ಸತತ ಸೋಲಿನಿಂದ ಕಂಗೆಟ್ಟಿರೋ ಶ್ರೀಲೀಲಾಗೆ ಆಫರ್ ಕೊಟ್ಟ ಪ್ರಭಾಸ್ ನಿರ್ದೇಶಕ

ಹನು ರಾಘವಪುಡಿ ಹಾಗೂ ಪ್ರಭಾಸ್ ಒಟ್ಟಾಗಿ ಸೇರಿ ಸಿನಿಮಾ ಮಾಡುತ್ತಿದ್ದಾರೆ. ಸದ್ಯ ನಿರ್ದೇಶಕರು ಹೀರೋಯಿನ್ ಹುಡುಕಾಟದಲ್ಲಿ ಇದ್ದಾರೆ ಎನ್ನಲಾಗಿತ್ತು. ಹೀಗಿರುವಾಗಲೇ ಶ್ರೀಲೀಲಾ ಜೊತೆ ಶೂಟ್​ನಲ್ಲಿ ಇರೋ ಫೋಟೋ ವೈರಲ್ ಆಗಿತ್ತು. ಇದನ್ನು ನೋಡಿ ಫ್ಯಾನ್ಸ್ ಥ್ರಿಲ್ ಆದರು. ಆದರೆ, ಇದು ಜಾಹೀರಾತು ಶೂಟ್​ನ ಫೋಟೋ ಎಂಬುದು ತಿಳಿದು ಬಂದಿದೆ.  

ಸತತ ಸೋಲಿನಿಂದ ಕಂಗೆಟ್ಟಿರೋ ಶ್ರೀಲೀಲಾಗೆ ಆಫರ್ ಕೊಟ್ಟ ಪ್ರಭಾಸ್ ನಿರ್ದೇಶಕ
ಶ್ರೀಲೀಲಾ
Follow us
|

Updated on: Jun 10, 2024 | 7:33 AM

ಶ್ರೀಲೀಲಾ (Sreeleela) ಅವರು ಸದ್ಯ ಟಾಲಿವುಡ್​ನಲ್ಲಿ ಬ್ಯುಸಿ ಇದ್ದಾರೆ. ಅವರಿಗೆ ಅಲ್ಲಿ ಭರ್ಜರಿ ಆಫರ್ ಸಿಗುತ್ತಿದೆ. ಆದರೆ, ಇತ್ತೀಚೆಗೆ ಹೇಳಿಕೊಳ್ಳುವಂಥ ಒಳ್ಳೆಯ ಗೆಲುವು ಸಿಕ್ಕಿಲ್ಲ. ಈ ವಿಚಾರ ಶ್ರೀಲೀಲಾಗೆ ಸಖತ್ ಬೇಸರ ಮೂಡಿಸಿದೆ. ಶ್ರೀಲೀಲಾ ಅವರು ದೊಡ್ಡ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಹೀಗಿರುವಾಗಲೇ ಅವರಿಗೆ ಪ್ರಭಾಸ್ ಸಿನಿಮಾ ನಿರ್ದೇಶಕ ಹನು ರಾಘವಪುಡಿ ಅವರು ಆಫರ್ ಒಂದನ್ನು ನೀಡಿದ್ದಾರೆ. ಇದನ್ನು ನೋಡಿ ಪ್ರಭಾಸ್ ಚಿತ್ರಕ್ಕೆ ಶ್ರೀಲೀಲಾ ನಾಯಕಿ ಆದರು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಅದು ಸುಳ್ಳಾಗಿದೆ.

ಹನು ರಾಘವಪುಡಿ ಹಾಗೂ ಪ್ರಭಾಸ್ ಒಟ್ಟಾಗಿ ಸೇರಿ ಸಿನಿಮಾ ಮಾಡುತ್ತಿದ್ದಾರೆ. ಆದರೆ, ಈ ಚಿತ್ರಕ್ಕೆ ಇನ್ನೂ ಟೈಟಲ್ ಫೈನಲ್ ಆಗಿಲ್ಲ. ಸದ್ಯ ನಿರ್ದೇಶಕರು ಹೀರೋಯಿನ್ ಹುಡುಕಾಟದಲ್ಲಿ ಇದ್ದಾರೆ ಎನ್ನಲಾಗಿತ್ತು. ಹೀಗಿರುವಾಗಲೇ ಶ್ರೀಲೀಲಾ ಜೊತೆ ಶೂಟ್​ನಲ್ಲಿ ಇರೋ ಫೋಟೋ ವೈರಲ್ ಆಗಿತ್ತು. ಇದನ್ನು ನೋಡಿ ಫ್ಯಾನ್ಸ್ ಥ್ರಿಲ್ ಆದರು. ಆದರೆ, ಇದು ಜಾಹೀರಾತು ಶೂಟ್​ನ ಫೋಟೋ ಎಂಬುದು ತಿಳಿದು ಬಂದಿದೆ.

ಶ್ರೀಲೀಲಾ ಅಮೆರಿಕ ತೆರಳಿದ್ದರು. ಆ ಬಳಿಕ ಅವರು ಭಾರತಕ್ಕೆ ಮರಳಿದರು. ಈ ವೇಳೆ ಅವರು ಜಾಹೀರಾತು ಶೂಟ್​ನಲ್ಲಿ ಭಾಗಿ ಆದರು. ಇದನ್ನು ಹನು ರಾಘವಪುಡಿ ಅವರೇ ನಿರ್ದೇಶನ ಮಾಡಿದ್ದಾರೆ. ಈ ಕಾರಣಕ್ಕೆ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಕೆಲವರು ಇದನ್ನು ತಪ್ಪಾಗಿ ಭಾವಿಸಿದ್ದಾರೆ. ಪ್ರಭಾಸ್ ಸಿನಿಮಾಗೆ ಶ್ರೀಲೀಲಾ ನಾಯಕಿ ಅಲ್ಲ ಅನ್ನೋದು ಇದರಿಂದ ಸ್ಪಷ್ಟವಾಗಿದೆ.

ಪ್ರಭಾಸ್ ಹಾಗೂ ಹನು ರಾಘವಪುಡಿ ಚಿತ್ರದ ಸ್ಕ್ರಿಪ್ಟ್ ಕೆಲಸಗಳು ಬಹುತೇಕ ಕೊನೆಯ ಹಂತಕ್ಕೆ ಬಂದಿವೆ. ರೆಟ್ರೋ ಕಥೆಯನ್ನು ಸಿನಿಮಾ ಹೊಂದಿದೆ. ಈ ಚಿತ್ರಕ್ಕೆ ನಾಯಕಿಯಾಗಿ ಯಾರು ಆಯ್ಕೆ ಆಗುತ್ತಾರೆ ಎನ್ನುವ ಪ್ರಶ್ನೆ ಮೂಡಿದೆ. ಸಿನಿಮಾ ಘೋಷಣೆ ಸಂದರ್ಭದಲ್ಲಿ ಈ ಬಗ್ಗೆ ಉತ್ತರ ಸಿಗಲಿದೆ.

ಇದನ್ನೂ ಓದಿ: ಪ್ರಭಾಸ್ ಕೆರಿಯರ್​ನ ಫ್ಲಾಪ್ ಸಿನಿಮಾ ಮರು ಬಿಡುಗಡೆ, ಇದು ಹಣ ಮಾಡುವ ತಂತ್ರ

ವಿಜಯ್ ದೇವರಕೊಂಡ ಅವರ 12ನೇ ಚಿತ್ರಕ್ಕೆ ‘ಸಿತಾರಾ ಎಂಟರ್​ಟೇನ್​ಮೆಂಟ್’ ಬಂಡವಾಳ ಹೂಡುತ್ತಿದೆ. ಈ ಮೊದಲು ಶ್ರೀಲೀಲಾ ಅವರನ್ನು ಈ ಚಿತ್ರಕ್ಕೆ ನಾಯಕಿ ಆಗಿ ಆಯ್ಕೆ ಮಾಡಲಾಗಿತ್ತು. ಆದರೆ, ಅವರು ಚಿತ್ರದಿಂದ ಹೊರ ನಡೆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ