AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ಮುಂದಿನ ಸಿನಿಮಾ ಬಜೆಟ್ ಕೇಳಿದ್ರೆ ನೀವು ಹೌಹಾರ್ತೀರಾ

ರಾಜಮೌಳಿ ಹಾಗೂ ಮಹೇಶ್ ಬಾಬು ಒಟ್ಟಿಗೆ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದು, ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಚಾಲ್ತಿಯಲ್ಲಿದೆ. ಸಿನಿಮಾ ಘೋಷಣೆಯಾಗಿ ಈಗಾಗಲೇ ಎರಡು ವರ್ಷವಾಗಿದೆ. ಅಂದಹಾಗೆ ಇದು ಭಾರತದ ಈ ವರೆಗಿನ ಅತಿದೊಡ್ಡ ಬಜೆಟ್ ಸಿನಿಮಾ ಆಗಿದ್ದು, ಸಿನಿಮಾದ ಬಜೆಟ್ 1000 ಕೋಟಿ.

ರಾಜಮೌಳಿ ಮುಂದಿನ ಸಿನಿಮಾ ಬಜೆಟ್ ಕೇಳಿದ್ರೆ ನೀವು ಹೌಹಾರ್ತೀರಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 29, 2024 | 6:57 PM

Share

ರಾಜಮೌಳಿ ಅವರು ‘ಆರ್ಆರ್ಆರ್’ ಬಳಿಕ ಒಂದು ದೊಡ್ಡ ಬ್ರೇಕ್ ಪಡೆದರು. ಅವರು ಈಗ ‘SSMB 29’ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ರಾಜಮೌಳಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಾ ಇದ್ದಾರೆ. ‘ಗುಂಟೂರು ಖಾರಂ’ ಸಿನಿಮಾ ಬಳಿಕ ಮಹೇಶ್ ಬಾಬು ಒಪ್ಪಿಕೊಂಡ ಸಿನಿಮಾ ಇದಾಗಿದೆ. ಈ ಚಿತ್ರಕ್ಕಾಗಿ ಅವರು ಉದ್ದನೆಯ ಕೂದಲನ್ನು ಕೂಡ ಬಿಟ್ಟಿದ್ದಾರೆ. ಈಗ ಚಿತ್ರದ ಬಜೆಟ್ ರಿವೀಲ್ ಆಗಿದ್ದು ಎಲ್ಲರಿಗೂ ಶಾಕ್ ಎನಿಸಿದೆ.

ರಾಜಮೌಳಿ ಒಂದು ಚಿತ್ರ ಆದ ಬಳಿಕ ಮುಂದಿನ ಚಿತ್ರಕ್ಕೆ ಒಂದು ಗ್ಯಾಪ್ ಪಡೆಯುತ್ತಾರೆ. ಇದಕ್ಕೆ ಕಾರಣ ಸ್ಕ್ರಿಪ್ಟ್ ಕೆಲಸ. ರಾಜಮೌಳಿ, ವಿಜಯೇಂದ್ರ ಪ್ರಸಾದ್ ಅವರು ಈಗ ‘SSMB 29’ ಸ್ಕ್ರಿಪ್ಟ್ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ದೊಡ್ಡ ಬಜೆಟ್ ಹಾಕಲಾಗುತ್ತಿದೆ. ಗ್ಲೋಬಲ್ ಮಟ್ಟದಲ್ಲಿ ಸಿನಿಮಾ ರಿಲೀಸ್ ಮಾಡಲು ಪ್ಲ್ಯಾನ್ ನಡೆದಿದೆ ಎನ್ನಲಾಗಿದೆ.

ಕೆಲವು ವರದಿಗಳ ಪ್ರಕಾರ ಈ ಚಿತ್ರದ ಬಜೆಟ್ 900-1000 ಕೋಟಿ ರೂಪಾಯಿ ಬಜೆಟ್ನಲ್ಲಿ ಸಿದ್ಧವಾಗಿದೆ ಎನ್ನಲಾಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಹೌಹಾರಿದ್ದಾರೆ. ‘ಬಾಹುಬಲಿ 2’ ಚಿತ್ರ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿತ್ತು. ಈಗ ‘SSMB 29’ ಚಿತ್ರದ ಬಜೆಟ್ ನೋಡಿ ಈ ಚಿತ್ರ ಕೂಡ ಲಾಭ ಕಾಣಬೇಕು ಎಂದರೆ ‘ಬಾಹುಬಲಿ 2’ ರೀತಿಯೇ ಕಲೆಕ್ಷನ್ ಮಾಡುವ ಅವಶ್ಯಕತೆ ಇದೆ.

ಇದನ್ನೂ ಓದಿ:ಹೊಸ ಸಿನಿಮಾದ ಬಗ್ಗೆ ಸುಳಿವು ಬಿಟ್ಟುಕೊಟ್ಟ ರಾಜಮೌಳಿ, ‘ಆರ್​ಆರ್​ಆರ್​’ ಗಿಂತಲೂ ಹೆಚ್ಚು…

ದಕ್ಷಿಣ ಭಾರತದವರಿಗೆ ಸಂಕ್ರಾಂತಿ ಸಖತ್ ವಿಶೇಷ. ಹೀಗಾಗಿ, 2025ರ ಸಂಕ್ರಾಂತಿಯಂದೇ ಸಿನಿಮಾ ಸೆಟ್ಟೇರಿಸುವ ಆಲೋಚನೆಯಲ್ಲಿ ಅವರು ಇದ್ದಾರೆ. ಈ ವಿಚಾರವಾಗಿ ಅವರು ಶೀಘ್ರವೇ ಅಧಿಕೃತ ಘೋಷಣೆ ಮಾಡುವ ಆಲೋಚನೆಯಲ್ಲಿ ಇದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಮಹೇಶ್ ಬಾಬು ಅವರು ಸದ್ಯಕ್ಕಂತೂ ತೆರೆಮೇಲೆ ಕಾಣಿಸಿಕೊಳ್ಳುವುದಿಲ್ಲ. ಈ ಚಿತ್ರದ ಕೆಲಸಗಳು ಮುಗಿಯೋಕೆ ಇನ್ನು ಎರಡರಿಂದ ಮೂರು ವರ್ಷಗಳಂತೂ ಬೇಕಾಗುತ್ತವೆ. ಅಲ್ಲಿಯವರೆಗೆ ಅವರು ಯಾವುದೇ ಹೊಸ ಸಿನಿಮಾ ಮಾಡಬಾರದು ಎನ್ನುವ ನಿರ್ಧಾರ ಮಾಡಿಯಾಗಿದೆ. ರಾಜಮೌಳಿ ನಿರ್ದೇಶನ ಎಂದರೆ ಅದ್ದೂರಿತನ ಇದ್ದೇ ಇರುತ್ತದೆ. ಅದೇ ರೀತಿ ಹೆಚ್ಚಿನ ಕೆಲಸಗಳು ಕೂಡ ಇರುತ್ತವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ
Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ
ವಿಜಯ್ ಹಾಡಿಗೆ ಡ್ಯಾನ್ಸ್ ಮಾಡಿದ ತಮಿಳುನಾಡು ಸರ್ಕಾರಿ ಶಾಲೆ ಶಿಕ್ಷಕಿ ಅಮಾನತು
ವಿಜಯ್ ಹಾಡಿಗೆ ಡ್ಯಾನ್ಸ್ ಮಾಡಿದ ತಮಿಳುನಾಡು ಸರ್ಕಾರಿ ಶಾಲೆ ಶಿಕ್ಷಕಿ ಅಮಾನತು