AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sreeleela: ಈ ಬಾರಿ ಪುಷ್ಪರಾಜ್​ ಜೊತೆ ಕುಣಿಯೋದು ಸಮಂತಾ ಅಲ್ಲ; ಭರ್ಜರಿ ಚಾನ್ಸ್ ಪಡೆದ ಶ್ರೀಲೀಲಾ?

Pushpa 2 Movie: ‘ಪುಷ್ಪ 2’ ಸಿನಿಮಾ ತಂಡದ ಜೊತೆ ಶ್ರೀಲೀಲಾ ಹೆಸರು ತಳುಕು ಹಾಕಿಕೊಂಡಿದೆ. ತೆಲುಗು ಸಿನಿಮಾ ಪ್ರೇಕ್ಷಕರಿಗೆ ಶ್ರೀಲೀಲಾ ಇಷ್ಟವಾಗಿದ್ದಾರೆ. ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

Sreeleela: ಈ ಬಾರಿ ಪುಷ್ಪರಾಜ್​ ಜೊತೆ ಕುಣಿಯೋದು ಸಮಂತಾ ಅಲ್ಲ; ಭರ್ಜರಿ ಚಾನ್ಸ್ ಪಡೆದ ಶ್ರೀಲೀಲಾ?
ಸಮಂತಾ, ಅಲ್ಲು ಅರ್ಜುನ್​, ಶ್ರೀಲೀಲಾ
ಮದನ್​ ಕುಮಾರ್​
|

Updated on: Jul 28, 2023 | 6:18 PM

Share

ನಟಿ ಶ್ರೀಲೀಲಾ (Sreeleela) ಅವರು ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೇ ಟಾಲಿವುಡ್​ನಲ್ಲೂ ಒಳ್ಳೊಳ್ಳೆಯ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ರಶ್ಮಿಕಾ ಮಂದಣ್ಣ ರೀತಿಯೇ ಶ್ರೀಲೀಲಾ ಅವರಿಗೂ ತೆಲುಗಿನ ಸ್ಟಾರ್​ ಹೀರೋಗಳ ಸಿನಿಮಾಗಳಲ್ಲಿ ನಟಿಸುವ ಚಾನ್ಸ್​ ಸಿಗುತ್ತಿದೆ. ಈಗಾಗಲೇ ಅವರು ನಂದಮೂರಿ ಬಾಲಕೃಷ್ಣ ಜೊತೆ ‘ಭಗವಂತ್​ ಕೇಸರಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮಹೇಶ್​ ಬಾಬು ನಟನೆಯ ‘ಗುಂಟೂರು ಖಾರಂ’ ಚಿತ್ರದಲ್ಲೂ ಶ್ರೀಲೀಲಾ ಅಭಿನಯಿಸುತ್ತಿದ್ದಾರೆ. ಈ ನಡುವೆ ಇನ್ನೊಂದು ಸುದ್ದಿ ಹರಿದಾಡುತ್ತಿದೆ. ಅಲ್ಲು ಅರ್ಜುನ್​ ಅಭಿನಯದ ‘ಪುಷ್ಪ 2’ (Pushpa 2 Movie) ಸಿನಿಮಾದಲ್ಲಿನ ಸ್ಪೆಷಲ್​ ಸಾಂಗ್​ಗೆ ಶ್ರೀಲೀಲಾ ಡ್ಯಾನ್ಸ್​ ಮಾಡುವ ಸಾಧ್ಯತೆ ದಟ್ಟವಾಗಿದೆ ಎಂಬ ಮಾತು ಕೇಳಿಬರುತ್ತಿದೆ. ‘ಪುಷ್ಪ’ ಸಿನಿಮಾದಲ್ಲಿ ಸಮಂತಾ ರುತ್​ ಪ್ರಭು (Samantha Ruth Prabhu) ಕುಣಿದಿದ್ದರು. ಸೀಕ್ವೆಲ್​ನಲ್ಲಿ ಆ ಅವಕಾಶ ಶ್ರೀಲೀಲಾ ಪಾಲಾಗಿದೆ ಎನ್ನಲಾಗುತ್ತಿದೆ.

ಸಮಂತಾ ರುತ್​ ಪ್ರಭು ಅವರು ಡ್ಯಾನ್ಸ್ ಮಾಡಿದ್ದ ‘ಉ ಅಂಟಾವಾ ಮಾವ, ಉಊ ಅಂಟಾವಾ ಮಾವ..’ ಹಾಡು ಸೂಪರ್​ ಹಿಟ್​ ಆಗಿತ್ತು. ‘ಪುಷ್ಪ’ ಸಿನಿಮಾ ಗೆಲ್ಲಲು ಆ ಹಾಡಿನ ಜನಪ್ರಿಯತೆ ಕೂಡ ಕಾರಣ. ಹಾಗಾಗಿ ‘ಪುಷ್ಪ 2’ ಸಿನಿಮಾದಲ್ಲೂ ಅಂಥ ಒಂದು ಸ್ಪೆಷಲ್​ ಸಾಂಗ್​ ಇರಲಿದೆ. ಆದರೆ ಅದರಲ್ಲಿ ಸಮಂತಾ ರುತ್​ ಪ್ರಭು ಸ್ಟೆಪ್​ ಹಾಕಲು ಸಾಧ್ಯವಿಲ್ಲ. ಯಾಕೆಂದರೆ Myositis ಕಾಯಿಲೆಗೆ ಹೆಚ್ಚಿನ ಚಿಕಿತ್ಸೆ ಪಡೆಯಲು ಅವರು ಅಮೆರಿಕಕ್ಕೆ ತೆರಳುತ್ತಿದ್ದಾರೆ. ಅದಕ್ಕಾಗಿ ಅವರು ಹಲವು ತಿಂಗಳ ಕಾಲ ಬ್ರೇಕ್​ ಪಡೆಯುತ್ತಿದ್ದಾರೆ. ಈಗ ‘ಪುಷ್ಪ 2’ ತಂಡದ ಮುಂದಿರುವ ಆಯ್ಕೆ ಶ್ರೀಲೀಲಾ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Sakshi Dhoni: ‘ಅಲ್ಲು ಅರ್ಜುನ್​ ಅವರ ಎಲ್ಲ ಸಿನಿಮಾ ನೋಡಿದ್ದೇನೆ’: ಅಭಿಮಾನ ಮೆರೆದ ಧೋನಿ ಪತ್ನಿ ಸಾಕ್ಷಿ

‘ಪುಷ್ಪ 2’ ಸಿನಿಮಾ ಬಗ್ಗೆ ಕೇಳಿಬಂದ ಗಾಸಿಪ್​ಗಳು ಒಂದೆರಡಲ್ಲ. ಆದರೆ ಆ ಬಗ್ಗೆ ಚಿತ್ರತಂಡದವರು ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಈಗ ಈ ಟೀಮ್​ ಜೊತೆ ಶ್ರೀಲೀಲಾ ಹೆಸರು ತಳುಕು ಹಾಕಿಕೊಂಡಿದೆ. ತೆಲುಗು ಸಿನಿಮಾ ಪ್ರೇಕ್ಷಕರಿಗೆ ಶ್ರೀಲೀಲಾ ಇಷ್ಟವಾಗಿದ್ದಾರೆ. ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹೊಸ ಹೊಸ ಸಿನಿಮಾಗಳಿಗೆ ನಾಯಕಿಯಾಗಿ ಆಯ್ಕೆ ಆಗುತ್ತಿರುವ ಅವರಿಗೆ ‘ಪುಷ್ಪ 2’ ಸಿನಿಮಾದ ಹಾಡಿನಲ್ಲಿ ಕಾಣಿಸಿಕೊಳ್ಳುವ ಚಾನ್ಸ್​ ಸಿಕ್ಕರೆ ಅಚ್ಚರಿ ಏನಿಲ್ಲ. ಈ ಬಗ್ಗೆ ಅಧಿಕೃತ ಮಾಹಿತಿ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಇದನ್ನೂ ಓದಿ: Pushpa 2 Bus Accident: ‘ಪುಷ್ಪ 2’ ಚಿತ್ರೀಕರಣಕ್ಕೆ ತೆರಳಿದ್ದ ಕಲಾವಿದರ ಬಸ್​ ಅಪಘಾತ; ಫೋಟೋ ನೋಡಿ ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ಗಾಬರಿ

ಸುಕುಮಾರ್ ಅವರು ‘ಪುಷ್ಪ 2’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಅವರು ನಾಯಕಿಯಾಗಿ ನಟಿಸುತ್ತಿದ್ದಾರೆ. ಮೊದಲ ಪಾರ್ಟ್ ಸೂಪರ್​ ಹಿಟ್​ ಆದ ಕಾರಣ ಸೀಕ್ವೆಲ್​ ಮೇಲೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಆ ನಿರೀಕ್ಷೆಯ ಮಟ್ಟವನ್ನು ತಲುಪಬೇಕು ಎಂಬ ಗುರಿ ಇಟ್ಟುಕೊಂಡು ಚಿತ್ರತಂಡ ಕಾರ್ಯನಿರತವಾಗಿದೆ. ‘ಮೈತ್ರಿ ಮೂವೀ ಮೆಕರ್ಸ್​’ ಸಂಸ್ಥೆ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದು, ಶೂಟಿಂಗ್ ಪ್ರಗತಿಯಲ್ಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?