AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀದೇವಿ ಉಳಿದುಕೊಂಡಿದ್ದ ಮನೆಯಲ್ಲಿ ನೀವು ವಾಸಿಸಬಹುದು; ಹೊಸ ಆಫರ್ ಕೊಟ್ಟ ಕಪೂರ್ ಕುಟುಂಬ

ಶ್ರೀದೇವಿ ನಟಿಯಾಗಿ ಸಾಕಷ್ಟು ಸಂಪಾದನೆ ಮಾಡಿದರು. ನಟಿಯಾದ ಬಳಿಕ ಅವರು ಖರೀದಿ ಮಾಡಿದ ಮೊದಲ ಮನೆ ಇದು. ಈ ಮನೆಯನ್ನು ಈಗ ಹೋಮ್​ಸ್ಟೇ ರೀತಿ ಬದಲಿಸಿ, ಬಾಡಿಗೆ ನೀಡಲಾಗುತ್ತಿದೆ. ಈ ಮನೆ ನಾಲ್ಕು ಎಕರೆ ಜಾಗದಲ್ಲಿ ಇದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ಶ್ರೀದೇವಿ ಉಳಿದುಕೊಂಡಿದ್ದ ಮನೆಯಲ್ಲಿ ನೀವು ವಾಸಿಸಬಹುದು; ಹೊಸ ಆಫರ್ ಕೊಟ್ಟ ಕಪೂರ್ ಕುಟುಂಬ
ಶ್ರೀದೇವಿ ಉಳಿದುಕೊಂಡಿದ್ದ ಮನೆಯಲ್ಲಿ ನೀವು ವಾಸಿಸಬಹುದು; ಹೊಸ ಆಫರ್ ಕೊಟ್ಟ ಕಪೂರ್ ಕುಟುಂಬ
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: May 04, 2024 | 4:00 PM

Share

ಬಾಲಿವುಡ್ ನಟಿ ಶ್ರೀದೇವಿ (Sridevi) ನಿಧನರಾಗಿ ಬಹಳ ವರ್ಷಗಳಾಗಿವೆ. ಅವರು ಚಿತ್ರರಂಗದಲ್ಲಿ ಆ್ಯಕ್ಟಿವ್ ಆಗಿದ್ದಾಲೇ ಮೃತಪಟ್ಟರು. ಅವರು ಸಿನಿಮಾಗಳಲ್ಲಿ ಉತ್ತಮ ಕೆಲಸ ಮಾಡುತ್ತಿದ್ದರು. ಈಗ ಅವರ ಮಗಳು ಜಾನ್ವಿ ಕಪೂರ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅವರು ಒಳ್ಳೆಯ ಹೆಸರನ್ನು ಗಳಿಸಿದ್ದಾರೆ. ಚೆನ್ನೈನ ಮನೆಯನ್ನು ಹೋಟೆಲ್​ ಆಗಿ ಪರಿವರ್ತಿಸಬೇಕು ಎನ್ನುವ ಕನಸು ಶ್ರೀದೇವಿಗೆ ಇತ್ತು. ಜಾನ್ವಿ ಕಪೂರ್ ಮತ್ತು ಬೋನಿ ಕಪೂರ್ ಒಟ್ಟಾಗಿ ಶ್ರೀದೇವಿಯ ಈ ಕನಸನ್ನು ನನಸಾಗಿಸಿದ್ದಾರೆ.

‘ನಮಗೆ ನೆನಪಿರುವಂತೆ ಚೆನ್ನೈನ ಮನೆಯಲ್ಲಿ ಅನೇಕ ಬಾರಿ ನನ್ನ ತಾಯಿಯ ಜನ್ಮದಿನವನ್ನು ಆಚರಿಸಿದ್ದೇವೆ. ಈ ಮನೆಯಲ್ಲಿ ನನ್ನ ಮತ್ತು ತಂದೆಯ ಹುಟ್ಟುಹಬ್ಬವನ್ನೂ ಆಚರಿಸಲಾಗಿದೆ. ಆದರೆ ಅಮ್ಮನ ನಿರ್ಗಮನದ ನಂತರ, ನವೀಕರಣ ಕಾರ್ಯದಿಂದಾಗಿ ನಾವು ಆ ಮನೆಯಲ್ಲಿ ಹೆಚ್ಚು ಇರಲು ಸಾಧ್ಯವಾಗಲಿಲ್ಲ. ಇದನ್ನು ಹೋಟೆಲ್ ಆಗಿ ಮಾಡಬೇಕು ಎಂದು ಅಮ್ಮ ಕನಸು ಕಾಣುತ್ತಿದ್ದರು’ ಎಂದಿದ್ದಾರೆ ಜಾನ್ವಿ ಕಪೂರ್.

‘ನವೀಕರಣದ ಕೆಲಸ ಮುಗಿದ ಮೇಲೆ ಮತ್ತೆ ಅಪ್ಪನ ಹುಟ್ಟುಹಬ್ಬವನ್ನು ಅಲ್ಲೇ ಆಚರಿಸಿದೆವು. ಅಪ್ಪ ಸರಿಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳಲಿಲ್ಲ. ಆದರೆ ಆ ಹುಟ್ಟುಹಬ್ಬದಂದು ಅವರು ತುಂಬಾ ಸಂತೋಷವಾಗಿದ್ದರು. ಅವಳ ಆಸೆ ಈಡೇರಿಸಬೇಕು ಎಂದು ಅವರು ಸದಾ ಹೇಳುತ್ತಲೇ ಇದ್ದರು’ ಎಂದಿದ್ದಾರೆ ಜಾನ್ವಿ ಕಪೂರ್.

ಶ್ರೀದೇವಿ ನಟಿಯಾಗಿ ಸಾಕಷ್ಟು ಸಂಪಾದನೆ ಮಾಡಿದರು. ನಟಿಯಾದ ಬಳಿಕ ಅವರು ಖರೀದಿ ಮಾಡಿದ ಮೊದಲ ಮನೆ ಇದು. ಈ ಮನೆಯನ್ನು ಈಗ ಹೋಮ್​ಸ್ಟೇ ರೀತಿ ಬದಲಿಸಿ, ಬಾಡಿಗೆ ನೀಡಲಾಗುತ್ತಿದೆ. ಈ ಮನೆ ನಾಲ್ಕು ಎಕರೆ ಜಾಗದಲ್ಲಿ ಇದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಅದೇ ರೀತಿ ದಿನದ ಬಾಡಿಗೆ ಕೂಡ ಭರ್ಜರಿಯಾಗಿದೆ.

ಇದನ್ನೂ ಓದಿ: ಆಮಿರ್​ ಖಾನ್​ ಮಗ ಜುನೈದ್​ ಖಾನ್​ಗೆ ಶ್ರೀದೇವಿಯ 2ನೇ ಮಗಳು ಖುಷಿ ಕಪೂರ್​ ಜೋಡಿ

ಶ್ರೀದೇವಿ ಅವರು ದೊಡ್ಡ ಮಟ್ಟದ ಖ್ಯಾತಿ ಪಡೆದವರು. ಅವರು 2018ರಲ್ಲಿ ದುಬೈನ ಹೋಟೆಲ್ ಒಂದರಲ್ಲಿ ಬಾತ್​ ಟಬ್​ನಲ್ಲಿ ಮುಳುಗಿ ಸತ್ತರು. ಈ ಸಾವಿನ ಬಗ್ಗೆ ಸಾಕಷ್ಟು ಅನುಮಾನ ಮೂಡಿದೆ. ಆದರೆ, ಇದೊಂದು ಸಹಜ ಸಾವು ಎಂದು ಪೊಲೀಸರು ವರದಿ ನೀಡಿದ್ದಾರೆ. ಶ್ರೀದೇವಿ ದಕ್ಷಿಣ ಭಾರತದಲ್ಲೂ ನಟಿಸಿದ್ದರು. ತಾಯಿ ರೀತಿಯೇ ಜಾನ್ವಿ ಕಪೂರ್ ಕೂಡ ದಕ್ಷಿಣ ಭಾರತದಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು