AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಸೋಲಿನಿಂದ ಕಂಗೆಟ್ಟಿರೋ ಶ್ರೀಲೀಲಾಗೆ ಆಫರ್ ಕೊಟ್ಟ ಪ್ರಭಾಸ್ ನಿರ್ದೇಶಕ

ಹನು ರಾಘವಪುಡಿ ಹಾಗೂ ಪ್ರಭಾಸ್ ಒಟ್ಟಾಗಿ ಸೇರಿ ಸಿನಿಮಾ ಮಾಡುತ್ತಿದ್ದಾರೆ. ಸದ್ಯ ನಿರ್ದೇಶಕರು ಹೀರೋಯಿನ್ ಹುಡುಕಾಟದಲ್ಲಿ ಇದ್ದಾರೆ ಎನ್ನಲಾಗಿತ್ತು. ಹೀಗಿರುವಾಗಲೇ ಶ್ರೀಲೀಲಾ ಜೊತೆ ಶೂಟ್​ನಲ್ಲಿ ಇರೋ ಫೋಟೋ ವೈರಲ್ ಆಗಿತ್ತು. ಇದನ್ನು ನೋಡಿ ಫ್ಯಾನ್ಸ್ ಥ್ರಿಲ್ ಆದರು. ಆದರೆ, ಇದು ಜಾಹೀರಾತು ಶೂಟ್​ನ ಫೋಟೋ ಎಂಬುದು ತಿಳಿದು ಬಂದಿದೆ.  

ಸತತ ಸೋಲಿನಿಂದ ಕಂಗೆಟ್ಟಿರೋ ಶ್ರೀಲೀಲಾಗೆ ಆಫರ್ ಕೊಟ್ಟ ಪ್ರಭಾಸ್ ನಿರ್ದೇಶಕ
ಶ್ರೀಲೀಲಾ
ರಾಜೇಶ್ ದುಗ್ಗುಮನೆ
|

Updated on: Jun 10, 2024 | 7:33 AM

Share

ಶ್ರೀಲೀಲಾ (Sreeleela) ಅವರು ಸದ್ಯ ಟಾಲಿವುಡ್​ನಲ್ಲಿ ಬ್ಯುಸಿ ಇದ್ದಾರೆ. ಅವರಿಗೆ ಅಲ್ಲಿ ಭರ್ಜರಿ ಆಫರ್ ಸಿಗುತ್ತಿದೆ. ಆದರೆ, ಇತ್ತೀಚೆಗೆ ಹೇಳಿಕೊಳ್ಳುವಂಥ ಒಳ್ಳೆಯ ಗೆಲುವು ಸಿಕ್ಕಿಲ್ಲ. ಈ ವಿಚಾರ ಶ್ರೀಲೀಲಾಗೆ ಸಖತ್ ಬೇಸರ ಮೂಡಿಸಿದೆ. ಶ್ರೀಲೀಲಾ ಅವರು ದೊಡ್ಡ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಹೀಗಿರುವಾಗಲೇ ಅವರಿಗೆ ಪ್ರಭಾಸ್ ಸಿನಿಮಾ ನಿರ್ದೇಶಕ ಹನು ರಾಘವಪುಡಿ ಅವರು ಆಫರ್ ಒಂದನ್ನು ನೀಡಿದ್ದಾರೆ. ಇದನ್ನು ನೋಡಿ ಪ್ರಭಾಸ್ ಚಿತ್ರಕ್ಕೆ ಶ್ರೀಲೀಲಾ ನಾಯಕಿ ಆದರು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಅದು ಸುಳ್ಳಾಗಿದೆ.

ಹನು ರಾಘವಪುಡಿ ಹಾಗೂ ಪ್ರಭಾಸ್ ಒಟ್ಟಾಗಿ ಸೇರಿ ಸಿನಿಮಾ ಮಾಡುತ್ತಿದ್ದಾರೆ. ಆದರೆ, ಈ ಚಿತ್ರಕ್ಕೆ ಇನ್ನೂ ಟೈಟಲ್ ಫೈನಲ್ ಆಗಿಲ್ಲ. ಸದ್ಯ ನಿರ್ದೇಶಕರು ಹೀರೋಯಿನ್ ಹುಡುಕಾಟದಲ್ಲಿ ಇದ್ದಾರೆ ಎನ್ನಲಾಗಿತ್ತು. ಹೀಗಿರುವಾಗಲೇ ಶ್ರೀಲೀಲಾ ಜೊತೆ ಶೂಟ್​ನಲ್ಲಿ ಇರೋ ಫೋಟೋ ವೈರಲ್ ಆಗಿತ್ತು. ಇದನ್ನು ನೋಡಿ ಫ್ಯಾನ್ಸ್ ಥ್ರಿಲ್ ಆದರು. ಆದರೆ, ಇದು ಜಾಹೀರಾತು ಶೂಟ್​ನ ಫೋಟೋ ಎಂಬುದು ತಿಳಿದು ಬಂದಿದೆ.

ಶ್ರೀಲೀಲಾ ಅಮೆರಿಕ ತೆರಳಿದ್ದರು. ಆ ಬಳಿಕ ಅವರು ಭಾರತಕ್ಕೆ ಮರಳಿದರು. ಈ ವೇಳೆ ಅವರು ಜಾಹೀರಾತು ಶೂಟ್​ನಲ್ಲಿ ಭಾಗಿ ಆದರು. ಇದನ್ನು ಹನು ರಾಘವಪುಡಿ ಅವರೇ ನಿರ್ದೇಶನ ಮಾಡಿದ್ದಾರೆ. ಈ ಕಾರಣಕ್ಕೆ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಕೆಲವರು ಇದನ್ನು ತಪ್ಪಾಗಿ ಭಾವಿಸಿದ್ದಾರೆ. ಪ್ರಭಾಸ್ ಸಿನಿಮಾಗೆ ಶ್ರೀಲೀಲಾ ನಾಯಕಿ ಅಲ್ಲ ಅನ್ನೋದು ಇದರಿಂದ ಸ್ಪಷ್ಟವಾಗಿದೆ.

ಪ್ರಭಾಸ್ ಹಾಗೂ ಹನು ರಾಘವಪುಡಿ ಚಿತ್ರದ ಸ್ಕ್ರಿಪ್ಟ್ ಕೆಲಸಗಳು ಬಹುತೇಕ ಕೊನೆಯ ಹಂತಕ್ಕೆ ಬಂದಿವೆ. ರೆಟ್ರೋ ಕಥೆಯನ್ನು ಸಿನಿಮಾ ಹೊಂದಿದೆ. ಈ ಚಿತ್ರಕ್ಕೆ ನಾಯಕಿಯಾಗಿ ಯಾರು ಆಯ್ಕೆ ಆಗುತ್ತಾರೆ ಎನ್ನುವ ಪ್ರಶ್ನೆ ಮೂಡಿದೆ. ಸಿನಿಮಾ ಘೋಷಣೆ ಸಂದರ್ಭದಲ್ಲಿ ಈ ಬಗ್ಗೆ ಉತ್ತರ ಸಿಗಲಿದೆ.

ಇದನ್ನೂ ಓದಿ: ಪ್ರಭಾಸ್ ಕೆರಿಯರ್​ನ ಫ್ಲಾಪ್ ಸಿನಿಮಾ ಮರು ಬಿಡುಗಡೆ, ಇದು ಹಣ ಮಾಡುವ ತಂತ್ರ

ವಿಜಯ್ ದೇವರಕೊಂಡ ಅವರ 12ನೇ ಚಿತ್ರಕ್ಕೆ ‘ಸಿತಾರಾ ಎಂಟರ್​ಟೇನ್​ಮೆಂಟ್’ ಬಂಡವಾಳ ಹೂಡುತ್ತಿದೆ. ಈ ಮೊದಲು ಶ್ರೀಲೀಲಾ ಅವರನ್ನು ಈ ಚಿತ್ರಕ್ಕೆ ನಾಯಕಿ ಆಗಿ ಆಯ್ಕೆ ಮಾಡಲಾಗಿತ್ತು. ಆದರೆ, ಅವರು ಚಿತ್ರದಿಂದ ಹೊರ ನಡೆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ