AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಸಮಂತಾ ಜತೆ ತೆರೆಹಂಚಿಕೊಳ್ಳಲಿದ್ದಾರೆ ಟೀಂ ಇಂಡಿಯಾ ಆಟಗಾರ ಶ್ರೀಶಾಂತ್​

‘ಕಾದು ವಾಕುಲ ರೆಂಡು ಕಾಧಲ್’ ಚಿತ್ರದಲ್ಲಿ ಸಮಂತಾ ನಟಿಸಿದ್ದಾರೆ. ಕಳೆದ ತಿಂಗಳು ಈ ಚಿತ್ರದಲ್ಲಿನ ಸಮಂತಾ ಪಾತ್ರದ ಫಸ್ಟ್​​ಲುಕ್ ಬಿಡುಗಡೆ ಆಗಿತ್ತು. ಈ ಸಿನಿಮಾದಲ್ಲಿ ನಯನತಾರ ಮತ್ತು ವಿಜಯ್ ಸೇತುಪತಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Samantha: ಸಮಂತಾ ಜತೆ ತೆರೆಹಂಚಿಕೊಳ್ಳಲಿದ್ದಾರೆ ಟೀಂ ಇಂಡಿಯಾ ಆಟಗಾರ ಶ್ರೀಶಾಂತ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Dec 17, 2021 | 1:33 PM

Share

ನಿಷೇಧಕ್ಕೆ ಒಳಗಾಗಿದ್ದ ಟೀಂ ಇಂಡಿಯಾ ಆಟಗಾರ ಶ್ರೀಶಾಂತ್ ಅವರು (Sreesanth) ಕಂಬ್ಯಾಕ್​ ಮಾಡಿದ್ದಾರೆ. ಟೀಂ ಇಂಡಿಯಾದಲ್ಲಿ (Team India) ಸ್ಥಾನ ಪಡೆಯೋಕೆ ಅವರು ಪರದಾಡುತ್ತಿದ್ದಾರೆ. ಆದರೆ, ಅದು ಸಾಧ್ಯವಾಗುತ್ತಿಲ್ಲ. ಇವುಗಳ ಮಧ್ಯೆ ಶ್ರೀಶಾಂತ್​ ಬಣ್ಣದ ಲೋಕದಲ್ಲಿ ಮಿಂಚುತ್ತಿದ್ದಾರೆ. ಕನ್ನಡ, ಹಿಂದಿಯಲ್ಲಿ ನಟಿಸಿರುವ ಶ್ರೀಶಾಂತ್​ ಈಗ ತಮಿಳಿಗೆ ಕಾಲಿಡೋಕೆ ರೆಡಿ ಆಗಿದ್ದಾರೆ. ಖ್ಯಾತ ನಟಿಯರಾದ ಸಮಂತಾ ಹಾಗೂ ನಯನತಾರಾ ಜತೆಗೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ. ಶ್ರೀಶಾಂತ್ ಅವರು ಇನ್ನುಮುಂದೆ ಸಂಪೂರ್ಣವಾಗಿ ಚಿತ್ರರಂಗದಲ್ಲೇ ತೊಡಗಿಕೊಳ್ಳುತ್ತಾರಾ ಎನ್ನುವ ಪ್ರಶ್ನೆ ಕೂಡ ಮೂಡಿದೆ.

‘ಕಾದು ವಾಕುಲ ರೆಂಡು ಕಾಧಲ್’ ಚಿತ್ರದಲ್ಲಿ ಸಮಂತಾ ನಟಿಸಿದ್ದಾರೆ. ಕಳೆದ ತಿಂಗಳು ಈ ಚಿತ್ರದಲ್ಲಿನ ಸಮಂತಾ ಪಾತ್ರದ ಫಸ್ಟ್​​ಲುಕ್ ಬಿಡುಗಡೆ ಆಗಿತ್ತು. ಈ ಸಿನಿಮಾದಲ್ಲಿ ನಯನತಾರ ಮತ್ತು ವಿಜಯ್ ಸೇತುಪತಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಯನತಾರಾ ಅವರ ಪ್ರಿಯಕರ ವಿಘ್ನೇಶ್ ಶಿವನ್ ಅವರು ‘ಕಾದು ವಾಕುಲ ರೆಂಡು ಕಾಧಲ್’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಸೆಟ್​ಗೆ ಶ್ರೀಶಾಂತ್​ ಕೂಡ ಸೇರ್ಪಡೆ ಆಗಿದ್ದಾರೆ.

ಶ್ರೀಶಾಂತ್​ ಪಾತ್ರ ಏನು ಎಂಬ ಕುತೂಹಲ ಮೂಡದೇ ಇರದು. ಇದಕ್ಕೆ ಅವರೇ ಉತ್ತರ ನೀಡಿದ್ದಾರೆ. ‘ಇಂಥ ಉತ್ತಮ ತಂಡದೊಂದಿಗೆ ನಾನು ತಮಿಳು ಚಿತ್ರರಂಗಕ್ಕೆ ಕಾಲಿಡುತ್ತಿರುವುದು ಖುಷಿ ನೀಡಿದೆ. ಇದು ಸಿನಿಮಾದಲ್ಲಿ ಬರುವ ಅತ್ಯಂತ ಪ್ರಮುಖ ಪಾತ್ರ. ನಾನು ಈ ಬಗ್ಗೆ ಹೆಚ್ಚು ಹೇಳಲು ಇಷ್ಟಪಡುವುದಿಲ್ಲ. ಸಿನಿಮಾ ತೆರೆಕಂಡ ನಂತರದಲ್ಲಿ ಆ ಬಗ್ಗೆ ನಿಮಗೆ ತಿಳಿಯಲಿದೆ’ ಎಂದು ಶ್ರೀಶಾಂತ್ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಅವರು ಸಾಕಷ್ಟು ಖುಷಿಪಟ್ಟಿದ್ದಾರೆ.

2017ರಲ್ಲಿ ತೆರೆಗೆ ಬಂದ ‘ಅಕ್ಸರ್​​ 2’ ಚಿತ್ರದ ಮೂಲಕ ಬಣ್ಣದ ಜಗತ್ತಿಗೆ ಶ್ರೀಶಾಂತ್​ ಕಾಲಿಟ್ಟರು. ಇದಾದ ನಂತರ ಅವರು ಮಲಯಾಳಂ ಚಿತ್ರರಂಗದಲ್ಲೂ ನಟಿಸಿದರು. ಕನ್ನಡದಲ್ಲಿ ತೆರೆಗೆ ಬಂದ ‘ಕೆಂಪೆಗೌಡ 2’ ಚಿತ್ರದಲ್ಲಿ ದೇಶ್​ಮುಖ್​ ಹೆಸರಿನ ವಿಲನ್​ ರೋಲ್​ನಲ್ಲಿ ಕಾಣಿಸಿಕೊಂಡರು. ಈ ಚಿತ್ರಕ್ಕೆ 17ನೇ ಸಾಲಿನ ಸಂತೋಷಮ್​ ಫಿಲ್ಮ್​ ಅವಾರ್ಡ್ಸ್​​ನಲ್ಲಿ ‘ಬೆಸ್ಟ್ ವಿಲನ್​’ ಪ್ರಶಸ್ತಿ ದೊರಕಿದೆ. ​

ಇದನ್ನೂ ಓದಿ: ‘ಕುಟುಂಬಕ್ಕೆ ಮುಜುಗರ ತರುವ ಪಾತ್ರ ಮಾಡಲ್ಲ’; ಸಮಂತಾ ವಿಚ್ಛೇದನಕ್ಕೆ ಪರೋಕ್ಷವಾಗಿ ಕಾರಣ ನೀಡಿದ ನಾಗ ಚೈತನ್ಯ

IPL 2021: ಸ್ಪಾಟ್ ಫಿಕ್ಸಿಂಗ್, ಪಾಕ್ ಆಟಗಾರರಿಗೆ ನಿಷೇಧ, ಶ್ರೀಶಾಂತ್​ಗೆ ಭಜ್ಜಿ ಕಪಾಳಮೋಕ್ಷ! ಐಪಿಎಲ್​ನಲ್ಲಿ ಸೃಷ್ಟಿಯಾದ ವಿವಾದಗಳಿವು

ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು