AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ದೇವರಕೊಂಡ ಹೊಸ ಚಿತ್ರದಿಂದ ಹೊರ ನಡೆದ ಶ್ರೀಲೀಲಾ; ‘ಪ್ರೇಮಲು’ ನಾಯಕಿಯ ಎಂಟ್ರಿ?

ವಿಜಯ್ ದೇವರಕೊಂಡಗೆ ‘ಗೀತ ಗೋವಿಂದಂ’ ಬಳಿಕ ಹೇಳಿಕೊಳ್ಳುವಂತ ದೊಡ್ಡ ಗೆಲುವು ಸಿಕ್ಕಿಲ್ಲ. ಹೀಗಾಗಿ, ಅವರು ಮುಂದಿನ ಸಿನಿಮಾಗಳ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಶ್ರೀಲೀಲಾ ‘VD 12’ ಸಿನಿಮಾಗೆ ನಾಯಕಿ ಎಂದು ಮೊದಲೇ ಘೋಷಣೆ ಮಾಡಲಾಗಿತ್ತು. ಈಗ ಶ್ರೀಲೀಲಾ ಸಿನಿಮಾದಿಂದ ಹೊರ ನಡೆದರು.

ವಿಜಯ್ ದೇವರಕೊಂಡ ಹೊಸ ಚಿತ್ರದಿಂದ ಹೊರ ನಡೆದ ಶ್ರೀಲೀಲಾ; ‘ಪ್ರೇಮಲು’ ನಾಯಕಿಯ ಎಂಟ್ರಿ?
ಶ್ರೀಲೀಲಾ-ಮಮಿತಾ
ರಾಜೇಶ್ ದುಗ್ಗುಮನೆ
|

Updated on:Apr 10, 2024 | 11:18 AM

Share

ವಿಜಯ್ ದೇವರಕೊಂಡ (Vijay Devarakonda) ಅವರಿಗೆ ಇತ್ತೀಚೆಗೆ ಅದೃಷ್ಟ ಕೈ ಹಿಡಿಯುತ್ತಿಲ್ಲ. ‘ಲೈಗರ್’ ಸಿನಿಮಾ ಹೀನಾಯವಾಗಿ ಸೋತಿತ್ತು. ‘ಖುಷಿ’ ಸಾಧಾರಣ ಮೆಚ್ಚುಗೆ ಪಡೆದಿದೆ. ಇತ್ತೀಚೆಗೆ ರಿಲೀಸ್ ಆದ ‘ಫ್ಯಾಮಿಲಿ ಸ್ಟಾರ್’ ಮಕಾಡೆ ಮಲಗಿದೆ. ಈಗ ಅವರು ಮುಂದಿನ ಸಿನಿಮಾ ಬಗ್ಗೆ ಗಮನ ಹರಿಸುತ್ತಿದ್ದಾರೆ. ಈ ಚಿತ್ರಕ್ಕೆ ಸದ್ಯಕ್ಕೆ ‘VD 12’ ಎಂದು ಕರೆಯಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಶೀರ್ಷಿಕೆ ಫೈನಲ್ ಆಗಲಿದೆ. ಈಗ ಚಿತ್ರದಿಂದ ಶ್ರೀಲೀಲಾ ಹೊರ ನಡೆದಿದ್ದಾರೆ ಎಂದು ವರದಿ ಆಗಿದೆ.

ವಿಜಯ್ ದೇವರಕೊಂಡಗೆ ‘ಗೀತ ಗೋವಿಂದಂ’ ಬಳಿಕ ಹೇಳಿಕೊಳ್ಳುವಂತ ದೊಡ್ಡ ಗೆಲುವು ಸಿಕ್ಕಿಲ್ಲ. ಹೀಗಾಗಿ, ಅವರು ಮುಂದಿನ ಸಿನಿಮಾಗಳ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಶ್ರೀಲೀಲಾ ‘VD 12’ ಸಿನಿಮಾಗೆ ನಾಯಕಿ ಎಂದು ಮೊದಲೇ ಘೋಷಣೆ ಮಾಡಲಾಗಿತ್ತು. ಆದರೆ, ಸಿನಿಮಾ ಕಾರಣಾಂತರಗಳಿಂದ ವಿಳಂಬ ಆಗುತ್ತಲೇ ಬಂತು. ಹೀಗಾಗಿ, ಶ್ರೀಲೀಲಾ ಸಿನಿಮಾದಿಂದ ಹೊರ ನಡೆದರು. ಬದಲು ಬೇರೆ ನಾಯಕಿಯ ಹುಡುಕಾಟದಲ್ಲಿ ತಂಡ ತೊಡಗಿದೆ.

ಇತ್ತೀಚೆಗೆ ಮಲಯಾಳಂನಲ್ಲಿ ‘ಪ್ರೇಮಲು’ ಸಿನಿಮಾ ರಿಲೀಸ್ ಆಗಿ ಹಿಟ್ ಎನಿಸಿಕೊಂಡಿದೆ. ಈ ಚಿತ್ರದ ನಾಯಕಿ ಮಮಿತಾ ಬೈಜು ಅವರು ಚಿತ್ರದ ನಾಯಕಿ ಆಗಿ ಮಿಂಚಿದ್ದಾರೆ. ಅವರನ್ನು ‘VD 12’ಗೆ ಆಯ್ಕೆ ಮಾಡಿಕೊಳ್ಳಲು ಪ್ಲ್ಯಾನ್ ನಡೆದಿದೆ ಎನ್ನಲಾಗುತ್ತಿದೆ. ಮತ್ತೊಂದುವ ವರದಿ ಪ್ರಕಾರ ‘ಮಿಸ್ಟರ್ ಬಚ್ಚನ್’ ಸಿನಿಮಾದ ಭಾಗ್ಯಶ್ರೀ ಅವರನ್ನು ಕೂಡ ಪರಿಗಣಿಸಲಾಗುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ:  ವಿಜಯ್​ ದೇವರಕೊಂಡ ಸಿನಿಮಾ ಟ್ರೋಲ್​ ಮಾಡಿದವರ ವಿರುದ್ಧ ಸೈಬರ್​ ದೂರು

‘ಜರ್ಸಿ’ ಚಿತ್ರವನ್ನು ನಿರ್ದೇಶನ ಮಾಡಿದ್ದ ಗೌತಮ್ ತಿನ್ನನುರಿ ಅವರು ‘VD 12’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಶ್ರೀಲೀಲಾ ಅವರು ಈಗಾಗಲೇ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿ ಅವರು ನಟಿಸುತ್ತಿದ್ದಾರೆ. ಈ ಕಾರಣಕ್ಕೆ ಒಂದು ಸಿನಿಮಾ ವಿಳಂಬ ಆದರೂ ಅವರ ಬಳಿ ಡೇಟ್ ಹೊಂದಿಸಿಕೊಳ್ಳೋಕೆ ಸಾಧ್ಯವಾಗುವುದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:18 am, Wed, 10 April 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!