Guntur Kaaram: ಮಹೇಶ್​ ಬಾಬು ಮನೆಯಲ್ಲಿ ಪಾರ್ಟಿ ಮಾಡಿದ ನಟಿ ಶ್ರೀಲೀಲಾ

|

Updated on: Jan 16, 2024 | 1:21 PM

ಮಹೇಶ್​ ಬಾಬು ಮನೆಯಲ್ಲಿ ‘ಗುಂಟೂರು ಖಾರಂ’ ಸಿನಿಮಾದ ಸಕ್ಸಸ್​ ಪಾರ್ಟಿ ನಡೆದಿದೆ. ಮಹೇಶ್​ ಬಾಬು, ಶ್ರೀಲೀಲಾ, ಮೀನಾಕ್ಷಿ ಚೌಧರಿ, ದಿಲ್​ ರಾಜು, ಮಹೇಶ್​ ಬಾಬು ಪತ್ನಿ ನಮ್ರತಾ ಶಿರೋಡ್ಕರ್​, ಪುತ್ರಿ ಸಿತಾರಾ ಘಟ್ಟಮನೇನಿ ಮುಂತಾದವರು ಪಾರ್ಟಿಯಲ್ಲಿ ಎಂಜಾಯ್​ ಮಾಡಿದ್ದಾರೆ. ಬಳಿಕ ಎಲ್ಲರೂ ಜೊತೆಯಾಗಿ ಕ್ಯಾಮೆರಾಗೆ ಪೋಸ್​ ನೀಡಿದ್ದಾರೆ.

Guntur Kaaram: ಮಹೇಶ್​ ಬಾಬು ಮನೆಯಲ್ಲಿ ಪಾರ್ಟಿ ಮಾಡಿದ ನಟಿ ಶ್ರೀಲೀಲಾ
ಶ್ರೀಲೀಲಾ, ಮಹೇಶ್​ ಬಾಬು, ಮೀನಾಕ್ಷಿ ಚೌಧರಿ
Follow us on

ಕನ್ನಡದ ನಟಿಯರಿಗೆ ಟಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಾಗಿದೆ. ರಶ್ಮಿಕಾ ಮಂದಣ್ಣ ರೀತಿಯೇ ನಟಿ ಶ್ರೀಲೀಲಾ ಕೂಡ ಈಗ ತೆಲುಗು ಚಿತ್ರರಂಗದಲ್ಲಿ ಶೈನ್​ ಆಗುತ್ತಿದ್ದಾರೆ. ಅವರು ನಟಿಸಿರುವ ‘ಗುಂಟೂರು ಖಾರಂ’ ಸಿನಿಮಾ (Guntur Kaaram) ನೂರಾರು ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಈ ಸಿನಿಮಾದಲ್ಲಿ ಮಹೇಶ್​ ಬಾಬು ಅವರಿಗೆ ಜೋಡಿಯಾಗಿ ಶ್ರೀಲೀಲಾ ನಟಿಸಿದ್ದಾರೆ. ಸಿನಿಮಾ ಗೆದ್ದ ಖುಷಿಯಲ್ಲಿ ಮಹೇಶ್ ಬಾಬು (Mahesh Babu) ಅವರು ತಮ್ಮ ಮನೆಯಲ್ಲಿ ಪಾರ್ಟಿ ಆಯೋಜನೆ ಮಾಡಿದ್ದಾರೆ. ಇದರಲ್ಲಿ ಶ್ರೀಲೀಲಾ ಕೂಡ ಭಾಗಿ ಆಗಿದ್ದಾರೆ. ಮಹೇಶ್​ ಬಾಬು ಕುಟುಂಬದವರ ಜೊತೆ ಸೇರಿ ಶ್ರೀಲೀಲಾ (Sreeleela) ಪಾರ್ಟಿ ಮಾಡಿರುವ ಫೋಟೋಗಳು ವೈರಲ್​ ಆಗಿವೆ.

‘ಗುಂಟೂರು ಖಾರಂ’ ಸಿನಿಮಾಗೆ ತ್ರಿವಿಕ್ರಂ ಶ್ರೀನಿವಾಸ್​ ಅವರು ನಿರ್ದೇಶನ ಮಾಡಿದ್ದಾರೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಜನವರಿ 12ರಂದು ಈ ಸಿನಿಮಾ ಬಿಡುಗಡೆ ಆಯಿತು. ಭಾರತದ ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾದ ಕಲೆಕ್ಷನ್​ 200 ಕೋಟಿ ರೂಪಾಯಿ ಸಮೀಪಿಸುತ್ತಿದೆ. ಇದರಿಂದ ಚಿತ್ರತಂಡಕ್ಕೆ ಸಖತ್​ ಖುಷಿ ಆಗಿದೆ. ಹಾಗಾಗಿ ಸೋಮವಾರ (ಜನವರಿ 15) ಮಹೇಶ್ ಬಾಬು ಅವರ ನಿವಾಸದಲ್ಲಿ ಎಲ್ಲರೂ ಸೇರಿ ಪಾರ್ಟಿ ಮಾಡಿದ್ದಾರೆ.

‘ಗುಂಟೂರು ಖಾರಂ’ ಸಿನಿಮಾ ನೋಡಲಿರುವ ಶಾರುಖ್​ ಖಾನ್​; ಮಹೇಶ್​ ಬಾಬು ಫ್ಯಾನ್ಸ್​ಗೆ ಖುಷಿ

‘ಗುಂಟೂರು ಖಾರಂ’ ಸಿನಿಮಾದ ಸಕ್ಸಸ್​ ಪಾರ್ಟಿಯಲ್ಲಿ ಮಹೇಶ್​ ಬಾಬು, ಶ್ರೀಲೀಲಾ, ಮೀನಾಕ್ಷಿ ಚೌಧರಿ, ದಿಲ್​ ರಾಜು, ಮಹೇಶ್​ ಬಾಬು ಪತ್ನಿ ನಮ್ರತಾ ಶಿರೋಡ್ಕರ್​, ಪುತ್ರಿ ಸಿತಾರಾ ಘಟ್ಟಮನೇನಿ ಮುಂತಾದವರು ಎಂಜಾಯ್​ ಮಾಡಿದ್ದಾರೆ. ಬಳಿಕ ಎಲ್ಲರೂ ಜೊತೆಯಾಗಿ ಕ್ಯಾಮೆರಾಗೆ ಪೋಸ್​ ನೀಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋ ನೋಡಿದ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ‘ಗುಂಟೂರು ಖಾರಂ’ ಚಿತ್ರದ ಗೆಲುವಿಗಾಗಿ ಮಹೇಶ್​ ಬಾಬು ಮತ್ತು ಅವರ ತಂಡಕ್ಕೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ಈ ಪಾರ್ಟಿಯಲ್ಲಿ ನಿರ್ದೇಶಕ ತ್ರಿವಿಕ್ರಂ ಶ್ರೀನಿವಾಸ್​ ಹಾಗೂ ಸಂಗೀತ ನಿರ್ದೇಶಕ ಥಮನ್​ ಎಸ್​. ಅವರು ಕಾಣಿಸಿಲ್ಲ. ಅವರಿಬ್ಬರು ಯಾಕೆ ಮಿಸ್​ ಆಗಿದ್ದಾರೆ ಎಂಬುದಕ್ಕೆ ಇನ್ನಷ್ಟೇ ಉತ್ತರ ಸಿಗಬೇಕಿದೆ. ಕನ್ನಡದಲ್ಲಿ ಕೆಲವು ಸಿನಿಮಾಗಳನ್ನು ಮಾಡಿರುವ ಶ್ರೀಲೀಲಾ ಅವರು ತೆಲುಗಿನಲ್ಲಿ ಸ್ಟಾರ್​ ನಟರ ಸಿನಿಮಾಗಳಿಗೆ ಹೀರೋಯಿನ್​ ಆಗುತ್ತಿರುವುದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಕನ್ನಡಕ್ಕಿಂತಲೂ ತೆಲುಗಿನಲ್ಲೇ ಅವರು ಹೆಚ್ಚು ಬ್ಯುಸಿ ಆಗಿದ್ದಾರೆ. ‘ಗುಂಟೂರು ಖಾರಂ’ ಬಿಡುಗಡೆ ಬಳಿಕ ಅವರ ಡಿಮ್ಯಾಂಡ್​ ಹೆಚ್ಚಾಗಿದೆ. ಅವರಿಗೆ ಹೊಸ ಹೊಸ ಆಫರ್​ಗಳು ಸಿಗುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:18 pm, Tue, 16 January 24