AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಸಮಂತಾ ಜತೆ ತೆರೆಹಂಚಿಕೊಳ್ಳಲಿದ್ದಾರೆ ಟೀಂ ಇಂಡಿಯಾ ಆಟಗಾರ ಶ್ರೀಶಾಂತ್​

‘ಕಾದು ವಾಕುಲ ರೆಂಡು ಕಾಧಲ್’ ಚಿತ್ರದಲ್ಲಿ ಸಮಂತಾ ನಟಿಸಿದ್ದಾರೆ. ಕಳೆದ ತಿಂಗಳು ಈ ಚಿತ್ರದಲ್ಲಿನ ಸಮಂತಾ ಪಾತ್ರದ ಫಸ್ಟ್​​ಲುಕ್ ಬಿಡುಗಡೆ ಆಗಿತ್ತು. ಈ ಸಿನಿಮಾದಲ್ಲಿ ನಯನತಾರ ಮತ್ತು ವಿಜಯ್ ಸೇತುಪತಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Samantha: ಸಮಂತಾ ಜತೆ ತೆರೆಹಂಚಿಕೊಳ್ಳಲಿದ್ದಾರೆ ಟೀಂ ಇಂಡಿಯಾ ಆಟಗಾರ ಶ್ರೀಶಾಂತ್​
TV9 Web
| Edited By: |

Updated on: Dec 17, 2021 | 1:33 PM

Share

ನಿಷೇಧಕ್ಕೆ ಒಳಗಾಗಿದ್ದ ಟೀಂ ಇಂಡಿಯಾ ಆಟಗಾರ ಶ್ರೀಶಾಂತ್ ಅವರು (Sreesanth) ಕಂಬ್ಯಾಕ್​ ಮಾಡಿದ್ದಾರೆ. ಟೀಂ ಇಂಡಿಯಾದಲ್ಲಿ (Team India) ಸ್ಥಾನ ಪಡೆಯೋಕೆ ಅವರು ಪರದಾಡುತ್ತಿದ್ದಾರೆ. ಆದರೆ, ಅದು ಸಾಧ್ಯವಾಗುತ್ತಿಲ್ಲ. ಇವುಗಳ ಮಧ್ಯೆ ಶ್ರೀಶಾಂತ್​ ಬಣ್ಣದ ಲೋಕದಲ್ಲಿ ಮಿಂಚುತ್ತಿದ್ದಾರೆ. ಕನ್ನಡ, ಹಿಂದಿಯಲ್ಲಿ ನಟಿಸಿರುವ ಶ್ರೀಶಾಂತ್​ ಈಗ ತಮಿಳಿಗೆ ಕಾಲಿಡೋಕೆ ರೆಡಿ ಆಗಿದ್ದಾರೆ. ಖ್ಯಾತ ನಟಿಯರಾದ ಸಮಂತಾ ಹಾಗೂ ನಯನತಾರಾ ಜತೆಗೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ. ಶ್ರೀಶಾಂತ್ ಅವರು ಇನ್ನುಮುಂದೆ ಸಂಪೂರ್ಣವಾಗಿ ಚಿತ್ರರಂಗದಲ್ಲೇ ತೊಡಗಿಕೊಳ್ಳುತ್ತಾರಾ ಎನ್ನುವ ಪ್ರಶ್ನೆ ಕೂಡ ಮೂಡಿದೆ.

‘ಕಾದು ವಾಕುಲ ರೆಂಡು ಕಾಧಲ್’ ಚಿತ್ರದಲ್ಲಿ ಸಮಂತಾ ನಟಿಸಿದ್ದಾರೆ. ಕಳೆದ ತಿಂಗಳು ಈ ಚಿತ್ರದಲ್ಲಿನ ಸಮಂತಾ ಪಾತ್ರದ ಫಸ್ಟ್​​ಲುಕ್ ಬಿಡುಗಡೆ ಆಗಿತ್ತು. ಈ ಸಿನಿಮಾದಲ್ಲಿ ನಯನತಾರ ಮತ್ತು ವಿಜಯ್ ಸೇತುಪತಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಯನತಾರಾ ಅವರ ಪ್ರಿಯಕರ ವಿಘ್ನೇಶ್ ಶಿವನ್ ಅವರು ‘ಕಾದು ವಾಕುಲ ರೆಂಡು ಕಾಧಲ್’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಸೆಟ್​ಗೆ ಶ್ರೀಶಾಂತ್​ ಕೂಡ ಸೇರ್ಪಡೆ ಆಗಿದ್ದಾರೆ.

ಶ್ರೀಶಾಂತ್​ ಪಾತ್ರ ಏನು ಎಂಬ ಕುತೂಹಲ ಮೂಡದೇ ಇರದು. ಇದಕ್ಕೆ ಅವರೇ ಉತ್ತರ ನೀಡಿದ್ದಾರೆ. ‘ಇಂಥ ಉತ್ತಮ ತಂಡದೊಂದಿಗೆ ನಾನು ತಮಿಳು ಚಿತ್ರರಂಗಕ್ಕೆ ಕಾಲಿಡುತ್ತಿರುವುದು ಖುಷಿ ನೀಡಿದೆ. ಇದು ಸಿನಿಮಾದಲ್ಲಿ ಬರುವ ಅತ್ಯಂತ ಪ್ರಮುಖ ಪಾತ್ರ. ನಾನು ಈ ಬಗ್ಗೆ ಹೆಚ್ಚು ಹೇಳಲು ಇಷ್ಟಪಡುವುದಿಲ್ಲ. ಸಿನಿಮಾ ತೆರೆಕಂಡ ನಂತರದಲ್ಲಿ ಆ ಬಗ್ಗೆ ನಿಮಗೆ ತಿಳಿಯಲಿದೆ’ ಎಂದು ಶ್ರೀಶಾಂತ್ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಅವರು ಸಾಕಷ್ಟು ಖುಷಿಪಟ್ಟಿದ್ದಾರೆ.

2017ರಲ್ಲಿ ತೆರೆಗೆ ಬಂದ ‘ಅಕ್ಸರ್​​ 2’ ಚಿತ್ರದ ಮೂಲಕ ಬಣ್ಣದ ಜಗತ್ತಿಗೆ ಶ್ರೀಶಾಂತ್​ ಕಾಲಿಟ್ಟರು. ಇದಾದ ನಂತರ ಅವರು ಮಲಯಾಳಂ ಚಿತ್ರರಂಗದಲ್ಲೂ ನಟಿಸಿದರು. ಕನ್ನಡದಲ್ಲಿ ತೆರೆಗೆ ಬಂದ ‘ಕೆಂಪೆಗೌಡ 2’ ಚಿತ್ರದಲ್ಲಿ ದೇಶ್​ಮುಖ್​ ಹೆಸರಿನ ವಿಲನ್​ ರೋಲ್​ನಲ್ಲಿ ಕಾಣಿಸಿಕೊಂಡರು. ಈ ಚಿತ್ರಕ್ಕೆ 17ನೇ ಸಾಲಿನ ಸಂತೋಷಮ್​ ಫಿಲ್ಮ್​ ಅವಾರ್ಡ್ಸ್​​ನಲ್ಲಿ ‘ಬೆಸ್ಟ್ ವಿಲನ್​’ ಪ್ರಶಸ್ತಿ ದೊರಕಿದೆ. ​

ಇದನ್ನೂ ಓದಿ: ‘ಕುಟುಂಬಕ್ಕೆ ಮುಜುಗರ ತರುವ ಪಾತ್ರ ಮಾಡಲ್ಲ’; ಸಮಂತಾ ವಿಚ್ಛೇದನಕ್ಕೆ ಪರೋಕ್ಷವಾಗಿ ಕಾರಣ ನೀಡಿದ ನಾಗ ಚೈತನ್ಯ

IPL 2021: ಸ್ಪಾಟ್ ಫಿಕ್ಸಿಂಗ್, ಪಾಕ್ ಆಟಗಾರರಿಗೆ ನಿಷೇಧ, ಶ್ರೀಶಾಂತ್​ಗೆ ಭಜ್ಜಿ ಕಪಾಳಮೋಕ್ಷ! ಐಪಿಎಲ್​ನಲ್ಲಿ ಸೃಷ್ಟಿಯಾದ ವಿವಾದಗಳಿವು

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್