AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು-ರಾಜಮೌಳಿ ಸಿನಿಮಾ ಮುಹೂರ್ತಕ್ಕೆ ದಿನಾಂಕ ನಿಗದಿ

SS Rajamouli: ರಾಜಮೌಳಿ ಹಾಗೂ ಮಹೇಶ್ ಬಾಬು ಅವರ ಸಿನಿಮಾಕ್ಕೆ ಮುಹೂರ್ತದ ದಿನಾಂಕ ನಿಗದಿಯಾಗಿದೆ. ಸಿನಿಮಾದ ಬಗ್ಗೆ ಹಲವು ವಿಷಯಗಳು ಮುಹೂರ್ತದಂದು ತಿಳಿದು ಬರಲಿದೆ.

ಮಹೇಶ್ ಬಾಬು-ರಾಜಮೌಳಿ ಸಿನಿಮಾ ಮುಹೂರ್ತಕ್ಕೆ ದಿನಾಂಕ ನಿಗದಿ
ಮಹೇಶ್ ಬಾಬು
ಮಂಜುನಾಥ ಸಿ.
|

Updated on: Mar 02, 2024 | 4:04 PM

Share

ಆರ್​ಆರ್​ಆರ್’ (RRR) ಸಿನಿಮಾದ ಗ್ಲೋಬಲ್ ಯಶಸ್ಸಿನ ಬಳಿಕ ನಿರ್ದೇಶಕ ರಾಜಮೌಳಿ ಮೇಲಿನ ನಿರೀಕ್ಷೆ ಹತ್ತು ಪಟ್ಟಾಗಿದೆ. ‘ಆರ್​ಆರ್​ಆರ್’ ಸಿನಿಮಾದ ಬಿಡುಗಡೆಗೆ ಮುನ್ನವೇ ರಾಜಮೌಳಿ ತಾವು ತಮ್ಮ ಮುಂದಿನ ಸಿನಿಮಾವನ್ನು ಟಾಲಿವುಡ್ ಸ್ಟಾರ್ ನಟ ಮಹೇಶ್ ಬಾಬು ಜೊತೆಗೆ ಮಾಡುವುದಾಗಿ ಘೋಷಣೆ ಮಾಡಿದ್ದರು. ಕತೆಯೂ ಸಹ ಅಂತಿಮವಾಗಿತ್ತು. ಆದರೆ ‘ಆರ್​ಆರ್​ಆರ್’ ಸಿನಿಮಾಕ್ಕೆ ವಿಶ್ವಮಟ್ಟದಲ್ಲಿ ದೊರೆತ ಯಶಸ್ಸಿನಿಂದಾಗಿ ರಾಜಮೌಳಿ ತಮ್ಮ ಮುಂದಿನ ಸಿನಿಮಾವನ್ನು ಹಾಲಿವುಡ್ ಸಿನಿಮಾಗಳ ಗುಣಮಟ್ಟಕ್ಕೆ ತಕ್ಕಂತೆ ಮಾಡಲು ಮುಂದಾದ ಕಾರಣ ಸಿನಿಮಾದ ಚಿತ್ರೀಕರಣ ಪ್ರಾರಂಭ ತಡವಾಗಿದೆ. ಇದೀಗ ಸಿನಿಮಾದ ಮುಹೂರ್ತ ದಿನಾಂಕ ನಿಗದಿಯಾಗಿದೆ.

ರಾಜಮೌಳಿ ಹಾಗೂ ಮಹೇಶ್ ಬಾಬು ನಟನೆಯ ಸಿನಿಮಾದ ಮುಹೂರ್ತ ಯುಗಾದಿ ದಿನದಂದು ನಡೆಯಲಿದೆಯಂತೆ. ಹೈದರಾಬಾದ್​ನಲ್ಲಿಯೇ ಮುಹೂರ್ತ ಸಮಾರಂಭ ನಡೆಯಲಿದ್ದು, ಹಾಲಿವುಡ್​ನ ಖ್ಯಾತ ನಿರ್ದೇಶಕ ಜೇಮ್ಸ್ ಕ್ಯಾಮರನ್ ಮುಹೂರ್ತಕ್ಕೆ ಅತಿಥಿಯಾಗಿ ಬರಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಭಾರಿ ಅದ್ಧೂರಿಯಾಗಿ ಈ ಮುಹೂರ್ತ ಸಮಾರಂಭ ನಡೆಯಲಿದ್ದು, ‘ಆರ್​ಆರ್​ಆರ್’ ಸಿನಿಮಾದ ನಾಯಕರಾದ ಜೂ ಎನ್​ಟಿಆರ್, ರಾಮ್ ಚರಣ್ ಗಳ ಜೊತೆಗೆ ಪ್ರಭಾಸ್, ರಾಣಾ ದಗ್ಗುಬಾಟಿ ಇನ್ನೂ ಕೆಲವರು ಸಹ ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ:ರಾಜಮೌಳಿ-ಮಹೇಶ್ ಬಾಬು ಸಿನಿಮಾಕ್ಕೆ ಸರಳವಾದ ಹೆಸರು: ಆ ಎರಡರಲ್ಲಿ ಯಾವುದು ಅಂತಿಮ?

ರಾಜಮೌಳಿಯ ಮುಂದಿನ ಸಿನಿಮಾಕ್ಕೆ ಈಗಾಗಲೇ ಕಳೆದ ಕೆಲವು ತಿಂಗಳಿನಿಂದಲೂ ಪೋಸ್ಟ್ ಪ್ರೊಡಕ್ಷನ್ ಜಾರಿಯಲ್ಲಿದೆ. ಹಾಲಿವುಡ್​ನ ಹಲವು ದೊಡ್ಡ ಸಂಸ್ಥೆಗಳೊಟ್ಟಿಗೆ ರಾಜಮೌಳಿ ಹಲವು ಸುತ್ತುಗಳ ಸಭೆಗಳನ್ನು ನಡೆಸಿದ್ದು ಸಿನಿಮಾಕ್ಕಾಗಿ ಅತ್ಯುತ್ತಮ ತಂತ್ರಜ್ಞಾನವನ್ನು ರಾಜಮೌಳಿ ಬಳಸಿಕೊಳ್ಳಲಿದ್ದಾರೆ. ರಾಜಮೌಳಿ ಸಾಮಾನ್ಯವಾಗಿ ತಮ್ಮ ನಂಬಿಕೆಯ ತಂತ್ರಜ್ಞಾನರನ್ನು ತಮ್ಮ ಸಿನಿಮಾಗಳಿಗೆ ಹಾಕಿಕೊಳ್ಳುತ್ತಾರೆ. ಆದರೆ ಈ ಸಿನಿಮಾಕ್ಕೆ ತಂಡದಲ್ಲಿ ಕೆಲವು ಬದಲಾವಣೆಗಳನ್ನು ರಾಜಮೌಳಿ ಮಾಡಿಕೊಳ್ಳಲಿದ್ದಾರೆ. ಸಂಗೀತ ನಿರ್ದೇಶಕ ಕೀರವಾಣಿ ಈ ಸಿನಿಮಾಕ್ಕೆ ಕೆಲಸ ಮಾಡುವುದಿಲ್ಲ, ಕ್ಯಾಮೆರಾಮ್ಯಾನ್ ಸೆಂಥಿಲ್ ಸಹ ಇರುವುದಿಲ್ಲ, ರಾಜಮೌಳಿಯ ನಂಬುಗೆಯ ಸಂಕಲನಕಾರರು ಸಹ ಇರುವುದಿಲ್ಲ. ಬದಲಿಗೆ ಹಾಲಿವುಡ್​ನ ಕೆಲವು ಅತ್ಯುತ್ತಮ ತಂತ್ರಜ್ಞರನ್ನು ರಾಜಮೌಳಿ ಕರೆತರಲಿದ್ದಾರೆ.

ರಾಜಮೌಳಿಯ ಮುಂದಿನ ಸಿನಿಮಾ ಸಾಹಸಮಯ ಕತೆಯನ್ನು ಒಳಗೊಂಡಿರಲಿದೆ. ಅವರೇ ಈ ಹಿಂದೆ ಹೇಳಿಕೊಂಡಿರುವಂತೆ ಹಾಲಿವುಡ್​ನ ‘ಇಂಡಿಯಾನಾ ಜೋನ್ಸ್’ ಮಾದರಿಯ ಕತೆಯನ್ನು ಈ ಸಿನಿಮಾ ಒಳಗೊಂಡಿರಲಿದೆ. ಅರಣ್ಯದಲ್ಲಿ ನಡೆಯುವ ಸಾಹಸಮಯ ಪ್ರಯಾಣದ ರೋಚಕ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾಕ್ಕೆ ಕತೆಯನ್ನು ರಾಜಮೌಳಿಯವರ ತಂದೆಯವರೇ ರಚಿಸಿದ್ದಾರೆ. ಸಿನಿಮಾದಲ್ಲಿ ನಾಯಕಿಯಾಗಿ ಇಂಡೊನೇಷ್ಯಾದ ಚೆಲುವೆಯೊಬ್ಬರು ನಟಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ