AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sreeleela: ಈ ಬಾರಿ ಪುಷ್ಪರಾಜ್​ ಜೊತೆ ಕುಣಿಯೋದು ಸಮಂತಾ ಅಲ್ಲ; ಭರ್ಜರಿ ಚಾನ್ಸ್ ಪಡೆದ ಶ್ರೀಲೀಲಾ?

Pushpa 2 Movie: ‘ಪುಷ್ಪ 2’ ಸಿನಿಮಾ ತಂಡದ ಜೊತೆ ಶ್ರೀಲೀಲಾ ಹೆಸರು ತಳುಕು ಹಾಕಿಕೊಂಡಿದೆ. ತೆಲುಗು ಸಿನಿಮಾ ಪ್ರೇಕ್ಷಕರಿಗೆ ಶ್ರೀಲೀಲಾ ಇಷ್ಟವಾಗಿದ್ದಾರೆ. ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

Sreeleela: ಈ ಬಾರಿ ಪುಷ್ಪರಾಜ್​ ಜೊತೆ ಕುಣಿಯೋದು ಸಮಂತಾ ಅಲ್ಲ; ಭರ್ಜರಿ ಚಾನ್ಸ್ ಪಡೆದ ಶ್ರೀಲೀಲಾ?
ಸಮಂತಾ, ಅಲ್ಲು ಅರ್ಜುನ್​, ಶ್ರೀಲೀಲಾ
ಮದನ್​ ಕುಮಾರ್​
|

Updated on: Jul 28, 2023 | 6:18 PM

Share

ನಟಿ ಶ್ರೀಲೀಲಾ (Sreeleela) ಅವರು ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೇ ಟಾಲಿವುಡ್​ನಲ್ಲೂ ಒಳ್ಳೊಳ್ಳೆಯ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ರಶ್ಮಿಕಾ ಮಂದಣ್ಣ ರೀತಿಯೇ ಶ್ರೀಲೀಲಾ ಅವರಿಗೂ ತೆಲುಗಿನ ಸ್ಟಾರ್​ ಹೀರೋಗಳ ಸಿನಿಮಾಗಳಲ್ಲಿ ನಟಿಸುವ ಚಾನ್ಸ್​ ಸಿಗುತ್ತಿದೆ. ಈಗಾಗಲೇ ಅವರು ನಂದಮೂರಿ ಬಾಲಕೃಷ್ಣ ಜೊತೆ ‘ಭಗವಂತ್​ ಕೇಸರಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮಹೇಶ್​ ಬಾಬು ನಟನೆಯ ‘ಗುಂಟೂರು ಖಾರಂ’ ಚಿತ್ರದಲ್ಲೂ ಶ್ರೀಲೀಲಾ ಅಭಿನಯಿಸುತ್ತಿದ್ದಾರೆ. ಈ ನಡುವೆ ಇನ್ನೊಂದು ಸುದ್ದಿ ಹರಿದಾಡುತ್ತಿದೆ. ಅಲ್ಲು ಅರ್ಜುನ್​ ಅಭಿನಯದ ‘ಪುಷ್ಪ 2’ (Pushpa 2 Movie) ಸಿನಿಮಾದಲ್ಲಿನ ಸ್ಪೆಷಲ್​ ಸಾಂಗ್​ಗೆ ಶ್ರೀಲೀಲಾ ಡ್ಯಾನ್ಸ್​ ಮಾಡುವ ಸಾಧ್ಯತೆ ದಟ್ಟವಾಗಿದೆ ಎಂಬ ಮಾತು ಕೇಳಿಬರುತ್ತಿದೆ. ‘ಪುಷ್ಪ’ ಸಿನಿಮಾದಲ್ಲಿ ಸಮಂತಾ ರುತ್​ ಪ್ರಭು (Samantha Ruth Prabhu) ಕುಣಿದಿದ್ದರು. ಸೀಕ್ವೆಲ್​ನಲ್ಲಿ ಆ ಅವಕಾಶ ಶ್ರೀಲೀಲಾ ಪಾಲಾಗಿದೆ ಎನ್ನಲಾಗುತ್ತಿದೆ.

ಸಮಂತಾ ರುತ್​ ಪ್ರಭು ಅವರು ಡ್ಯಾನ್ಸ್ ಮಾಡಿದ್ದ ‘ಉ ಅಂಟಾವಾ ಮಾವ, ಉಊ ಅಂಟಾವಾ ಮಾವ..’ ಹಾಡು ಸೂಪರ್​ ಹಿಟ್​ ಆಗಿತ್ತು. ‘ಪುಷ್ಪ’ ಸಿನಿಮಾ ಗೆಲ್ಲಲು ಆ ಹಾಡಿನ ಜನಪ್ರಿಯತೆ ಕೂಡ ಕಾರಣ. ಹಾಗಾಗಿ ‘ಪುಷ್ಪ 2’ ಸಿನಿಮಾದಲ್ಲೂ ಅಂಥ ಒಂದು ಸ್ಪೆಷಲ್​ ಸಾಂಗ್​ ಇರಲಿದೆ. ಆದರೆ ಅದರಲ್ಲಿ ಸಮಂತಾ ರುತ್​ ಪ್ರಭು ಸ್ಟೆಪ್​ ಹಾಕಲು ಸಾಧ್ಯವಿಲ್ಲ. ಯಾಕೆಂದರೆ Myositis ಕಾಯಿಲೆಗೆ ಹೆಚ್ಚಿನ ಚಿಕಿತ್ಸೆ ಪಡೆಯಲು ಅವರು ಅಮೆರಿಕಕ್ಕೆ ತೆರಳುತ್ತಿದ್ದಾರೆ. ಅದಕ್ಕಾಗಿ ಅವರು ಹಲವು ತಿಂಗಳ ಕಾಲ ಬ್ರೇಕ್​ ಪಡೆಯುತ್ತಿದ್ದಾರೆ. ಈಗ ‘ಪುಷ್ಪ 2’ ತಂಡದ ಮುಂದಿರುವ ಆಯ್ಕೆ ಶ್ರೀಲೀಲಾ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Sakshi Dhoni: ‘ಅಲ್ಲು ಅರ್ಜುನ್​ ಅವರ ಎಲ್ಲ ಸಿನಿಮಾ ನೋಡಿದ್ದೇನೆ’: ಅಭಿಮಾನ ಮೆರೆದ ಧೋನಿ ಪತ್ನಿ ಸಾಕ್ಷಿ

‘ಪುಷ್ಪ 2’ ಸಿನಿಮಾ ಬಗ್ಗೆ ಕೇಳಿಬಂದ ಗಾಸಿಪ್​ಗಳು ಒಂದೆರಡಲ್ಲ. ಆದರೆ ಆ ಬಗ್ಗೆ ಚಿತ್ರತಂಡದವರು ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಈಗ ಈ ಟೀಮ್​ ಜೊತೆ ಶ್ರೀಲೀಲಾ ಹೆಸರು ತಳುಕು ಹಾಕಿಕೊಂಡಿದೆ. ತೆಲುಗು ಸಿನಿಮಾ ಪ್ರೇಕ್ಷಕರಿಗೆ ಶ್ರೀಲೀಲಾ ಇಷ್ಟವಾಗಿದ್ದಾರೆ. ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹೊಸ ಹೊಸ ಸಿನಿಮಾಗಳಿಗೆ ನಾಯಕಿಯಾಗಿ ಆಯ್ಕೆ ಆಗುತ್ತಿರುವ ಅವರಿಗೆ ‘ಪುಷ್ಪ 2’ ಸಿನಿಮಾದ ಹಾಡಿನಲ್ಲಿ ಕಾಣಿಸಿಕೊಳ್ಳುವ ಚಾನ್ಸ್​ ಸಿಕ್ಕರೆ ಅಚ್ಚರಿ ಏನಿಲ್ಲ. ಈ ಬಗ್ಗೆ ಅಧಿಕೃತ ಮಾಹಿತಿ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಇದನ್ನೂ ಓದಿ: Pushpa 2 Bus Accident: ‘ಪುಷ್ಪ 2’ ಚಿತ್ರೀಕರಣಕ್ಕೆ ತೆರಳಿದ್ದ ಕಲಾವಿದರ ಬಸ್​ ಅಪಘಾತ; ಫೋಟೋ ನೋಡಿ ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ಗಾಬರಿ

ಸುಕುಮಾರ್ ಅವರು ‘ಪುಷ್ಪ 2’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಅವರು ನಾಯಕಿಯಾಗಿ ನಟಿಸುತ್ತಿದ್ದಾರೆ. ಮೊದಲ ಪಾರ್ಟ್ ಸೂಪರ್​ ಹಿಟ್​ ಆದ ಕಾರಣ ಸೀಕ್ವೆಲ್​ ಮೇಲೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಆ ನಿರೀಕ್ಷೆಯ ಮಟ್ಟವನ್ನು ತಲುಪಬೇಕು ಎಂಬ ಗುರಿ ಇಟ್ಟುಕೊಂಡು ಚಿತ್ರತಂಡ ಕಾರ್ಯನಿರತವಾಗಿದೆ. ‘ಮೈತ್ರಿ ಮೂವೀ ಮೆಕರ್ಸ್​’ ಸಂಸ್ಥೆ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದು, ಶೂಟಿಂಗ್ ಪ್ರಗತಿಯಲ್ಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ