ ಪ್ರತಿಮೆಯೊಂದನ್ನು ಸ್ಥಾಪಿಸಿ ಗೌರವಿಸಿತು. ಆದರೆ ಅದಕ್ಕೂ ಕೆಲವರು ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಿದ್ದಾರೆ.

ಅಜಾತಶತ್ರು ಎಸ್​​ಪಿ ಬಾಲಸುಬ್ರಹ್ಮಣ್ಯಂ ಪ್ರತಿಮೆಗೆ ವಿರೋಧ: ಕಾರಣವೇನು?
Sp Balasubrahmanyam
ಮಂಜುನಾಥ ಸಿ.
|

Updated on: Dec 04, 2025 | 12:28 PM

Share

ಎಸ್​​ಪಿ ಬಾಲಸುಬ್ರಹ್ಮಣ್ಯಂ (SP Balasubrahmanyam), ಭಾರತ ಕಂಡ ಅತ್ಯುತ್ತಮ ಗಾಯಕರಲ್ಲಿ ಒಬ್ಬರು. ಸಾವಿರಾರು ಹಾಡುಗಳನ್ನು ಹಲವಾರು ಭಾಷೆಗಳಲ್ಲಿ ಹಾಡಿದ್ದ ಬಾಲಸುಬ್ರಹ್ಮಣ್ಯಂ ಅವರನ್ನು ಎಲ್ಲ ಭಾಷಿಕರೂ ಗೌರವಿಸುತ್ತಿದ್ದರು. ರಾಜ್ಯ, ಭಾಷೆಯ ಗಡಿಗಳನ್ನು ದಾಟಿ ಬಾಲಸುಬ್ರಹ್ಮಣ್ಯಂ ಅವರು ಪ್ರೀತಿ ಪಾತ್ರರಾಗಿದ್ದರು. ಅಜಾತ ಶತ್ರು ಎನಿಸಿಕೊಂಡಿದ್ದರು ಬಾಲಸುಬ್ರಹ್ಮಣ್ಯಂ ಆದರೆ, ಕೋವಿಡ್​ ಅವರನ್ನು ಅಕಾಲಿಕವಾಗಿ ಬಲಿ ಪಡೆಯಿತು. ಅಭಿಮಾನಿಗಳು ಸೂಕ್ತ ವಿದಾಯವನ್ನು ಸಹ ಬಾಲಸುಬ್ರಹ್ಮಣ್ಯಂ ಅವರಿಗೆ ನೀಡಲಾಗಿರಲಿಲ್ಲ. ಅದೇ ಕಾರಣಕ್ಕೆ ಇತ್ತೀಚೆಗೆ ತೆಲಂಗಾಣ ಸರ್ಕಾರ ಬಾಲಸುಬ್ರಹ್ಮಣ್ಯಂ ಅವರ ಪ್ರತಿಮೆಯೊಂದನ್ನು ಸ್ಥಾಪಿಸಿ ಗೌರವಿಸಿತು. ಆದರೆ ಅದಕ್ಕೂ ಕೆಲವರು ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಿದ್ದಾರೆ.

ತೆಲಂಗಾಣ ಸರ್ಕಾರವು ಹೈದರಾಬಾದ್​​ನ ಜನಪ್ರಿಯ ಸಾಂಸ್ಕೃತಿಕ ಕೇಂದ್ರವಾಗಿರುವ ರವೀಂದ್ರ ಭಾರತಿ ಎದುರು ಎಸ್​​ಪಿ ಬಾಲಸುಬ್ರಹ್ಮಣ್ಯಂ ಅವರ ಪ್ರತಿಮೆ ಸ್ಥಾಪಿಸಲು ಮುಂದಾಗಿದೆ. ಆದರೆ ಇದನ್ನು ಕೆಲವರು ವಿರೋಧಿಸಿದ್ದು, ಅದೇ ಪ್ರತಿಮೆಯ ಎದುರು ಪ್ರತಿಭಟನೆ ಮಾಡಿದ್ದಾರೆ. ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದ ಎಸ್​​ಪಿಬಿ ಅವರ ಹತ್​ತಿರದ ಸಂಬಂಧಿ ಮೇಲೆ ಸಹ ಪ್ರತಿಭಟನಾಕಾರರು ಏರು ಧ್ವನಿಯಲ್ಲಿ ಜಗಳ ಮಾಡಿದ್ದಾರೆ. ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ:ಎಸ್​ಪಿ ಬಾಲಸುಬ್ರಹ್ಮಣ್ಯಂ ನಾಲ್ಕನೇ ಪುಣ್ಯತಿಥಿ; ಮುಖ್ಯ ರಸ್ತೆಯೊಂದಕ್ಕೆ ಗಾಯಕನ ಹೆಸರಿಟ್ಟ ಸಿಎಂ

ತಮ್ಮನ್ನು ತಾವು ಸಾಮಾಜಿಕ ಕಾರ್ಯಕರ್ತ ಎಂದು ಹೇಳಿಕೊಂಡಿರುವ ಪೃಥ್ವಿರಾಜ್ ಯಾದವ್ ಎಂಬುವರು, ರವೀಂದ್ರ ಭಾರತಿ ಎದುರು ಎಸ್​ಪಿ ಬಾಲಸುಬ್ರಹ್ಮಣ್ಯಂ ಪ್ರತಿಮೆ ಸ್ಥಾಪಿಸಲು ವಿರೋಧಿಸಿದ್ದಾರೆ. ಬಾಲಸುಬ್ರಹ್ಮಣ್ಯಂ ಅವರು ಆಂಧ್ರ ಪ್ರದೇಶ ರಾಜ್ಯಕ್ಕೆ ಸೇರಿದ ಕಲಾವಿದ ಅವರ ಪ್ರತಿಮೆಯನ್ನು ಹೈದರಾಬಾದ್​​ನ ಪ್ರಮುಖ ಕಲಾ ಕೇಂದ್ರದ ಮುಂದೆ ಸ್ಥಾಪಿಸುವುದು ಅನವಶ್ಯಕ. ತೆಲಂಗಾಣದ ಕಲಾವಿದರಾದ ಗದರ್, ಅಂದೆ ಶ್ರೀ ಅವರುಗಳ ಪ್ರತಿಮೆಗಳನ್ನು ಸ್ಥಾಪಿಸಿ ಎಂದು ಅವರು ಒತ್ತಾಯಿಸಿದ್ದಾರೆ.

ಬಾಲಸುಬ್ರಹ್ಮಣ್ಯಂ ಅವರ ಹತ್ತಿರದ ಸಂಬಂಧಿ, ಖ್ಯಾತ ನಟ ಶುಭಲೇಖ ಸುಧಾಕರ್ ಅವರು ಈ ವೇಳೆ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಮಾಡಿದರು. ಬಾಲಸುಬ್ರಹ್ಮಣ್ಯಂ ಅವರು ತೆಲುಗು ಭಾಷೆಗೆ, ಕಲೆಗೆ ನೀಡುವ ಕೊಡುಗೆಯನ್ನು ವಿವರಿಸುವ ಯತ್ನ ಮಾಡಿದರು. ಆಗ ಪೃಥ್ವಿರಾಜ್ ಯಾದವ್, ತನಗೆ ಬಾಲಸುಬ್ರಹ್ಮಣ್ಯಂ ಯಾರೆಂಬುದು ಗೊತ್ತಿಲ್ಲ ಎಂದು ವಿತಂಡ ವಾದ ಮಾಡಿದರು. ಕೊನೆಗೆ ಸುಧಾಕರ್ ಅವರು ಅಲ್ಲಿಂದ ಬೇಸರದಿಂದ ತೆರಳಿದರು.

ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಹುತೇಕರು ಸಾಮಾಜಿಕ ಕಾರ್ಯಕರ್ತ ಪೃಥ್ವಿರಾಜ್ ಅವರ ವರ್ತನೆಯನ್ನು ವಿರೋಧಿಸಿದ್ದಾರೆ. ಬಾಲಸುಬ್ರಹ್ಮಣ್ಯಂ ಅವರು ತೆಲುಗು ರಾಜ್ಯಗಳ ಹೆಮ್ಮೆಯ ಪುತ್ರ. ಅವರು ಭಾಷೆಗೆ, ತೆಲುಗು ಕಲಾ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅಪಾರ ಎಂದು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ
ಮಕರ ಸಂಕ್ರಾಂತಿ ಆಚರಣೆಯ ಸರಿಯಾದ ದಿನಾಂಕ, ಮಹತ್ವ ಏನು?
ಮಕರ ಸಂಕ್ರಾಂತಿ ಆಚರಣೆಯ ಸರಿಯಾದ ದಿನಾಂಕ, ಮಹತ್ವ ಏನು?