‘ಪ್ರಭಾಸ್​ ಜತೆ ಇದ್ದರೆ ಫಿಟ್​ನೆಸ್​ ಕಳೆದುಕೊಳ್ತೀರಿ’; ಟಾಲಿವುಡ್​ ನಟನ ವಿಚಿತ್ರ ಆರೋಪ

ಸುಧೀರ್ ಬಾಬು ಸದ್ಯ ‘ಶ್ರೀದೇವಿ ಸೋಡಾ ಸೆಂಟರ್’​ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಪ್ರಮೋಷನ್​ಗೆ ಬೇಕಾದ ಎಲ್ಲಾ ಕೆಲಸಗಳನ್ನು ಚಿತ್ರತಂಡ ಮಾಡುತ್ತಿದೆ. ಮಾಧ್ಯಮಗಳನ್ನು ಕೂಡ ಚಿತ್ರತಂಡ ಎದುರುಗೊಳ್ಳುತ್ತಿದೆ.

‘ಪ್ರಭಾಸ್​ ಜತೆ ಇದ್ದರೆ ಫಿಟ್​ನೆಸ್​ ಕಳೆದುಕೊಳ್ತೀರಿ’; ಟಾಲಿವುಡ್​ ನಟನ ವಿಚಿತ್ರ ಆರೋಪ
ಪ್ರಭಾಸ್​ ಜತೆ ಇದ್ದರೆ ಫಿಟ್​ನೆಸ್​ ಕಳೆದುಕೊಳ್ತೀರಿ; ಟಾಲಿವುಡ್​ ನಟನ ವಿಚಿತ್ರ ಆರೋಪ
Follow us
| Updated By: ರಾಜೇಶ್ ದುಗ್ಗುಮನೆ

Updated on:Aug 23, 2021 | 9:31 AM

ಸೆಲೆಬ್ರಿಟಿಗಳು ಫಿಟ್​ನೆಸ್​ಗೆ ಮೊದಲ ಆದ್ಯತೆ ನೀಡುತ್ತಾರೆ. ಏನೇ ಆದರೂ ಅವರು ಫಿಟ್​ನೆಸ್​ ಕಳೆದುಕೊಳ್ಳೋಕೆ ಇಷ್ಟಪಡುವುದಿಲ್ಲ. ಈ ಕಾರಣಕ್ಕೆ ಶೂಟಿಂಗ್​ ಮಧ್ಯೆಯೂ ಜಿಮ್​ನಲ್ಲಿ ಬೆವರು ಹರಿಸುವ ಕೆಲಸವನ್ನು ಅವರು ನಿಲ್ಲಿಸುವುದಿಲ್ಲ. ಅದರಲ್ಲೂ ಎರಡು ಸ್ಟಾರ್​​ಗಳು ಜಿಮ್​ನಲ್ಲಿ ಒಟ್ಟಿಗೆ ಸೇರಿದರೆ ಇಬ್ಬರ ನಡುವೆ ಸ್ಪರ್ಧೆ ಏರ್ಪಟ್ಟು ಕೊಂಚ ಹೆಚ್ಚೇ ವರ್ಕೌಟ್​ ನಡೆಯುತ್ತದೆ. ಆದರೆ, ಪ್ರಭಾಸ್​ ಜತೆ ಸೇರಿದರೆ ಫಿಟ್​ನೆಸ್​ ಹಾಳಾಗುತ್ತದೆ ಎನ್ನುವ ಆರೋಪವನ್ನು ಟಾಲಿವುಡ್ ನಟ ಸುಧೀರ್​ ಬಾಬು ಮಾಡಿದ್ದಾರೆ.

ಸುಧೀರ್ ಬಾಬು ಸದ್ಯ ‘ಶ್ರೀದೇವಿ ಸೋಡಾ ಸೆಂಟರ್’​ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಪ್ರಮೋಷನ್​ಗೆ ಬೇಕಾದ ಎಲ್ಲಾ ಕೆಲಸಗಳನ್ನು ಚಿತ್ರತಂಡ ಮಾಡುತ್ತಿದೆ. ಮಾಧ್ಯಮಗಳನ್ನು ಕೂಡ ಚಿತ್ರತಂಡ ಎದುರುಗೊಳ್ಳುತ್ತಿದೆ. ಈ ವೇಳೆ ಪ್ರಭಾಸ್​ ಜತೆಗೆ ಕಳೆದ ಸಮಯದ ಬಗ್ಗೆ ಹೇಳಿಕೊಂಡಿದ್ದಾರೆ ಸುಧೀರ್​.

‘ಅನೇಕರು ನನ್ನ ಫಿಸಿಕಲ್​ ಫಿಟ್​ನೆಸ್​ ಬಗ್ಗೆ ಮಾತನಾಡುತ್ತಾರೆ. ಫಿಟ್​ ಆಗಿರೋಕೆ ನನಗೂ ಕೂಡ ಇಷ್ಟ. ಆದರೆ, ಇತ್ತೀಚೆಗೆ ನಾನು ಪ್ರಭಾಸ್​ ಮನೆಗೆ ಭೇಟಿ ನೀಡಿದ್ದೆ. ಅವರು ತುಂಬಾನೇ ರುಚಿಕರ ಆಹಾರವನ್ನು ನೀಡಿದರು. ಪ್ರಭಾಸ್​ ಜತೆ ಒಂದು ವಾರ ಕಳೆದರೆ ನಾವು ನಮ್ಮ ಡಯಟ್​ ತೊರೆಯೋದು ಪಕ್ಕಾ. ಇದರಿಂದ ಫಿಟ್​ನೆಸ್​ ಹಾಳಾಗೋದು ಗ್ಯಾರಂಟಿ’ ಎಂದು ನಕ್ಕಿದ್ದಾರೆ ಸುಧೀರ್​ ಬಾಬು.

‘ಮನೆಗೆ ಬಂದ ಅತಿಥಿಗಳಿಗೆ ಸತ್ಕಾರ ಮಾಡೋದು ಪ್ರಭಾಸ್​ ಗುಣ. ಅವರ ಸಿಂಪ್ಲಿಸಿಟಿಯಿಂದ ಎಲ್ಲರ ಗಮನ ಸೆಳೆಯುತ್ತಾರೆ’ ಎಂದಿದ್ದಾರೆ ಸುಧೀರ್​. ಈ ಮೂಲಕ ಪ್ರಭಾಸ್​ ಸ್ಟಾರ್​ ನಟನಾದರೂ ಎಲ್ಲರ ಜತೆ ಸಾಮಾನ್ಯರಂತೆ ಇರುತ್ತಾರೆ ಎಂಬುದನ್ನು ಸುಧೀರ್​ ಬಾಯ್ತುಂಬ ಹೊಗಳಿದ್ದಾರೆ.

‘ಶ್ರೀದೇವಿ ಸೋಡಾ ಸೆಂಟರ್’​ ಸಿನಿಮಾ ಆಗಸ್ಟ್ 27ರಂದು ರಿಲೀಸ್​ ಆಗುತ್ತಿದೆ. ಕೊವಿಡ್​ ಕಾರಣದಿಂದ ಕೆಲ ರಾಜ್ಯಗಳ ಚಿತ್ರಮಂದಿರದಲ್ಲಿ ಶೇ.50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡಲಾಗಿದೆ. ಇದರ ಮಧ್ಯೆಯೂ ಸಿನಿಮಾ ರಿಲೀಸ್​ ಮಾಡುವ ಸಾಹಸಕ್ಕೆ ನಿರ್ಮಾಪಕರು ಮುಂದಾಗುತ್ತಿದ್ದಾರೆ. ಅಕ್ಷಯ್​ ಕುಮಾರ್​ ನಟನೆಯ ಬೆಲ್​ ಬಾಟಮ್​ ಸಿನಿಮಾ ಇತ್ತೀಚೆಗೆ ತೆರೆಗೆ ಬಂದಿತ್ತು. ಕೊವಿಡ್​ ಕಾರಣದಿಂದ ಬಾಕ್ಸ್​ ಆಫೀಸ್​ ಕಲೆಕ್ಷನ್​ ಮೇಲೆ ಹೊಡೆತ ಬಿದ್ದಿತ್ತು.

ಇದನ್ನೂ ಓದಿ: ಸಮಸ್ಯೆಯನ್ನು ಮೆಟ್ಟಿ ನಿಂತ ಪ್ರತಿಭೆ; ‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಎಲ್ಲರ ಮನಗೆದ್ದ ಸೂರ್ಯಕಾಂತ್

​ಯಶ್​ ಎಂಟ್ರಿಗೆ ಜಾಗ ಬಿಟ್ಟುಕೊಟ್ಟ ಪ್ರಭಾಸ್​; ‘ಕೆಜಿಎಫ್​ 2’ ಚಿತ್ರಕ್ಕಾಗಿ ‘ಸಲಾರ್​’ ರಿಲೀಸ್​ ದಿನಾಂಕ ಬದಲು?

Published On - 8:31 am, Mon, 23 August 21

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ