AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ಮುಂದಿನ ಸಿನಿಮಾ ಬಜೆಟ್ ಕೇಳಿದ್ರೆ ನೀವು ಹೌಹಾರ್ತೀರಾ

ರಾಜಮೌಳಿ ಹಾಗೂ ಮಹೇಶ್ ಬಾಬು ಒಟ್ಟಿಗೆ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದು, ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಚಾಲ್ತಿಯಲ್ಲಿದೆ. ಸಿನಿಮಾ ಘೋಷಣೆಯಾಗಿ ಈಗಾಗಲೇ ಎರಡು ವರ್ಷವಾಗಿದೆ. ಅಂದಹಾಗೆ ಇದು ಭಾರತದ ಈ ವರೆಗಿನ ಅತಿದೊಡ್ಡ ಬಜೆಟ್ ಸಿನಿಮಾ ಆಗಿದ್ದು, ಸಿನಿಮಾದ ಬಜೆಟ್ 1000 ಕೋಟಿ.

ರಾಜಮೌಳಿ ಮುಂದಿನ ಸಿನಿಮಾ ಬಜೆಟ್ ಕೇಳಿದ್ರೆ ನೀವು ಹೌಹಾರ್ತೀರಾ
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.|

Updated on: Oct 29, 2024 | 6:57 PM

Share

ರಾಜಮೌಳಿ ಅವರು ‘ಆರ್ಆರ್ಆರ್’ ಬಳಿಕ ಒಂದು ದೊಡ್ಡ ಬ್ರೇಕ್ ಪಡೆದರು. ಅವರು ಈಗ ‘SSMB 29’ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ರಾಜಮೌಳಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಾ ಇದ್ದಾರೆ. ‘ಗುಂಟೂರು ಖಾರಂ’ ಸಿನಿಮಾ ಬಳಿಕ ಮಹೇಶ್ ಬಾಬು ಒಪ್ಪಿಕೊಂಡ ಸಿನಿಮಾ ಇದಾಗಿದೆ. ಈ ಚಿತ್ರಕ್ಕಾಗಿ ಅವರು ಉದ್ದನೆಯ ಕೂದಲನ್ನು ಕೂಡ ಬಿಟ್ಟಿದ್ದಾರೆ. ಈಗ ಚಿತ್ರದ ಬಜೆಟ್ ರಿವೀಲ್ ಆಗಿದ್ದು ಎಲ್ಲರಿಗೂ ಶಾಕ್ ಎನಿಸಿದೆ.

ರಾಜಮೌಳಿ ಒಂದು ಚಿತ್ರ ಆದ ಬಳಿಕ ಮುಂದಿನ ಚಿತ್ರಕ್ಕೆ ಒಂದು ಗ್ಯಾಪ್ ಪಡೆಯುತ್ತಾರೆ. ಇದಕ್ಕೆ ಕಾರಣ ಸ್ಕ್ರಿಪ್ಟ್ ಕೆಲಸ. ರಾಜಮೌಳಿ, ವಿಜಯೇಂದ್ರ ಪ್ರಸಾದ್ ಅವರು ಈಗ ‘SSMB 29’ ಸ್ಕ್ರಿಪ್ಟ್ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ದೊಡ್ಡ ಬಜೆಟ್ ಹಾಕಲಾಗುತ್ತಿದೆ. ಗ್ಲೋಬಲ್ ಮಟ್ಟದಲ್ಲಿ ಸಿನಿಮಾ ರಿಲೀಸ್ ಮಾಡಲು ಪ್ಲ್ಯಾನ್ ನಡೆದಿದೆ ಎನ್ನಲಾಗಿದೆ.

ಕೆಲವು ವರದಿಗಳ ಪ್ರಕಾರ ಈ ಚಿತ್ರದ ಬಜೆಟ್ 900-1000 ಕೋಟಿ ರೂಪಾಯಿ ಬಜೆಟ್ನಲ್ಲಿ ಸಿದ್ಧವಾಗಿದೆ ಎನ್ನಲಾಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಹೌಹಾರಿದ್ದಾರೆ. ‘ಬಾಹುಬಲಿ 2’ ಚಿತ್ರ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿತ್ತು. ಈಗ ‘SSMB 29’ ಚಿತ್ರದ ಬಜೆಟ್ ನೋಡಿ ಈ ಚಿತ್ರ ಕೂಡ ಲಾಭ ಕಾಣಬೇಕು ಎಂದರೆ ‘ಬಾಹುಬಲಿ 2’ ರೀತಿಯೇ ಕಲೆಕ್ಷನ್ ಮಾಡುವ ಅವಶ್ಯಕತೆ ಇದೆ.

ಇದನ್ನೂ ಓದಿ:ಹೊಸ ಸಿನಿಮಾದ ಬಗ್ಗೆ ಸುಳಿವು ಬಿಟ್ಟುಕೊಟ್ಟ ರಾಜಮೌಳಿ, ‘ಆರ್​ಆರ್​ಆರ್​’ ಗಿಂತಲೂ ಹೆಚ್ಚು…

ದಕ್ಷಿಣ ಭಾರತದವರಿಗೆ ಸಂಕ್ರಾಂತಿ ಸಖತ್ ವಿಶೇಷ. ಹೀಗಾಗಿ, 2025ರ ಸಂಕ್ರಾಂತಿಯಂದೇ ಸಿನಿಮಾ ಸೆಟ್ಟೇರಿಸುವ ಆಲೋಚನೆಯಲ್ಲಿ ಅವರು ಇದ್ದಾರೆ. ಈ ವಿಚಾರವಾಗಿ ಅವರು ಶೀಘ್ರವೇ ಅಧಿಕೃತ ಘೋಷಣೆ ಮಾಡುವ ಆಲೋಚನೆಯಲ್ಲಿ ಇದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಮಹೇಶ್ ಬಾಬು ಅವರು ಸದ್ಯಕ್ಕಂತೂ ತೆರೆಮೇಲೆ ಕಾಣಿಸಿಕೊಳ್ಳುವುದಿಲ್ಲ. ಈ ಚಿತ್ರದ ಕೆಲಸಗಳು ಮುಗಿಯೋಕೆ ಇನ್ನು ಎರಡರಿಂದ ಮೂರು ವರ್ಷಗಳಂತೂ ಬೇಕಾಗುತ್ತವೆ. ಅಲ್ಲಿಯವರೆಗೆ ಅವರು ಯಾವುದೇ ಹೊಸ ಸಿನಿಮಾ ಮಾಡಬಾರದು ಎನ್ನುವ ನಿರ್ಧಾರ ಮಾಡಿಯಾಗಿದೆ. ರಾಜಮೌಳಿ ನಿರ್ದೇಶನ ಎಂದರೆ ಅದ್ದೂರಿತನ ಇದ್ದೇ ಇರುತ್ತದೆ. ಅದೇ ರೀತಿ ಹೆಚ್ಚಿನ ಕೆಲಸಗಳು ಕೂಡ ಇರುತ್ತವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ