AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sreeleela: ಸಿನಿಮಾ ಸೋತರೂ ಶ್ರೀಲೀಲಾಗೆ ಭರ್ಜರಿ ಬೇಡಿಕೆ; ಟಾಲಿವುಡ್​ನಲ್ಲಿ ರಶ್ಮಿಕಾ ಮಂದಣ್ಣಗೆ ಚಿಂತೆ ಶುರು?

Rashmika Mandanna: ಕನ್ನಡತಿ ಶ್ರೀಲೀಲಾ ಅವರು ತೆಲುಗು ಚಿತ್ರರಂಗದಲ್ಲಿ ದೊಡ್ಡ ಹೀರೋಯಿನ್​ ಆಗಿ ಬೆಳೆಯುವ ಸೂಚನೆ ಸಿಕ್ಕಿದೆ. ಅದು ರಶ್ಮಿಕಾ ವೃತ್ತಿಜೀವನದ ಮೇಲೆ ಪರಿಣಾಮ ಬೀರುವುದು ಸಹಜ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

Sreeleela: ಸಿನಿಮಾ ಸೋತರೂ ಶ್ರೀಲೀಲಾಗೆ ಭರ್ಜರಿ ಬೇಡಿಕೆ; ಟಾಲಿವುಡ್​ನಲ್ಲಿ ರಶ್ಮಿಕಾ ಮಂದಣ್ಣಗೆ ಚಿಂತೆ ಶುರು?
ಶ್ರೀಲೀಲಾ, ರಶ್ಮಿಕಾ ಮಂದಣ್ಣ
TV9 Web
| Edited By: |

Updated on: Oct 25, 2021 | 9:02 AM

Share

ಚಿತ್ರರಂಗದಲ್ಲಿ ಕಲಾವಿದರ ಅದೃಷ್ಟ ಯಾವಾಗಬೇಕಾದರೂ ಖುಲಾಯಿಸಬಹುದು. ನಟಿ ಶ್ರೀಲೀಲಾ ಅವರಿಗೆ ಈಗ ಲಾಟರಿ ಹೊಡೆದಿದೆ ಎಂಬ ಮಾತು ಟಾಲಿವುಡ್​ ಅಂಗಳದಿಂದ ಕೇಳಿಬರುತ್ತಿದೆ. ಕನ್ನಡದ ‘ಕಿಸ್​’ ಚಿತ್ರದಿಂದ ಪ್ರೇಕ್ಷಕರಿಗೆ ಪರಿಚಯವಾದ ಈ ಅಪ್ಪಟ ಕನ್ನಡತಿಗೆ ತೆಲುಗು ನೆಲದಲ್ಲಿ ಡಿಮ್ಯಾಂಡ್​ ಸೃಷ್ಟಿ ಆಗಿದೆ. ಅವರು ನಟಿಸಿರುವ ತೆಲುಗು ಸಿನಿಮಾ ‘ಪೆಳ್ಳಿ ಸಂದಡಿ’ ಬಾಕ್ಸ್​ ಆಫೀಸ್​ನಲ್ಲಿ ಸೋತಿದೆ. ಅದು ಇಡೀ ಚಿತ್ರತಂಡಕ್ಕೆ ಬೇಸರ ಮೂಡಿಸಿದೆ. ಅದರ ನಡುವೆಯೂ ಶ್ರೀಲೀಲಾಗೆ ಭರ್ಜರಿ ಬೇಡಿಕೆ ಸೃಷ್ಟಿಯಾಗಿದೆ. ಇದು ರಶ್ಮಿಕಾ ಮಂದಣ್ಣ ಚಿಂತೆಗೆ ಕಾರಣವಾದರೂ ಅಚ್ಚರಿ ಏನಿಲ್ಲ.

ಸದ್ಯ ಟಾಲಿವುಡ್​ನಲ್ಲಿ ರಶ್ಮಿಕಾ ಬಹುಬೇಡಿಕೆಯ ನಟಿಯಾಗಿ ಮಿಂಚುತ್ತಿದ್ದಾರೆ. ಅವರಿಗೆ ಪೈಪೋಟಿ ನೀಡುವ ರೀತಿಯಲ್ಲಿ ಶ್ರೀಲೀಲಾ ಎಂಟ್ರಿ ಕೊಟ್ಟಿದ್ದಾರೆ. ‘ಪೆಳ್ಳಿ ಸಂದಡಿ’ ಸಿನಿಮಾದಲ್ಲಿ ಶ್ರೀಲೀಲಾ ಅವರ ನಟನೆ, ಗ್ಲಾಮರ್​ ಕಂಡವರು ಫಿದಾ ಆಗಿದ್ದಾರೆ. ಸದ್ಯ ಟಾಲಿವುಡ್​ ಅಂಗಳದಲ್ಲಿ ಅವರ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಹಲವು ಸಿನಿಮಾ ತಂಡಗಳು ಅವರನ್ನು ನಾಯಕಿಯನ್ನಾಗಿ ಆಯ್ಕೆ ಮಾಡಿಕೊಳ್ಳಲು ಮಾತುಕತೆ ನಡೆಸುತ್ತಿವೆ. ಸ್ಟಾರ್​ ನಟ ರವಿ ತೇಜಾ ಅವರ ಸಿನಿಮಾದಲ್ಲಿ ಶ್ರೀಲೀಲಾಗೆ ಚಾನ್ಸ್​ ಸಿಕ್ಕಿದೆ ಎಂಬ ಮಾಹಿತಿ ಕೇಳಿಬರುತ್ತಿದೆ.

ತೆಲುಗು ಚಿತ್ರರಂಗದ ಪ್ರತಿಷ್ಠಿತ ‘ಗೀತಾ ಆರ್ಟ್ಸ್​’ ನಿರ್ಮಾಣ ಸಂಸ್ಥೆ ಈಗ ಶ್ರೀಲೀಲಾ ಮೇಲೆ ಕಣ್ಣಿಟಿದೆ. ನಿರ್ಮಾಪಕ ಅಲ್ಲು ಅರವಿಂದ್​ ಅವರು ಶ್ರೀಲೀಲಾ ಜೊತೆ ಮೂರು ಬ್ಯಾಕ್​ ಟು ಬ್ಯಾಕ್​ ಸಿನಿಮಾದ ಕಾಲ್​ಶೀಲ್​ ಪಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ತಮ್ಮ ಬ್ಯಾನರ್​ನಲ್ಲಿ ನಿರ್ಮಾಣ ಆಗಲಿರುವ ಸ್ಟಾರ್​ ಸಿನಿಮಾಗಳಿಗೆ ಶ್ರೀಲೀಲಾ ನಾಯಕಿಯಾದರೆ ಒಳಿತು ಎಂಬ ಲೆಕ್ಕಾಚಾರದಲ್ಲಿ ಅಲ್ಲು ಅರವಿಂದ್​ ಅವರಿದ್ದಾರೆ ಎಂಬ ಗುಸುಗುಸು ಟಾಲಿವುಡ್​ನಲ್ಲಿ ಕೇಳಿಬರುತ್ತಿದೆ.

ಒಂದು ವೇಳೆ ಈ ಮಾಹಿತಿ ನಿಜವೇ ಹೌದಾದರೆ ಶ್ರೀಲೀಲಾ ಶೀಘ್ರವೇ ತೆಲುಗು ಚಿತ್ರರಂಗದಲ್ಲಿ ದೊಡ್ಡ ಹೀರೋಯಿನ್​ ಆಗಿ ಬೆಳೆಯಲಿದ್ದಾರೆ. ಅದು ರಶ್ಮಿಕಾ ವೃತ್ತಿಜೀವನದ ಮೇಲೆ ಪರಿಣಾಮ ಬೀರುವುದು ಸಹಜ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಇದು ಕೊಡಗಿನ ಕುವರಿಯ ಚಿಂತೆಗೆ ಕಾರಣ ಆಗಬಹುದು. ಹಾಗಂತ ರಶ್ಮಿಕಾ ಕೇವಲ ಟಾಲಿವುಡ್​ ನಂಬಿಕೊಂಡು ಕೂತಿಲ್ಲ. ಸದ್ಯ ಅವರು ಬಾಲಿವುಡ್​ ಅಂಗಳಕ್ಕೆ ಕಾಲಿಟ್ಟಿದ್ದಾರೆ. ಅಮಿತಾಭ್​ ಬಚ್ಚನ್​ ಜೊತೆ ‘ಗುಡ್​ಬೈ’, ಸಿದ್ದಾರ್ಥ್​ ಮಲ್ಹೋತ್ರಾ ಜೊತೆ ‘ಮಿಷನ್​ ಮಜ್ನು’ ಸಿನಿಮಾ ಮಾಡುತ್ತಿದ್ದಾರೆ.

ಇದನ್ನೂ ಓದಿ:

ತುಂಬಾ ಕಿರಿಕಿರಿ ಮಾಡಿದ್ರೆ ರಶ್ಮಿಕಾ ಹೀಗೆ ಒದಿತಾರೆ; ವಿಡಿಯೋ ಸಮೇತ ವಿವರಿಸಿದ ನಟಿ

ಯಶ್​, ಪ್ರಭಾಸ್​, ಸಮಂತಾರನ್ನೂ ಹಿಂದಿಕ್ಕಿ ರಶ್ಮಿಕಾ ನಂ.1, ದೇವರಕೊಂಡ ನಂ.2: ಇಲ್ಲಿದೆ ಫೋರ್ಬ್ಸ್​ ಪಟ್ಟಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್