AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಸಮಂತಾ ಜತೆ ತೆರೆಹಂಚಿಕೊಳ್ಳಲಿದ್ದಾರೆ ಟೀಂ ಇಂಡಿಯಾ ಆಟಗಾರ ಶ್ರೀಶಾಂತ್​

‘ಕಾದು ವಾಕುಲ ರೆಂಡು ಕಾಧಲ್’ ಚಿತ್ರದಲ್ಲಿ ಸಮಂತಾ ನಟಿಸಿದ್ದಾರೆ. ಕಳೆದ ತಿಂಗಳು ಈ ಚಿತ್ರದಲ್ಲಿನ ಸಮಂತಾ ಪಾತ್ರದ ಫಸ್ಟ್​​ಲುಕ್ ಬಿಡುಗಡೆ ಆಗಿತ್ತು. ಈ ಸಿನಿಮಾದಲ್ಲಿ ನಯನತಾರ ಮತ್ತು ವಿಜಯ್ ಸೇತುಪತಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Samantha: ಸಮಂತಾ ಜತೆ ತೆರೆಹಂಚಿಕೊಳ್ಳಲಿದ್ದಾರೆ ಟೀಂ ಇಂಡಿಯಾ ಆಟಗಾರ ಶ್ರೀಶಾಂತ್​
TV9 Web
| Edited By: |

Updated on: Dec 17, 2021 | 1:33 PM

Share

ನಿಷೇಧಕ್ಕೆ ಒಳಗಾಗಿದ್ದ ಟೀಂ ಇಂಡಿಯಾ ಆಟಗಾರ ಶ್ರೀಶಾಂತ್ ಅವರು (Sreesanth) ಕಂಬ್ಯಾಕ್​ ಮಾಡಿದ್ದಾರೆ. ಟೀಂ ಇಂಡಿಯಾದಲ್ಲಿ (Team India) ಸ್ಥಾನ ಪಡೆಯೋಕೆ ಅವರು ಪರದಾಡುತ್ತಿದ್ದಾರೆ. ಆದರೆ, ಅದು ಸಾಧ್ಯವಾಗುತ್ತಿಲ್ಲ. ಇವುಗಳ ಮಧ್ಯೆ ಶ್ರೀಶಾಂತ್​ ಬಣ್ಣದ ಲೋಕದಲ್ಲಿ ಮಿಂಚುತ್ತಿದ್ದಾರೆ. ಕನ್ನಡ, ಹಿಂದಿಯಲ್ಲಿ ನಟಿಸಿರುವ ಶ್ರೀಶಾಂತ್​ ಈಗ ತಮಿಳಿಗೆ ಕಾಲಿಡೋಕೆ ರೆಡಿ ಆಗಿದ್ದಾರೆ. ಖ್ಯಾತ ನಟಿಯರಾದ ಸಮಂತಾ ಹಾಗೂ ನಯನತಾರಾ ಜತೆಗೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ. ಶ್ರೀಶಾಂತ್ ಅವರು ಇನ್ನುಮುಂದೆ ಸಂಪೂರ್ಣವಾಗಿ ಚಿತ್ರರಂಗದಲ್ಲೇ ತೊಡಗಿಕೊಳ್ಳುತ್ತಾರಾ ಎನ್ನುವ ಪ್ರಶ್ನೆ ಕೂಡ ಮೂಡಿದೆ.

‘ಕಾದು ವಾಕುಲ ರೆಂಡು ಕಾಧಲ್’ ಚಿತ್ರದಲ್ಲಿ ಸಮಂತಾ ನಟಿಸಿದ್ದಾರೆ. ಕಳೆದ ತಿಂಗಳು ಈ ಚಿತ್ರದಲ್ಲಿನ ಸಮಂತಾ ಪಾತ್ರದ ಫಸ್ಟ್​​ಲುಕ್ ಬಿಡುಗಡೆ ಆಗಿತ್ತು. ಈ ಸಿನಿಮಾದಲ್ಲಿ ನಯನತಾರ ಮತ್ತು ವಿಜಯ್ ಸೇತುಪತಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಯನತಾರಾ ಅವರ ಪ್ರಿಯಕರ ವಿಘ್ನೇಶ್ ಶಿವನ್ ಅವರು ‘ಕಾದು ವಾಕುಲ ರೆಂಡು ಕಾಧಲ್’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಸೆಟ್​ಗೆ ಶ್ರೀಶಾಂತ್​ ಕೂಡ ಸೇರ್ಪಡೆ ಆಗಿದ್ದಾರೆ.

ಶ್ರೀಶಾಂತ್​ ಪಾತ್ರ ಏನು ಎಂಬ ಕುತೂಹಲ ಮೂಡದೇ ಇರದು. ಇದಕ್ಕೆ ಅವರೇ ಉತ್ತರ ನೀಡಿದ್ದಾರೆ. ‘ಇಂಥ ಉತ್ತಮ ತಂಡದೊಂದಿಗೆ ನಾನು ತಮಿಳು ಚಿತ್ರರಂಗಕ್ಕೆ ಕಾಲಿಡುತ್ತಿರುವುದು ಖುಷಿ ನೀಡಿದೆ. ಇದು ಸಿನಿಮಾದಲ್ಲಿ ಬರುವ ಅತ್ಯಂತ ಪ್ರಮುಖ ಪಾತ್ರ. ನಾನು ಈ ಬಗ್ಗೆ ಹೆಚ್ಚು ಹೇಳಲು ಇಷ್ಟಪಡುವುದಿಲ್ಲ. ಸಿನಿಮಾ ತೆರೆಕಂಡ ನಂತರದಲ್ಲಿ ಆ ಬಗ್ಗೆ ನಿಮಗೆ ತಿಳಿಯಲಿದೆ’ ಎಂದು ಶ್ರೀಶಾಂತ್ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಅವರು ಸಾಕಷ್ಟು ಖುಷಿಪಟ್ಟಿದ್ದಾರೆ.

2017ರಲ್ಲಿ ತೆರೆಗೆ ಬಂದ ‘ಅಕ್ಸರ್​​ 2’ ಚಿತ್ರದ ಮೂಲಕ ಬಣ್ಣದ ಜಗತ್ತಿಗೆ ಶ್ರೀಶಾಂತ್​ ಕಾಲಿಟ್ಟರು. ಇದಾದ ನಂತರ ಅವರು ಮಲಯಾಳಂ ಚಿತ್ರರಂಗದಲ್ಲೂ ನಟಿಸಿದರು. ಕನ್ನಡದಲ್ಲಿ ತೆರೆಗೆ ಬಂದ ‘ಕೆಂಪೆಗೌಡ 2’ ಚಿತ್ರದಲ್ಲಿ ದೇಶ್​ಮುಖ್​ ಹೆಸರಿನ ವಿಲನ್​ ರೋಲ್​ನಲ್ಲಿ ಕಾಣಿಸಿಕೊಂಡರು. ಈ ಚಿತ್ರಕ್ಕೆ 17ನೇ ಸಾಲಿನ ಸಂತೋಷಮ್​ ಫಿಲ್ಮ್​ ಅವಾರ್ಡ್ಸ್​​ನಲ್ಲಿ ‘ಬೆಸ್ಟ್ ವಿಲನ್​’ ಪ್ರಶಸ್ತಿ ದೊರಕಿದೆ. ​

ಇದನ್ನೂ ಓದಿ: ‘ಕುಟುಂಬಕ್ಕೆ ಮುಜುಗರ ತರುವ ಪಾತ್ರ ಮಾಡಲ್ಲ’; ಸಮಂತಾ ವಿಚ್ಛೇದನಕ್ಕೆ ಪರೋಕ್ಷವಾಗಿ ಕಾರಣ ನೀಡಿದ ನಾಗ ಚೈತನ್ಯ

IPL 2021: ಸ್ಪಾಟ್ ಫಿಕ್ಸಿಂಗ್, ಪಾಕ್ ಆಟಗಾರರಿಗೆ ನಿಷೇಧ, ಶ್ರೀಶಾಂತ್​ಗೆ ಭಜ್ಜಿ ಕಪಾಳಮೋಕ್ಷ! ಐಪಿಎಲ್​ನಲ್ಲಿ ಸೃಷ್ಟಿಯಾದ ವಿವಾದಗಳಿವು

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ