AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ತಂಡಕ್ಕೆ ಏಳು ಕೋಟಿ ಹಣ ಉಳಿಸಿದ ನಟಿ ಶ್ರೀಲೀಲಾ

Pushpa 2: 2023 ರಲ್ಲಿ ಬಿಡುಗಡೆ ಆಗಿದ್ದ ‘ಪುಷ್ಪ’ ಸಿನಿಮಾದ ‘ಊ ಅಂಟಾವ’ ಐಟಂ ಹಾಡು ಭಾರಿ ಹಿಟ್ ಆಗಿತ್ತು. ಪುಷ್ಪ 2 ಸಿನಿಮಾದಲ್ಲಿಯೂ ಐಟಂ ಹಾಡಿನ ಬಗ್ಗೆ ವಿಶೇಷ ಕಾಳಜಿವಹಿಸಲಾಗಿದ್ದು, ಶ್ರೀಲೀಲಾ ಐಟಂ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಶ್ರೀಲೀಲಾರಿಂದ ಚಿತ್ರತಂಡಕ್ಕೆ ಏಳು ಕೋಟಿ ಹಣ ಉಳಿದಿದೆ ಹೇಗೆ?

‘ಪುಷ್ಪ 2’ ತಂಡಕ್ಕೆ ಏಳು ಕೋಟಿ ಹಣ ಉಳಿಸಿದ ನಟಿ ಶ್ರೀಲೀಲಾ
ಮಂಜುನಾಥ ಸಿ.
|

Updated on: Nov 15, 2024 | 11:49 AM

Share

‘ಪುಷ್ಪ 2’ ಸಿನಿಮಾ ಇನ್ನು 20 ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಟ್ರೈಲರ್ ಇನ್ನೆರಡು ದಿನಕ್ಕೆ ಅಂದರೆ ನವೆಂಬರ್ 17ರಂದು ಬಹು ಅದ್ಧೂರಿಯಾಗಿ ಬಿಡುಗಡೆ ಆಗಲಿದೆ. ಸಿನಿಮಾದ ನಾಯಕಿ ರಶ್ಮಿಕಾ ಮಂದಣ್ಣ ಹಂಚಿಕೊಂಡಿರುವ ಮಾಹಿತಿಯಂತೆ ಸಿನಿಮಾದ ಭಾಗಷಃ ಚಿತ್ರೀಕರಣ ಮುಗಿದಿದೆ. ಸ್ವತಃ ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೆ ತಮ್ಮ ಡಬ್ಬಿಂಗ್ ಮುಗಿಸಿದ್ದಾರೆ. ಸಿನಿಮಾದ ಐಟಂ ಹಾಡಿನ ಚಿತ್ರೀಕರಣ ಇನ್ನೂ ಪೂರ್ಣವಾಗಿಲ್ಲ ಎನ್ನಲಾಗುತ್ತಿದೆ. ಐಟಂ ಹಾಡಿಗೆ ಹಲವು ನಟಿಯರನ್ನು ಪರಿಗಣಿಸಿದ್ದ ನಿರ್ದೇಶಕ ಸುಕುಮಾರ್, ಕೊನೆಗೆ ಕನ್ನಡತಿ ಶ್ರೀಲೀಲಾರನ್ನು ಆಯ್ಕೆ ಮಾಡಿದ್ದಾರೆ. ನಟಿ ಶ್ರೀಲೀಲಾ ಇಂದ ಚಿತ್ರತಂಡಕ್ಕೆ ಬರೋಬ್ಬರಿ ಏಳು ಕೋಟಿ ರೂಪಾಯಿ ಹಣ ಉಳಿದಿದೆ.

2021 ರಲ್ಲಿ ಬಿಡುಗಡೆ ಆಗಿದ್ದ ‘ಪುಷ್ಪ’ ಸಿನಿಮಾದಲ್ಲಿ ಸಮಂತಾ ಐಟಂ ಹಾಡಿನಲ್ಲಿ ಕುಣಿದಿದ್ದರು. ಈ ಹಾಡು ಭಾರಿ ದೊಡ್ಡ ಹಿಟ್ ಆಗಿತ್ತು. ಸಿನಿಮಾ ಬಿಡುಗಡೆಗೆ ಮುಂಚೆ ಬಿಡುಗಡೆ ಆಗಿದ್ದ ಈ ಹಾಡು, ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆತರುವಲ್ಲಿ ಪ್ರಮುಖ ಪಾತ್ರವಹಿಸಿತ್ತು. ಹಾಗಾಗಿ ‘ಪುಷ್ಪ 2’ ಸಿನಿಮಾದ ಐಟಂ ಹಾಡಿನ ಬಗ್ಗೆಯೂ ಸಹ ಚಿತ್ರತಂಡ ಗಂಭೀರವಾಗಿ ಪರಿಗಣಿಸಿದ್ದು, ಸ್ಟಾರ್ ನಾಯಕಿಯನ್ನು ಐಟಂ ಹಾಡಿಗೆ ಕರೆತರಲು ಸಾಕಷ್ಟು ಪ್ರಯತ್ನ ನಡೆಸಿತ್ತು.

ಬಾಲಿವುಡ್ ನಟಿಯರಾದ ಶ್ರದ್ಧಾ ಕಪೂರ್, ಕಿಯಾರಾ ಅಡ್ವಾಣಿ ಇನ್ನೂ ಕೆಲವರನ್ನು ಕೇಳಲಾಗಿತ್ತು. ಶ್ರದ್ಧಾ ಕಪೂರ್ ಬಹುತೇಕ ಫೈನಲ್ ಸಹ ಆಗಿತ್ತು. ಆದರೆ ಕೊನೆಗೆ ಮತ್ತೆ ಮನಸ್ಸು ಬದಲಾಯಿಸಿದ ಚಿತ್ರತಂಡ ಶ್ರೀಲೀಲಾರನ್ನೇ ಐಟಂ ಹಾಡಿಗೆ ಹಾಕಿಕೊಂಡಿತು. ಇದರಿಂದಾಗಿ ಚಿತ್ರತಂಡಕ್ಕೆ ಏಳು ಕೋಟಿ ರೂಪಾಯಿ ಹಣ ಉಳಿತಾಯವಾಗಿದೆಯಂತೆ. ಶ್ರದ್ಧಾ ಕಪೂರ್, ‘ಪುಷ್ಪ 2’ ಐಟಂ ಹಾಡಿಗೆ ಡ್ಯಾನ್ಸ್ ಮಾಡಲು ಬರೋಬ್ಬರಿ 8 ಕೋಟಿ ರೂಪಾಯಿ ಸಂಭಾವನೆ ಕೇಳಿದ್ದರಂತೆ. ಆದರೆ ಶ್ರೀಲೀಲಾ ಕೇವಲ ಒಂದು ಕೋಟಿ ಪಡೆದು ಐಟಂ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ:‘ಪುಷ್ಪ 2’ ಐಟಂ ಹಾಡಿನಿಂದ ಶ್ರೀಲೀಲಾಗೆ ಕಾದಿದೆಯಾ ಆಪತ್ತು?

ಶ್ರೀಲೀಲಾ ಅದ್ಭುತವಾದ ಡ್ಯಾನ್ಸರ್, ಯಾವುದೇ ಮಾದರಿಯ ಡ್ಯಾನ್ಸ್ ಅನ್ನೂ ಸಹ ಲೀಲಾಜಾಲವಾಗಿ ಮಾಡಬಲ್ಲರು. ಅಲ್ಲು ಅರ್ಜುನ್ ಅಂಥಹಾ ಉತ್ತಮ ಡ್ಯಾನ್ಸರ್ ಜೊತೆಗೆ ಅವರ ಎನರ್ಜಿಗೆ ಮ್ಯಾಚ್ ಆಗುವ ನಟಿ ಎಂಬ ಕಾರಣಕ್ಕೆ ಶ್ರೀಲೀಲಾರನ್ನು ಚಿತ್ರತಂಡ ಆಯ್ಕೆ ಮಾಡಿದೆ. ಶ್ರೀಲೀಲಾ ತೆಲುಗು, ಈಗ ಬಾಲಿವುಡ್​ನಲ್ಲೂ ತೊಡಗಿಕೊಂಡಿರುವ ಕಾರಣ ಸಿನಿಮಾಕ್ಕೆ ಒಳ್ಳೆಯ ಪ್ರಚಾರವೂ ಆಗುತ್ತದೆ ಎಂಬ ಲೆಕ್ಕಾಚಾರವೂ ಇದರ ಹಿಂದೆ ಇದೆ.

‘ಪುಷ್ಪ 2’ ಸಿನಿಮಾ ಡಿಸೆಂಬರ್ 5 ಕ್ಕೆ ಬಿಡುಗಡೆ ಆಗುತ್ತಿದೆ. ಭಾರಿ ದೊಡ್ಡ ಮಟ್ಟದಲ್ಲಿ ಸಿನಿಮಾ ಬಿಡುಗಡೆಗೆ ಪ್ಲ್ಯಾನ್ ಮಾಡಲಾಗಿದೆ. ಸುಕುಮಾರ್ ನಿರ್ದೇಶನ ಮಾಡಿರುವ ಈ ಸಿನಿಮಾ, ಈವರೆಗೆ ಬಿಡುಗಡೆ ಆಗಿರುವ ಎಲ್ಲ ಸಿನಿಮಾಗಳ ದಾಖಲೆಯನ್ನು ಪುಡಿಗಟ್ಟಲಿದೆ ಎಂಬ ನಿರೀಕ್ಷೆ ಹುಟ್ಟಿಸಿದೆ. ಸಿನಿಮಾವನ್ನು ಅಮೆರಿಕ, ಯುಎಇ, ರಷ್ಯಾ, ಜಪಾನ್ ಇನ್ನೂ ಕೆಲವು ದೇಶಗಳಲ್ಲಿ ಒಟ್ಟಿಗೆ ಬಿಡುಗಡೆ ಆಗಲಿದೆ. ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್, ಫಹಾದ್ ಫಾಸಿಲ್, ಜಗಪತಿ ಬಾಬು, ಸುನಿಲ್ ಇನ್ನೂ ಹಲವರು ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ