AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guntur Kaaram: ಮಹೇಶ್​ ಬಾಬು ಮನೆಯಲ್ಲಿ ಪಾರ್ಟಿ ಮಾಡಿದ ನಟಿ ಶ್ರೀಲೀಲಾ

ಮಹೇಶ್​ ಬಾಬು ಮನೆಯಲ್ಲಿ ‘ಗುಂಟೂರು ಖಾರಂ’ ಸಿನಿಮಾದ ಸಕ್ಸಸ್​ ಪಾರ್ಟಿ ನಡೆದಿದೆ. ಮಹೇಶ್​ ಬಾಬು, ಶ್ರೀಲೀಲಾ, ಮೀನಾಕ್ಷಿ ಚೌಧರಿ, ದಿಲ್​ ರಾಜು, ಮಹೇಶ್​ ಬಾಬು ಪತ್ನಿ ನಮ್ರತಾ ಶಿರೋಡ್ಕರ್​, ಪುತ್ರಿ ಸಿತಾರಾ ಘಟ್ಟಮನೇನಿ ಮುಂತಾದವರು ಪಾರ್ಟಿಯಲ್ಲಿ ಎಂಜಾಯ್​ ಮಾಡಿದ್ದಾರೆ. ಬಳಿಕ ಎಲ್ಲರೂ ಜೊತೆಯಾಗಿ ಕ್ಯಾಮೆರಾಗೆ ಪೋಸ್​ ನೀಡಿದ್ದಾರೆ.

Guntur Kaaram: ಮಹೇಶ್​ ಬಾಬು ಮನೆಯಲ್ಲಿ ಪಾರ್ಟಿ ಮಾಡಿದ ನಟಿ ಶ್ರೀಲೀಲಾ
ಶ್ರೀಲೀಲಾ, ಮಹೇಶ್​ ಬಾಬು, ಮೀನಾಕ್ಷಿ ಚೌಧರಿ
ಮದನ್​ ಕುಮಾರ್​
|

Updated on:Jan 16, 2024 | 1:21 PM

Share

ಕನ್ನಡದ ನಟಿಯರಿಗೆ ಟಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಾಗಿದೆ. ರಶ್ಮಿಕಾ ಮಂದಣ್ಣ ರೀತಿಯೇ ನಟಿ ಶ್ರೀಲೀಲಾ ಕೂಡ ಈಗ ತೆಲುಗು ಚಿತ್ರರಂಗದಲ್ಲಿ ಶೈನ್​ ಆಗುತ್ತಿದ್ದಾರೆ. ಅವರು ನಟಿಸಿರುವ ‘ಗುಂಟೂರು ಖಾರಂ’ ಸಿನಿಮಾ (Guntur Kaaram) ನೂರಾರು ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಈ ಸಿನಿಮಾದಲ್ಲಿ ಮಹೇಶ್​ ಬಾಬು ಅವರಿಗೆ ಜೋಡಿಯಾಗಿ ಶ್ರೀಲೀಲಾ ನಟಿಸಿದ್ದಾರೆ. ಸಿನಿಮಾ ಗೆದ್ದ ಖುಷಿಯಲ್ಲಿ ಮಹೇಶ್ ಬಾಬು (Mahesh Babu) ಅವರು ತಮ್ಮ ಮನೆಯಲ್ಲಿ ಪಾರ್ಟಿ ಆಯೋಜನೆ ಮಾಡಿದ್ದಾರೆ. ಇದರಲ್ಲಿ ಶ್ರೀಲೀಲಾ ಕೂಡ ಭಾಗಿ ಆಗಿದ್ದಾರೆ. ಮಹೇಶ್​ ಬಾಬು ಕುಟುಂಬದವರ ಜೊತೆ ಸೇರಿ ಶ್ರೀಲೀಲಾ (Sreeleela) ಪಾರ್ಟಿ ಮಾಡಿರುವ ಫೋಟೋಗಳು ವೈರಲ್​ ಆಗಿವೆ.

‘ಗುಂಟೂರು ಖಾರಂ’ ಸಿನಿಮಾಗೆ ತ್ರಿವಿಕ್ರಂ ಶ್ರೀನಿವಾಸ್​ ಅವರು ನಿರ್ದೇಶನ ಮಾಡಿದ್ದಾರೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಜನವರಿ 12ರಂದು ಈ ಸಿನಿಮಾ ಬಿಡುಗಡೆ ಆಯಿತು. ಭಾರತದ ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾದ ಕಲೆಕ್ಷನ್​ 200 ಕೋಟಿ ರೂಪಾಯಿ ಸಮೀಪಿಸುತ್ತಿದೆ. ಇದರಿಂದ ಚಿತ್ರತಂಡಕ್ಕೆ ಸಖತ್​ ಖುಷಿ ಆಗಿದೆ. ಹಾಗಾಗಿ ಸೋಮವಾರ (ಜನವರಿ 15) ಮಹೇಶ್ ಬಾಬು ಅವರ ನಿವಾಸದಲ್ಲಿ ಎಲ್ಲರೂ ಸೇರಿ ಪಾರ್ಟಿ ಮಾಡಿದ್ದಾರೆ.

‘ಗುಂಟೂರು ಖಾರಂ’ ಸಿನಿಮಾ ನೋಡಲಿರುವ ಶಾರುಖ್​ ಖಾನ್​; ಮಹೇಶ್​ ಬಾಬು ಫ್ಯಾನ್ಸ್​ಗೆ ಖುಷಿ

‘ಗುಂಟೂರು ಖಾರಂ’ ಸಿನಿಮಾದ ಸಕ್ಸಸ್​ ಪಾರ್ಟಿಯಲ್ಲಿ ಮಹೇಶ್​ ಬಾಬು, ಶ್ರೀಲೀಲಾ, ಮೀನಾಕ್ಷಿ ಚೌಧರಿ, ದಿಲ್​ ರಾಜು, ಮಹೇಶ್​ ಬಾಬು ಪತ್ನಿ ನಮ್ರತಾ ಶಿರೋಡ್ಕರ್​, ಪುತ್ರಿ ಸಿತಾರಾ ಘಟ್ಟಮನೇನಿ ಮುಂತಾದವರು ಎಂಜಾಯ್​ ಮಾಡಿದ್ದಾರೆ. ಬಳಿಕ ಎಲ್ಲರೂ ಜೊತೆಯಾಗಿ ಕ್ಯಾಮೆರಾಗೆ ಪೋಸ್​ ನೀಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋ ನೋಡಿದ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ‘ಗುಂಟೂರು ಖಾರಂ’ ಚಿತ್ರದ ಗೆಲುವಿಗಾಗಿ ಮಹೇಶ್​ ಬಾಬು ಮತ್ತು ಅವರ ತಂಡಕ್ಕೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

View this post on Instagram

A post shared by Sreeleela (@sreeleela14)

ಈ ಪಾರ್ಟಿಯಲ್ಲಿ ನಿರ್ದೇಶಕ ತ್ರಿವಿಕ್ರಂ ಶ್ರೀನಿವಾಸ್​ ಹಾಗೂ ಸಂಗೀತ ನಿರ್ದೇಶಕ ಥಮನ್​ ಎಸ್​. ಅವರು ಕಾಣಿಸಿಲ್ಲ. ಅವರಿಬ್ಬರು ಯಾಕೆ ಮಿಸ್​ ಆಗಿದ್ದಾರೆ ಎಂಬುದಕ್ಕೆ ಇನ್ನಷ್ಟೇ ಉತ್ತರ ಸಿಗಬೇಕಿದೆ. ಕನ್ನಡದಲ್ಲಿ ಕೆಲವು ಸಿನಿಮಾಗಳನ್ನು ಮಾಡಿರುವ ಶ್ರೀಲೀಲಾ ಅವರು ತೆಲುಗಿನಲ್ಲಿ ಸ್ಟಾರ್​ ನಟರ ಸಿನಿಮಾಗಳಿಗೆ ಹೀರೋಯಿನ್​ ಆಗುತ್ತಿರುವುದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಕನ್ನಡಕ್ಕಿಂತಲೂ ತೆಲುಗಿನಲ್ಲೇ ಅವರು ಹೆಚ್ಚು ಬ್ಯುಸಿ ಆಗಿದ್ದಾರೆ. ‘ಗುಂಟೂರು ಖಾರಂ’ ಬಿಡುಗಡೆ ಬಳಿಕ ಅವರ ಡಿಮ್ಯಾಂಡ್​ ಹೆಚ್ಚಾಗಿದೆ. ಅವರಿಗೆ ಹೊಸ ಹೊಸ ಆಫರ್​ಗಳು ಸಿಗುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:18 pm, Tue, 16 January 24

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ