AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಸಮಂತಾ ಜತೆ ತೆರೆಹಂಚಿಕೊಳ್ಳಲಿದ್ದಾರೆ ಟೀಂ ಇಂಡಿಯಾ ಆಟಗಾರ ಶ್ರೀಶಾಂತ್​

‘ಕಾದು ವಾಕುಲ ರೆಂಡು ಕಾಧಲ್’ ಚಿತ್ರದಲ್ಲಿ ಸಮಂತಾ ನಟಿಸಿದ್ದಾರೆ. ಕಳೆದ ತಿಂಗಳು ಈ ಚಿತ್ರದಲ್ಲಿನ ಸಮಂತಾ ಪಾತ್ರದ ಫಸ್ಟ್​​ಲುಕ್ ಬಿಡುಗಡೆ ಆಗಿತ್ತು. ಈ ಸಿನಿಮಾದಲ್ಲಿ ನಯನತಾರ ಮತ್ತು ವಿಜಯ್ ಸೇತುಪತಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Samantha: ಸಮಂತಾ ಜತೆ ತೆರೆಹಂಚಿಕೊಳ್ಳಲಿದ್ದಾರೆ ಟೀಂ ಇಂಡಿಯಾ ಆಟಗಾರ ಶ್ರೀಶಾಂತ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Dec 17, 2021 | 1:33 PM

Share

ನಿಷೇಧಕ್ಕೆ ಒಳಗಾಗಿದ್ದ ಟೀಂ ಇಂಡಿಯಾ ಆಟಗಾರ ಶ್ರೀಶಾಂತ್ ಅವರು (Sreesanth) ಕಂಬ್ಯಾಕ್​ ಮಾಡಿದ್ದಾರೆ. ಟೀಂ ಇಂಡಿಯಾದಲ್ಲಿ (Team India) ಸ್ಥಾನ ಪಡೆಯೋಕೆ ಅವರು ಪರದಾಡುತ್ತಿದ್ದಾರೆ. ಆದರೆ, ಅದು ಸಾಧ್ಯವಾಗುತ್ತಿಲ್ಲ. ಇವುಗಳ ಮಧ್ಯೆ ಶ್ರೀಶಾಂತ್​ ಬಣ್ಣದ ಲೋಕದಲ್ಲಿ ಮಿಂಚುತ್ತಿದ್ದಾರೆ. ಕನ್ನಡ, ಹಿಂದಿಯಲ್ಲಿ ನಟಿಸಿರುವ ಶ್ರೀಶಾಂತ್​ ಈಗ ತಮಿಳಿಗೆ ಕಾಲಿಡೋಕೆ ರೆಡಿ ಆಗಿದ್ದಾರೆ. ಖ್ಯಾತ ನಟಿಯರಾದ ಸಮಂತಾ ಹಾಗೂ ನಯನತಾರಾ ಜತೆಗೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ. ಶ್ರೀಶಾಂತ್ ಅವರು ಇನ್ನುಮುಂದೆ ಸಂಪೂರ್ಣವಾಗಿ ಚಿತ್ರರಂಗದಲ್ಲೇ ತೊಡಗಿಕೊಳ್ಳುತ್ತಾರಾ ಎನ್ನುವ ಪ್ರಶ್ನೆ ಕೂಡ ಮೂಡಿದೆ.

‘ಕಾದು ವಾಕುಲ ರೆಂಡು ಕಾಧಲ್’ ಚಿತ್ರದಲ್ಲಿ ಸಮಂತಾ ನಟಿಸಿದ್ದಾರೆ. ಕಳೆದ ತಿಂಗಳು ಈ ಚಿತ್ರದಲ್ಲಿನ ಸಮಂತಾ ಪಾತ್ರದ ಫಸ್ಟ್​​ಲುಕ್ ಬಿಡುಗಡೆ ಆಗಿತ್ತು. ಈ ಸಿನಿಮಾದಲ್ಲಿ ನಯನತಾರ ಮತ್ತು ವಿಜಯ್ ಸೇತುಪತಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಯನತಾರಾ ಅವರ ಪ್ರಿಯಕರ ವಿಘ್ನೇಶ್ ಶಿವನ್ ಅವರು ‘ಕಾದು ವಾಕುಲ ರೆಂಡು ಕಾಧಲ್’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಸೆಟ್​ಗೆ ಶ್ರೀಶಾಂತ್​ ಕೂಡ ಸೇರ್ಪಡೆ ಆಗಿದ್ದಾರೆ.

ಶ್ರೀಶಾಂತ್​ ಪಾತ್ರ ಏನು ಎಂಬ ಕುತೂಹಲ ಮೂಡದೇ ಇರದು. ಇದಕ್ಕೆ ಅವರೇ ಉತ್ತರ ನೀಡಿದ್ದಾರೆ. ‘ಇಂಥ ಉತ್ತಮ ತಂಡದೊಂದಿಗೆ ನಾನು ತಮಿಳು ಚಿತ್ರರಂಗಕ್ಕೆ ಕಾಲಿಡುತ್ತಿರುವುದು ಖುಷಿ ನೀಡಿದೆ. ಇದು ಸಿನಿಮಾದಲ್ಲಿ ಬರುವ ಅತ್ಯಂತ ಪ್ರಮುಖ ಪಾತ್ರ. ನಾನು ಈ ಬಗ್ಗೆ ಹೆಚ್ಚು ಹೇಳಲು ಇಷ್ಟಪಡುವುದಿಲ್ಲ. ಸಿನಿಮಾ ತೆರೆಕಂಡ ನಂತರದಲ್ಲಿ ಆ ಬಗ್ಗೆ ನಿಮಗೆ ತಿಳಿಯಲಿದೆ’ ಎಂದು ಶ್ರೀಶಾಂತ್ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಅವರು ಸಾಕಷ್ಟು ಖುಷಿಪಟ್ಟಿದ್ದಾರೆ.

2017ರಲ್ಲಿ ತೆರೆಗೆ ಬಂದ ‘ಅಕ್ಸರ್​​ 2’ ಚಿತ್ರದ ಮೂಲಕ ಬಣ್ಣದ ಜಗತ್ತಿಗೆ ಶ್ರೀಶಾಂತ್​ ಕಾಲಿಟ್ಟರು. ಇದಾದ ನಂತರ ಅವರು ಮಲಯಾಳಂ ಚಿತ್ರರಂಗದಲ್ಲೂ ನಟಿಸಿದರು. ಕನ್ನಡದಲ್ಲಿ ತೆರೆಗೆ ಬಂದ ‘ಕೆಂಪೆಗೌಡ 2’ ಚಿತ್ರದಲ್ಲಿ ದೇಶ್​ಮುಖ್​ ಹೆಸರಿನ ವಿಲನ್​ ರೋಲ್​ನಲ್ಲಿ ಕಾಣಿಸಿಕೊಂಡರು. ಈ ಚಿತ್ರಕ್ಕೆ 17ನೇ ಸಾಲಿನ ಸಂತೋಷಮ್​ ಫಿಲ್ಮ್​ ಅವಾರ್ಡ್ಸ್​​ನಲ್ಲಿ ‘ಬೆಸ್ಟ್ ವಿಲನ್​’ ಪ್ರಶಸ್ತಿ ದೊರಕಿದೆ. ​

ಇದನ್ನೂ ಓದಿ: ‘ಕುಟುಂಬಕ್ಕೆ ಮುಜುಗರ ತರುವ ಪಾತ್ರ ಮಾಡಲ್ಲ’; ಸಮಂತಾ ವಿಚ್ಛೇದನಕ್ಕೆ ಪರೋಕ್ಷವಾಗಿ ಕಾರಣ ನೀಡಿದ ನಾಗ ಚೈತನ್ಯ

IPL 2021: ಸ್ಪಾಟ್ ಫಿಕ್ಸಿಂಗ್, ಪಾಕ್ ಆಟಗಾರರಿಗೆ ನಿಷೇಧ, ಶ್ರೀಶಾಂತ್​ಗೆ ಭಜ್ಜಿ ಕಪಾಳಮೋಕ್ಷ! ಐಪಿಎಲ್​ನಲ್ಲಿ ಸೃಷ್ಟಿಯಾದ ವಿವಾದಗಳಿವು

ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ