‘ಪಾಕಿಸ್ತಾನ ಒಳ್ಳೆಯ ನೆರೆ ರಾಷ್ಟ್ರ, ಕಸಬ್ ಜೆಂಟಲ್‌ಮನ್’: ಶಾರುಖ್ ಖಾನ್ ಹೇಳಿಕೆಗೆ ನೆಟ್ಟಿಗರು ಫುಲ್ ​​ ಗರಂ

'ಧುರಂಧರ್ 2' ಯಶಸ್ಸಿನ ಬೆನ್ನಲ್ಲೇ ಶಾರುಖ್ ಖಾನ್ ಅವರ ಹಳೆಯ ವಿಡಿಯೋಗಳು ವೈರಲ್ ಆಗಿವೆ. ಪಾಕಿಸ್ತಾನವನ್ನು 'ಉತ್ತಮ ನೆರೆಹೊರೆ' ಎಂದು ಶ್ಲಾಘಿಸಿರುವುದು ಮತ್ತು ಅಜ್ಮಲ್ ಕಸಬ್‌ರನ್ನು 'ಜೆಂಟಲ್‌ಮನ್' ಎಂದು ಕರೆದಿರುವುದು ವಿವಾದಕ್ಕೆ ಕಾರಣವಾಗಿದೆ. ನೆಟ್ಟಿಗರು SRKಯನ್ನು 'ದೇಶದ್ರೋಹಿ' ಎಂದು ಟೀಕಿಸುತ್ತಿದ್ದರೆ, ಅಭಿಮಾನಿಗಳು ವೀಡಿಯೋಗಳು ತಿರುಚಲ್ಪಟ್ಟ ಹಳೆಯ ಸಂದರ್ಭದ್ದು ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ.

ಪಾಕಿಸ್ತಾನ ಒಳ್ಳೆಯ ನೆರೆ ರಾಷ್ಟ್ರ, ಕಸಬ್ ಜೆಂಟಲ್‌ಮನ್: ಶಾರುಖ್ ಖಾನ್ ಹೇಳಿಕೆಗೆ ನೆಟ್ಟಿಗರು ಫುಲ್ ​​ ಗರಂ
ಶಾರುಖ್ ಖಾನ್ ವಿವಾದ

Updated on: Apr 01, 2026 | 12:25 PM

ಮುಂಬೈ ,ಏ.1: ‘ಧುರಂಧರ್ 2’ ಸಿನಿಮಾ ಯಶಸ್ಸು ಆಗುತ್ತಿದ್ದಂತೆ ಬಾಲಿವುಡ್ ನಟ ಶಾರುಖ್ ಖಾನ್ ಅವರ ಹಳೆಯ ಸಂದರ್ಶನದ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿವೆ. ಪಾಕಿಸ್ತಾನವನ್ನು “ಉತ್ತಮ ನೆರೆಹೊರೆಯ ರಾಷ್ಟ್ರ” ಎಂದು ಕರೆದಿರುವ ಮತ್ತು ಉಗ್ರ ಅಜ್ಮಲ್ ಕಸಬ್ ಬಗ್ಗೆ ಮಾತನಾಡಿರುವ ವೀಡಿಯೊಗಳು ಈಗ ದೊಡ್ಡ ವಿವಾದವನ್ನೇ ಸೃಷ್ಟಿಸಿವೆ. ಸೋಶಿಯಲ್​ ಮೀಡಿಯಾದಲ್ಲಿ ಈ ಹೇಳಿಕೆಗೆ ಭಾರೀ ಆಕ್ರೋಶ ಕೂಡ ವ್ಯಕ್ತವಾಗಿದೆ.

ವೈರಲ್ ಆಗುತ್ತಿರುವ ವೀಡಿಯೊದಲ್ಲಿ ಶಾರುಖ್ ಖಾನ್ ಪಾಕಿಸ್ತಾನದೊಂದಿಗಿನ ಸಂಬಂಧದ ಕುರಿತು ಮಾತನಾಡುತ್ತಾ, ಆ ದೇಶವನ್ನು ಶ್ಲಾಘಿಸಿದ್ದಾರೆ ಎನ್ನಲಾಗಿದೆ. ಮತ್ತೊಂದು ವೀಡಿಯೊದಲ್ಲಿ 26/11 ಮುಂಬೈ ದಾಳಿಯ ಉಗ್ರ ಅಜ್ಮಲ್ ಕಸಬ್‌ನನ್ನು “ಜೆಂಟಲ್‌ಮನ್” ಎಂದು ಉಲ್ಲೇಖಿಸಿರುವ ಬಗ್ಗೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇಲ್ಲಿದೆ ನೋಡಿ ವಿಡಿಯೋ:

ಎಲ್ಲರಿಗೂ ಶಾರುಖ್ ಖಾನ್​​ ಅವರ ಉಗ್ರ ಅಜ್ಮಲ್ ಕಸಬ್‌ನನ್ನು “ಜೆಂಟಲ್‌ಮನ್” ಎಂದಿರುವುದೇ ದೊಡ್ಡ ಅಚ್ಚರಿಯಾಗಿದೆ. ಉಗ್ರಗಾಮಿಗಳ ಸಿದ್ಧಾಂತವನ್ನು ಕಟುವಾಗಿ ಟೀಕಿಸುತ್ತಾ, “ಜೈಲಿನಲ್ಲಿರುವ ಆ ವ್ಯಕ್ತಿ (ಕಸಬ್)… ಅವನು ಯಾವ ತರ್ಕದ ಮೇಲೆ ಜನರನ್ನು ಕೊಂದಿದ್ದಾನೆ? ಅವನಿಗೆ ಶಿಕ್ಷಣ ಎಲ್ಲಿದೆ?” ಎಂದು ಪ್ರಶ್ನಿಸಿದ್ದರು. ಆದರೆ, ಕಸಬ್‌ನನ್ನು ‘Gentleman’ (ಸಂಭಾವಿತ ವ್ಯಕ್ತಿ) ಎಂಬ ಪದವನ್ನು ಬಳಸಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪದವನ್ನೇ ಈಗ ಕೆಲವರು ಗುರಿಯಾಗಿಸಿಕೊಂಡು, “ಶಾರುಖ್ ಒಬ್ಬ ಉಗ್ರನನ್ನು ಸಂಭಾವಿತ ಎಂದು ಕರೆದಿದ್ದಾರೆ” ಎಂದು ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಧುರಂಧರ್ 2’ ಬಳಿಕ ಬರ್ತಿದೆ ಏಳೂವರೆ ಗಂಟೆ ಸಿನಿಮಾ; ಎರಡು ಇಂಟರ್​​ವಲ್

ಇಲ್ಲಿದೆ ನೋಡಿ ವಿಡಿಯೋ:

ಈ ವೀಡಿಯೊಗಳನ್ನು ಹಂಚಿಕೊಳ್ಳುತ್ತಿರುವ ಅನೇಕರು ಶಾರುಖ್ ಖಾನ್ ಅವರನ್ನು “ದೇಶವಿರೋಧಿ” ಎಂದು ಕರೆದು ಟೀಕಿಸುತ್ತಿದ್ದಾರೆ. “ಸಿನಿಮಾ ಯಶಸ್ವಿಯಾಗುತ್ತಿರುವಾಗ ಇಂತಹ ಹೇಳಿಕೆಗಳು ಹೊರಬರುತ್ತಿರುವುದು ಆಘಾತಕಾರಿ” ಎಂದು ಹಲವರು ಕಮೆಂಟ್ ಮಾಡುತ್ತಿದ್ದಾರೆ. ಆದರೆ, ಶಾರುಖ್ ಅಭಿಮಾನಿಗಳು ಇದು ಹಳೆಯ ವೀಡಿಯೊ ಮತ್ತು ಸಂದರ್ಭಕ್ಕೆ ತಕ್ಕಂತೆ ತಿರುಚಲಾಗಿದೆ ಎಂದು ನಟನ ಬೆಂಬಲಕ್ಕೆ ನಿಂತಿದ್ದಾರೆ.

ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:20 pm, Wed, 1 April 26

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us