AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು-ರಾಜಮೌಳಿ ಸಿನಿಮಾ ಮುಹೂರ್ತಕ್ಕೆ ದಿನಾಂಕ ನಿಗದಿ

SS Rajamouli: ರಾಜಮೌಳಿ ಹಾಗೂ ಮಹೇಶ್ ಬಾಬು ಅವರ ಸಿನಿಮಾಕ್ಕೆ ಮುಹೂರ್ತದ ದಿನಾಂಕ ನಿಗದಿಯಾಗಿದೆ. ಸಿನಿಮಾದ ಬಗ್ಗೆ ಹಲವು ವಿಷಯಗಳು ಮುಹೂರ್ತದಂದು ತಿಳಿದು ಬರಲಿದೆ.

ಮಹೇಶ್ ಬಾಬು-ರಾಜಮೌಳಿ ಸಿನಿಮಾ ಮುಹೂರ್ತಕ್ಕೆ ದಿನಾಂಕ ನಿಗದಿ
ಮಹೇಶ್ ಬಾಬು
ಮಂಜುನಾಥ ಸಿ.
|

Updated on: Mar 02, 2024 | 4:04 PM

Share

ಆರ್​ಆರ್​ಆರ್’ (RRR) ಸಿನಿಮಾದ ಗ್ಲೋಬಲ್ ಯಶಸ್ಸಿನ ಬಳಿಕ ನಿರ್ದೇಶಕ ರಾಜಮೌಳಿ ಮೇಲಿನ ನಿರೀಕ್ಷೆ ಹತ್ತು ಪಟ್ಟಾಗಿದೆ. ‘ಆರ್​ಆರ್​ಆರ್’ ಸಿನಿಮಾದ ಬಿಡುಗಡೆಗೆ ಮುನ್ನವೇ ರಾಜಮೌಳಿ ತಾವು ತಮ್ಮ ಮುಂದಿನ ಸಿನಿಮಾವನ್ನು ಟಾಲಿವುಡ್ ಸ್ಟಾರ್ ನಟ ಮಹೇಶ್ ಬಾಬು ಜೊತೆಗೆ ಮಾಡುವುದಾಗಿ ಘೋಷಣೆ ಮಾಡಿದ್ದರು. ಕತೆಯೂ ಸಹ ಅಂತಿಮವಾಗಿತ್ತು. ಆದರೆ ‘ಆರ್​ಆರ್​ಆರ್’ ಸಿನಿಮಾಕ್ಕೆ ವಿಶ್ವಮಟ್ಟದಲ್ಲಿ ದೊರೆತ ಯಶಸ್ಸಿನಿಂದಾಗಿ ರಾಜಮೌಳಿ ತಮ್ಮ ಮುಂದಿನ ಸಿನಿಮಾವನ್ನು ಹಾಲಿವುಡ್ ಸಿನಿಮಾಗಳ ಗುಣಮಟ್ಟಕ್ಕೆ ತಕ್ಕಂತೆ ಮಾಡಲು ಮುಂದಾದ ಕಾರಣ ಸಿನಿಮಾದ ಚಿತ್ರೀಕರಣ ಪ್ರಾರಂಭ ತಡವಾಗಿದೆ. ಇದೀಗ ಸಿನಿಮಾದ ಮುಹೂರ್ತ ದಿನಾಂಕ ನಿಗದಿಯಾಗಿದೆ.

ರಾಜಮೌಳಿ ಹಾಗೂ ಮಹೇಶ್ ಬಾಬು ನಟನೆಯ ಸಿನಿಮಾದ ಮುಹೂರ್ತ ಯುಗಾದಿ ದಿನದಂದು ನಡೆಯಲಿದೆಯಂತೆ. ಹೈದರಾಬಾದ್​ನಲ್ಲಿಯೇ ಮುಹೂರ್ತ ಸಮಾರಂಭ ನಡೆಯಲಿದ್ದು, ಹಾಲಿವುಡ್​ನ ಖ್ಯಾತ ನಿರ್ದೇಶಕ ಜೇಮ್ಸ್ ಕ್ಯಾಮರನ್ ಮುಹೂರ್ತಕ್ಕೆ ಅತಿಥಿಯಾಗಿ ಬರಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಭಾರಿ ಅದ್ಧೂರಿಯಾಗಿ ಈ ಮುಹೂರ್ತ ಸಮಾರಂಭ ನಡೆಯಲಿದ್ದು, ‘ಆರ್​ಆರ್​ಆರ್’ ಸಿನಿಮಾದ ನಾಯಕರಾದ ಜೂ ಎನ್​ಟಿಆರ್, ರಾಮ್ ಚರಣ್ ಗಳ ಜೊತೆಗೆ ಪ್ರಭಾಸ್, ರಾಣಾ ದಗ್ಗುಬಾಟಿ ಇನ್ನೂ ಕೆಲವರು ಸಹ ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ:ರಾಜಮೌಳಿ-ಮಹೇಶ್ ಬಾಬು ಸಿನಿಮಾಕ್ಕೆ ಸರಳವಾದ ಹೆಸರು: ಆ ಎರಡರಲ್ಲಿ ಯಾವುದು ಅಂತಿಮ?

ರಾಜಮೌಳಿಯ ಮುಂದಿನ ಸಿನಿಮಾಕ್ಕೆ ಈಗಾಗಲೇ ಕಳೆದ ಕೆಲವು ತಿಂಗಳಿನಿಂದಲೂ ಪೋಸ್ಟ್ ಪ್ರೊಡಕ್ಷನ್ ಜಾರಿಯಲ್ಲಿದೆ. ಹಾಲಿವುಡ್​ನ ಹಲವು ದೊಡ್ಡ ಸಂಸ್ಥೆಗಳೊಟ್ಟಿಗೆ ರಾಜಮೌಳಿ ಹಲವು ಸುತ್ತುಗಳ ಸಭೆಗಳನ್ನು ನಡೆಸಿದ್ದು ಸಿನಿಮಾಕ್ಕಾಗಿ ಅತ್ಯುತ್ತಮ ತಂತ್ರಜ್ಞಾನವನ್ನು ರಾಜಮೌಳಿ ಬಳಸಿಕೊಳ್ಳಲಿದ್ದಾರೆ. ರಾಜಮೌಳಿ ಸಾಮಾನ್ಯವಾಗಿ ತಮ್ಮ ನಂಬಿಕೆಯ ತಂತ್ರಜ್ಞಾನರನ್ನು ತಮ್ಮ ಸಿನಿಮಾಗಳಿಗೆ ಹಾಕಿಕೊಳ್ಳುತ್ತಾರೆ. ಆದರೆ ಈ ಸಿನಿಮಾಕ್ಕೆ ತಂಡದಲ್ಲಿ ಕೆಲವು ಬದಲಾವಣೆಗಳನ್ನು ರಾಜಮೌಳಿ ಮಾಡಿಕೊಳ್ಳಲಿದ್ದಾರೆ. ಸಂಗೀತ ನಿರ್ದೇಶಕ ಕೀರವಾಣಿ ಈ ಸಿನಿಮಾಕ್ಕೆ ಕೆಲಸ ಮಾಡುವುದಿಲ್ಲ, ಕ್ಯಾಮೆರಾಮ್ಯಾನ್ ಸೆಂಥಿಲ್ ಸಹ ಇರುವುದಿಲ್ಲ, ರಾಜಮೌಳಿಯ ನಂಬುಗೆಯ ಸಂಕಲನಕಾರರು ಸಹ ಇರುವುದಿಲ್ಲ. ಬದಲಿಗೆ ಹಾಲಿವುಡ್​ನ ಕೆಲವು ಅತ್ಯುತ್ತಮ ತಂತ್ರಜ್ಞರನ್ನು ರಾಜಮೌಳಿ ಕರೆತರಲಿದ್ದಾರೆ.

ರಾಜಮೌಳಿಯ ಮುಂದಿನ ಸಿನಿಮಾ ಸಾಹಸಮಯ ಕತೆಯನ್ನು ಒಳಗೊಂಡಿರಲಿದೆ. ಅವರೇ ಈ ಹಿಂದೆ ಹೇಳಿಕೊಂಡಿರುವಂತೆ ಹಾಲಿವುಡ್​ನ ‘ಇಂಡಿಯಾನಾ ಜೋನ್ಸ್’ ಮಾದರಿಯ ಕತೆಯನ್ನು ಈ ಸಿನಿಮಾ ಒಳಗೊಂಡಿರಲಿದೆ. ಅರಣ್ಯದಲ್ಲಿ ನಡೆಯುವ ಸಾಹಸಮಯ ಪ್ರಯಾಣದ ರೋಚಕ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾಕ್ಕೆ ಕತೆಯನ್ನು ರಾಜಮೌಳಿಯವರ ತಂದೆಯವರೇ ರಚಿಸಿದ್ದಾರೆ. ಸಿನಿಮಾದಲ್ಲಿ ನಾಯಕಿಯಾಗಿ ಇಂಡೊನೇಷ್ಯಾದ ಚೆಲುವೆಯೊಬ್ಬರು ನಟಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ