AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhamaka: 100 ಕೋಟಿ ರೂಪಾಯಿ ಗಳಿಸಿದ ‘ಧಮಾಕಾ’ ಚಿತ್ರ; ತೆಲುಗಿನಲ್ಲಿ ಹೆಚ್ಚಿತು ಕನ್ನಡತಿ ಶ್ರೀಲೀಲಾ ಹವಾ

Dhamaka Movie Box Office Collection: ಅನೇಕ ಚಿತ್ರಮಂದಿರಗಳಲ್ಲಿ ಇಂದಿಗೂ ‘ಧಮಾಕಾ’ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾದಿಂದ ಶ್ರೀಲೀಲಾ ಅವರ ಚಾರ್ಮ್​ ಹೆಚ್ಚಿದೆ.

Dhamaka: 100 ಕೋಟಿ ರೂಪಾಯಿ ಗಳಿಸಿದ ‘ಧಮಾಕಾ’ ಚಿತ್ರ; ತೆಲುಗಿನಲ್ಲಿ ಹೆಚ್ಚಿತು ಕನ್ನಡತಿ ಶ್ರೀಲೀಲಾ ಹವಾ
ರವಿತೇಜ, ಶ್ರೀಲೀಲಾ
TV9 Web
| Edited By: |

Updated on:Jan 06, 2023 | 7:40 PM

Share

ಕನ್ನಡದ ಕಲಾವಿದರು ಮತ್ತು ತಂತ್ರಜ್ಞರು ಪರಭಾಷೆಯಲ್ಲಿ ಮಿಂಚುತ್ತಿದ್ದಾರೆ. ಕನ್ನಡದ ನಟಿ ಶ್ರೀಲೀಲಾ ಅವರಿಗೆ ಟಾಲಿವುಡ್​ನಲ್ಲಿ ಭಾರಿ ಬೇಡಿಕೆ ಸೃಷ್ಟಿ ಆಗಿದೆ. ರವಿತೇಜ ಜೊತೆ ಅವರು ನಟಿಸಿರುವ ‘ಧಮಾಕಾ’ ಸಿನಿಮಾ (Dhamaka Movie)  ಧೂಳೆಬ್ಬಿಸುತ್ತಿದೆ. ಗಲ್ಲಾಪೆಟ್ಟಿಗೆಯಲ್ಲಿ ಈ ಚಿತ್ರ ಬರೋಬ್ಬರಿ 100 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಆ ಮೂಲಕ ರವಿತೇಜ (Ravi Teja) ಅವರ ವೃತ್ತಿಜೀವನಕ್ಕೆ ದೊಡ್ಡ ಗೆಲುವು ಸಿಕ್ಕಂತೆ ಆಗಿದೆ. ಅವರಿಗೆ ಜೋಡಿಯಾಗಿ ನಟಿಸಿರುವ ಕನ್ನಡದ ಹುಡುಗಿ ಶ್ರೀಲೀಲಾ ಅವರ ಖ್ಯಾತಿ ಕೂಡ ಟಾಲಿವುಡ್​ ವಲಯದಲ್ಲಿ ಹೆಚ್ಚಾಗಿದೆ. ಅವರಿಗೆ ಇನ್ನಷ್ಟು ಅವಕಾಶಗಳು ಹರಿದುಬರಲು ಆರಂಭಿಸಿವೆ. ಶ್ರೀಲೀಲಾ (Sreeleela) ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

2022ರ ಡಿಸೆಂಬರ್​ 23ರಂದು ‘ಧಮಾಕಾ’ ಚಿತ್ರ ಬಿಡುಗಡೆ ಆಯಿತು. ಆರಂಭದಲ್ಲಿಯೇ ಈ ಸಿನಿಮಾಗೆ ಒಳ್ಳೆಯ ಓಪನಿಂಗ್​ ಸಿಕ್ಕಿತು. ತ್ರಿನಾದ ರಾವ್​ ನಕ್ಕಿನ ಅವರ ನಿರ್ದೇಶನದಲ್ಲಿ ಮೂಡಿಬಂದ ಈ ಸಿನಿಮಾವನ್ನು ಚಿತ್ರಪ್ರೇಮಿಗಳು ಮೆಚ್ಚಿಕೊಂಡಿದ್ದಾರೆ. ರವಿತೇಜ ಅವರ ಎನರ್ಜಿಗೆ ಚಪ್ಪಾಳೆ ಸಿಕ್ಕಿದೆ. ಜೊತೆಗೆ ಹೀರೋಯಿನ್ ಶ್ರೀಲೀಲಾ ಕೂಡ ಮಿಂಚಿದ್ದಾರೆ. ಈ ಸಿನಿಮಾದ ಗೆಲುವಿನಿಂದ ಅವರ ಚಾರ್ಮ್​ ಹೆಚ್ಚಿದೆ. ಬಿಡುಗಡೆಯಾಗಿ 14ನೇ ದಿನಕ್ಕೆ ಈ ಚಿತ್ರದ ಒಟ್ಟು ಕಲೆಕ್ಷನ್​ 100 ಕೋಟಿ ರೂಪಾಯಿ ಆಗಿದೆ.

ಇದನ್ನೂ ಓದಿ
Image
Sreeleela: ಅಲ್ಲು ಅರ್ಜುನ್​ ಜತೆ ತೆರೆ ಹಂಚಿಕೊಂಡ ಶ್ರೀಲೀಲಾ; ಇಲ್ಲಿದೆ ಇಂಟರೆಸ್ಟಿಂಗ್​ ಅಪ್​ಡೇಟ್​
Image
ಗಂಡನ ಮನೆಯ ಬೀಗ ಮುರಿದ ಶ್ರೀಲೀಲಾ ತಾಯಿ ಸ್ವರ್ಣಲತಾ; ಇಲ್ಲಿದೆ ವಿಡಿಯೋ
Image
Swarnalatha: ಶ್ರೀಲೀಲಾ ತಾಯಿ ಸ್ವರ್ಣಲತಾ ಮೇಲೆ ಮತ್ತೆ ಎಫ್​ಐಆರ್​; ಪತಿಯಿಂದಲೇ ಪತ್ನಿ ವಿರು​ದ್ಧ ದೂರು
Image
Swarnalatha: ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾಗೆ ಬಂಧನ ಭೀತಿ; ಪೊಲೀಸರಿಂದ ಹುಡುಕಾಟ: ಏನಿದು ಕೇಸ್​?

ಇದನ್ನೂ ಓದಿ: ‘ಧಮಾಕ’ ಚಿತ್ರದಲ್ಲಿ ಮಿಂಚಿದ ಶ್ರೀಲೀಲಾ

ಅನೇಕ ಚಿತ್ರಮಂದಿರಗಳಲ್ಲಿ ಇಂದಿಗೂ ‘ಧಮಾಕಾ’ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದೆ. ವಿದೇಶದಲ್ಲಿನ ಫ್ಯಾನ್ಸ್​ ಕೂಡ ಮುಗಿಬಿದ್ದು ನೋಡುತ್ತಿದ್ದಾರೆ. ಅಚ್ಚರಿ ಎಂದರೆ ನಾನ್​-ಥಿಯಟ್ರಿಕಲ್​ ಹಕ್ಕುಗಳಿಂದಲೇ ಈ ಸಿನಿಮಾಗೆ ಸಖತ್​ ಹಣ ಸಿಕ್ಕಿದೆ. ಸಿನಿಮಾಗೆ ಹಾಕಿದ ಬಂಡವಾಳ ಅದರಿಂದಲೇ ವಾಪಸ್​ ಬಂದಿದೆ. ಚಿತ್ರಮಂದಿರದಲ್ಲಿ ಕಲೆಕ್ಟ್​ ಆಗಿದ್ದೆಲ್ಲವೂ ನಿರ್ಮಾಪಕರು ಮತ್ತು ವಿತರಕರ ಪಾಲಿಗೆ ಹೆಚ್ಚುವರಿ ಲಾಭ ಮಾಡಿಕೊಟ್ಟಿದೆ.

ಇದನ್ನೂ ಓದಿ: ಬೋಲ್ಡ್ ಲುಕ್​ನಲ್ಲಿ ಶ್ರೀಲೀಲಾ

ಈ ವಾರ ಪೂರ್ತಿ ‘ಧಮಾಕಾ’ ಧೂಳೆಬ್ಬಿಸುವ ಸಾಧ್ಯತೆ ಇದೆ. ಇನ್ನೊಂದು ವೀಕೆಂಡ್​ ಕೂಡ ಒಳ್ಳೆಯ ರೀತಿಯಲ್ಲಿ ಪ್ರದರ್ಶನ ಕಂಡರೆ ಒಟ್ಟು ಕಲೆಕ್ಷನ್ 120 ಕೋಟಿ ರೂಪಾಯಿ ದಾಟುವ ಸಂಭವ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ. ರಾವ್​ ರಮೇಶ್​, ಪವಿತ್ರಾ ಲೋಕೇಶ್​ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಶ್ರೀಲೀಲಾ ಅವರು ತೆಲುಗಿನಲ್ಲಿ ಮೊದಲು ನಟಿಸಿದ ಸಿನಿಮಾ ‘ಪೆಳ್ಳಿ ಸಂದಡಿ’. ಈ ಚಿತ್ರದಲ್ಲಿ ಅವರು ಸಖತ್​ ಗ್ಲಾಮರಸ್​ ಆಗಿ ಕಾಣಿಸಿಕೊಂಡರು. 2ನೇ ಸಿನಿಮಾ ‘ಧಮಾಕಾ’ ಸೂಪರ್​ ಹಿಟ್​ ಆಗಿದೆ. ಹಾಗಾಗಿ ಟಾಲಿವುಡ್​ ಪ್ರೇಕ್ಷಕರಿಗೆ ಶ್ರೀಲೀಲಾ ಹೆಚ್ಚು ಇಷ್ಟ ಆಗಿದ್ದಾರೆ. ಕಿರೀಟಿ ರೆಡ್ಡಿ ನಟನೆಯ ‘ಜೂನಿಯರ್​’ ಚಿತ್ರಕ್ಕೂ ಅವರೇ ನಾಯಕಿ. ಕನ್ನಡ-ತೆಲುಗು ಭಾಷೆಯಲ್ಲಿ ಈ ಸಿನಿಮಾ ಮೂಡಿಬರುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:40 pm, Fri, 6 January 23

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ