ಮುಹೂರ್ತ ಕೇಳಿ ಹೊಸ ಸಿನಿಮಾ ಆರಂಭಿಸಲಿದ್ದಾರೆ ರಾಜಮೌಳಿ

‘ಆರ್​ಆರ್​ಆರ್’ ಸಿನಿಮಾ ಗೆಲುವಿನ ಬಳಿಕ ರಾಜಮೌಳಿ ಅವರ ಸಂಪೂರ್ಣ ಗಮನ ‘SSMB29’ ಕಡೆ ಇದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರಕ್ಕೆ ಮಹೇಶ್ ಬಾಬು ಹೀರೋ. ಹೊಸ ಸಿನಿಮಾ ಆರಂಭಕ್ಕೆ ರಾಜಮೌಳಿ ಜ್ಯೋತಿಷ್ಯದ ಮೊರೆ ಹೋಗಿದ್ದಾರೆ.

ಮುಹೂರ್ತ ಕೇಳಿ ಹೊಸ ಸಿನಿಮಾ ಆರಂಭಿಸಲಿದ್ದಾರೆ ರಾಜಮೌಳಿ
ಹೊಸ ಸಿನಿಮಾ ಆರಂಭಕ್ಕೆ ಜ್ಯೋತಿಷ್ಯದ ಮೊರೆ ಹೋದ ರಾಜಮೌಳಿ
Follow us
|

Updated on: Jul 11, 2024 | 6:58 AM

ನಿರ್ದೇಶಕ ರಾಜಮೌಳಿ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದವರು. ಅವರ ಜೊತೆ ಸಿನಿಮಾ ಮಾಡಬೇಕು ಎಂದು ಅನೇಕ ಸ್ಟಾರ್​ಗಳು ಕಾದು ಕುಳಿತಿರುತ್ತಾರೆ. ಆದರೆ, ಎಲ್ಲರಿಗೂ ಅವರ ಜೊತೆ ಕೆಲಸ ಮಾಡೋ ಅವಕಾಶ ಸಿಗುವುದಿಲ್ಲ. ಈ ರೀತಿ ಅವಕಾಶ ಸಿಕ್ಕ ಮೇಲೆ ಕೆಲವು ವರ್ಷ ಅವರು ಬೇರೆ ಯಾವುದೇ ಸಿನಿಮಾನೂ ಒಪ್ಪಿಕೊಳ್ಳುವಂತಿಲ್ಲ. ಈಗ ಮಹೇಶ್ ಬಾಬು ಅವರ ಜೊತೆಗಿನ ಹೊಸ ಸಿನಿಮಾದ ತಯಾರಿಯಲ್ಲಿ ರಾಜಮೌಳಿ ಇದ್ದಾರೆ. ಹೊಸ ಸಿನಿಮಾ ಮುಹೂರ್ತಕ್ಕೆ ರಾಜಮೌಳಿ ಅವರು ಜ್ಯೋತಿಷ್ಯದ ಮೊರೆ ಹೋಗಿದ್ದಾರೆ.

ಸದ್ಯ ಆಷಾಢ ಮಾಸ ನಡೆಯುತ್ತಿದೆ. ಜೂನ್ 23ರಿಂದ ಜುಲೈ 21ರವರೆಗೆ ಆಷಾಢ ಮಾಸ ಇರುತ್ತದೆ. ಈ ಸಮಯದಲ್ಲಿ ಒಳ್ಳೆಯ ಕೆಲಸ ಮಾಡಲು ಯಾರೂ ಆಸಕ್ತಿ ತೋರಿಸುವುದಿಲ್ಲ. ಈ ಕಾರಣದಿಂದಲೇ ರಾಜಮೌಳಿ ಅವರು ಹೊಸ ಸಿನಿಮಾ ಮುಹೂರ್ತವನ್ನು ಈ ಸಮಯದಲ್ಲಿ ಮಾಡದೆ ಇರಲು ನಿರ್ಧರಿಸಿದ್ದಾರೆ.

ರಾಜಮೌಳಿ ಅವರು ಈ ರೀತಿಯ ವಿಚಾರಗಳನ್ನು ಹೆಚ್ಚು ನಂಬುತ್ತಾರಂತೆ. ಹೀಗಾಗಲೇ ಸಿನಿಮಾನ ಆಷಾಢದಲ್ಲಿ ಪ್ರಾರಂಭಿಸೋದು ಬೇಡ ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ. ರಾಜಮೌಳಿ ಅವರು ಆಗಾಗ ದೇವಸ್ಥಾನಗಳಿಗೂ ಭೇಟಿ ನೀಡುತ್ತಾ ಇರುತ್ತಾರೆ. ಅವರು ಹೆಚ್ಚೆಚ್ಚು ಪೂಜೆ ಪುನಸ್ಕಾರಗಳನ್ನು ಮಾಡಿಸುತ್ತಾರೆ.

ರಾಜಮೌಳಿ ಹಾಗೂ ಮಹೇಶ್ ಬಾಬು ಚಿತ್ರಕ್ಕೆ ‘SSMB29’ ಎನ್ನುವ ಶೀರ್ಷಿಕೆ ಇಡಲಾಗಿದೆ. ರಾಜಮೌಳಿ ಅವರು ನಿರ್ದೇಶನಗಳ ಮೂಲಕ ತಮ್ಮ ಪವರ್​ನ ತೋರಿಸಿದ್ದಾರೆ. ಅದೇ ರೀತಿ ಮಹೇಶ್ ಬಾಬು ಅವರು ಹಲವುಸೂಪರ್ ಹಿಟ್ ಚಿತ್ರಗಳನ್ನು ನೀಡಿ ದೊಡ್ಡ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡಿದ್ದಾರೆ. ಇವರು ಸಿನಿಮಾ ಮಾಡುತ್ತಿದ್ದಾರೆ ಎಂದಾಗ ಸಹಜವಾಗಿಯೇ ಕುತೂಹಲ ಸೃಷ್ಟಿ ಆಗಿದೆ.

ಇದನ್ನೂ ಓದಿ: ಆಸ್ಕರ್​ ಅಕಾಡೆಮಿಯ ಸದಸ್ಯತ್ವ ಪಡೆಯಲು ರಾಜಮೌಳಿಗೆ ಆಹ್ವಾನ; ಸಿಗೋ ಸವಲತ್ತುಗಳೇನು?

ರಾಜಮೌಳಿ ಚಿತ್ರಕ್ಕಾಗಿ ಮಹೇಶ್ ಬಾಬು ಅವರು ಬಾಡಿ ಬಿಲ್ಡ್ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ವಿದೇಶಕ್ಕೆ ತೆರಳಿ ಅವರು ವಿಶೇಷ ಫೈಟ್​ಗಳನ್ನು ಕಲಿತು ಬಂದಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ