AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರೂಪಕಿ ಅವಾಚ್ಯ ಶಬ್ದಗಳಿಂದ ಬೈದ ಖ್ಯಾತ ನಟ ಅರೆಸ್ಟ್; ತಕ್ಷಣವೇ ಸಿಕ್ತು ಜಾಮೀನು

ಶ್ರೀನಾಥ್ ಭಾಸಿ ಅವರು ಮಲಯಾಳಂನಲ್ಲಿ ಗುರುತಿಸಿಕೊಂಡಿದ್ದಾರೆ. ‘ಹೋಮ್’ ಸೇರಿ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ.  ಅವರಿಗೆ ಮಾಲಿವುಡ್​ನಲ್ಲಿ ಸಾಕಷ್ಟು ಬೇಡಿಕೆ ಇದೆ. ಈಗ ಅವರು ಕೆಟ್ಟ ಕಾರಣಕ್ಕೆ ಸುದ್ದಿಯಲ್ಲಿದ್ದಾರೆ.

ನಿರೂಪಕಿ ಅವಾಚ್ಯ ಶಬ್ದಗಳಿಂದ ಬೈದ ಖ್ಯಾತ ನಟ ಅರೆಸ್ಟ್; ತಕ್ಷಣವೇ ಸಿಕ್ತು ಜಾಮೀನು
ಶ್ರೀನಾಥ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 27, 2022 | 5:53 PM

Share

ಸೆಲೆಬ್ರಿಟಿಗಳು ಕೆಲವೊಮ್ಮೆ ಗೊತ್ತಿದ್ದೂ ತಪ್ಪು ಮಾಡುತ್ತಾರೆ. ಇದರಿಂದ ಅವರು ಸಾಕಷ್ಟು ತೊಂದರೆ ಎದುರಿಸಬೇಕಾಗುತ್ತದೆ. ಈಗ ಮಲಯಾಳಂ ನಟ ಶ್ರೀನಾಥ್ ಭಾಸಿ (Sreenath Bhasi) ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಯೂಟ್ಯೂಬ್ (YouTube) ಚಾನೆಲ್ ಒಂದರ ಮಹಿಳಾ ಆ್ಯಂಕರ್ ವಿರುದ್ಧ ಅವರು ಕೆಟ್ಟ ಪದಗಳನ್ನು ಬಳಕೆ ಮಾಡಿದ್ದರು. ಈ ಸಂಬಂಧ ಸಂತ್ರಸ್ತೆ ದೂರು ದಾಖಲು ಮಾಡಿದ್ದರು. ಈ ದೂರನ್ನು ಆಧರಿಸಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದು, ಶ್ರೀನಾಥ್ ಅವರನ್ನು ಬಂಧಿಸಲಾಗಿತ್ತು. ಆ ಬಳಿಕ ಜಾಮೀನಿನ ಮೇಲೆ ಅವರು ಹೊರಬಂದಿದ್ದಾರೆ.

ಶ್ರೀನಾಥ್ ಭಾಸಿ ಅವರು ಮಲಯಾಳಂನಲ್ಲಿ ಗುರುತಿಸಿಕೊಂಡಿದ್ದಾರೆ. ‘ಹೋಮ್’ ಸೇರಿ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ.  ಅವರಿಗೆ ಮಾಲಿವುಡ್​ನಲ್ಲಿ ಸಾಕಷ್ಟು ಬೇಡಿಕೆ ಇದೆ. ಈಗ ಅವರು ಕೆಟ್ಟ ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಶ್ರೀನಾಥ್​​ರನ್ನು ಬಂಧಿಸಿರುವ ಬಗ್ಗೆ ಅವರ ಅಭಿಮಾನಿಗಳಿಗೆ ಬೇಸರ ಉಂಟಾಗಿದೆ.

ನಡೆದಿದ್ದೇನು?

ಇದನ್ನೂ ಓದಿ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?
Image
ಕಿರುತೆರೆ ಜಗತ್ತಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ ಇವರೇ ನೋಡಿ; ಒಂದು ದಿನಕ್ಕೆ ಎಷ್ಟು ಲಕ್ಷ?
Image
‘ಕೆಜಿಎಫ್: ಚಾಪ್ಟರ್​​ 2’ ಸಿನಿಮಾ ಹಿಟ್​ ಆದ್ಮೇಲೆ ಶ್ರೀನಿಧಿ ಶೆಟ್ಟಿ ಕೇಳ್ತಿರುವ ಸಂಭಾವನೆ ಎಷ್ಟು ಕೋಟಿ?
Image
1992ರಲ್ಲಿ ಐಶ್ವರ್ಯಾ ರೈ ಪಡೆದ ಸಂಭಾವನೆ ಎಷ್ಟು? ನೀವು ಅಚ್ಚರಿ ಪಡೋದು ಗ್ಯಾರಂಟಿ

ಶ್ರೀನಾಥ್ ಅವರು ಸಿನಿಮಾ ಪ್ರಚಾರದಲ್ಲಿ ತೊಡಗಿದ್ದಾರೆ. ಇದಕ್ಕಾಗಿ ಅವರು ಯೂಟ್ಯೂಬ್ ಚಾನೆಲ್ ಒಂದಕ್ಕೆ ಸಂದರ್ಶನ ನೀಡಿದ್ದರು. ಈ ವೇಳೆ ಮಹಿಳಾ ಆ್ಯಂಕರ್​​ಗೆ ಕೆಟ್ಟ ಶಬ್ದಗಳಿಂದ ಶ್ರೀನಾಥ್ ಬೈದಿದ್ದಾರೆ. ಕ್ಯಾಮೆರಾ ಪರ್ಸನ್​​ ವಿರುದ್ಧವೂ ಅವಾಚ್ಯ ಶಬ್ದಗಳ ಬಳಕೆ ಆಗಿದೆ. ನಂತರ ಕ್ಯಾಮೆರಾ ಬಂದ್ ಮಾಡುವಂತೆ ಶ್ರೀನಾಥ್ ಆವಾಜ್ ಹಾಕಿದ್ದರು. ಈ ಬಗ್ಗೆ ಆ್ಯಂಕರ್​ ದೂರಿನಲ್ಲಿ ಉಲ್ಲೇಖ ಮಾಡಿದ್ದರು.

ವಕೀಲರ ಜತೆ ಬಂದ ನಟ

ಶ್ರೀನಾಥ್ ಅವರು ವಕೀಲರ ಜತೆಯೇ ಪೊಲೀಸ್ ಠಾಣೆಗೆ ಬಂದಿದ್ದಾರೆ. ಅವರು ಠಾಣೆಗೆ ಬಂದ ಕೆಲವೇ ಹೊತ್ತಿನಲ್ಲಿ ಜಾಮೀನು ಸಿಕ್ಕಿದೆ. ಈ ಕಾರಣಕ್ಕೆ ಅವರನ್ನು ಬಿಡುಗಡೆ ಮಾಡಲಾಗಿದೆ. ಸದ್ಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ತೀವ್ರತೆಯನ್ನು ಆಧರಿಸಿ ಮತ್ತಷ್ಟು ಕೇಸ್ ದಾಖಲಿಸಬೇಕೋ ಅಥವಾ ಬೇಡವೋ ಎಂಬುದು ನಿರ್ಧಾರ ಆಗಲಿದೆ.

ಕಿರಿಕ್ ಇದೇ ಮೊದಲಲ್ಲ

ಶ್ರೀನಾಥ್ ಅವರು ಈ ರೀತಿ ಕೆಟ್ಟದಾಗಿ ನಡೆದುಕೊಂಡಿದ್ದು ಇದೇ ಮೊದಲೇನು ಅಲ್ಲ. ಈ ಮೊದಲು ಅವರು ಆರ್​ಜೆ ಜತೆ ಮಾತನಾಡುವಾಗ ಕೆಟ್ಟ ಪದಗಳನ್ನು ಪ್ರಯೋಗಿಸಿದ್ದರು. ಈ ವಿಡಿಯೋ ವೈರಲ್ ಆಗಿತ್ತು.

ಇದನ್ನೂ ಓದಿ: ಮಲಯಾಳಂನ ನಟ ಶರತ್ ಚಂದ್ರನ್ ಇನ್ನಿಲ್ಲ; ಸಣ್ಣ ವಯಸ್ಸಿಗೆ ನಿಧನ ಹೊಂದಿದ ಹೀರೋ

2021ರಲ್ಲಿ ತೆರೆಗೆ ಬಂದ ಮಮ್ಮೂಟಿ ನಟನೆಯ ‘ಭೀಷ್ಮ ಪರ್ವಂ’ ಚಿತ್ರದಲ್ಲಿ ಶ್ರೀನಾಥ್ ಕೊನೆಯದಾಗಿ ಕಾಣಿಸಿಕೊಂಡರು. ಅದಾದ ಬಳಿಕ ಅವರ ಯಾವುದೇ ಸಿನಿಮಾ ತೆರೆಗೆ ಬಂದಿಲ್ಲ. ಸದ್ಯ ಹಲವು ಚಿತ್ರಗಳಲ್ಲಿ ಶ್ರೀನಾಥ್ ಬ್ಯುಸಿ ಇದ್ದಾರೆ.

ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ