AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್​​ ಕಲ್ಯಾಣ್​ ಜತೆ ಸಿನಿಮಾ ಮಾಡಲಿದ್ದಾರೆ ರಾಜಮೌಳಿ; ಸೆಟ್ಟೇರೋದು ಯಾವಾಗ?

ಈ ಮೊದಲೇ ಪವನ್​ ಕಲ್ಯಾಣ್​ ಹಾಗೂ ರಾಜಮೌಳಿ ಇಬ್ಬರೂ ಒಟ್ಟಾಗಿ ಕೆಲಸ ಮಾಡುವ ಇಚ್ಛೆ ವ್ಯಕ್ತಪಡಿಸಿದ್ದರು. ಆದರೆ, ಕಾರಣಾಂತರಗಳಿಂದ ಅದು ಸಾಧ್ಯವಾಗಿರಲಿಲ್ಲ.

ಪವನ್​​ ಕಲ್ಯಾಣ್​ ಜತೆ ಸಿನಿಮಾ ಮಾಡಲಿದ್ದಾರೆ ರಾಜಮೌಳಿ; ಸೆಟ್ಟೇರೋದು ಯಾವಾಗ?
ಪವನ್ ಕಲ್ಯಾಣ್-ರಾಜಮೌಳಿ
TV9 Web
| Edited By: |

Updated on: May 31, 2022 | 1:31 PM

Share

ನಟ ಪವನ್ ಕಲ್ಯಾಣ್ (Pawan Kalyan) ಹಾಗೂ ನಿರ್ದೇಶಕ ಎಸ್​.ಎಸ್​. ರಾಜಮೌಳಿ ಅವರು (SS Rajamouli) ಟಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಇಬ್ಬರೂ ದೊಡ್ಡ ಮಟ್ಟದ ಜನಪ್ರಿಯತೆ ಪಡೆದುಕೊಂಡಿದ್ದಾರೆ. ಸ್ಟಾರ್ ನಟರ ಚಿತ್ರಕ್ಕೆ ಆ್ಯಕ್ಷನ್​ ಕಟ್ ಹೇಳಿ ರಾಜಮೌಳಿ ಭೇಷ್ ಎನಿಸಿಕೊಂಡರೆ, ದೊಡ್ಡದೊಡ್ಡ ನಿರ್ದೇಶಕರ ಜತೆ ಕೆಲಸ ಮಾಡಿ ಪವನ್​ ಕಲ್ಯಾಣ್ ಗೆಲುವು ಕಂಡಿದ್ದಾರೆ. ಆದರೆ, ಇಬ್ಬರಿಗೂ ಒಟ್ಟಾಗಿ ಕೆಲಸ ಮಾಡುವ ಭಾಗ್ಯ ಸಿಕ್ಕಿರಲಿಲ್ಲ. ಈಗ ಟಾಲಿವುಡ್​ ಅಂಗಳದಿಂದ ಈ ಬಗ್ಗೆ ವದಂತಿ ಒಂದು ಹುಟ್ಟಿಕೊಂಡಿದೆ. ಇಬ್ಬರೂ ಒಟ್ಟಾಗಿ ಕೆಲಸ ಮಾಡುವ ದಿನ ಹತ್ತಿರವಾಗಿದೆ ಎನ್ನುವ ಬಗ್ಗೆ ಸುದ್ದಿ ಹರಿದಾಡುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಯಾಗಿದ್ದಾರೆ.

ಈ ಮೊದಲೇ ಪವನ್​ ಕಲ್ಯಾಣ್​ ಹಾಗೂ ರಾಜಮೌಳಿ ಇಬ್ಬರೂ ಒಟ್ಟಾಗಿ ಕೆಲಸ ಮಾಡುವ ಇಚ್ಛೆ ವ್ಯಕ್ತಪಡಿಸಿದ್ದರು. ಆದರೆ, ಕಾರಣಾಂತರಗಳಿಂದ ಅದು ಸಾಧ್ಯವಾಗಿರಲಿಲ್ಲ. ರಾಜಮೌಳಿ ಅವರು ಪವನ್​ ಕಲ್ಯಾಣ್​ಗೆ ಕಥೆ ಕೂಡ ಹೇಳಿದ್ದರು. ಆದರೆ, ಕಾರಣಾಂತರಗಳಿಂದ ಆ ಪ್ರಾಜೆಕ್ಟ್​ ಫೈನಲ್ ಆಗಲೇ ಇಲ್ಲ. ನಂತರ ಈ ಸುದ್ದಿ ತಣ್ಣಗಾಯಿತು. ಈಗ ಈ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಬೆಂಕಿ ಇಲ್ಲದೆ ಹೊಗೆ ಆಡುವುದಿಲ್ಲ ಅನ್ನೋದು ಗಾಸಿಪ್​ ಮಂದಿಯ ಅಭಿಪ್ರಾಯ.

ಸದ್ಯ, ಮಹೇಶ್ ಬಾಬು ಜತೆ ಕೈ ಜೋಡಿಸೋಕೆ ರಾಜಮೌಳಿ ರೆಡಿ ಆಗಿದ್ದಾರೆ. 2023ರಲ್ಲಿ ಇವರ ಕಾಂಬಿನೇಷನ್ ಚಿತ್ರ ಸೆಟ್ಟೇರಲಿದೆ. ಪವನ್ ಕಲ್ಯಾಣ್ ಕೂಡ ಬೇರೆಬೇರೆ ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರು ಒಪ್ಪಿಕೊಂಡ ಪ್ರಾಜೆಕ್ಟ್ ಪೂರ್ಣಗೊಳಿಸಲು ಇನ್ನೂ ಎರಡು ವರ್ಷ ಬೇಕು. ರಾಜಮೌಳಿ ಅವರು ಕೂಡ 2024ರ ಬಳಿಕವೇ ಫ್ರೀ ಆಗಲಿದ್ದಾರೆ. ಹೀಗಾಗಿ ಇವರ ಕಾಂಬಿನೇಷನ್​ ಸಿನಿಮಾ 2025ರಲ್ಲಿ ಸೆಟ್ಟೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಚಿತ್ರಕ್ಕೆ ಬಂಡವಾಳ ಹೂಡಲು ನಿರ್ಮಾಣ ಸಂಸ್ಥೆ ಕೂಡ ಫೈನಲ್ ಆಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ
Image
ಕೃತಿ ಶೆಟ್ಟಿಗೆ ಪ್ರ್ಯಾಂಕ್ ಮಾಡಿದ ಆ್ಯಂಕರ್​; ನಿಲ್ಲಲೇ ಇಲ್ಲ ನಟಿಯ ಕಣ್ಣೀರು
Image
ಅಬ್ಬಬ್ಬಾ ಸೆಟ್​ನಲ್ಲೇ ಶೂಟ್ ಆದ ದೃಶ್ಯಕ್ಕೆ ಇಷ್ಟೊಂದು ಗ್ರಾಫಿಕ್ಸ್​; ಇಲ್ಲಿದೆ ‘ಆರ್​ಆರ್​ಆರ್’ ಸಿನಿಮಾದ ಅಸಲಿ ವಿಡಿಯೋ
Image
‘RRR ಚಿತ್ರದಲ್ಲಿ ಇರೋದು ಸಲಿಂಗಕಾಮದ ಕಥೆ’: ಈ ರೀತಿ ಆರೋಪ ಮಾಡಿದ್ದು ಯಾರು?
Image
ಒಟಿಟಿಯಲ್ಲಿ ‘RRR’ ವೀಕ್ಷಿಸಲು ಹೆಚ್ಚುವರಿ ಹಣ ನೀಡಬೇಕಿಲ್ಲ; ನಿರ್ಧಾರ ಬದಲಿಸಿ ಸಿಹಿ ಸುದ್ದಿ ನೀಡಿದ ಜೀ5

ಇದನ್ನೂ ಓದಿ: ರಾಜಮೌಳಿ ಜತೆ ಕೆಲಸ ಮಾಡಿದ್ದಕ್ಕೆ ರಾಮ್​ಚರಣ್ ಹೊಸ​ ಚಿತ್ರಕ್ಕೆ ಸೋಲು?; ಆತಂಕದಲ್ಲಿ ಜ್ಯೂ.ಎನ್​ಟಿಆರ್​ ಫ್ಯಾನ್ಸ್

‘ಆರ್​ಆರ್​ಆರ್’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದೆ. ಈ ಚಿತ್ರದಿಂದ ರಾಜಮೌಳಿ ಅವರ ಮಾರುಕಟ್ಟೆ ಹಿರಿದಾಗಿದೆ. ಪವನ್ ಕಲ್ಯಾಣ್ ನಟನೆಯ ‘ಭೀಮ್ಲಾ ನಾಯಕ್​’ ಈ ವರ್ಷ ತೆರೆಗೆ ಬಂತು. ಈ ಚಿತ್ರ ಕೂಡ ಯಶಸ್ಸು ಗಳಿಸಿತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು