AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಭರ್ಜರಿ ಸ್ಟೆಪ್ ಹಾಕಿದ ಕನ್ನಡದ ಬೆಡಗಿ ಶ್ರೀಲೀಲಾ; ನಟಿಯ ವಯ್ಯಾರ ನೋಡಿ..

ನಟಿ ಶ್ರೀಲೀಲಾ ಅವರು ಕನ್ನಡದ ‘ಕಿಸ್’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು. ಬಳಿಕ ಅವರಿಗೆ ತೆಲುಗು ಚಿತ್ರದಿಂದ ಆಫರ್ ಬಂತು. ಈಗ ಅವರ ಕೈಯಲ್ಲಿ ಎಂಟು ಸಿನಿಮಾಗಳಿವೆ. ಈ ಪೈಕಿ ‘ಸ್ಕಂದ’ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಬೋಯಪತಿ ಶ್ರೀನು ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಮತ್ತೆ ಭರ್ಜರಿ ಸ್ಟೆಪ್ ಹಾಕಿದ ಕನ್ನಡದ ಬೆಡಗಿ ಶ್ರೀಲೀಲಾ; ನಟಿಯ ವಯ್ಯಾರ ನೋಡಿ..
ಶ್ರೀಲೀಲಾ
ರಾಜೇಶ್ ದುಗ್ಗುಮನೆ
|

Updated on: Aug 18, 2023 | 7:36 AM

Share

ಕಳೆದ ವರ್ಷ ರಿಲೀಸ್ ಆದ ರವಿ ತೇಜ ಹಾಗೂ ಶ್ರೀಲೀಲಾ (Sreeleela) ನಟನೆಯ ‘ಧಮಾಕ’ ಸಿನಿಮಾ ಸೂಪರ್ ಹಿಟ್ ಆಯಿತು. ಆ ಬಳಿಕ ಶ್ರೀಲೀಲಾಗೆ ಬೇಡಿಕೆ ಹೆಚ್ಚಿತು. ಸದ್ಯ ಹಲವು ತೆಲುಗು ಪ್ರಾಜೆಕ್ಟ್​ನಲ್ಲಿ ಅವರು ಬ್ಯುಸಿ ಇದ್ದಾರೆ. ನಟಿ ಶ್ರೀಲೀಲಾ ಅವರು ಡ್ಯಾನ್ಸ್ ಮಾಡೋಕೂ ಸೈ ಎನ್ನುವವರು. ಅವರ ನಟನೆಯ ‘ಸ್ಕಂದ’ ಚಿತ್ರದ ಹೊಸ ಸಾಂಗ್ ‘ಗಂಡರಬಾಯ್..’ (Gandarabai Song) ಲಿರಿಕಲ್ ಹಾಡಿನ ಪ್ರೋಮೋ ರಿಲೀಸ್ ಆಗಿದೆ. ಇದರಲ್ಲಿ ಶ್ರೀಲೀಲಾ ಹಾಗೂ ರಾಮ್ ಪೋತಿನೇನಿ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ. ಫುಲ್ ವಿಡಿಯೋ ರಿಲೀಸ್ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ನಟಿ ಶ್ರೀಲೀಲಾ ಅವರು ಕನ್ನಡದ ‘ಕಿಸ್’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು. ಬಳಿಕ ಅವರಿಗೆ ತೆಲುಗು ಚಿತ್ರದಿಂದ ಆಫರ್ ಬಂತು. ಈಗ ಅವರ ಕೈಯಲ್ಲಿ ಎಂಟು ಸಿನಿಮಾಗಳಿವೆ. ಈ ಪೈಕಿ ‘ಸ್ಕಂದ’ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ‘ಅಖಂಡ’ದಂಥ ಮಾಸ್ ಸಿನಿಮಾಗಳನ್ನು ನಿರ್ದೇಶನ ಮಾಡಿರೋ ಬೋಯಪತಿ ಶ್ರೀನು ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಸಾಂಗ್ ಮೂಲಕ ಸದ್ದು ಮಾಡಲು ರೆಡಿ ಆಗಿದೆ.

‘ಗಂಡರಬಾಯ್..’ ಎಂದು ರಾಮ್ ಹಾಗೂ ಶ್ರೀಲೀಲಾ ಡ್ಯಾನ್ಸ್ ಮಾಡಿದ್ದಾರೆ. ಈ ಹಾಡಿನ ಕೆಲವು ಸ್ಟಿಲ್ಸ್ ಹಾಗೂ ದೃಶ್ಯಗಳನ್ನು ಸೇರಿಸಿ ಪ್ರೋಮೋ ಮಾಡಲಾಗಿದೆ. ಈ ಪ್ರೋಮೋ ಗಮನ ಸೆಳೆಯುತ್ತಿದೆ. ಸಾಂಗ್ ಸೂಪರ್ ಹಿಟ್ ಆಗುವ ಎಲ್ಲಾ ಸೂಚನೆ ಸಿಕ್ಕಿದೆ. ಇತ್ತೀಚೆಗೆ ರಿಲೀಸ್ ಆದ ‘ಕಾವಾಲಾ..’ ಹಾಡು ಸಖತ್ ಸದ್ದು ಮಾಡಿದೆ. ಇನ್​ಸ್ಟಾಗ್ರಾಮ್ ರೀಲ್ಸ್​ನಲ್ಲಿ ಈ ಹಾಡು ಫೇಮಸ್ ಆಗಿದೆ. ಈಗ ‘ಗಂಡರಬಾಯ್.. ಹಾಡು ಕೂಡ ಸದ್ದು ಮಾಡುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಮತ್ತೊಮ್ಮೆ ಡ್ಯಾನ್ಸ್ ಫ್ಲೋರ್​ಗೆ ಬೆಂಕಿ ಹಚ್ಚಿದ ಶ್ರೀಲೀಲಾ ಸ್ಕಂದ; ಸಿನಿಮಾ ಹಾಡು ಬಿಡುಗಡೆ

‘ಸ್ಕಂದ’ ಸಿನಿಮಾ ಸೆಪ್ಟೆಂಬರ್ 15ರಂದು ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕೆ ಪ್ರಚಾರ ನೀಡುವ ಕೆಲಸವನ್ನು ತಂಡ ಪ್ರಾರಂಭಿಸಿದೆ. ಶ್ರೀನಿವಾಸ ಚಿತ್ತುರಿ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ತೆಲುಗಿನಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ. ಎಸ್​. ಥಮನ್ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು