AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSMB 28: ಮಹೇಶ್​ ಬಾಬು ಸಿನಿಮಾದಲ್ಲಿ ನಟಿಸಲ್ಲ ಎಂದ ಸ್ಟಾರ್​ ನಟಿಯರು; ಕಾರಣ ಏನು?

Mahesh Babu | SSMB28 ಮಹೇಶ್​ ಬಾಬು ಸಿನಿಮಾದಲ್ಲಿ ಹೀರೋಯಿನ್​ ಆಗುವ ಚಾನ್ಸ್​ ಸಿಕ್ಕರೆ ಯಾವ ನಟಿಯೂ ‘ನೋ’ ಎನ್ನುವುದಿಲ್ಲ. ಆದರೆ ಈ ನಟಿಯರು ಆಫರ್​ ರಿಜೆಕ್ಟ್​ ಮಾಡಿದ್ದಕ್ಕೊಂದು ಕಾರಣ ಇದೆ.

SSMB 28: ಮಹೇಶ್​ ಬಾಬು ಸಿನಿಮಾದಲ್ಲಿ ನಟಿಸಲ್ಲ ಎಂದ ಸ್ಟಾರ್​ ನಟಿಯರು; ಕಾರಣ ಏನು?
ಮಹೇಶ್ ಬಾಬು
Follow us
TV9 Web
| Updated By: ಮದನ್​ ಕುಮಾರ್​

Updated on: Jul 12, 2022 | 11:48 AM

ನಟ ಮಹೇಶ್​ ಬಾಬು (Mahesh Babu) ಅವರು ಸದ್ಯ ‘ಸರ್ಕಾರು ವಾರಿ ಪಾಟ’ ಸಿನಿಮಾದ ಯಶಸ್ಸಿನಲ್ಲಿ ತೇಲುತ್ತಿದ್ದಾರೆ. ಈ ವರ್ಷ ತೆರೆಕಂಡ ಈ ಚಿತ್ರ ಸೂಪರ್​ ಹಿಟ್​ ಆಯಿತು. ಬಳಿಕ ಅವರು ಫ್ಯಾಮಿಲಿ ಜೊತೆ ಫಾರಿನ್​ ಟ್ರಿಪ್​ ಹೊಗಿದ್ದರು. ಈಗ ಅವರ ಮುಂದಿನ ಸಿನಿಮಾ ಬಗ್ಗೆ ಚರ್ಚೆ ಶುರುವಾಗಿದೆ. ಖ್ಯಾತ ನಿರ್ದೇಶಕ ತ್ರಿವಿಕ್ರಮ್​ ಶ್ರೀನಿವಾಸ್​ (Trivikram Srinivas) ಜೊತೆ ಮಹೇಶ್​ ಬಾಬು ಕೈ ಜೋಡಿಸಲಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಕೂಡ ಆಗಿದೆ. ಈ ಸಿನಿಮಾದ ಪಾತ್ರವರ್ಗದ ಕುರಿತು ಹಲವು ಬಗೆಯ ಮಾಹಿತಿ ಹರಿದಾಡುತ್ತಿದೆ. ಇದು ಮಹೇಶ್​ ಬಾಬು ಅವರ 28ನೇ (SSMB28) ಸಿನಿಮಾವಾಗಿದ್ದು, ಇದರಲ್ಲಿ ನಟಿಸಲು ಕೆಲವು ಹೀರೋಯಿನ್ಸ್​ ಹಿಂದೇಟು ಹಾಕುತ್ತಿದ್ದಾರೆ ಎಂಬ ಮಾತು ಕೇಳಿಬಂದಿದೆ.

ಮಹೇಶ್​ ಬಾಬು-ತ್ರಿವಿಕ್ರಮ್​ ಕಾಂಬಿನೇಷನ್​ನ ಸಿನಿಮಾಗೆ ಪೂಜಾ ಹೆಗ್ಡೆ ನಾಯಕಿ. ಈ ಸಿನಿಮಾದಲ್ಲಿ ಸೆಕೆಂಡ್​ ಹೀರೋಯಿನ್​ ಪಾತ್ರ ಕೂಡ ಇರಲಿದೆಯಂತೆ. ಆದರೆ ಆ ಪಾತ್ರದಲ್ಲಿ ನಟಿಸಲು ಕೆಲವು ಸ್ಟಾರ್​ ನಾಯಕಿಯರು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. ಶ್ರೀಲೀಲಾ, ನಭಾ ನಟೇಶ್​ ಹಾಗೂ ನಿಧಿ ಅಗರ್​ವಾಲ್​ ಅವರಿಗೆ ಆಫರ್​ ನೀಡಲಾಗಿತ್ತು. ಆದರೆ ಅವರು ಆ ಪಾತ್ರವನ್ನು ಒಪ್ಪಿಕೊಂಡಿಲ್ಲ ಎಂದು ತೆಲುಗಿನ ಕೆಲವು ಮಾಧ್ಯಮಗಳು ವರದಿ ಮಾಡಿವೆ. ಈ ಬಗ್ಗೆ ಚಿತ್ರತಂಡದಿಂದಾಗಲೇ ಅಥವಾ ಈ ನಟಿಯರಿಂದಾಗಲೀ ಸ್ಪಷ್ಟನೆ ಸಿಕ್ಕಿಲ್ಲ.

ಮಹೇಶ್​ ಬಾಬು ಸಿನಿಮಾದಲ್ಲಿ ಹೀರೋಯಿನ್​ ಆಗುವ ಚಾನ್ಸ್​ ಸಿಕ್ಕರೆ ಯಾವ ನಟಿಯೂ ‘ನೋ’ ಎನ್ನುವುದಿಲ್ಲ. ಆದರೆ ಎರಡನೇ ನಾಯಕಿ ಪಾತ್ರಕ್ಕೆ ಹೆಚ್ಚು ಮಹತ್ವ ಇಲ್ಲದ ಕಾರಣ ನಭಾ ನಟೇಶ್​, ಶ್ರೀಲೀಲಾ ಹಾಗೂ ನಿಧಿ ಅಗರ್​ವಾಲ್​ ಅವರು ಈ ಆಫರ್​ ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಅಂತಿಮವಾಗಿ ಯಾರು ಆ ಪಾತ್ರಕ್ಕೆ ಆಯ್ಕೆ ಆಗುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ
Image
‘ಸಮಂತಾ ಆಂಟಿ ನನ್ನ ಬೆಸ್ಟ್​ ಫ್ರೆಂಡ್​’ ಎಂದ ಮಹೇಶ್​ ಬಾಬು ಪುತ್ರಿ ಸಿತಾರಾ; ವಿಡಿಯೋ ವೈರಲ್​
Image
Sarkaru Vaari Paata Twitter review: ‘ಸರ್ಕಾರು ವಾರಿ ಪಾಟ’ ಚಿತ್ರ ನೋಡಿ ಮಹೇಶ್​ ಬಾಬು ಫ್ಯಾನ್ಸ್​ ಏನಂದ್ರು?
Image
ಹಿಂದಿ ಚಿತ್ರರಂಗದ ಎಂಟ್ರಿ ಬಗ್ಗೆ ಮಹೇಶ್​ ಬಾಬುಗೆ ಪದೇಪದೇ ಪ್ರಶ್ನೆ; ಅವರು ಕೊಟ್ಟ ಖಡಕ್ ಉತ್ತರ ಹೇಗಿತ್ತು ನೋಡಿ
Image
‘ಹೆಚ್ಚೆಚ್ಚು ಹೆಮ್ಮೆ ಪಡುವಂತೆ ಮಾಡುತ್ತಿದ್ದೀಯ’; ಮಗಳು ಸಿತಾರಾ ಬಗ್ಗೆ ಮಹೇಶ್​ ಬಾಬು ವಿಶೇಷ ಮಾತು

ತ್ರಿವಿಕ್ರಮ್​ ಜೊತೆಗಿನ ಸಿನಿಮಾದ ಕೆಲಸಗಳು ಮುಗಿದ ಬಳಿಕ ಮಹೇಶ್​ ಬಾಬು ಅವರು ರಾಜಮೌಳಿ ಜೊತೆ ಕೈ ಜೋಡಿಸಲಿದ್ದಾರೆ. ಆ ಸಿನಿಮಾ ಬಗ್ಗೆಯೂ ಸಖತ್​ ನಿರೀಕ್ಷೆ ಇದೆ. ಆ ಕುರಿತು ಹೆಚ್ಚಿನ ಅಪ್​​ಡೇಟ್​ ಪಡೆಯಲು ಫ್ಯಾನ್ಸ್​ ಕಾದಿದ್ದಾರೆ.

ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ