AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ದೇವರಕೊಂಡ ಸಿನಿಮಾದಿಂದ ಹೊರನಡೆದ ಶ್ರೀಲೀಲಾ: ಬದಲಿ ನಟಿ ರಶ್ಮಿಕಾ?

Sreeleela: ಕನ್ನಡತಿ ನಟಿ ಶ್ರೀಲೀಲಾ ಈಗ ತೆಲುಗು ಚಿತ್ರರಂಗದಲ್ಲಿ ಸಖತ್ ಆಗಿ ಮಿಂಚುತ್ತಿದ್ದಾರೆ. ಇತ್ತೀಚೆಗಷ್ಟೆ ಹ್ಯಾಂಡ್ಸಮ್ ನಟ ವಿಜಯ್ ದೇವರಕೊಂಡ ಜೊತೆಗೆ ಹೊಸ ಸಿನಿಮಾ ಒಪ್ಪಿಕೊಂಡಿದ್ದ ಶ್ರೀಲೀಲಾ, ಇದೀಗ ಆ ಸಿನಿಮಾದಿಂದ ಹೊರಬಂದಿದ್ದಾರೆ.

ವಿಜಯ್ ದೇವರಕೊಂಡ ಸಿನಿಮಾದಿಂದ ಹೊರನಡೆದ ಶ್ರೀಲೀಲಾ: ಬದಲಿ ನಟಿ ರಶ್ಮಿಕಾ?
ಮಂಜುನಾಥ ಸಿ.
|

Updated on: Oct 29, 2023 | 2:57 PM

Share

ಕನ್ನಡತಿ, ನಟಿ ಶ್ರೀಲೀಲಾ (Sreeleela) ಕನ್ನಡ ಚಿತ್ರರಂಗದ ಮೂಲಕ ನಟನೆಗೆ ಕಾಲಿಟ್ಟು ಈಗ ತೆಲುಗು ಚಿತ್ರರಂಗದಲ್ಲಿ ಮಿರಿ-ಮಿರಿ ಮಿಂಚುತ್ತಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಪ್ರಸ್ತುತ ಅತ್ಯಂತ ಬ್ಯುಸಿ ನಟಿ ಆಗಿದ್ದಾರೆ ಶ್ರೀಲೀಲಾ. ಅವರ ಕೈಯಲ್ಲಿ ಈಗ ಆರು ತೆಲುಗು ಸಿನಿಮಾಗಳಿವೆ. ಬಹುತೇಕ ಎಲ್ಲವೂ ಬಿಗ್​ ಬಜೆಟ್ ಸ್ಟಾರ್ ಸಿನಿಮಾಗಳು.

ಸಿನಿಮಾಗಳೇನೋ ಒಂದರ ಹಿಂದೆ ಒಂದು ಶ್ರೀಲೀಲಾರನ್ನು ಅರಸಿ ಬರುತ್ತಿದೆ, ಆದರೆ ಇದೇ ಅವರಿಗೆ ಸಮಸ್ಯೆಯನ್ನೂ ತಂದಿದೆ. ಶ್ರೀಲೀಲಾಗೆ ಡೇಟ್ಸ್​ಗಳ ಸಮಸ್ಯೆ ಎದುರಾಗಿದ್ದು ಕೆಲವು ಒಳ್ಳೆಯ ಸಿನಿಮಾಗಳನ್ನು ಕೈಬಿಡಲೇ ಬೇಕಾದ ಅನಿವಾರ್ಯತೆ ಎದುರಾಗಿದೆ.

ವಿಜಯ್ ದೇವರಕೊಂಡ ನಟಿಸಲಿರುವ ಹೊಸ ಸಿನಿಮಾಕ್ಕೆ ಶ್ರೀಲೀಲಾ ನಾಯಕಿಯಾಗಿ ಆಯ್ಕೆ ಆಗಿದ್ದರು. ಗೌತಮ್ ತಿನ್ನನೂರಿ ನಿರ್ದೇಶಿಸಲಿದ್ದ ಆಕ್ಷನ್ ಸಿನಿಮಾದ ಮುಹೂರ್ತವೂ ನಡೆದಿತ್ತು. ಕೆಲವೇ ದಿನಗಳಲ್ಲಿ ಸಿನಿಮಾದ ಚಿತ್ರೀಕರಣವೂ ಆರಂಭವಾಗಲಿತ್ತು. ಆದರೆ ಈಗ ಶ್ರೀಲೀಲಾ ಸಿನಿಮಾದಿಂದ ಹೊರನಡೆದಿದ್ದಾರೆ ಎನ್ನಲಾಗುತ್ತಿದೆ. ವಿಜಯ್ ದೇವರಕೊಂಡ ಜೊತೆಗಿನ ಸಿನಿಮಾ ಮಾತ್ರವೇ ಅಲ್ಲದೆ ಮತ್ತೊಂದು ದೊಡ್ಡ ಬ್ಯಾನರ್​ನ ಸಿನಿಮಾದಿಂದಲೂ ಶ್ರೀಲೀಲಾ ಹೊರಗೆ ಹೋಗಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಅಭಿಮಾನಿಗಳಿಗೆ ಹಾರ್ಟ್ ಕೊಟ್ಟ ನಟಿ ಶ್ರೀಲೀಲಾ

ಶ್ರೀಲೀಲಾ ಹೊರನಡೆದ ಕಾರಣ ತೆರವಾಗಿರುವ ನಾಯಕಿ ಸ್ಥಾನಕ್ಕೆ ರಶ್ಮಿಕಾ ಮಂದಣ್ಣರನ್ನು ಕರೆತರಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇನ್ನು ಕೆಲವು ಮೂಲಗಳ ಪ್ರಕಾರ, ‘ಏಜೆಂಟ್’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿರುವ ಸಾಕ್ಷಿ ವೈದ್ಯ ಅವರನ್ನು ಸಂಪರ್ಕಿಸಿದ್ದು ಅವರು ಸಹ ನಾಯಕಿಯಾಗಿ ನಟಿಸಲು ಒಪ್ಪಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ಶ್ರೀಲೀಲಾ ನಟನೆಯ ‘ಭಗವಂತ್ ಕೇಸರಿ’ ಸಿನಿಮಾ ಕೆಲವು ದಿನಗಳ ಹಿಂದಷ್ಟೆ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ. ‘ಆದಿಕೇಶವಲು’, ‘ಎಕ್ಸ್​ಟ್ರಾ ಆರ್ಡಿನರಿ ಮ್ಯಾನ್’ ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’, ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗಳಲ್ಲಿ ಶ್ರೀಲೀಲಾ ಪ್ರಸ್ತುತ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ