AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sreeleela: ಸಿನಿಮಾ ಸೋತರೂ ಶ್ರೀಲೀಲಾಗೆ ಭರ್ಜರಿ ಬೇಡಿಕೆ; ಟಾಲಿವುಡ್​ನಲ್ಲಿ ರಶ್ಮಿಕಾ ಮಂದಣ್ಣಗೆ ಚಿಂತೆ ಶುರು?

Rashmika Mandanna: ಕನ್ನಡತಿ ಶ್ರೀಲೀಲಾ ಅವರು ತೆಲುಗು ಚಿತ್ರರಂಗದಲ್ಲಿ ದೊಡ್ಡ ಹೀರೋಯಿನ್​ ಆಗಿ ಬೆಳೆಯುವ ಸೂಚನೆ ಸಿಕ್ಕಿದೆ. ಅದು ರಶ್ಮಿಕಾ ವೃತ್ತಿಜೀವನದ ಮೇಲೆ ಪರಿಣಾಮ ಬೀರುವುದು ಸಹಜ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

Sreeleela: ಸಿನಿಮಾ ಸೋತರೂ ಶ್ರೀಲೀಲಾಗೆ ಭರ್ಜರಿ ಬೇಡಿಕೆ; ಟಾಲಿವುಡ್​ನಲ್ಲಿ ರಶ್ಮಿಕಾ ಮಂದಣ್ಣಗೆ ಚಿಂತೆ ಶುರು?
ಶ್ರೀಲೀಲಾ, ರಶ್ಮಿಕಾ ಮಂದಣ್ಣ
TV9 Web
| Updated By: ಮದನ್​ ಕುಮಾರ್​|

Updated on: Oct 25, 2021 | 9:02 AM

Share

ಚಿತ್ರರಂಗದಲ್ಲಿ ಕಲಾವಿದರ ಅದೃಷ್ಟ ಯಾವಾಗಬೇಕಾದರೂ ಖುಲಾಯಿಸಬಹುದು. ನಟಿ ಶ್ರೀಲೀಲಾ ಅವರಿಗೆ ಈಗ ಲಾಟರಿ ಹೊಡೆದಿದೆ ಎಂಬ ಮಾತು ಟಾಲಿವುಡ್​ ಅಂಗಳದಿಂದ ಕೇಳಿಬರುತ್ತಿದೆ. ಕನ್ನಡದ ‘ಕಿಸ್​’ ಚಿತ್ರದಿಂದ ಪ್ರೇಕ್ಷಕರಿಗೆ ಪರಿಚಯವಾದ ಈ ಅಪ್ಪಟ ಕನ್ನಡತಿಗೆ ತೆಲುಗು ನೆಲದಲ್ಲಿ ಡಿಮ್ಯಾಂಡ್​ ಸೃಷ್ಟಿ ಆಗಿದೆ. ಅವರು ನಟಿಸಿರುವ ತೆಲುಗು ಸಿನಿಮಾ ‘ಪೆಳ್ಳಿ ಸಂದಡಿ’ ಬಾಕ್ಸ್​ ಆಫೀಸ್​ನಲ್ಲಿ ಸೋತಿದೆ. ಅದು ಇಡೀ ಚಿತ್ರತಂಡಕ್ಕೆ ಬೇಸರ ಮೂಡಿಸಿದೆ. ಅದರ ನಡುವೆಯೂ ಶ್ರೀಲೀಲಾಗೆ ಭರ್ಜರಿ ಬೇಡಿಕೆ ಸೃಷ್ಟಿಯಾಗಿದೆ. ಇದು ರಶ್ಮಿಕಾ ಮಂದಣ್ಣ ಚಿಂತೆಗೆ ಕಾರಣವಾದರೂ ಅಚ್ಚರಿ ಏನಿಲ್ಲ.

ಸದ್ಯ ಟಾಲಿವುಡ್​ನಲ್ಲಿ ರಶ್ಮಿಕಾ ಬಹುಬೇಡಿಕೆಯ ನಟಿಯಾಗಿ ಮಿಂಚುತ್ತಿದ್ದಾರೆ. ಅವರಿಗೆ ಪೈಪೋಟಿ ನೀಡುವ ರೀತಿಯಲ್ಲಿ ಶ್ರೀಲೀಲಾ ಎಂಟ್ರಿ ಕೊಟ್ಟಿದ್ದಾರೆ. ‘ಪೆಳ್ಳಿ ಸಂದಡಿ’ ಸಿನಿಮಾದಲ್ಲಿ ಶ್ರೀಲೀಲಾ ಅವರ ನಟನೆ, ಗ್ಲಾಮರ್​ ಕಂಡವರು ಫಿದಾ ಆಗಿದ್ದಾರೆ. ಸದ್ಯ ಟಾಲಿವುಡ್​ ಅಂಗಳದಲ್ಲಿ ಅವರ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಹಲವು ಸಿನಿಮಾ ತಂಡಗಳು ಅವರನ್ನು ನಾಯಕಿಯನ್ನಾಗಿ ಆಯ್ಕೆ ಮಾಡಿಕೊಳ್ಳಲು ಮಾತುಕತೆ ನಡೆಸುತ್ತಿವೆ. ಸ್ಟಾರ್​ ನಟ ರವಿ ತೇಜಾ ಅವರ ಸಿನಿಮಾದಲ್ಲಿ ಶ್ರೀಲೀಲಾಗೆ ಚಾನ್ಸ್​ ಸಿಕ್ಕಿದೆ ಎಂಬ ಮಾಹಿತಿ ಕೇಳಿಬರುತ್ತಿದೆ.

ತೆಲುಗು ಚಿತ್ರರಂಗದ ಪ್ರತಿಷ್ಠಿತ ‘ಗೀತಾ ಆರ್ಟ್ಸ್​’ ನಿರ್ಮಾಣ ಸಂಸ್ಥೆ ಈಗ ಶ್ರೀಲೀಲಾ ಮೇಲೆ ಕಣ್ಣಿಟಿದೆ. ನಿರ್ಮಾಪಕ ಅಲ್ಲು ಅರವಿಂದ್​ ಅವರು ಶ್ರೀಲೀಲಾ ಜೊತೆ ಮೂರು ಬ್ಯಾಕ್​ ಟು ಬ್ಯಾಕ್​ ಸಿನಿಮಾದ ಕಾಲ್​ಶೀಲ್​ ಪಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ತಮ್ಮ ಬ್ಯಾನರ್​ನಲ್ಲಿ ನಿರ್ಮಾಣ ಆಗಲಿರುವ ಸ್ಟಾರ್​ ಸಿನಿಮಾಗಳಿಗೆ ಶ್ರೀಲೀಲಾ ನಾಯಕಿಯಾದರೆ ಒಳಿತು ಎಂಬ ಲೆಕ್ಕಾಚಾರದಲ್ಲಿ ಅಲ್ಲು ಅರವಿಂದ್​ ಅವರಿದ್ದಾರೆ ಎಂಬ ಗುಸುಗುಸು ಟಾಲಿವುಡ್​ನಲ್ಲಿ ಕೇಳಿಬರುತ್ತಿದೆ.

ಒಂದು ವೇಳೆ ಈ ಮಾಹಿತಿ ನಿಜವೇ ಹೌದಾದರೆ ಶ್ರೀಲೀಲಾ ಶೀಘ್ರವೇ ತೆಲುಗು ಚಿತ್ರರಂಗದಲ್ಲಿ ದೊಡ್ಡ ಹೀರೋಯಿನ್​ ಆಗಿ ಬೆಳೆಯಲಿದ್ದಾರೆ. ಅದು ರಶ್ಮಿಕಾ ವೃತ್ತಿಜೀವನದ ಮೇಲೆ ಪರಿಣಾಮ ಬೀರುವುದು ಸಹಜ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಇದು ಕೊಡಗಿನ ಕುವರಿಯ ಚಿಂತೆಗೆ ಕಾರಣ ಆಗಬಹುದು. ಹಾಗಂತ ರಶ್ಮಿಕಾ ಕೇವಲ ಟಾಲಿವುಡ್​ ನಂಬಿಕೊಂಡು ಕೂತಿಲ್ಲ. ಸದ್ಯ ಅವರು ಬಾಲಿವುಡ್​ ಅಂಗಳಕ್ಕೆ ಕಾಲಿಟ್ಟಿದ್ದಾರೆ. ಅಮಿತಾಭ್​ ಬಚ್ಚನ್​ ಜೊತೆ ‘ಗುಡ್​ಬೈ’, ಸಿದ್ದಾರ್ಥ್​ ಮಲ್ಹೋತ್ರಾ ಜೊತೆ ‘ಮಿಷನ್​ ಮಜ್ನು’ ಸಿನಿಮಾ ಮಾಡುತ್ತಿದ್ದಾರೆ.

ಇದನ್ನೂ ಓದಿ:

ತುಂಬಾ ಕಿರಿಕಿರಿ ಮಾಡಿದ್ರೆ ರಶ್ಮಿಕಾ ಹೀಗೆ ಒದಿತಾರೆ; ವಿಡಿಯೋ ಸಮೇತ ವಿವರಿಸಿದ ನಟಿ

ಯಶ್​, ಪ್ರಭಾಸ್​, ಸಮಂತಾರನ್ನೂ ಹಿಂದಿಕ್ಕಿ ರಶ್ಮಿಕಾ ನಂ.1, ದೇವರಕೊಂಡ ನಂ.2: ಇಲ್ಲಿದೆ ಫೋರ್ಬ್ಸ್​ ಪಟ್ಟಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ