AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಭಾಸ್​ ಜತೆ ಇದ್ದರೆ ಫಿಟ್​ನೆಸ್​ ಕಳೆದುಕೊಳ್ತೀರಿ’; ಟಾಲಿವುಡ್​ ನಟನ ವಿಚಿತ್ರ ಆರೋಪ

ಸುಧೀರ್ ಬಾಬು ಸದ್ಯ ‘ಶ್ರೀದೇವಿ ಸೋಡಾ ಸೆಂಟರ್’​ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಪ್ರಮೋಷನ್​ಗೆ ಬೇಕಾದ ಎಲ್ಲಾ ಕೆಲಸಗಳನ್ನು ಚಿತ್ರತಂಡ ಮಾಡುತ್ತಿದೆ. ಮಾಧ್ಯಮಗಳನ್ನು ಕೂಡ ಚಿತ್ರತಂಡ ಎದುರುಗೊಳ್ಳುತ್ತಿದೆ.

‘ಪ್ರಭಾಸ್​ ಜತೆ ಇದ್ದರೆ ಫಿಟ್​ನೆಸ್​ ಕಳೆದುಕೊಳ್ತೀರಿ’; ಟಾಲಿವುಡ್​ ನಟನ ವಿಚಿತ್ರ ಆರೋಪ
ಪ್ರಭಾಸ್​ ಜತೆ ಇದ್ದರೆ ಫಿಟ್​ನೆಸ್​ ಕಳೆದುಕೊಳ್ತೀರಿ; ಟಾಲಿವುಡ್​ ನಟನ ವಿಚಿತ್ರ ಆರೋಪ
TV9 Web
| Edited By: |

Updated on:Aug 23, 2021 | 9:31 AM

Share

ಸೆಲೆಬ್ರಿಟಿಗಳು ಫಿಟ್​ನೆಸ್​ಗೆ ಮೊದಲ ಆದ್ಯತೆ ನೀಡುತ್ತಾರೆ. ಏನೇ ಆದರೂ ಅವರು ಫಿಟ್​ನೆಸ್​ ಕಳೆದುಕೊಳ್ಳೋಕೆ ಇಷ್ಟಪಡುವುದಿಲ್ಲ. ಈ ಕಾರಣಕ್ಕೆ ಶೂಟಿಂಗ್​ ಮಧ್ಯೆಯೂ ಜಿಮ್​ನಲ್ಲಿ ಬೆವರು ಹರಿಸುವ ಕೆಲಸವನ್ನು ಅವರು ನಿಲ್ಲಿಸುವುದಿಲ್ಲ. ಅದರಲ್ಲೂ ಎರಡು ಸ್ಟಾರ್​​ಗಳು ಜಿಮ್​ನಲ್ಲಿ ಒಟ್ಟಿಗೆ ಸೇರಿದರೆ ಇಬ್ಬರ ನಡುವೆ ಸ್ಪರ್ಧೆ ಏರ್ಪಟ್ಟು ಕೊಂಚ ಹೆಚ್ಚೇ ವರ್ಕೌಟ್​ ನಡೆಯುತ್ತದೆ. ಆದರೆ, ಪ್ರಭಾಸ್​ ಜತೆ ಸೇರಿದರೆ ಫಿಟ್​ನೆಸ್​ ಹಾಳಾಗುತ್ತದೆ ಎನ್ನುವ ಆರೋಪವನ್ನು ಟಾಲಿವುಡ್ ನಟ ಸುಧೀರ್​ ಬಾಬು ಮಾಡಿದ್ದಾರೆ.

ಸುಧೀರ್ ಬಾಬು ಸದ್ಯ ‘ಶ್ರೀದೇವಿ ಸೋಡಾ ಸೆಂಟರ್’​ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಪ್ರಮೋಷನ್​ಗೆ ಬೇಕಾದ ಎಲ್ಲಾ ಕೆಲಸಗಳನ್ನು ಚಿತ್ರತಂಡ ಮಾಡುತ್ತಿದೆ. ಮಾಧ್ಯಮಗಳನ್ನು ಕೂಡ ಚಿತ್ರತಂಡ ಎದುರುಗೊಳ್ಳುತ್ತಿದೆ. ಈ ವೇಳೆ ಪ್ರಭಾಸ್​ ಜತೆಗೆ ಕಳೆದ ಸಮಯದ ಬಗ್ಗೆ ಹೇಳಿಕೊಂಡಿದ್ದಾರೆ ಸುಧೀರ್​.

‘ಅನೇಕರು ನನ್ನ ಫಿಸಿಕಲ್​ ಫಿಟ್​ನೆಸ್​ ಬಗ್ಗೆ ಮಾತನಾಡುತ್ತಾರೆ. ಫಿಟ್​ ಆಗಿರೋಕೆ ನನಗೂ ಕೂಡ ಇಷ್ಟ. ಆದರೆ, ಇತ್ತೀಚೆಗೆ ನಾನು ಪ್ರಭಾಸ್​ ಮನೆಗೆ ಭೇಟಿ ನೀಡಿದ್ದೆ. ಅವರು ತುಂಬಾನೇ ರುಚಿಕರ ಆಹಾರವನ್ನು ನೀಡಿದರು. ಪ್ರಭಾಸ್​ ಜತೆ ಒಂದು ವಾರ ಕಳೆದರೆ ನಾವು ನಮ್ಮ ಡಯಟ್​ ತೊರೆಯೋದು ಪಕ್ಕಾ. ಇದರಿಂದ ಫಿಟ್​ನೆಸ್​ ಹಾಳಾಗೋದು ಗ್ಯಾರಂಟಿ’ ಎಂದು ನಕ್ಕಿದ್ದಾರೆ ಸುಧೀರ್​ ಬಾಬು.

‘ಮನೆಗೆ ಬಂದ ಅತಿಥಿಗಳಿಗೆ ಸತ್ಕಾರ ಮಾಡೋದು ಪ್ರಭಾಸ್​ ಗುಣ. ಅವರ ಸಿಂಪ್ಲಿಸಿಟಿಯಿಂದ ಎಲ್ಲರ ಗಮನ ಸೆಳೆಯುತ್ತಾರೆ’ ಎಂದಿದ್ದಾರೆ ಸುಧೀರ್​. ಈ ಮೂಲಕ ಪ್ರಭಾಸ್​ ಸ್ಟಾರ್​ ನಟನಾದರೂ ಎಲ್ಲರ ಜತೆ ಸಾಮಾನ್ಯರಂತೆ ಇರುತ್ತಾರೆ ಎಂಬುದನ್ನು ಸುಧೀರ್​ ಬಾಯ್ತುಂಬ ಹೊಗಳಿದ್ದಾರೆ.

‘ಶ್ರೀದೇವಿ ಸೋಡಾ ಸೆಂಟರ್’​ ಸಿನಿಮಾ ಆಗಸ್ಟ್ 27ರಂದು ರಿಲೀಸ್​ ಆಗುತ್ತಿದೆ. ಕೊವಿಡ್​ ಕಾರಣದಿಂದ ಕೆಲ ರಾಜ್ಯಗಳ ಚಿತ್ರಮಂದಿರದಲ್ಲಿ ಶೇ.50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡಲಾಗಿದೆ. ಇದರ ಮಧ್ಯೆಯೂ ಸಿನಿಮಾ ರಿಲೀಸ್​ ಮಾಡುವ ಸಾಹಸಕ್ಕೆ ನಿರ್ಮಾಪಕರು ಮುಂದಾಗುತ್ತಿದ್ದಾರೆ. ಅಕ್ಷಯ್​ ಕುಮಾರ್​ ನಟನೆಯ ಬೆಲ್​ ಬಾಟಮ್​ ಸಿನಿಮಾ ಇತ್ತೀಚೆಗೆ ತೆರೆಗೆ ಬಂದಿತ್ತು. ಕೊವಿಡ್​ ಕಾರಣದಿಂದ ಬಾಕ್ಸ್​ ಆಫೀಸ್​ ಕಲೆಕ್ಷನ್​ ಮೇಲೆ ಹೊಡೆತ ಬಿದ್ದಿತ್ತು.

ಇದನ್ನೂ ಓದಿ: ಸಮಸ್ಯೆಯನ್ನು ಮೆಟ್ಟಿ ನಿಂತ ಪ್ರತಿಭೆ; ‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಎಲ್ಲರ ಮನಗೆದ್ದ ಸೂರ್ಯಕಾಂತ್

​ಯಶ್​ ಎಂಟ್ರಿಗೆ ಜಾಗ ಬಿಟ್ಟುಕೊಟ್ಟ ಪ್ರಭಾಸ್​; ‘ಕೆಜಿಎಫ್​ 2’ ಚಿತ್ರಕ್ಕಾಗಿ ‘ಸಲಾರ್​’ ರಿಲೀಸ್​ ದಿನಾಂಕ ಬದಲು?

Published On - 8:31 am, Mon, 23 August 21

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ