Guntur Kaaram: ಮಹೇಶ್​ ಬಾಬು ಮನೆಯಲ್ಲಿ ಪಾರ್ಟಿ ಮಾಡಿದ ನಟಿ ಶ್ರೀಲೀಲಾ

ಮಹೇಶ್​ ಬಾಬು ಮನೆಯಲ್ಲಿ ‘ಗುಂಟೂರು ಖಾರಂ’ ಸಿನಿಮಾದ ಸಕ್ಸಸ್​ ಪಾರ್ಟಿ ನಡೆದಿದೆ. ಮಹೇಶ್​ ಬಾಬು, ಶ್ರೀಲೀಲಾ, ಮೀನಾಕ್ಷಿ ಚೌಧರಿ, ದಿಲ್​ ರಾಜು, ಮಹೇಶ್​ ಬಾಬು ಪತ್ನಿ ನಮ್ರತಾ ಶಿರೋಡ್ಕರ್​, ಪುತ್ರಿ ಸಿತಾರಾ ಘಟ್ಟಮನೇನಿ ಮುಂತಾದವರು ಪಾರ್ಟಿಯಲ್ಲಿ ಎಂಜಾಯ್​ ಮಾಡಿದ್ದಾರೆ. ಬಳಿಕ ಎಲ್ಲರೂ ಜೊತೆಯಾಗಿ ಕ್ಯಾಮೆರಾಗೆ ಪೋಸ್​ ನೀಡಿದ್ದಾರೆ.

Guntur Kaaram: ಮಹೇಶ್​ ಬಾಬು ಮನೆಯಲ್ಲಿ ಪಾರ್ಟಿ ಮಾಡಿದ ನಟಿ ಶ್ರೀಲೀಲಾ
ಶ್ರೀಲೀಲಾ, ಮಹೇಶ್​ ಬಾಬು, ಮೀನಾಕ್ಷಿ ಚೌಧರಿ

Updated on: Jan 16, 2024 | 1:21 PM

ಕನ್ನಡದ ನಟಿಯರಿಗೆ ಟಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಾಗಿದೆ. ರಶ್ಮಿಕಾ ಮಂದಣ್ಣ ರೀತಿಯೇ ನಟಿ ಶ್ರೀಲೀಲಾ ಕೂಡ ಈಗ ತೆಲುಗು ಚಿತ್ರರಂಗದಲ್ಲಿ ಶೈನ್​ ಆಗುತ್ತಿದ್ದಾರೆ. ಅವರು ನಟಿಸಿರುವ ‘ಗುಂಟೂರು ಖಾರಂ’ ಸಿನಿಮಾ (Guntur Kaaram) ನೂರಾರು ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಈ ಸಿನಿಮಾದಲ್ಲಿ ಮಹೇಶ್​ ಬಾಬು ಅವರಿಗೆ ಜೋಡಿಯಾಗಿ ಶ್ರೀಲೀಲಾ ನಟಿಸಿದ್ದಾರೆ. ಸಿನಿಮಾ ಗೆದ್ದ ಖುಷಿಯಲ್ಲಿ ಮಹೇಶ್ ಬಾಬು (Mahesh Babu) ಅವರು ತಮ್ಮ ಮನೆಯಲ್ಲಿ ಪಾರ್ಟಿ ಆಯೋಜನೆ ಮಾಡಿದ್ದಾರೆ. ಇದರಲ್ಲಿ ಶ್ರೀಲೀಲಾ ಕೂಡ ಭಾಗಿ ಆಗಿದ್ದಾರೆ. ಮಹೇಶ್​ ಬಾಬು ಕುಟುಂಬದವರ ಜೊತೆ ಸೇರಿ ಶ್ರೀಲೀಲಾ (Sreeleela) ಪಾರ್ಟಿ ಮಾಡಿರುವ ಫೋಟೋಗಳು ವೈರಲ್​ ಆಗಿವೆ.

‘ಗುಂಟೂರು ಖಾರಂ’ ಸಿನಿಮಾಗೆ ತ್ರಿವಿಕ್ರಂ ಶ್ರೀನಿವಾಸ್​ ಅವರು ನಿರ್ದೇಶನ ಮಾಡಿದ್ದಾರೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಜನವರಿ 12ರಂದು ಈ ಸಿನಿಮಾ ಬಿಡುಗಡೆ ಆಯಿತು. ಭಾರತದ ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾದ ಕಲೆಕ್ಷನ್​ 200 ಕೋಟಿ ರೂಪಾಯಿ ಸಮೀಪಿಸುತ್ತಿದೆ. ಇದರಿಂದ ಚಿತ್ರತಂಡಕ್ಕೆ ಸಖತ್​ ಖುಷಿ ಆಗಿದೆ. ಹಾಗಾಗಿ ಸೋಮವಾರ (ಜನವರಿ 15) ಮಹೇಶ್ ಬಾಬು ಅವರ ನಿವಾಸದಲ್ಲಿ ಎಲ್ಲರೂ ಸೇರಿ ಪಾರ್ಟಿ ಮಾಡಿದ್ದಾರೆ.

‘ಗುಂಟೂರು ಖಾರಂ’ ಸಿನಿಮಾ ನೋಡಲಿರುವ ಶಾರುಖ್​ ಖಾನ್​; ಮಹೇಶ್​ ಬಾಬು ಫ್ಯಾನ್ಸ್​ಗೆ ಖುಷಿ

‘ಗುಂಟೂರು ಖಾರಂ’ ಸಿನಿಮಾದ ಸಕ್ಸಸ್​ ಪಾರ್ಟಿಯಲ್ಲಿ ಮಹೇಶ್​ ಬಾಬು, ಶ್ರೀಲೀಲಾ, ಮೀನಾಕ್ಷಿ ಚೌಧರಿ, ದಿಲ್​ ರಾಜು, ಮಹೇಶ್​ ಬಾಬು ಪತ್ನಿ ನಮ್ರತಾ ಶಿರೋಡ್ಕರ್​, ಪುತ್ರಿ ಸಿತಾರಾ ಘಟ್ಟಮನೇನಿ ಮುಂತಾದವರು ಎಂಜಾಯ್​ ಮಾಡಿದ್ದಾರೆ. ಬಳಿಕ ಎಲ್ಲರೂ ಜೊತೆಯಾಗಿ ಕ್ಯಾಮೆರಾಗೆ ಪೋಸ್​ ನೀಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋ ನೋಡಿದ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ‘ಗುಂಟೂರು ಖಾರಂ’ ಚಿತ್ರದ ಗೆಲುವಿಗಾಗಿ ಮಹೇಶ್​ ಬಾಬು ಮತ್ತು ಅವರ ತಂಡಕ್ಕೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ಈ ಪಾರ್ಟಿಯಲ್ಲಿ ನಿರ್ದೇಶಕ ತ್ರಿವಿಕ್ರಂ ಶ್ರೀನಿವಾಸ್​ ಹಾಗೂ ಸಂಗೀತ ನಿರ್ದೇಶಕ ಥಮನ್​ ಎಸ್​. ಅವರು ಕಾಣಿಸಿಲ್ಲ. ಅವರಿಬ್ಬರು ಯಾಕೆ ಮಿಸ್​ ಆಗಿದ್ದಾರೆ ಎಂಬುದಕ್ಕೆ ಇನ್ನಷ್ಟೇ ಉತ್ತರ ಸಿಗಬೇಕಿದೆ. ಕನ್ನಡದಲ್ಲಿ ಕೆಲವು ಸಿನಿಮಾಗಳನ್ನು ಮಾಡಿರುವ ಶ್ರೀಲೀಲಾ ಅವರು ತೆಲುಗಿನಲ್ಲಿ ಸ್ಟಾರ್​ ನಟರ ಸಿನಿಮಾಗಳಿಗೆ ಹೀರೋಯಿನ್​ ಆಗುತ್ತಿರುವುದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಕನ್ನಡಕ್ಕಿಂತಲೂ ತೆಲುಗಿನಲ್ಲೇ ಅವರು ಹೆಚ್ಚು ಬ್ಯುಸಿ ಆಗಿದ್ದಾರೆ. ‘ಗುಂಟೂರು ಖಾರಂ’ ಬಿಡುಗಡೆ ಬಳಿಕ ಅವರ ಡಿಮ್ಯಾಂಡ್​ ಹೆಚ್ಚಾಗಿದೆ. ಅವರಿಗೆ ಹೊಸ ಹೊಸ ಆಫರ್​ಗಳು ಸಿಗುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:18 pm, Tue, 16 January 24

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us