AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮನಿಕೆ ಮಗೆ ಹಿತೆ’ ರೀಲ್ಸ್ ಮಾಡುವಂತೆ ದುಂಬಾಲು ಬಿದ್ದ ಅಭಿಮಾನಿಗಳ ಆಸೆ ನೆರವೇರಿಸಿದ ನಟಿ; ವಿಡಿಯೋ ನೋಡಿ

Sreelekha Mitra: ಬೆಂಗಾಳಿ ನಟಿ ಅಭಿಮಾನಿಗಳ ಕೋರಿಕೆಗೆ ಕೊನೆಗೂ ಯೆಸ್ ಅಂದಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಅವರು ‘ಮನಿಕೆ ಮಗೆ ಹಿತೆ’ಯ ರೀಲ್ಸ್ ಮಾಡಿದ್ದು, ವೈರಲ್ ಆಗಿದೆ.

‘ಮನಿಕೆ ಮಗೆ ಹಿತೆ’ ರೀಲ್ಸ್ ಮಾಡುವಂತೆ ದುಂಬಾಲು ಬಿದ್ದ ಅಭಿಮಾನಿಗಳ ಆಸೆ ನೆರವೇರಿಸಿದ ನಟಿ; ವಿಡಿಯೋ ನೋಡಿ
ನಟಿ ಶ್ರೀಲೇಖಾ ಮಿತ್ರ
TV9 Web
| Edited By: |

Updated on: Nov 17, 2021 | 3:26 PM

Share

‘ಮನಿಕೆ ಮಗೆ ಹಿತೆ’ ಹಾಡು ಅಂತರ್ಜಾಲದಲ್ಲಿ ಬಹುದೊಡ್ಡ ಹವಾ ಸೃಷ್ಟಿಸಿದ್ದು, ಖ್ಯಾತ ತಾರೆಯರಿಂದ ಹಿಡಿದು ಪ್ರತಿಯೊಬ್ಬರೂ ಆ ಹಾಡಿಗೆ ರೀಲ್ಸ್ ತಯಾರಿಸಿ ಹರಿಬಿಡುತ್ತಿದ್ದಾರೆ. ಶ್ರೀಲಂಕಾ ಮೂಲದ ಯೋಹಾನಿ ದಿಲೋಕಾ ಡಿ ಸಿಲ್ವಾ ಈ ಹಾಡಿನ ಕವರ್ ಸಾಂಗ್ ರಚಿಸಿ, ಯುಟ್ಯೂಬ್​ಗೆ ಅಪ್​ಲೋಡ್ ಮಾಡಿದಾಗ, ಅದು ಇಷ್ಟು ದೊಡ್ಡ ಜನಪ್ರಿಯತೆ ಪಡೆಯಬಹುದು ಎಂದು ಕನಸಿನಲ್ಲೂ ಊಹಿಸಿರಲಿಲ್ಲವೇನೋ! ಅದೇನೇ ಇದ್ದರೂ ಸೆಲೆಬ್ರಿಟಿಗಳು ಆ ಹಾಡಿಗೆ ತಮ್ಮ ವರ್ಷನ್ ಸೇರಿಸಿ, ಅಪ್ ಲೋಡ್ ಮಾಡಿ, ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗುತ್ತಿದ್ದಾರೆ. ಒಂದು ವೇಳೆ ಸೆಲೆಬ್ರಿಟಿಗಳು ತಾವಾಗಿಯೇ ಮನಿಕೆ ಮಗೆ ಹಿತೆಗೆ ಸ್ಟೆಪ್ ಹಾಕದಿದ್ದರೆ, ಅಭಿಮಾನಿಗಳು ಗೋಗರೆದು, ವಿಡಿಯೋ ಹರಿಬಿಡುವಂತೆ ಕೋರಿಕೊಳ್ಳುವುದೂ ಇದೆ. ಖ್ಯಾತ ಬೆಂಗಾಳಿ ನಟಿ ಶ್ರೀಲೇಖಾ ಮಿತ್ರ ಈ ಸಾಲಿಗೆ ತಾಜಾ ಉದಾಹರಣೆ.

ಬೆಂಗಾಳಿ ನಟಿಯಾಗಿರುವ  ಶ್ರೀಲೇಖಾ ಮಿತ್ರ, ಮನಿಕೆ ಮಗೆ ಹಿತೆ ಹಾಡಿನ ಬಂಗಾಳಿ ಅವತರಣಿಕೆಗೆ ಹೆಜ್ಜೆ ಹಾಕಿದ್ದಾರೆ. ಮೂಲ ಸಿಂಹಳೀ ಭಾಷೆಯ ಹಾಡಿನ ಬದಲಾಗಿ, ಬಂಗಾಳಿ ಜಾನಪದ ಸೊಗಡನ್ನು ಹೊಂದಿರುವ ಅವತರಣಿಕೆಗೆ ಹೆಜ್ಜೆ ಹಾಕಿರುವುದು ಮೆಚ್ಚುಗೆಗೆ ಪಾತ್ರವಾಗಿದ್ದು, ಅಭಿಮಾನಿಗಳು ಫಿದಾ ಆಗಿದ್ದಾರೆ. ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಶ್ರೀಲೇಖಾ, ‘ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇನೆ’ ಎಂದು ಬರೆದಿದ್ದಾರೆ. ಅವರು ಹಾಗೆ ಬರೆಯಲೂ ಕಾರಣವಿದೆ.

ಇತ್ತೀಚೆಗಷ್ಟೇ ಶ್ರೀಲೇಖಾ ತಮ್ಮ ಸ್ಟೋರಿಯಲ್ಲಿ ‘ಮನಿಕೆ ಮಗೆ ಹಿತೆ’ಯ ಕುರಿತಾಗಿ ಬರೆದುಕೊಂಡಿದ್ದರು. ಅದರ ನಂತರ ಅಭಿಮಾನಿಗಳು ಅವರಿಗೆ ‘ಮನಿಕೆ ಮಗೆ ಹಿತೆ’ಗೆ ರೀಲ್ಸ್ ಮಾಡುವಂತೆ ನಟಿಗೆ ದುಂಬಾಲು ಬಿದ್ದಿದ್ದಾರೆ. ಆಗ ವಿಡಿಯೋ ಮಾಡಿ ಅಪ್​ಲೋಡ್ ಮಾಡುವುದಾಗಿ ಮಾತು ನೀಡಿದ್ದ ಶ್ರೀಲೇಖಾ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.

ಶ್ರೀಲೇಖಾ ಹಂಚಿಕೊಂಡ ವಿಡಿಯೊ ಇಲ್ಲಿದೆ:

‘ಮನಿಕೆ ಮಗೆ ಹಿತೆ’ಯ ಮೂಲ ಬಂಗಾಳಿ ಅವತರಣಿಕೆ ಇಲ್ಲಿದೆ: ಬೆಂಗಾಳಿ ನಟಿಯಾಗಿರುವ ಶ್ರೀಲೇಖಾ ಹಲವು ಖ್ಯಾತ ಚಿತ್ರಗಳಲ್ಲಿ ಬಣ್ಣಹಚ್ಚಿದ್ದಾರೆ. ಸ್ವೆಟರ್, ಭೂಟರ್ ಭಬಿಷ್ಯೋತ್, ಒನ್ಸ್ ಅಪಾನ್ ಎ ಟೈಮ್ ಇನ್ ಕೋಲ್ಕತ್ತಾ ಮೊದಲಾದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ:

Viral Video: ಘಟಂ ತಾಳವಾದ್ಯದ ಜೊತೆ ಮನಿಕೆ ಮಗೆ ಹಿತೆ ಹಾಡು; ವೈರಲ್ ಆಯ್ತು ವಿಡಿಯೊ

Photos: ಶಿವಣ್ಣನ ಜತೆ ವಿಶಾಲ್​ ಮಾತುಕತೆ; ಪುನೀತ್​ ಫೋಟೋಗೆ ಹಾರ ಹಾಕಿ ನಮಿಸಿದ ತಮಿಳು ನಟ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ