AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಸೋಲುಗಳಿಂದ ಕಂಗೆಟ್ಟ ನಟಿ ಶ್ರೀಲೀಲಾ; ಬೇಕಿದೆ ದೊಡ್ಡ ಗೆಲುವು

ತೆಲುಗು ಚಿತ್ರರಂಗದಲ್ಲಿ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದ ನಟಿ ಶ್ರೀಲೀಲಾ ಪ್ರಸ್ತುತ ಕಠಿಣ ಹಂತದಲ್ಲಿದ್ದಾರೆ. ಸತತ ಬಾಕ್ಸ್ ಆಫೀಸ್ ಸೋಲುಗಳಿಂದಾಗಿ ಅವರಿಗೆ ಹೊಸ ಅವಕಾಶಗಳು ಕಡಿಮೆಯಾಗಿವೆ. 'ಧಮಾಕಾ' ಯಶಸ್ಸಿನ ನಂತರ ಅನೇಕ ಚಿತ್ರಗಳಲ್ಲಿ ನಟಿಸಿದರೂ, ಬಹುತೇಕ ಚಿತ್ರಗಳು ವಿಫಲವಾಗಿವೆ. ತನ್ನ ವೃತ್ತಿಜೀವನವನ್ನು ಉಳಿಸಿಕೊಳ್ಳಲು ಶ್ರೀಲೀಲಾಗೆ ಒಂದು ದೊಡ್ಡ ಹಿಟ್ ಅಥವಾ ಬ್ರೇಕ್ ಅತ್ಯಗತ್ಯವಾಗಿದೆ.

ಸತತ ಸೋಲುಗಳಿಂದ ಕಂಗೆಟ್ಟ ನಟಿ ಶ್ರೀಲೀಲಾ; ಬೇಕಿದೆ ದೊಡ್ಡ ಗೆಲುವು
ಶ್ರೀಲೀಲಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 15, 2026 | 8:05 AM

Share

ತೆಲುಗು ಚಿತ್ರರಂಗದಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ ಅಪಾರ ಜನಪ್ರಿಯತೆ ಮತ್ತು ಕ್ರೇಜ್ ಗಳಿಸಿಕೊಂಡ ನಟಿ ಶ್ರೀಲೀಲಾ ಪ್ರಸ್ತುತ ಕಠಿಣ ಹಂತವನ್ನು ಎದುರಿಸುತ್ತಿದ್ದಾರೆ. ‘ಪೆಲ್ಲಿ ಸಂದಡಿ’ ಚಿತ್ರದ ಮೂಲಕ ನಾಯಕಿಯಾಗಿ ಪಾದಾರ್ಪಣೆ ಮಾಡಿದ ಈ ಕರಾವಳಿ ಬೆಡಗಿ, ತನ್ನ ಮೊದಲ ಚಿತ್ರದಲ್ಲೇ ಪ್ರೇಕ್ಷಕರ ಮನಗೆದ್ದಿದ್ದರು. ಅದಾದ ನಂತರ ಮಾಸ್ ಮಹಾರಾಜ ರವಿತೇಜ ಜೊತೆ ನಟಿಸಿದ ‘ಧಮಾಕಾ’ ಚಿತ್ರವು ಬ್ಲಾಕ್‌ಬಸ್ಟರ್ ಹಿಟ್ ಆಗುವ ಮೂಲಕ ಶ್ರೀಲೀಲಾ ಅವರ ಸ್ಟಾರ್‌ಡಮ್ ಅನ್ನು ರಾತ್ರೋರಾತ್ರಿ ಹೆಚ್ಚಿಸಿತು. ಇವರ ಅದ್ಭುತ ನೃತ್ಯ, ಸೌಂದರ್ಯ ಮತ್ತು ನಟನೆಗೆ ಫಿದಾ ಆದ ನಿರ್ಮಾಪಕರು ಸಾಲು ಸಾಲು ಆಫರ್‌ಗಳನ್ನು ನೀಡ ತೊಡಗಿದರು. ಇದರ ಬೆನ್ನಲ್ಲೇ ನಂದಮೂರಿ ಬಾಲಕೃಷ್ಣ ಅವರ ‘ಭಗವಂತ ಕೇಸರಿ’ ಚಿತ್ರದಲ್ಲೂ ಒಂದು ಪ್ರಮುಖ ಪಾತ್ರ ಮಾಡಿ ಯಶಸ್ಸು ಪಡೆದರು.

ಆದರೆ, ಈ ಆರಂಭಿಕ ಯಶಸ್ಸು ಬಹಳ ದಿನಗಳ ಕಾಲ ಉಳಿಯಲಿಲ್ಲ. ಒಂದೆಡೆ ಸ್ಟಾರ್ ಹೀರೊಗಳು ಹಾಗೂ ಇನ್ನೊಂದೆಡೆ ಯುವ ನಟರ ಸಿನಿಮಾಗಳಲ್ಲಿ ಸತತವಾಗಿ ಬ್ಯುಸಿಯಾಗಿದ್ದ ಶ್ರೀಲೀಲಾಗೆ ಇತ್ತೀಚಿನ ದಿನಗಳಲ್ಲಿ ಅದೃಷ್ಟ ಕೈಕೊಟ್ಟಿದೆ. ಅವರು ನಟಿಸಿದ ಬ್ಯಾಕ್ ಟು ಬ್ಯಾಕ್ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಸಾಲು ಸಾಲು ಸೋಲನ್ನು ಕಾಣುತ್ತಿವೆ. ಟಾಲಿವುಡ್‌ನಲ್ಲಿ ಹಿಟ್ ಕೊಡುವ ಪ್ರಯತ್ನದ ನಡುವೆಯೇ ತಮಿಳು ಚಿತ್ರರಂಗಕ್ಕೂ ಕಾಲಿಟ್ಟ ಇವರು, ಶಿವಕಾರ್ತಿಕೇಯನ್ ನಾಯಕರಾಗಿದ್ದ ‘ಪರಾಶಕ್ತಿ’ ಚಿತ್ರದ ಮೂಲಕ ಕಾಲಿವುಡ್ ಪ್ರವೇಶಿಸಿದರು. ಆದರೆ ಭಾರಿ ನಿರೀಕ್ಷೆ ಮೂಡಿಸಿದ್ದ ಆ ಚಿತ್ರವೂ ಸಹ ವಿಫಲವಾಯಿತು. ಇನ್ನು ಇತ್ತೀಚೆಗೆ ಪವರ್ ಸ್ಟಾರ್ ಪವನ್ ಕಲ್ಯಾಣ್ ಕಾಂಬಿನೇಷನ್‌ನಲ್ಲಿ ಮೂಡಿಬಂದ ‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ಮೇಲಂತೂ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು, ಆದರೆ ದುರದೃಷ್ಟವಶಾತ್ ಈ ಸಿನಿಮಾ ಕೂಡ ಬಾಕ್ಸ್ ಆಫೀಸ್‌ನಲ್ಲಿ ಮಕಾಡೆ ಮಲಗಿತು.

ತೆಲುಗಿನಲ್ಲಿ ಇದುವರೆಗೆ ಸುಮಾರು ಹತ್ತು ಚಿತ್ರಗಳಲ್ಲಿ ನಟಿಸಿರುವ ಶ್ರೀಲೀಲಾಗೆ ಕೈಹಿಡಿದಿದ್ದು ಕೇವಲ ‘ಧಮಾಕಾ’ ಮತ್ತು ‘ಭಗವಂತ ಕೇಸರಿ’ ಚಿತ್ರಗಳು ಮಾತ್ರ. ಈ ಸತತ ಸೋಲುಗಳ ಪರಿಣಾಮವಾಗಿ ಈಗ ಶ್ರೀಲೀಲಾಗೆ ಚಿತ್ರರಂಗದಲ್ಲಿ ಹೊಸ ಅವಕಾಶಗಳು ಮತ್ತು ಆಫರ್‌ಗಳು ಗಣನೀಯವಾಗಿ ಕಡಿಮೆಯಾಗಿವೆ. ಸಾಲು ಸಾಲು ಫ್ಲಾಪ್‌ಗಳಿಂದ ಕಂಗೆಟ್ಟಿರುವ ಈ ನಟಿಗೆ ಚಿತ್ರರಂಗದಲ್ಲಿ ತನ್ನ ಸ್ಥಾನವನ್ನು ಗಟ್ಟಿಯಾಗಿ ಉಳಿಸಿಕೊಳ್ಳಲು ಸದ್ಯ ಒಂದು ದೊಡ್ಡ ಬ್ರೇಕ್ ಅಥವಾ ಬ್ಲಾಕ್‌ಬಸ್ಟರ್ ಯಶಸ್ಸಿನ ತುರ್ತು ಅಗತ್ಯವಿದೆ. ಸದ್ಯಕ್ಕೆ ಕೈಯಲ್ಲಿ ದೊಡ್ಡ ಸಿನಿಮಾಗಳಿಲ್ಲದ ಕಾರಣ ಅವರು ಸರಿಯಾದ ಕಥೆ ಮತ್ತು ಬ್ರೇಕ್‌ಗಾಗಿ ಕಾಯುತ್ತಿದ್ದಾರೆ.

ಇದನ್ನೂ ಓದಿ: ಪ್ರಕೃತಿ ಮಧ್ಯೆ ಕಳೆದು ಹೋದ ಕನ್ನಡದ ನಟಿ ಶ್ರೀಲೀಲಾ

ಸಿನಿಮಾಗಳಲ್ಲಿ ಅವಕಾಶಗಳು ತಗ್ಗಿದ್ದರೂ ಸೋಷಿಯಲ್ ಮೀಡಿಯಾದಲ್ಲಿ ಮಾತ್ರ ಶ್ರೀಲೀಲಾ ಅವರ ಕ್ರೇಜ್ ಕಮ್ಮಿಯಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಸಕ್ರಿಯರಾಗಿರುವ ಇವರು, ತಮ್ಮ ಹೊಸ ಹೊಸ ಗ್ಲಾಮರಸ್ ಫೋಟೋ ಶೂಟ್‌ಗಳು ಮತ್ತು ವೀಡಿಯೊಗಳನ್ನು ನಿಯಮಿತವಾಗಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಶ್ರೀಲೀಲಾ ಅವರ ಈ ಕ್ಯೂಟ್ ಲುಕ್ಸ್‌ಗೆ ಯುವ ವೀಕ್ಷಕರು ಫಿದಾ ಆಗುತ್ತಿದ್ದು, ಸಾಮಾಜಿಕ ಜಾಲತಾಣಗಳ ಮೂಲಕವೇ ಅವರು ಪ್ರೇಕ್ಷಕರಿಗೆ ಹತ್ತಿರವಾಗುಳಿಯುವ ಪ್ರಯತ್ನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಉಡುಪಿ ಕೃಷ್ಣನ ದರ್ಶನ ಪಡೆದ ಅನಂತ್​​ ಅಂಬಾನಿ
ಉಡುಪಿ ಕೃಷ್ಣನ ದರ್ಶನ ಪಡೆದ ಅನಂತ್​​ ಅಂಬಾನಿ
ಯಜ್ಞ-ಯಾಗಾದಿಗಳಲ್ಲಿ ಯಾವ ಸಮಿತ್ತುಗಳನ್ನು ಅರ್ಪಿಸಿದರೆ ಏನು ಫಲ?
ಯಜ್ಞ-ಯಾಗಾದಿಗಳಲ್ಲಿ ಯಾವ ಸಮಿತ್ತುಗಳನ್ನು ಅರ್ಪಿಸಿದರೆ ಏನು ಫಲ?
ನಾಯಕತ್ವ ಬದಲಾದರೂ ಕೋಲಾರ ಕಾಂಗ್ರೆಸ್​ನಲ್ಲಿ ಮುಗಿಯದ ಬಣ ಬಡಿದಾಟ
ನಾಯಕತ್ವ ಬದಲಾದರೂ ಕೋಲಾರ ಕಾಂಗ್ರೆಸ್​ನಲ್ಲಿ ಮುಗಿಯದ ಬಣ ಬಡಿದಾಟ
ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ
ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ
‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ
‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ