AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪೈಡರ್ ಮ್ಯಾನ್ ಹೊಸ ಸಿನಿಮಾ ಬಿಡುಗಡೆ, ಭಾರತದಲ್ಲೇ ಮೊದಲು

Spider man Brand new day: ಭಾರತದಲ್ಲಿ ಮಾತ್ರ, ಒಂದು ದಿನ ಮುಂಚಿತವಾಗಿ ಬಿಡುಗಡೆ ಆಗಲಿದ್ದು, ವಿಶ್ವದಲ್ಲಿ ಎಲ್ಲರಿಗಿಂತಲೂ ಮೊದಲು ಭಾರತೀಯ ಅಭಿಮಾನಿಗಳು ಸಿನಿಮಾವನ್ನು ನೋಡಬಹುದಾಗಿದೆ. ಭಾರತದಲ್ಲಿ ಬಿಡುಗಡೆ ಆದ ಒಂದು ದಿನದ ಬಳಿಕ ವಿಶ್ವದಾದ್ಯಂತ ‘ಸ್ಪೈಡರ್​​ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾ ಬಿಡುಗಡೆ ಆಗುತ್ತಿದೆ. ಭಾರತದಲ್ಲಿ ಅಡ್ವಾನ್ಸ್ ಬುಕಿಂಗ್ ದಿನಾಂಕವನ್ನು ಸಹ ಘೋಷಣೆ ಮಾಡಲಾಗಿದೆ.

ಸ್ಪೈಡರ್ ಮ್ಯಾನ್ ಹೊಸ ಸಿನಿಮಾ ಬಿಡುಗಡೆ, ಭಾರತದಲ್ಲೇ ಮೊದಲು
Spider Man Brand New Day
ಮಂಜುನಾಥ ಸಿ.
|

Updated on:Jun 11, 2026 | 7:11 PM

Share

ಭಾರತದ ‘ಸ್ಪೈಡರ್ ಮ್ಯಾನ್’ (Spider Man) ಅಭಿಮಾನಿಗಳಿಗೆ ಖುಷಿ ಸುದ್ದಿ, ಹೊಸ ಸ್ಪೈಡರ್ ಮ್ಯಾನ್ ಸಿನಿಮಾ ‘ಸ್ಪೈಡರ್-ಮ್ಯಾನ್: ಬ್ರಾಂಡ್ ನ್ಯೂ ಡೇ’ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ವಿಶೇಷವೆಂದರೆ ಭಾರತದಲ್ಲಿ ಮಾತ್ರ, ಒಂದು ದಿನ ಮುಂಚಿತವಾಗಿ ಬಿಡುಗಡೆ ಆಗಲಿದ್ದು, ವಿಶ್ವದಲ್ಲಿ ಎಲ್ಲರಿಗಿಂತಲೂ ಮೊದಲು ಭಾರತೀಯ ಅಭಿಮಾನಿಗಳು ಸಿನಿಮಾವನ್ನು ನೋಡಬಹುದಾಗಿದೆ. ಭಾರತದಲ್ಲಿ ಬಿಡುಗಡೆ ಆದ ಒಂದು ದಿನದ ಬಳಿಕ ವಿಶ್ವದಾದ್ಯಂತ ‘ಸ್ಪೈಡರ್​​ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾ ಬಿಡುಗಡೆ ಆಗುತ್ತಿದೆ. ಭಾರತದಲ್ಲಿ ಅಡ್ವಾನ್ಸ್ ಬುಕಿಂಗ್ ದಿನಾಂಕವನ್ನು ಸಹ ಘೋಷಣೆ ಮಾಡಲಾಗಿದೆ.

‘ಸ್ಪೈಡರ್ ಮ್ಯಾನ್’ ಹೊಸ ಸಿನಿಮಾ ವಿಶ್ವದಾದ್ಯಂತ ಜುಲೈ 31 ರಂದು ಬಿಡುಗಡೆ ಆಗಲಿದೆ. ಆದರೆ ಭಾರತದಲ್ಲಿ ಈ ಸಿನಿಮಾ ಒಂದು ದಿನ ಮುಂಚಿತವಾಗಿ ಅಂದರೆ ಜುಲೈ 30ರಂದೇ ಬಿಡುಗಡೆ ಆಗಲಿದೆ. ಭಾರತದಲ್ಲಿ ಇಂಗ್ಲೀಷ್ ಮಾತ್ರವಲ್ಲದೆ, ಹಿಂದಿ, ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡ ಭಾಷೆಗಳಲ್ಲಿ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾದ ಅಡ್ವನ್ಸ್ ಬುಕಿಂಗ್ ಭಾರತದಲ್ಲಿ ಜುಲೈ 17ರಿಂದ ಆರಂಭವಾಗಲಿದೆ.

ಆದರೆ ಯುನೈಟೆಡ್ ಸ್ಟೇಟ್ಸ್‌ನ ಅಮೆಜಾನ್ ಪ್ರೈಮ್ ಸದಸ್ಯರು ‘ಸ್ಪೈಡರ್-ಮ್ಯಾನ್: ಬ್ರಾಂಡ್ ನ್ಯೂ ಡೇ’ ಚಿತ್ರವನ್ನು ವೀಕ್ಷಿಸುವ ವಿಶೇಷ ಅವಕಾಶವನ್ನು ಪಡೆಯಲಿದ್ದಾರೆ. ವಿಶೇಷ ಅರ್ಲಿ-ಆಕ್ಸೆಸ್ ಸ್ಕ್ರೀನಿಂಗ್ ಕಾರ್ಯಕ್ರಮದ ಮೂಲಕ, ಪ್ರೈಮ್ ಸದಸ್ಯರು ಜುಲೈ 29ರಂದು ದೇಶಾದ್ಯಂತದ ಆಯ್ದ ಚಿತ್ರಮಂದಿರಗಳಲ್ಲಿ ಈ ಬಹುನಿರೀಕ್ಷಿತ ಸೂಪರ್‌ಹೀರೋ ಚಿತ್ರವನ್ನು ವೀಕ್ಷಿಸಬಹುದು. ಇದು ಯುಎಸ್ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಗೊಳ್ಳುವ ಎರಡು ದಿನಗಳ ಮೊದಲೇ ದೊರಕುವ ಸೌಲಭ್ಯವಾಗಿದೆ.

ಇದನ್ನೂ ಓದಿ:ಆಲಿಯಾ ಭಟ್ ‘ಆಲ್ಫಾ’ ಹಾಲಿವುಡ್ ಚಿತ್ರದ ಕಾಪಿ? ಸಿಕ್ಕಿತು ಸಾಕ್ಷಿ

‘ಸ್ಪೈಡರ್-ಮ್ಯಾನ್: ನೋ ವೇ ಹೋಮ್’ (2021)ರಲ್ಲಿ ಬಿಡುಗಡೆ ಆಗಿತ್ತು. ಆ ಸಿನಿಮಾದ ಅಂತ್ಯದಲ್ಲಿ ಸ್ಪೈಡರ್​ಮ್ಯಾನ್ ಆಪ್ತ ಗೆಳೆಯರ ಸ್ಪೈಡರ್ ಮ್ಯಾನ್ ಇರುವುದನ್ನೇ ಮರೆತು ಹೋಗಿದ್ದಾರೆ. ಈಗ ಗೆಳೆಯರಿಲ್ಲದೆ, ಆಪ್ತರಿಲ್ಲದೆ ಸ್ಪೈಡರ್​​ಮ್ಯಾನ್ ಜೀವನ ಹೇಗಿರಲಿದೆ, ಈಗ ಸ್ಪೈಡರ್​ ಮ್ಯಾನ್​​ಗೆ ಹೊಸ ಕಂಟಕ ಏನು ಎದುರಾಗಲಿದೆ. ಅವುಗಳಿಂದ ಸ್ಪೈಡರ್​​ಮ್ಯಾನ್ ಹೇಗೆ ಪಾರಾಗಲಿದ್ದಾನೆ ಎಂಬುದು ಸಿನಿಮಾದ ಕತೆ ಆಗಿರಲಿದೆ. ‘ಸ್ಪೈಡರ್​ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆ ಆಗಿದ್ದು, ದೊಡ್ಡ ಹಿಟ್ ಆಗಿದೆ. ಒಂದು ಬಿಲಿಯನ್​​ಗೂ ಅಧಿಕ ವೀಕ್ಷಣೆಗಳನ್ನು ಯೂಟ್ಯೂಬ್​​ನಲ್ಲಿ ಅದು ಪಡೆದುಕೊಂಡಿದೆ.

ಐದು ವರ್ಷಗಳ ನಂತರ ಟಾಮ್ ಹಾಲೆಂಡ್ ಅವರು ‘ಸ್ಪೈಡರ್-ಮ್ಯಾನ್: ಬ್ರಾಂಡ್ ನ್ಯೂ ಡೇ’ ಮೂಲಕ ಸೋಲೋ ಸ್ಪೈಡರ್-ಮ್ಯಾನ್ ಸಿನಿಮಾ ಮೂಲಕ ಮರಳುತ್ತಿದ್ದಾರೆ. ವಿಶೇಷವೆಂದರೆ ಇದೇ ತಿಂಗಳು ಅವರ ನಟನೆಯ ಬಹು ನಿರೀಕ್ಷಿತ ಸಿನಿಮಾ ‘ದಿ ಆಡಸ್ಸಿ’ ಸಿನಿಮಾ ಬಿಡುಗಡೆ ಆಗುತ್ತಿದೆ. ಆ ಸಿನಿಮಾ ಬಿಡುಗಡೆ ಆದ ಒಂದು ತಿಂಗಳ ಬಳಿಕ ‘ಸ್ಪೈಡರ್​​ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:10 pm, Thu, 11 June 26

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್