AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ದೇವರಕೊಂಡ ಹೊಸ ಚಿತ್ರದಿಂದ ಹೊರ ನಡೆದ ಶ್ರೀಲೀಲಾ; ‘ಪ್ರೇಮಲು’ ನಾಯಕಿಯ ಎಂಟ್ರಿ?

ವಿಜಯ್ ದೇವರಕೊಂಡಗೆ ‘ಗೀತ ಗೋವಿಂದಂ’ ಬಳಿಕ ಹೇಳಿಕೊಳ್ಳುವಂತ ದೊಡ್ಡ ಗೆಲುವು ಸಿಕ್ಕಿಲ್ಲ. ಹೀಗಾಗಿ, ಅವರು ಮುಂದಿನ ಸಿನಿಮಾಗಳ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಶ್ರೀಲೀಲಾ ‘VD 12’ ಸಿನಿಮಾಗೆ ನಾಯಕಿ ಎಂದು ಮೊದಲೇ ಘೋಷಣೆ ಮಾಡಲಾಗಿತ್ತು. ಈಗ ಶ್ರೀಲೀಲಾ ಸಿನಿಮಾದಿಂದ ಹೊರ ನಡೆದರು.

ವಿಜಯ್ ದೇವರಕೊಂಡ ಹೊಸ ಚಿತ್ರದಿಂದ ಹೊರ ನಡೆದ ಶ್ರೀಲೀಲಾ; ‘ಪ್ರೇಮಲು’ ನಾಯಕಿಯ ಎಂಟ್ರಿ?
ಶ್ರೀಲೀಲಾ-ಮಮಿತಾ
ರಾಜೇಶ್ ದುಗ್ಗುಮನೆ
|

Updated on:Apr 10, 2024 | 11:18 AM

Share

ವಿಜಯ್ ದೇವರಕೊಂಡ (Vijay Devarakonda) ಅವರಿಗೆ ಇತ್ತೀಚೆಗೆ ಅದೃಷ್ಟ ಕೈ ಹಿಡಿಯುತ್ತಿಲ್ಲ. ‘ಲೈಗರ್’ ಸಿನಿಮಾ ಹೀನಾಯವಾಗಿ ಸೋತಿತ್ತು. ‘ಖುಷಿ’ ಸಾಧಾರಣ ಮೆಚ್ಚುಗೆ ಪಡೆದಿದೆ. ಇತ್ತೀಚೆಗೆ ರಿಲೀಸ್ ಆದ ‘ಫ್ಯಾಮಿಲಿ ಸ್ಟಾರ್’ ಮಕಾಡೆ ಮಲಗಿದೆ. ಈಗ ಅವರು ಮುಂದಿನ ಸಿನಿಮಾ ಬಗ್ಗೆ ಗಮನ ಹರಿಸುತ್ತಿದ್ದಾರೆ. ಈ ಚಿತ್ರಕ್ಕೆ ಸದ್ಯಕ್ಕೆ ‘VD 12’ ಎಂದು ಕರೆಯಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಶೀರ್ಷಿಕೆ ಫೈನಲ್ ಆಗಲಿದೆ. ಈಗ ಚಿತ್ರದಿಂದ ಶ್ರೀಲೀಲಾ ಹೊರ ನಡೆದಿದ್ದಾರೆ ಎಂದು ವರದಿ ಆಗಿದೆ.

ವಿಜಯ್ ದೇವರಕೊಂಡಗೆ ‘ಗೀತ ಗೋವಿಂದಂ’ ಬಳಿಕ ಹೇಳಿಕೊಳ್ಳುವಂತ ದೊಡ್ಡ ಗೆಲುವು ಸಿಕ್ಕಿಲ್ಲ. ಹೀಗಾಗಿ, ಅವರು ಮುಂದಿನ ಸಿನಿಮಾಗಳ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಶ್ರೀಲೀಲಾ ‘VD 12’ ಸಿನಿಮಾಗೆ ನಾಯಕಿ ಎಂದು ಮೊದಲೇ ಘೋಷಣೆ ಮಾಡಲಾಗಿತ್ತು. ಆದರೆ, ಸಿನಿಮಾ ಕಾರಣಾಂತರಗಳಿಂದ ವಿಳಂಬ ಆಗುತ್ತಲೇ ಬಂತು. ಹೀಗಾಗಿ, ಶ್ರೀಲೀಲಾ ಸಿನಿಮಾದಿಂದ ಹೊರ ನಡೆದರು. ಬದಲು ಬೇರೆ ನಾಯಕಿಯ ಹುಡುಕಾಟದಲ್ಲಿ ತಂಡ ತೊಡಗಿದೆ.

ಇತ್ತೀಚೆಗೆ ಮಲಯಾಳಂನಲ್ಲಿ ‘ಪ್ರೇಮಲು’ ಸಿನಿಮಾ ರಿಲೀಸ್ ಆಗಿ ಹಿಟ್ ಎನಿಸಿಕೊಂಡಿದೆ. ಈ ಚಿತ್ರದ ನಾಯಕಿ ಮಮಿತಾ ಬೈಜು ಅವರು ಚಿತ್ರದ ನಾಯಕಿ ಆಗಿ ಮಿಂಚಿದ್ದಾರೆ. ಅವರನ್ನು ‘VD 12’ಗೆ ಆಯ್ಕೆ ಮಾಡಿಕೊಳ್ಳಲು ಪ್ಲ್ಯಾನ್ ನಡೆದಿದೆ ಎನ್ನಲಾಗುತ್ತಿದೆ. ಮತ್ತೊಂದುವ ವರದಿ ಪ್ರಕಾರ ‘ಮಿಸ್ಟರ್ ಬಚ್ಚನ್’ ಸಿನಿಮಾದ ಭಾಗ್ಯಶ್ರೀ ಅವರನ್ನು ಕೂಡ ಪರಿಗಣಿಸಲಾಗುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ:  ವಿಜಯ್​ ದೇವರಕೊಂಡ ಸಿನಿಮಾ ಟ್ರೋಲ್​ ಮಾಡಿದವರ ವಿರುದ್ಧ ಸೈಬರ್​ ದೂರು

‘ಜರ್ಸಿ’ ಚಿತ್ರವನ್ನು ನಿರ್ದೇಶನ ಮಾಡಿದ್ದ ಗೌತಮ್ ತಿನ್ನನುರಿ ಅವರು ‘VD 12’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಶ್ರೀಲೀಲಾ ಅವರು ಈಗಾಗಲೇ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿ ಅವರು ನಟಿಸುತ್ತಿದ್ದಾರೆ. ಈ ಕಾರಣಕ್ಕೆ ಒಂದು ಸಿನಿಮಾ ವಿಳಂಬ ಆದರೂ ಅವರ ಬಳಿ ಡೇಟ್ ಹೊಂದಿಸಿಕೊಳ್ಳೋಕೆ ಸಾಧ್ಯವಾಗುವುದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:18 am, Wed, 10 April 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?